Homeಮುಖಪುಟಗದ್ದಲದ ನಡುವೆಯೇ ಲೋಕಸಭೆಯಲ್ಲಿ ಎರಡು ಕ್ರೀಡಾ ಮಸೂದೆಗಳು ಅಂಗೀಕಾರ

ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಎರಡು ಕ್ರೀಡಾ ಮಸೂದೆಗಳು ಅಂಗೀಕಾರ

- Advertisement -
- Advertisement -

ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೂ ‘ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ’ಯನ್ನು ಸೋಮವಾರ (ಆ.11) ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇದನ್ನು ‘ಸ್ವಾತಂತ್ರ್ಯ ನಂತರದ ಭಾರತೀಯ ಕ್ರೀಡೆಯಲ್ಲಿನ ಅತಿದೊಡ್ಡ ಸುಧಾರಣೆ’ ಎಂದು ಬಣ್ಣಿಸಿದ್ದಾರೆ.

ವಿರೋಧ ಪಕ್ಷಗಳ ಪ್ರತಿಭಟನೆಯಿಂದಾಗಿ ಆರಂಭಿಕ ಮುಂದೂಡಿಕೆಯ ನಂತರ ಲೋಕಸಭೆಯು ಮಧ್ಯಾಹ್ನ 2 ಗಂಟೆಗೆ ಮತ್ತೆ ಸಭೆ ಸೇರಿದಾಗ, ‘ರಾಷ್ಟ್ರೀಯ ಡೋಪಿಂಗ್ ವಿರೋಧಿ (ತಿದ್ದುಪಡಿ) ಮಸೂದೆ’ಯನ್ನು ಕೂಡ ಅಂಗೀಕರಿಸಲಾಯಿತು.

“ಇದು ಕ್ರೀಡೆಯಲ್ಲಿ ಸ್ವಾತಂತ್ರ್ಯದ ನಂತರ ಅತಿದೊಡ್ಡ ಸುಧಾರಣೆಯಾಗಿದೆ. ಈ ಮಸೂದೆಯು ಕ್ರೀಡಾ ಒಕ್ಕೂಟಗಳಲ್ಲಿ ಹೊಣೆಗಾರಿಕೆ, ನ್ಯಾಯ ಮತ್ತು ಉತ್ತಮ ಆಡಳಿತವನ್ನು ಖಚಿತಪಡಿಸುತ್ತದೆ” ಎಂದು ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆ ಸಚಿವ ಮಾಂಡವಿಯಾ ಹೇಳಿದರು.

“ಇದು ಭಾರತದ ಕ್ರೀಡಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ಭಾರೀ ಮಹತ್ವವನ್ನು ಹೊಂದಿರುವ ವಿಷಯಗಳು. ಇಂತಹ ಮಹತ್ವದ ಮಸೂದೆ ಮತ್ತು ಸುಧಾರಣೆಯಲ್ಲಿ ವಿರೋಧ ಪಕ್ಷದ ಭಾಗವಹಿಸುವಿಕೆ ಇಲ್ಲದಿರುವುದು ದುರದೃಷ್ಟಕರ” ಎಂದು ಮಾಂಡವೀಯಾ ಟೀಕಿಸಿದರು.

ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಪ್ರತಿಪಕ್ಷಗಳ ಸಂಸದರು ಕೇಂದ್ರ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಕಡೆಗೆ ಮೆರವಣಿಗೆ ಹೊರಟಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಹಾಗಾಗಿ, ಮಸೂದೆಗಳನ್ನು ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಿದಾಗ ವಿರೋಧ ಪಕ್ಷದ ಸಂಸದರು ಸದನದಲ್ಲಿ ಇರಲಿಲ್ಲ.

ಆದರೆ, ಇಬ್ಬರು ಸಂಸದರು ಮಸೂದೆಯ ಪರಿಗಣನಾ ಚರ್ಚೆಯಲ್ಲಿ ಭಾಗವಹಿಸಿ, ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ನಂತರ, ವಿರೋಧ ಪಕ್ಷದ ಸದಸ್ಯರು ಸದನಕ್ಕೆ ಹಿಂತಿರುಗಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.

ಗದ್ದಲದ ನಡುವೆಯೇ, ಮಸೂದೆಗಳನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ನಂತರ ಸದನವನ್ನು ಸಂಜೆ 4 ಗಂಟೆಯವರೆಗೆ ಮುಂದೂಡಲಾಯಿತು.

ಇದಕ್ಕೂ ಮೊದಲು, ಕ್ರೀಡಾ ಸಂಸದೀಯ ಸಮಿತಿಯ ಅಧ್ಯಕ್ಷ ದಿಗ್ವಿಜಯ ಸಿಂಗ್ ಅವರು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆಯನ್ನು ಸಂಸದೀಯ ಸಮಿತಿಗೆ ಕಳಿಸುವಂತೆ ವಿನಂತಿಸಿದರು. ಸಂಸತ್ತು ಮಸೂದೆಯನ್ನು ಅಂಗೀಕರಿಸುವ ಮೊದಲು ಪರಿಶೀಲಿಸಬೇಕು ಮತ್ತು ಚರ್ಚಿಸಬೇಕು ಎಂದು ಹೇಳಿದರು.

2036ರ ಒಲಿಂಪಿಕ್ಸ್‌ಗೆ ಬಿಡ್ ಮಾಡಲು ಮುಂದಾಗಿರುವ ಭಾರತದಲ್ಲಿ ‘ಪಾರದರ್ಶಕ, ಜವಾಬ್ದಾರಿಯುತ ಮತ್ತು ವಿಶ್ವ ದರ್ಜೆಯ ಕ್ರೀಡಾ ಪರಿಸರ ವ್ಯವಸ್ಥೆಯನ್ನು’ ನಿರ್ಮಿಸುವ ಗುರಿಯನ್ನು ಹೊಂದಿರುವ ಎರಡು ಮಸೂದೆಗಳು ಪ್ರಮುಖ ಸುಧಾರಣೆಗಳಾಗಿವೆ ಎಂದು ಸಚಿವ ಮಾಂಡವಿಯಾ ಸಮರ್ಥಿಸಿಕೊಂಡರು.

“1975ರಿಂದ ಕಾಯ್ದೆಯಲ್ಲಿ ತಿದ್ದುಪಡಿಗೆ ಪ್ರಯತ್ನಗಳು ನಡೆದಿವೆ. 1985ರಲ್ಲಿ, ಮೊದಲ ಕರಡು ಮಸೂದೆಯನ್ನು ಸಿದ್ದಪಡಿಸಲಾಗಿತ್ತು. ಆದರೆ, ವೈಯಕ್ತಿಕ ಲಾಭಕ್ಕಾಗಿ ಕ್ರೀಡೆಗಳನ್ನು ಕೂಡ ರಾಜಕೀಯಗೊಳಿಸಲಾಯಿತು. ಕೆಲವು ಮಂತ್ರಿಗಳು ಮಸೂದೆ ಮಂಡಿಸಲು ಪ್ರಯತ್ನಗಳನ್ನು ನಡೆಸಿದ್ದರು. ಆದರೆ, ಮುಂದುವರಿಯಲು ಸಾಧ್ಯವಾಗಲಿಲ್ಲ” ಎಂದು ಸಚಿವ ಮಾಂಡವೀಯಾ ಹೇಳಿದರು.

“2011ರಲ್ಲಿ, ನಾವು ರಾಷ್ಟ್ರೀಯ ಕ್ರೀಡಾ ಸಂಹಿತೆಯನ್ನು ಜಾರಿಗೆ ತಂದೆವು. ಅದನ್ನು ಮಸೂದೆಯಾಗಿ ಪರಿವರ್ತಿಸಲು ಮತ್ತೊಂದು ಪ್ರಯತ್ನ ಮಾಡಲಾಯಿತು. ಅದು ಸಂಪುಟವನ್ನು ತಲುಪಿತು, ಚರ್ಚೆಯೂ ನಡೆಯಿತು. ಆದರೆ, ಅದರ ನಂತರ ಮಸೂದೆಯನ್ನು ಮುಂದೂಡಲಾಯಿತು. ಅದು ಸಂಸತ್ತನ್ನು ತಲುಪಲಿಲ್ಲ” ಎಂದು ಮಸೂದೆಯ ಹಿನ್ನೆಲೆಯನ್ನು ಪ್ರಸ್ತುತಪಡಿಸುತ್ತಾ ಸಚಿವರು ತಿಳಿಸಿದರು.

“ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆಯು ಬದಲಾವಣೆಯ ಶಕ್ತಿಯಾಗಿದೆ. ಇಷ್ಟು ದೊಡ್ಡ ದೇಶವಾಗಿದ್ದರೂ, ಒಲಿಂಪಿಕ್ ಕ್ರೀಡಾಕೂಟ ಮತ್ತು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ಸಾಧನೆ ತೃಪ್ತಿಕರವಾಗಿಲ್ಲ. ಈ ಮಸೂದೆಯು ಭಾರತದ ಕ್ರೀಡಾ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ” ಎಂದು ಹೇಳಿದರು.

ವರದಿಗಳ ಪ್ರಕಾರ, ಕ್ರೀಡಾ ಆಡಳಿತ ಮಸೂದೆಯು ರಾಷ್ಟ್ರೀಯ ಕ್ರೀಡಾ ಮಂಡಳಿ (ಎನ್‌ಎಸ್‌ಬಿ)ಗೆ ಕಠಿಣ ಹೊಣೆಗಾರಿಕೆ ವ್ಯವಸ್ಥೆಯನ್ನು ರಚಿಸಲು ಅವಕಾಶಗಳನ್ನು ಕೊಡುತ್ತದೆ. ಎಲ್ಲಾ ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳು (ಎನ್‌ಎಸ್‌ಎಫ್‌ಗಳು) ಕೇಂದ್ರ ಸರ್ಕಾರದ ನಿಧಿಯನ್ನು ಪಡೆಯಲು ಎನ್‌ಎಸ್‌ಬಿಯ ಮಾನ್ಯತೆಯನ್ನು ಪಡೆಯಬೇಕಾಗುತ್ತದೆ.

ತನ್ನ ಕಾರ್ಯಕಾರಿ ಸಮಿತಿಗೆ ಚುನಾವಣೆಗಳನ್ನು ನಡೆಸಲು ವಿಫಲವಾದ ಅಥವಾ ‘ಚುನಾವಣಾ ಕಾರ್ಯವಿಧಾನಗಳಲ್ಲಿ ಸಂಪೂರ್ಣ ಅಕ್ರಮಗಳನ್ನು’ ಎಸಗಿದ ರಾಷ್ಟ್ರೀಯ ಸಂಸ್ಥೆಯ ಮಾನ್ಯತೆಯನ್ನು ರದ್ದುಗೊಳಿಸುವ ಅಧಿಕಾರ ಎನ್‌ಎಸ್‌ಬಿಗೆ ಇರುತ್ತದೆ.

ವಾರ್ಷಿಕ ಲೆಕ್ಕಪರಿಶೋಧನೆ ಮಾಹಿತಿಯನ್ನು ಪ್ರಕಟಿಸಲು ವಿಫಲವಾದರೆ ಅಥವಾ ಸಾರ್ವಜನಿಕ ನಿಧಿಗಳ ದುರುಪಯೋಗಪ ಸಂಬಂಧ ಕ್ರಮಗಳನ್ನು ಕೈಗೊಳ್ಳಲು ಎನ್‌ಎಸ್‌ಬಿಗೆ ಅಧಿಕಾರವಿರುತ್ತದೆ. ಅದರ, ಕ್ರಮ ಕೈಗೊಳ್ಳುವ ಮೊದಲು ಸಂಬಂಧಪಟ್ಟ ಸಂಸ್ಥೆಯನ್ನು ಸಂಪರ್ಕಿಸುವುದು ಅಗತ್ಯವಾಗಿರುತ್ತದೆ.

ಮತ್ತೊಂದು ವೈಶಿಷ್ಟ್ಯವೆಂದರೆ, ರಾಷ್ಟ್ರೀಯ ಕ್ರೀಡಾ ನ್ಯಾಯಮಂಡಳಿಯ ಪ್ರಸ್ತಾವನೆ. ಇದು ಸಿವಿಲ್ ನ್ಯಾಯಾಲಯದ ಅಧಿಕಾರವನ್ನು ಹೊಂದಿದ್ದು, ಫೆಡರೇಶನ್‌ಗಳು ಮತ್ತು ಕ್ರೀಡಾಪಟುಗಳನ್ನು ಒಳಗೊಂಡ ಆಯ್ಕೆಯಿಂದ ಚುನಾವಣೆಯವರೆಗಿನ ವಿವಾದಗಳನ್ನು ನಿರ್ಧರಿಸುತ್ತದೆ. ಒಮ್ಮೆ ಸ್ಥಾಪಿಸಿದ ನಂತರ, ನ್ಯಾಯಮಂಡಳಿಯ ನಿರ್ಧಾರಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಮಾತ್ರ ಪ್ರಶ್ನಿಸಬಹುದು.

ಸಂಬಂಧಪಟ್ಟ ಅಂತಾರಾಷ್ಟ್ರೀಯ ಸಂಸ್ಥೆಗಳ ಕಾನೂನುಗಳು ಮತ್ತು ಬೈಲಾಗಳು ಅನುಮತಿಸಿದರೆ, 70 ರಿಂದ 75 ವರ್ಷದೊಳಗಿನವರು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಮೂಲಕ ಆಡಳಿತಾಧಿಕಾರಿಗಳಿಗೆ ವಯಸ್ಸಿನ ಮಿತಿಯ ವಿಷಯದಲ್ಲಿ ಮಸೂದೆಯು ಕೆಲವು ರಿಯಾಯಿತಿಗಳನ್ನು ನೀಡುತ್ತದೆ. ಇದು ವಯಸ್ಸಿನ ಮಿತಿಯನ್ನು 70 ಕ್ಕೆ ಸೀಮಿತಗೊಳಿಸಿದ ರಾಷ್ಟ್ರೀಯ ಕ್ರೀಡಾ ಸಂಹಿತೆಯನ್ನು ತೆಗೆದು ಹಾಕುತ್ತದೆ.

2036 ರ ಬೇಸಿಗೆ ಒಲಿಂಪಿಕ್ ಕ್ರೀಡಾಕೂಟದ ಬಿಡ್ಡಿಂಗ್‌ಗೆ ಪೂರ್ವಸಿದ್ಧತಾ ಚಟುವಟಿಕೆಗಳ ಭಾಗವಾಗಿ, ಉತ್ತಮ ಫಲಿತಾಂಶಗಳನ್ನು ತರಲು, ಕ್ರೀಡಾ ಶ್ರೇಷ್ಠತೆಯನ್ನು ತರಲು ಮತ್ತು ಪ್ರಮುಖ ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸುಧಾರಿತ ಪ್ರದರ್ಶನಕ್ಕೆ ಸಹಾಯ ಮಾಡಲು ಕ್ರೀಡಾ ಆಡಳಿತದ ವ್ಯವಸ್ಥೆಯು ಸಕಾರಾತ್ಮಕ ರೂಪಾಂತರಕ್ಕೆ ಒಳಗಾಗುವುದು ಕಡ್ಡಾಯವಾಗಿದೆ” ಎಂದು ಮಸೂದೆಯ ಉದ್ದೇಶಗಳ ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...