Homeಮುಖಪುಟಗದ್ದಲದ ನಡುವೆಯೇ ಲೋಕಸಭೆಯಲ್ಲಿ ಎರಡು ಕ್ರೀಡಾ ಮಸೂದೆಗಳು ಅಂಗೀಕಾರ

ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಎರಡು ಕ್ರೀಡಾ ಮಸೂದೆಗಳು ಅಂಗೀಕಾರ

- Advertisement -
- Advertisement -

ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೂ ‘ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ’ಯನ್ನು ಸೋಮವಾರ (ಆ.11) ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇದನ್ನು ‘ಸ್ವಾತಂತ್ರ್ಯ ನಂತರದ ಭಾರತೀಯ ಕ್ರೀಡೆಯಲ್ಲಿನ ಅತಿದೊಡ್ಡ ಸುಧಾರಣೆ’ ಎಂದು ಬಣ್ಣಿಸಿದ್ದಾರೆ.

ವಿರೋಧ ಪಕ್ಷಗಳ ಪ್ರತಿಭಟನೆಯಿಂದಾಗಿ ಆರಂಭಿಕ ಮುಂದೂಡಿಕೆಯ ನಂತರ ಲೋಕಸಭೆಯು ಮಧ್ಯಾಹ್ನ 2 ಗಂಟೆಗೆ ಮತ್ತೆ ಸಭೆ ಸೇರಿದಾಗ, ‘ರಾಷ್ಟ್ರೀಯ ಡೋಪಿಂಗ್ ವಿರೋಧಿ (ತಿದ್ದುಪಡಿ) ಮಸೂದೆ’ಯನ್ನು ಕೂಡ ಅಂಗೀಕರಿಸಲಾಯಿತು.

“ಇದು ಕ್ರೀಡೆಯಲ್ಲಿ ಸ್ವಾತಂತ್ರ್ಯದ ನಂತರ ಅತಿದೊಡ್ಡ ಸುಧಾರಣೆಯಾಗಿದೆ. ಈ ಮಸೂದೆಯು ಕ್ರೀಡಾ ಒಕ್ಕೂಟಗಳಲ್ಲಿ ಹೊಣೆಗಾರಿಕೆ, ನ್ಯಾಯ ಮತ್ತು ಉತ್ತಮ ಆಡಳಿತವನ್ನು ಖಚಿತಪಡಿಸುತ್ತದೆ” ಎಂದು ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆ ಸಚಿವ ಮಾಂಡವಿಯಾ ಹೇಳಿದರು.

“ಇದು ಭಾರತದ ಕ್ರೀಡಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ಭಾರೀ ಮಹತ್ವವನ್ನು ಹೊಂದಿರುವ ವಿಷಯಗಳು. ಇಂತಹ ಮಹತ್ವದ ಮಸೂದೆ ಮತ್ತು ಸುಧಾರಣೆಯಲ್ಲಿ ವಿರೋಧ ಪಕ್ಷದ ಭಾಗವಹಿಸುವಿಕೆ ಇಲ್ಲದಿರುವುದು ದುರದೃಷ್ಟಕರ” ಎಂದು ಮಾಂಡವೀಯಾ ಟೀಕಿಸಿದರು.

ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಪ್ರತಿಪಕ್ಷಗಳ ಸಂಸದರು ಕೇಂದ್ರ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಕಡೆಗೆ ಮೆರವಣಿಗೆ ಹೊರಟಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಹಾಗಾಗಿ, ಮಸೂದೆಗಳನ್ನು ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಿದಾಗ ವಿರೋಧ ಪಕ್ಷದ ಸಂಸದರು ಸದನದಲ್ಲಿ ಇರಲಿಲ್ಲ.

ಆದರೆ, ಇಬ್ಬರು ಸಂಸದರು ಮಸೂದೆಯ ಪರಿಗಣನಾ ಚರ್ಚೆಯಲ್ಲಿ ಭಾಗವಹಿಸಿ, ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ನಂತರ, ವಿರೋಧ ಪಕ್ಷದ ಸದಸ್ಯರು ಸದನಕ್ಕೆ ಹಿಂತಿರುಗಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.

ಗದ್ದಲದ ನಡುವೆಯೇ, ಮಸೂದೆಗಳನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ನಂತರ ಸದನವನ್ನು ಸಂಜೆ 4 ಗಂಟೆಯವರೆಗೆ ಮುಂದೂಡಲಾಯಿತು.

ಇದಕ್ಕೂ ಮೊದಲು, ಕ್ರೀಡಾ ಸಂಸದೀಯ ಸಮಿತಿಯ ಅಧ್ಯಕ್ಷ ದಿಗ್ವಿಜಯ ಸಿಂಗ್ ಅವರು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆಯನ್ನು ಸಂಸದೀಯ ಸಮಿತಿಗೆ ಕಳಿಸುವಂತೆ ವಿನಂತಿಸಿದರು. ಸಂಸತ್ತು ಮಸೂದೆಯನ್ನು ಅಂಗೀಕರಿಸುವ ಮೊದಲು ಪರಿಶೀಲಿಸಬೇಕು ಮತ್ತು ಚರ್ಚಿಸಬೇಕು ಎಂದು ಹೇಳಿದರು.

2036ರ ಒಲಿಂಪಿಕ್ಸ್‌ಗೆ ಬಿಡ್ ಮಾಡಲು ಮುಂದಾಗಿರುವ ಭಾರತದಲ್ಲಿ ‘ಪಾರದರ್ಶಕ, ಜವಾಬ್ದಾರಿಯುತ ಮತ್ತು ವಿಶ್ವ ದರ್ಜೆಯ ಕ್ರೀಡಾ ಪರಿಸರ ವ್ಯವಸ್ಥೆಯನ್ನು’ ನಿರ್ಮಿಸುವ ಗುರಿಯನ್ನು ಹೊಂದಿರುವ ಎರಡು ಮಸೂದೆಗಳು ಪ್ರಮುಖ ಸುಧಾರಣೆಗಳಾಗಿವೆ ಎಂದು ಸಚಿವ ಮಾಂಡವಿಯಾ ಸಮರ್ಥಿಸಿಕೊಂಡರು.

“1975ರಿಂದ ಕಾಯ್ದೆಯಲ್ಲಿ ತಿದ್ದುಪಡಿಗೆ ಪ್ರಯತ್ನಗಳು ನಡೆದಿವೆ. 1985ರಲ್ಲಿ, ಮೊದಲ ಕರಡು ಮಸೂದೆಯನ್ನು ಸಿದ್ದಪಡಿಸಲಾಗಿತ್ತು. ಆದರೆ, ವೈಯಕ್ತಿಕ ಲಾಭಕ್ಕಾಗಿ ಕ್ರೀಡೆಗಳನ್ನು ಕೂಡ ರಾಜಕೀಯಗೊಳಿಸಲಾಯಿತು. ಕೆಲವು ಮಂತ್ರಿಗಳು ಮಸೂದೆ ಮಂಡಿಸಲು ಪ್ರಯತ್ನಗಳನ್ನು ನಡೆಸಿದ್ದರು. ಆದರೆ, ಮುಂದುವರಿಯಲು ಸಾಧ್ಯವಾಗಲಿಲ್ಲ” ಎಂದು ಸಚಿವ ಮಾಂಡವೀಯಾ ಹೇಳಿದರು.

“2011ರಲ್ಲಿ, ನಾವು ರಾಷ್ಟ್ರೀಯ ಕ್ರೀಡಾ ಸಂಹಿತೆಯನ್ನು ಜಾರಿಗೆ ತಂದೆವು. ಅದನ್ನು ಮಸೂದೆಯಾಗಿ ಪರಿವರ್ತಿಸಲು ಮತ್ತೊಂದು ಪ್ರಯತ್ನ ಮಾಡಲಾಯಿತು. ಅದು ಸಂಪುಟವನ್ನು ತಲುಪಿತು, ಚರ್ಚೆಯೂ ನಡೆಯಿತು. ಆದರೆ, ಅದರ ನಂತರ ಮಸೂದೆಯನ್ನು ಮುಂದೂಡಲಾಯಿತು. ಅದು ಸಂಸತ್ತನ್ನು ತಲುಪಲಿಲ್ಲ” ಎಂದು ಮಸೂದೆಯ ಹಿನ್ನೆಲೆಯನ್ನು ಪ್ರಸ್ತುತಪಡಿಸುತ್ತಾ ಸಚಿವರು ತಿಳಿಸಿದರು.

“ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆಯು ಬದಲಾವಣೆಯ ಶಕ್ತಿಯಾಗಿದೆ. ಇಷ್ಟು ದೊಡ್ಡ ದೇಶವಾಗಿದ್ದರೂ, ಒಲಿಂಪಿಕ್ ಕ್ರೀಡಾಕೂಟ ಮತ್ತು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ಸಾಧನೆ ತೃಪ್ತಿಕರವಾಗಿಲ್ಲ. ಈ ಮಸೂದೆಯು ಭಾರತದ ಕ್ರೀಡಾ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ” ಎಂದು ಹೇಳಿದರು.

ವರದಿಗಳ ಪ್ರಕಾರ, ಕ್ರೀಡಾ ಆಡಳಿತ ಮಸೂದೆಯು ರಾಷ್ಟ್ರೀಯ ಕ್ರೀಡಾ ಮಂಡಳಿ (ಎನ್‌ಎಸ್‌ಬಿ)ಗೆ ಕಠಿಣ ಹೊಣೆಗಾರಿಕೆ ವ್ಯವಸ್ಥೆಯನ್ನು ರಚಿಸಲು ಅವಕಾಶಗಳನ್ನು ಕೊಡುತ್ತದೆ. ಎಲ್ಲಾ ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳು (ಎನ್‌ಎಸ್‌ಎಫ್‌ಗಳು) ಕೇಂದ್ರ ಸರ್ಕಾರದ ನಿಧಿಯನ್ನು ಪಡೆಯಲು ಎನ್‌ಎಸ್‌ಬಿಯ ಮಾನ್ಯತೆಯನ್ನು ಪಡೆಯಬೇಕಾಗುತ್ತದೆ.

ತನ್ನ ಕಾರ್ಯಕಾರಿ ಸಮಿತಿಗೆ ಚುನಾವಣೆಗಳನ್ನು ನಡೆಸಲು ವಿಫಲವಾದ ಅಥವಾ ‘ಚುನಾವಣಾ ಕಾರ್ಯವಿಧಾನಗಳಲ್ಲಿ ಸಂಪೂರ್ಣ ಅಕ್ರಮಗಳನ್ನು’ ಎಸಗಿದ ರಾಷ್ಟ್ರೀಯ ಸಂಸ್ಥೆಯ ಮಾನ್ಯತೆಯನ್ನು ರದ್ದುಗೊಳಿಸುವ ಅಧಿಕಾರ ಎನ್‌ಎಸ್‌ಬಿಗೆ ಇರುತ್ತದೆ.

ವಾರ್ಷಿಕ ಲೆಕ್ಕಪರಿಶೋಧನೆ ಮಾಹಿತಿಯನ್ನು ಪ್ರಕಟಿಸಲು ವಿಫಲವಾದರೆ ಅಥವಾ ಸಾರ್ವಜನಿಕ ನಿಧಿಗಳ ದುರುಪಯೋಗಪ ಸಂಬಂಧ ಕ್ರಮಗಳನ್ನು ಕೈಗೊಳ್ಳಲು ಎನ್‌ಎಸ್‌ಬಿಗೆ ಅಧಿಕಾರವಿರುತ್ತದೆ. ಅದರ, ಕ್ರಮ ಕೈಗೊಳ್ಳುವ ಮೊದಲು ಸಂಬಂಧಪಟ್ಟ ಸಂಸ್ಥೆಯನ್ನು ಸಂಪರ್ಕಿಸುವುದು ಅಗತ್ಯವಾಗಿರುತ್ತದೆ.

ಮತ್ತೊಂದು ವೈಶಿಷ್ಟ್ಯವೆಂದರೆ, ರಾಷ್ಟ್ರೀಯ ಕ್ರೀಡಾ ನ್ಯಾಯಮಂಡಳಿಯ ಪ್ರಸ್ತಾವನೆ. ಇದು ಸಿವಿಲ್ ನ್ಯಾಯಾಲಯದ ಅಧಿಕಾರವನ್ನು ಹೊಂದಿದ್ದು, ಫೆಡರೇಶನ್‌ಗಳು ಮತ್ತು ಕ್ರೀಡಾಪಟುಗಳನ್ನು ಒಳಗೊಂಡ ಆಯ್ಕೆಯಿಂದ ಚುನಾವಣೆಯವರೆಗಿನ ವಿವಾದಗಳನ್ನು ನಿರ್ಧರಿಸುತ್ತದೆ. ಒಮ್ಮೆ ಸ್ಥಾಪಿಸಿದ ನಂತರ, ನ್ಯಾಯಮಂಡಳಿಯ ನಿರ್ಧಾರಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಮಾತ್ರ ಪ್ರಶ್ನಿಸಬಹುದು.

ಸಂಬಂಧಪಟ್ಟ ಅಂತಾರಾಷ್ಟ್ರೀಯ ಸಂಸ್ಥೆಗಳ ಕಾನೂನುಗಳು ಮತ್ತು ಬೈಲಾಗಳು ಅನುಮತಿಸಿದರೆ, 70 ರಿಂದ 75 ವರ್ಷದೊಳಗಿನವರು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಮೂಲಕ ಆಡಳಿತಾಧಿಕಾರಿಗಳಿಗೆ ವಯಸ್ಸಿನ ಮಿತಿಯ ವಿಷಯದಲ್ಲಿ ಮಸೂದೆಯು ಕೆಲವು ರಿಯಾಯಿತಿಗಳನ್ನು ನೀಡುತ್ತದೆ. ಇದು ವಯಸ್ಸಿನ ಮಿತಿಯನ್ನು 70 ಕ್ಕೆ ಸೀಮಿತಗೊಳಿಸಿದ ರಾಷ್ಟ್ರೀಯ ಕ್ರೀಡಾ ಸಂಹಿತೆಯನ್ನು ತೆಗೆದು ಹಾಕುತ್ತದೆ.

2036 ರ ಬೇಸಿಗೆ ಒಲಿಂಪಿಕ್ ಕ್ರೀಡಾಕೂಟದ ಬಿಡ್ಡಿಂಗ್‌ಗೆ ಪೂರ್ವಸಿದ್ಧತಾ ಚಟುವಟಿಕೆಗಳ ಭಾಗವಾಗಿ, ಉತ್ತಮ ಫಲಿತಾಂಶಗಳನ್ನು ತರಲು, ಕ್ರೀಡಾ ಶ್ರೇಷ್ಠತೆಯನ್ನು ತರಲು ಮತ್ತು ಪ್ರಮುಖ ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸುಧಾರಿತ ಪ್ರದರ್ಶನಕ್ಕೆ ಸಹಾಯ ಮಾಡಲು ಕ್ರೀಡಾ ಆಡಳಿತದ ವ್ಯವಸ್ಥೆಯು ಸಕಾರಾತ್ಮಕ ರೂಪಾಂತರಕ್ಕೆ ಒಳಗಾಗುವುದು ಕಡ್ಡಾಯವಾಗಿದೆ” ಎಂದು ಮಸೂದೆಯ ಉದ್ದೇಶಗಳ ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...