Homeಮುಖಪುಟಗದ್ದಲದ ನಡುವೆಯೇ ಲೋಕಸಭೆಯಲ್ಲಿ ಎರಡು ಕ್ರೀಡಾ ಮಸೂದೆಗಳು ಅಂಗೀಕಾರ

ಗದ್ದಲದ ನಡುವೆಯೇ ಲೋಕಸಭೆಯಲ್ಲಿ ಎರಡು ಕ್ರೀಡಾ ಮಸೂದೆಗಳು ಅಂಗೀಕಾರ

- Advertisement -
- Advertisement -

ವಿರೋಧ ಪಕ್ಷಗಳ ಪ್ರತಿಭಟನೆಯ ನಡುವೆಯೂ ‘ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ’ಯನ್ನು ಸೋಮವಾರ (ಆ.11) ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಇದನ್ನು ‘ಸ್ವಾತಂತ್ರ್ಯ ನಂತರದ ಭಾರತೀಯ ಕ್ರೀಡೆಯಲ್ಲಿನ ಅತಿದೊಡ್ಡ ಸುಧಾರಣೆ’ ಎಂದು ಬಣ್ಣಿಸಿದ್ದಾರೆ.

ವಿರೋಧ ಪಕ್ಷಗಳ ಪ್ರತಿಭಟನೆಯಿಂದಾಗಿ ಆರಂಭಿಕ ಮುಂದೂಡಿಕೆಯ ನಂತರ ಲೋಕಸಭೆಯು ಮಧ್ಯಾಹ್ನ 2 ಗಂಟೆಗೆ ಮತ್ತೆ ಸಭೆ ಸೇರಿದಾಗ, ‘ರಾಷ್ಟ್ರೀಯ ಡೋಪಿಂಗ್ ವಿರೋಧಿ (ತಿದ್ದುಪಡಿ) ಮಸೂದೆ’ಯನ್ನು ಕೂಡ ಅಂಗೀಕರಿಸಲಾಯಿತು.

“ಇದು ಕ್ರೀಡೆಯಲ್ಲಿ ಸ್ವಾತಂತ್ರ್ಯದ ನಂತರ ಅತಿದೊಡ್ಡ ಸುಧಾರಣೆಯಾಗಿದೆ. ಈ ಮಸೂದೆಯು ಕ್ರೀಡಾ ಒಕ್ಕೂಟಗಳಲ್ಲಿ ಹೊಣೆಗಾರಿಕೆ, ನ್ಯಾಯ ಮತ್ತು ಉತ್ತಮ ಆಡಳಿತವನ್ನು ಖಚಿತಪಡಿಸುತ್ತದೆ” ಎಂದು ವಿರೋಧ ಪಕ್ಷದ ಸದಸ್ಯರ ಘೋಷಣೆಗಳ ನಡುವೆ ಸಚಿವ ಮಾಂಡವಿಯಾ ಹೇಳಿದರು.

“ಇದು ಭಾರತದ ಕ್ರೀಡಾ ವ್ಯವಸ್ಥೆಗೆ ಸಂಬಂಧಪಟ್ಟಂತೆ ಭಾರೀ ಮಹತ್ವವನ್ನು ಹೊಂದಿರುವ ವಿಷಯಗಳು. ಇಂತಹ ಮಹತ್ವದ ಮಸೂದೆ ಮತ್ತು ಸುಧಾರಣೆಯಲ್ಲಿ ವಿರೋಧ ಪಕ್ಷದ ಭಾಗವಹಿಸುವಿಕೆ ಇಲ್ಲದಿರುವುದು ದುರದೃಷ್ಟಕರ” ಎಂದು ಮಾಂಡವೀಯಾ ಟೀಕಿಸಿದರು.

ಬಿಹಾರದಲ್ಲಿ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಮತ್ತು 2024ರ ಲೋಕಸಭೆ ಚುನಾವಣೆಯಲ್ಲಿ ಮತಗಳ್ಳತನ ನಡೆದಿದೆ ಎಂದು ಆರೋಪಿಸಿ ಪ್ರತಿಪಕ್ಷಗಳ ಸಂಸದರು ಕೇಂದ್ರ ಚುನಾವಣಾ ಆಯೋಗದ ಪ್ರಧಾನ ಕಚೇರಿಯ ಕಡೆಗೆ ಮೆರವಣಿಗೆ ಹೊರಟಿದ್ದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದರು. ಹಾಗಾಗಿ, ಮಸೂದೆಗಳನ್ನು ಪರಿಗಣನೆ ಮತ್ತು ಅಂಗೀಕಾರಕ್ಕಾಗಿ ಮಂಡಿಸಿದಾಗ ವಿರೋಧ ಪಕ್ಷದ ಸಂಸದರು ಸದನದಲ್ಲಿ ಇರಲಿಲ್ಲ.

ಆದರೆ, ಇಬ್ಬರು ಸಂಸದರು ಮಸೂದೆಯ ಪರಿಗಣನಾ ಚರ್ಚೆಯಲ್ಲಿ ಭಾಗವಹಿಸಿ, ಮಸೂದೆಯನ್ನು ಬೆಂಬಲಿಸಿ ಮಾತನಾಡಿದ ನಂತರ, ವಿರೋಧ ಪಕ್ಷದ ಸದಸ್ಯರು ಸದನಕ್ಕೆ ಹಿಂತಿರುಗಿ ಘೋಷಣೆಗಳನ್ನು ಕೂಗಲು ಪ್ರಾರಂಭಿಸಿದರು.

ಗದ್ದಲದ ನಡುವೆಯೇ, ಮಸೂದೆಗಳನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ನಂತರ ಸದನವನ್ನು ಸಂಜೆ 4 ಗಂಟೆಯವರೆಗೆ ಮುಂದೂಡಲಾಯಿತು.

ಇದಕ್ಕೂ ಮೊದಲು, ಕ್ರೀಡಾ ಸಂಸದೀಯ ಸಮಿತಿಯ ಅಧ್ಯಕ್ಷ ದಿಗ್ವಿಜಯ ಸಿಂಗ್ ಅವರು, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆಯನ್ನು ಸಂಸದೀಯ ಸಮಿತಿಗೆ ಕಳಿಸುವಂತೆ ವಿನಂತಿಸಿದರು. ಸಂಸತ್ತು ಮಸೂದೆಯನ್ನು ಅಂಗೀಕರಿಸುವ ಮೊದಲು ಪರಿಶೀಲಿಸಬೇಕು ಮತ್ತು ಚರ್ಚಿಸಬೇಕು ಎಂದು ಹೇಳಿದರು.

2036ರ ಒಲಿಂಪಿಕ್ಸ್‌ಗೆ ಬಿಡ್ ಮಾಡಲು ಮುಂದಾಗಿರುವ ಭಾರತದಲ್ಲಿ ‘ಪಾರದರ್ಶಕ, ಜವಾಬ್ದಾರಿಯುತ ಮತ್ತು ವಿಶ್ವ ದರ್ಜೆಯ ಕ್ರೀಡಾ ಪರಿಸರ ವ್ಯವಸ್ಥೆಯನ್ನು’ ನಿರ್ಮಿಸುವ ಗುರಿಯನ್ನು ಹೊಂದಿರುವ ಎರಡು ಮಸೂದೆಗಳು ಪ್ರಮುಖ ಸುಧಾರಣೆಗಳಾಗಿವೆ ಎಂದು ಸಚಿವ ಮಾಂಡವಿಯಾ ಸಮರ್ಥಿಸಿಕೊಂಡರು.

“1975ರಿಂದ ಕಾಯ್ದೆಯಲ್ಲಿ ತಿದ್ದುಪಡಿಗೆ ಪ್ರಯತ್ನಗಳು ನಡೆದಿವೆ. 1985ರಲ್ಲಿ, ಮೊದಲ ಕರಡು ಮಸೂದೆಯನ್ನು ಸಿದ್ದಪಡಿಸಲಾಗಿತ್ತು. ಆದರೆ, ವೈಯಕ್ತಿಕ ಲಾಭಕ್ಕಾಗಿ ಕ್ರೀಡೆಗಳನ್ನು ಕೂಡ ರಾಜಕೀಯಗೊಳಿಸಲಾಯಿತು. ಕೆಲವು ಮಂತ್ರಿಗಳು ಮಸೂದೆ ಮಂಡಿಸಲು ಪ್ರಯತ್ನಗಳನ್ನು ನಡೆಸಿದ್ದರು. ಆದರೆ, ಮುಂದುವರಿಯಲು ಸಾಧ್ಯವಾಗಲಿಲ್ಲ” ಎಂದು ಸಚಿವ ಮಾಂಡವೀಯಾ ಹೇಳಿದರು.

“2011ರಲ್ಲಿ, ನಾವು ರಾಷ್ಟ್ರೀಯ ಕ್ರೀಡಾ ಸಂಹಿತೆಯನ್ನು ಜಾರಿಗೆ ತಂದೆವು. ಅದನ್ನು ಮಸೂದೆಯಾಗಿ ಪರಿವರ್ತಿಸಲು ಮತ್ತೊಂದು ಪ್ರಯತ್ನ ಮಾಡಲಾಯಿತು. ಅದು ಸಂಪುಟವನ್ನು ತಲುಪಿತು, ಚರ್ಚೆಯೂ ನಡೆಯಿತು. ಆದರೆ, ಅದರ ನಂತರ ಮಸೂದೆಯನ್ನು ಮುಂದೂಡಲಾಯಿತು. ಅದು ಸಂಸತ್ತನ್ನು ತಲುಪಲಿಲ್ಲ” ಎಂದು ಮಸೂದೆಯ ಹಿನ್ನೆಲೆಯನ್ನು ಪ್ರಸ್ತುತಪಡಿಸುತ್ತಾ ಸಚಿವರು ತಿಳಿಸಿದರು.

“ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆಯು ಬದಲಾವಣೆಯ ಶಕ್ತಿಯಾಗಿದೆ. ಇಷ್ಟು ದೊಡ್ಡ ದೇಶವಾಗಿದ್ದರೂ, ಒಲಿಂಪಿಕ್ ಕ್ರೀಡಾಕೂಟ ಮತ್ತು ಅಂತಾರಾಷ್ಟ್ರೀಯ ವೇದಿಕೆಯಲ್ಲಿ ನಮ್ಮ ಸಾಧನೆ ತೃಪ್ತಿಕರವಾಗಿಲ್ಲ. ಈ ಮಸೂದೆಯು ಭಾರತದ ಕ್ರೀಡಾ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ” ಎಂದು ಹೇಳಿದರು.

ವರದಿಗಳ ಪ್ರಕಾರ, ಕ್ರೀಡಾ ಆಡಳಿತ ಮಸೂದೆಯು ರಾಷ್ಟ್ರೀಯ ಕ್ರೀಡಾ ಮಂಡಳಿ (ಎನ್‌ಎಸ್‌ಬಿ)ಗೆ ಕಠಿಣ ಹೊಣೆಗಾರಿಕೆ ವ್ಯವಸ್ಥೆಯನ್ನು ರಚಿಸಲು ಅವಕಾಶಗಳನ್ನು ಕೊಡುತ್ತದೆ. ಎಲ್ಲಾ ರಾಷ್ಟ್ರೀಯ ಕ್ರೀಡಾ ಒಕ್ಕೂಟಗಳು (ಎನ್‌ಎಸ್‌ಎಫ್‌ಗಳು) ಕೇಂದ್ರ ಸರ್ಕಾರದ ನಿಧಿಯನ್ನು ಪಡೆಯಲು ಎನ್‌ಎಸ್‌ಬಿಯ ಮಾನ್ಯತೆಯನ್ನು ಪಡೆಯಬೇಕಾಗುತ್ತದೆ.

ತನ್ನ ಕಾರ್ಯಕಾರಿ ಸಮಿತಿಗೆ ಚುನಾವಣೆಗಳನ್ನು ನಡೆಸಲು ವಿಫಲವಾದ ಅಥವಾ ‘ಚುನಾವಣಾ ಕಾರ್ಯವಿಧಾನಗಳಲ್ಲಿ ಸಂಪೂರ್ಣ ಅಕ್ರಮಗಳನ್ನು’ ಎಸಗಿದ ರಾಷ್ಟ್ರೀಯ ಸಂಸ್ಥೆಯ ಮಾನ್ಯತೆಯನ್ನು ರದ್ದುಗೊಳಿಸುವ ಅಧಿಕಾರ ಎನ್‌ಎಸ್‌ಬಿಗೆ ಇರುತ್ತದೆ.

ವಾರ್ಷಿಕ ಲೆಕ್ಕಪರಿಶೋಧನೆ ಮಾಹಿತಿಯನ್ನು ಪ್ರಕಟಿಸಲು ವಿಫಲವಾದರೆ ಅಥವಾ ಸಾರ್ವಜನಿಕ ನಿಧಿಗಳ ದುರುಪಯೋಗಪ ಸಂಬಂಧ ಕ್ರಮಗಳನ್ನು ಕೈಗೊಳ್ಳಲು ಎನ್‌ಎಸ್‌ಬಿಗೆ ಅಧಿಕಾರವಿರುತ್ತದೆ. ಅದರ, ಕ್ರಮ ಕೈಗೊಳ್ಳುವ ಮೊದಲು ಸಂಬಂಧಪಟ್ಟ ಸಂಸ್ಥೆಯನ್ನು ಸಂಪರ್ಕಿಸುವುದು ಅಗತ್ಯವಾಗಿರುತ್ತದೆ.

ಮತ್ತೊಂದು ವೈಶಿಷ್ಟ್ಯವೆಂದರೆ, ರಾಷ್ಟ್ರೀಯ ಕ್ರೀಡಾ ನ್ಯಾಯಮಂಡಳಿಯ ಪ್ರಸ್ತಾವನೆ. ಇದು ಸಿವಿಲ್ ನ್ಯಾಯಾಲಯದ ಅಧಿಕಾರವನ್ನು ಹೊಂದಿದ್ದು, ಫೆಡರೇಶನ್‌ಗಳು ಮತ್ತು ಕ್ರೀಡಾಪಟುಗಳನ್ನು ಒಳಗೊಂಡ ಆಯ್ಕೆಯಿಂದ ಚುನಾವಣೆಯವರೆಗಿನ ವಿವಾದಗಳನ್ನು ನಿರ್ಧರಿಸುತ್ತದೆ. ಒಮ್ಮೆ ಸ್ಥಾಪಿಸಿದ ನಂತರ, ನ್ಯಾಯಮಂಡಳಿಯ ನಿರ್ಧಾರಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಮಾತ್ರ ಪ್ರಶ್ನಿಸಬಹುದು.

ಸಂಬಂಧಪಟ್ಟ ಅಂತಾರಾಷ್ಟ್ರೀಯ ಸಂಸ್ಥೆಗಳ ಕಾನೂನುಗಳು ಮತ್ತು ಬೈಲಾಗಳು ಅನುಮತಿಸಿದರೆ, 70 ರಿಂದ 75 ವರ್ಷದೊಳಗಿನವರು ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವ ಮೂಲಕ ಆಡಳಿತಾಧಿಕಾರಿಗಳಿಗೆ ವಯಸ್ಸಿನ ಮಿತಿಯ ವಿಷಯದಲ್ಲಿ ಮಸೂದೆಯು ಕೆಲವು ರಿಯಾಯಿತಿಗಳನ್ನು ನೀಡುತ್ತದೆ. ಇದು ವಯಸ್ಸಿನ ಮಿತಿಯನ್ನು 70 ಕ್ಕೆ ಸೀಮಿತಗೊಳಿಸಿದ ರಾಷ್ಟ್ರೀಯ ಕ್ರೀಡಾ ಸಂಹಿತೆಯನ್ನು ತೆಗೆದು ಹಾಕುತ್ತದೆ.

2036 ರ ಬೇಸಿಗೆ ಒಲಿಂಪಿಕ್ ಕ್ರೀಡಾಕೂಟದ ಬಿಡ್ಡಿಂಗ್‌ಗೆ ಪೂರ್ವಸಿದ್ಧತಾ ಚಟುವಟಿಕೆಗಳ ಭಾಗವಾಗಿ, ಉತ್ತಮ ಫಲಿತಾಂಶಗಳನ್ನು ತರಲು, ಕ್ರೀಡಾ ಶ್ರೇಷ್ಠತೆಯನ್ನು ತರಲು ಮತ್ತು ಪ್ರಮುಖ ಅಂತಾರಾಷ್ಟ್ರೀಯ ಸ್ಪರ್ಧೆಗಳಲ್ಲಿ ಸುಧಾರಿತ ಪ್ರದರ್ಶನಕ್ಕೆ ಸಹಾಯ ಮಾಡಲು ಕ್ರೀಡಾ ಆಡಳಿತದ ವ್ಯವಸ್ಥೆಯು ಸಕಾರಾತ್ಮಕ ರೂಪಾಂತರಕ್ಕೆ ಒಳಗಾಗುವುದು ಕಡ್ಡಾಯವಾಗಿದೆ” ಎಂದು ಮಸೂದೆಯ ಉದ್ದೇಶಗಳ ಹೇಳಿಕೆಯಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.

ಚುನಾವಣಾ ಆಯೋಗದ ಕಚೇರಿಗೆ ಪ್ರತಿಭಟನಾ ಮೆರವಣಿಗೆ: ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...