Homeಮುಖಪುಟರೈತರ ಮೇಲೆ ಕಾರು ಹರಿಸುತ್ತಿರುವ ಎರಡು ವಿಡಿಯೋ ವೈರಲ್: ಜಾಲತಾಣಗಳಲ್ಲಿ ಭುಗಿಲೆದ್ದ ಆಕ್ರೋಶ

ರೈತರ ಮೇಲೆ ಕಾರು ಹರಿಸುತ್ತಿರುವ ಎರಡು ವಿಡಿಯೋ ವೈರಲ್: ಜಾಲತಾಣಗಳಲ್ಲಿ ಭುಗಿಲೆದ್ದ ಆಕ್ರೋಶ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಕೇಂದ್ರ ಸಚಿವನ ಮಗ ರೈತರ ಮೇಲೆ ಕಾರು ಹರಿಸಿ ನಾಲ್ವರನ್ನು ಕೊಂದ ಘಟನೆ ದೇಶಾದ್ಯಂತ ಆಕ್ರೋಶ ಹುಟ್ಟಿಸಿದೆ. ಅದು ವಿಡಿಯೋದಲ್ಲಿ ದಾಖಲಾಗಿದೆ ಎಂದು ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ..

ವಿಡಿಯೋದಲ್ಲಿ ಘೋಷಣೆ ಕೂಗುತ್ತಾ ಹೊರಟಿದ್ದ ರೈತರ ಗುಂಪಿನ ಮೇಲೆ ಹಿಂದಿನಿಂದ ಎಸ್‌ಯುವಿಯೊಂದು ಉದ್ದೇಶಪೂರ್ವಕವಾಗಿ ನುಗ್ಗುತ್ತಿದೆ.  ರೈತರು ಚಲ್ಲಾಪಿಲ್ಲಿಯಾಗುತ್ತಾರೆ. ಕೆಲ ರೈತರ ಮೇಲೆ ನೇರವಾಗಿ ಕಾರು ಹರಿದಿದೆ. ನಾನುಗೌರಿ.ಕಾಂ ಈ ವಿಡಿಯೋವನ್ನು ಪರಿಶೀಲಿಸಲು ಯತ್ನಿಸುತ್ತಿದೆ..

ಮತ್ತೊಂದು ವೈರಲ್ ವಿಡಿಯೋದಲ್ಲಿ ರೈತರ ಮೇಲೆ ಹರಿಸಿದ ನಂತರ ಅದೇ ಕಾರಿನಿಂದ ಇಬ್ಬರು ಇಳಿದು ಓಡಿ ಹೋಗುತ್ತಿರುವ ದೃಶ್ಯಗಳು ಸೆರೆಯಾಗಿವೆ. ಕಾರಿನ ಚಕ್ರಕ್ಕೆ ರೈತನೊಬ್ಬ ಸಿಕ್ಕಿ ನರಳುತ್ತಿರುವ ಹೃದಯ ವಿದ್ರಾವಕ ದೃಶ್ಯ ಕಂಡುಬಂದಿದೆ. ಕಾರು ಯಾರು ಚಲಾಯಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ.

ನಿನ್ನೆ ರೈತರು ಆರೋಪಿಸಿದಂತೆ ಕಾರಿನ ಬಣ್ಣಕ್ಕೂ ಇಂದು ವೈರಲ್ ಆಗಿರುವ ಕಾರಿನ ಬಣ್ಣಕ್ಕೂ ಹೊಂದಾಣಿಕೆಯಾಗಿದೆ. ಅದೇ ರೀತಿ ಹಿಂದಿನಿಂದ ಬಂದು ಗುದ್ದಿದ್ದು ಸಹ ದಾಖಲಾಗಿದೆ. ವಿಡಿಯೋದಲ್ಲಿ ದಾಖಲಾಗಿರುವ ರೈತರೇ ಮೃತಪಟ್ಟಿರುವುದರಿಂದ ಈ ವಿಡಿಯೋಗೆ ಸಾಕಷ್ಟು ಮಾನ್ಯತೆ ಸಿಕ್ಕಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ವಿಡಿಯೋವನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ಟ್ವೀಟ್ ಮಾಡಿ “ನರೇಂದ್ರ ಮೋದಿಯವರೆ ಈ ವಿಡಿಯೋ ನೋಡಿದ್ದೀರಾ? ನಿಮ್ಮ ಸರ್ಕಾರ ನನ್ನನ್ನು ಯಾವುದೇ ಎಫ್‌ಐಆರ್ ಅಥವಾ ಯಾವುದೇ ಆದೇಶವಿಲ್ಲದೆ ಕಳೆದ 28 ಗಂಟೆಗಳಿಂದ ಬಂಧನದಲ್ಲಿಟ್ಟಿದೆ. ಆದರೆ ಅನ್ನದಾತರ ಮೇಲೆ ಕಾರು ಹರಿಸಿದ ಈ ವ್ಯಕ್ತಿಯನ್ನುಇದುವರೆಗೂ ಬಂಧಿಸಿಲ್ಲ ಏಕೆ” ಎಂದು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಈ ಎರಡು ವಿಡಿಯೋಗಳು ವೈರಲ್ ಆಗಿದ್ದು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಲಾಗಿದೆ. ಮುಖ್ಯವಾಹಿನಿ ಮಾಧ್ಯಮಗಳು ಏಕೆ ಪ್ರಸಾರ ಮಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.

ಭಾನುವಾರ ಲಖಿಂಪುರ್‌ ಖೇರಿಯಲ್ಲಿ ರೈತರ ಮೇಲಿನ ಹತ್ಯಾಕಾಂಡದಲ್ಲಿ ನಾಲ್ವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂದು ಸಚಿವ ಪಟ್ಟಿ ಮಾಡಿದ್ದವರಲ್ಲಿ ಒಬ್ಬ ಪತ್ರಕರ್ತ ಎಂದು ಮೃತನ ಕುಟುಂಬ ಸ್ಪಷ್ಟಪಡಿಸಿದೆ. ಮೃತ ಪತ್ರಕರ್ತನನ್ನು ಬಿಜೆಪಿ ಕಾರ್ಯಕರ್ತ ಎಂದು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಮೃತನ ಕುಟುಂಬ ಆರೋಪಿಸಿದೆ.

ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ಭಾನುವಾರ ರೈತರ ಪ್ರತಿಭಟನೆಯನ್ನು ವರದಿ ಮಾಡಲು ಮುಂಜಾನೆಯೇ ಮನೆಯಿಂದ ಹೊರಟಿದ್ದ ರಮಣ್ ಕಶ್ಯಪ್ ನಾಪತ್ತೆಯಾಗಿದ್ದರು. ರಾತ್ರಿ 10 ರ ಸುಮಾರಿಗೆ ಲಖಿಂಪುರ್ ಖೇರಿ ಜಿಲ್ಲಾ ಆಸ್ಪತ್ರೆಯ ಶವಾಗಾರದಿಂದ ಅವರು ಮೃತಪಟ್ಟಿರುವ ಸುದ್ದಿ ಮನೆಯವರಿಗೆ ತಲುಪಿತ್ತು.

ಮೃತ ರಮಣ್ ಕಶ್ಯಪ್ ಅವರ ಕುಟುಂಬವು, “ಕಶ್ಯಪ್ ವರದಿಗಾರರಾಗಿ ತಮ್ಮ ಕೆಲಸವನ್ನು ಮಾಡುತ್ತಿದ್ದರು. ಅವರು ಬಿಜೆಪಿ ಕಾರ್ಯಕರ್ತರಾಗಿರಲಿಲ್ಲ. ನನ್ನ ಮಗ ಪತ್ರಕರ್ತರಾಗಿದ್ದರು. ಮಿಶ್ರಾ ಅವರ ಮಗ ಆಶೀಶ್ ಮತ್ತು ಅವರ ಸಹಾಯಕರನ್ನು ನಮ್ಮ ಮಗನನ್ನು ಕೊಲೆ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ: ರೈತರ ಬೇಡಿಕೆಗಳಿಗೆ ಮಣಿದ ಯುಪಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...