Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

ಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

- Advertisement -
- Advertisement -

ಜೈಲಿಗೆ ಶರಣಾದ ಎರಡೇ ವಾರಕ್ಕೆ ಬಿಲ್ಕಿಸ್ ಬಾನು ಅತ್ಯಾಚಾರಿಗಳ ಪೈಕಿ ಒಬ್ಬನಿಗೆ ಗುಜರಾತ್ ಹೈಕೋರ್ಟ್‌ ಪೆರೋಲ್ ನೀಡಿದೆ. ಒಟ್ಟು 11 ಅತ್ಯಾಚಾರ ಅಪರಾಧಿಗಳ ಪೈಕಿ ಪ್ರದೀಪ್ ಮೋಧಿಯಾ ಎಂಬಾತನಿಗೆ ಐದು ದಿನಗಳ ಪೆರೋಲ್ ನೀಡಲಾಗಿದ್ದು, ಆತನ ಮಾವ ನಿಧನರಾಗಿರುವ ಹಿನ್ನೆಲೆ ಗುಜರಾತ್‌ನ ದಾಹೋದ್‌ ಜಿಲ್ಲೆಯ ರಣಧೀಕ್‌ಪುರದ ಮನೆಗೆ ತೆರಳಲು ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಪೆರೋಲ್ ಪಡೆದಿರುವ ಅತ್ಯಾಚಾರಿ ಪ್ರದೀಪ್ ಮೋಧಿಯಾ ಜನವರಿ 21ರಂದು ತಡರಾತ್ರಿ ಜೈಲಿಗೆ ಶರಣಾಗಿದ್ದ. ಈತ ಸೇರಿದಂತೆ 11 ಅಪರಾಧಿಗಳಿಗೆ ಜೈಲಿಗೆ ಮರಳುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ನ್ಯಾಯಮೂರ್ತಿ ಎಂ.ಆರ್‌ ಮೆಂಗ್ಡೆ ಅವರು ಫೆಬ್ರವರಿ 5 ರಂದು ಫೆಬ್ರವರಿ 7 ರಿಂದ 11 ರವರೆಗೆ ಮೋಧಿಯಾಗೆ ಪೆರೋಲ್ ನೀಡಿದ್ದಾರೆ. ಮೋಧಿಯಾ ಸುಪ್ರೀಂ ಕೋರ್ಟ್‌ ಹೇಳಿದಂತೆ ಸರಿಯಾದ ಸಮಯಕ್ಕೆ ಜೈಲಿಗೆ ಮರಳಿದ್ದಾನೆ. ಅಲ್ಲದೆ ಜೈಲಿನ ಆತನ ಗುಣ ನಡತೆ ಚೆನ್ನಾಗಿದೆ. ಹಾಗಾಗಿ, 30 ದಿನಗಳ ಪೆರೋಲ್ ನೀಡುವಂತೆ ಅತನ ಪರ ವಕೀಲರು ಮನವಿ ಮಾಡಿದ್ದರು.

“ಹೈಕೋರ್ಟ್ ಅಪರಾಧಿ ಮೋಧಿಯಾಗೆ ಮನೆಗೆ ತೆರಳಲು ಐದು ದಿನಗಳ ಪೆರೋಲ್ ನೀಡಿದೆ. ಪೆರೋಲ್ ಷರತ್ತುಗಳ ಪ್ರಕಾರ, ಆತ ರಣಧೀಕ್‌ಪುರ ಪೊಲೀಸ್ ಠಾಣೆಗೆ ವರದಿ ಮಾಡುವ ಅಗತ್ಯವಿಲ್ಲ. ಪೆರೋಲ್ ಅವಧಿಯಲ್ಲಿ ಪೊಲೀಸರು ಆತನ ಮೇಲೆ ನಿಗಾ ಇಡಬೇಕಾಗಿಲ್ಲ. ಆತ ತಾನೇ ಜೈಲಿಗೆ ಹಿಂದಿರಿಗಬೇಕು ಎಂದು ಹೈಕೋರ್ಟ್‌ ಹೇಳಿದ್ದಾಗಿ ದಾಹೋದ್‌ನ ಲಿಮ್ಖೇಡಾದ ಉಪ ಪೊಲೀಸ್ ವರಿಷ್ಠಾಧಿಕಾರಿ ವಿಶಾಖ ಜೈನ್ ಅವರನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ವರದಿ ಮಾಡಿದೆ.

ಗುಜರಾತ್‌ ಸರ್ಕಾರ ಎಲ್ಲಾ 11 ಅತ್ಯಾಚಾರಿಗಳನ್ನು ಜೈಲಿನಿಂದ ಬಿಡುಗಡೆ ಮಾಡುವ ಮುನ್ನ, 2008ರಿಂದ ಪೇರೋಲ್‌ನಲ್ಲಿ 1041 ಮತ್ತು ಫರ್ಲೋದಲ್ಲಿ 223 ದಿನಗಳ ಕಾಲ ಮೋಧಿಯಾ ಜೈಲಿನಿಂದ ಹೊರಗಿದ್ದ.

ಜನವರಿಯಲ್ಲಿ, 11 ಅಪರಾಧಿಗಳಿಗೆ ಅವಧಿ ಪೂರ್ವ ಬಿಡುಗಡೆಯನ್ನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಗುಜರಾತ್ ರಾಜ್ಯವು “ಅಪರಾಧಿಗಳೊಂದಿಗೆ ಸಹಕರಿಸಿದೆ” ಎಂದು ಪೀಠ ಹೇಳಿತ್ತು. ಈ ಭಯದಿಂದಲೇ ನ್ಯಾಯಾಲಯವು ಬಿಲ್ಕಿಸ್ ಬಾನು ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮಹಾರಾಷ್ಟ್ರಕ್ಕೆ ವರ್ಗಾಯಿಸಿದ್ದು ಎಂದು ಹೇಳಿತ್ತು.

ಬಿಲ್ಕಿಸ್‌ ಬಾನು ಅತ್ಯಾಚಾರ ನಡೆಯುವಾಗ 2002ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರವಿತ್ತು. ಎಲ್ಲಾ 11 ಅತ್ಯಾಚಾರಿಗಳನ್ನು ಸನ್ನಡೆತೆಯ ಕಾರಣ ನೀಡಿ 2022ರ ಆಗಸ್ಟ್ 15 ರಂದು ಬಿಜೆಪಿ ಸರ್ಕಾರವೇ ಬಿಡುಗಡೆ ಮಾಡಿತ್ತು. ಅತ್ಯಾಚಾರ ಅಪರಾಧಿಗಳು ಎಲ್ಲರೂ ಬಿಜೆಪಿ ಸದಸ್ಯರು ಅಥವಾ ಅದರೊಂದಿಗೆ ಸಂಪರ್ಕ ಇರುವವರು ಎಂದು ಹೇಳಲಾಗ್ತಿದೆ. ಈ ಹಿಂದೆ ತಾತ್ಕಾಲಿಕ ಪೆರೋಲ್ ಮೇಲೆ ಇದ್ದಾಗ ಅಪರಾಧಿಗಳು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು ಎಂಬ ಆರೋಪವೂ ಇದೆ. ಅಪರಾಧಿಗಳ ಬಿಡುಗಡೆ ಕುರಿತು ನಿರ್ಧಿರಿಸಲು ಸರ್ಕಾರ ರಚಿಸಿದ್ದ ಸಮಿತಿ ಸದಸ್ಯರಲ್ಲಿ ಒಬ್ಬರಾದ ಬಿಜೆಪಿ ಶಾಸಕ “ಅತ್ಯಾಚಾರಿಗಳು ಬಿಡುಗಡೆಗೆ ಅರ್ಹರು, ಏಕೆಂದರೆ ಅವರೆಲ್ಲ ಉತ್ತಮ ಸಂಸ್ಕಾರ ಅಥವಾ ಮೌಲ್ಯಗಳನ್ನು ಹೊಂದಿರುವ ಬ್ರಾಹ್ಮಣರು” ಎಂದಿದ್ದರು.

ಇದನ್ನೂ ಓದಿ : ಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು ಭೇಟಿಯಾಗಿದ್ದ: ಸಂಜಯ್ ರಾವುತ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....