Homeಮುಖಪುಟಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

ಬಿಲ್ಕಿಸ್ ಬಾನು ಪ್ರಕರಣ: ಜೈಲಿಗೆ ಮರಳಿದ ಎರಡೇ ವಾರಕ್ಕೆ ಓರ್ವ ಅಪರಾಧಿಗೆ ಪೆರೋಲ್ ನೀಡಿದ ಕೋರ್ಟ್‌

- Advertisement -
- Advertisement -

ಜೈಲಿಗೆ ಶರಣಾದ ಎರಡೇ ವಾರಕ್ಕೆ ಬಿಲ್ಕಿಸ್ ಬಾನು ಅತ್ಯಾಚಾರಿಗಳ ಪೈಕಿ ಒಬ್ಬನಿಗೆ ಗುಜರಾತ್ ಹೈಕೋರ್ಟ್‌ ಪೆರೋಲ್ ನೀಡಿದೆ. ಒಟ್ಟು 11 ಅತ್ಯಾಚಾರ ಅಪರಾಧಿಗಳ ಪೈಕಿ ಪ್ರದೀಪ್ ಮೋಧಿಯಾ ಎಂಬಾತನಿಗೆ ಐದು ದಿನಗಳ ಪೆರೋಲ್ ನೀಡಲಾಗಿದ್ದು, ಆತನ ಮಾವ ನಿಧನರಾಗಿರುವ ಹಿನ್ನೆಲೆ ಗುಜರಾತ್‌ನ ದಾಹೋದ್‌ ಜಿಲ್ಲೆಯ ರಣಧೀಕ್‌ಪುರದ ಮನೆಗೆ ತೆರಳಲು ಅವಕಾಶ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಪೆರೋಲ್ ಪಡೆದಿರುವ ಅತ್ಯಾಚಾರಿ ಪ್ರದೀಪ್ ಮೋಧಿಯಾ ಜನವರಿ 21ರಂದು ತಡರಾತ್ರಿ ಜೈಲಿಗೆ ಶರಣಾಗಿದ್ದ. ಈತ ಸೇರಿದಂತೆ 11 ಅಪರಾಧಿಗಳಿಗೆ ಜೈಲಿಗೆ ಮರಳುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು.

ನ್ಯಾಯಮೂರ್ತಿ ಎಂ.ಆರ್‌ ಮೆಂಗ್ಡೆ ಅವರು ಫೆಬ್ರವರಿ 5 ರಂದು ಫೆಬ್ರವರಿ 7 ರಿಂದ 11 ರವರೆಗೆ ಮೋಧಿಯಾಗೆ ಪೆರೋಲ್ ನೀಡಿದ್ದಾರೆ. ಮೋಧಿಯಾ ಸುಪ್ರೀಂ ಕೋರ್ಟ್‌ ಹೇಳಿದಂತೆ ಸರಿಯಾದ ಸಮಯಕ್ಕೆ ಜೈಲಿಗೆ ಮರಳಿದ್ದಾನೆ. ಅಲ್ಲದೆ ಜೈಲಿನ ಆತನ ಗುಣ ನಡತೆ ಚೆನ್ನಾಗಿದೆ. ಹಾಗಾಗಿ, 30 ದಿನಗಳ ಪೆರೋಲ್ ನೀಡುವಂತೆ ಅತನ ಪರ ವಕೀಲರು ಮನವಿ ಮಾಡಿದ್ದರು.

“ಹೈಕೋರ್ಟ್ ಅಪರಾಧಿ ಮೋಧಿಯಾಗೆ ಮನೆಗೆ ತೆರಳಲು ಐದು ದಿನಗಳ ಪೆರೋಲ್ ನೀಡಿದೆ. ಪೆರೋಲ್ ಷರತ್ತುಗಳ ಪ್ರಕಾರ, ಆತ ರಣಧೀಕ್‌ಪುರ ಪೊಲೀಸ್ ಠಾಣೆಗೆ ವರದಿ ಮಾಡುವ ಅಗತ್ಯವಿಲ್ಲ. ಪೆರೋಲ್ ಅವಧಿಯಲ್ಲಿ ಪೊಲೀಸರು ಆತನ ಮೇಲೆ ನಿಗಾ ಇಡಬೇಕಾಗಿಲ್ಲ. ಆತ ತಾನೇ ಜೈಲಿಗೆ ಹಿಂದಿರಿಗಬೇಕು ಎಂದು ಹೈಕೋರ್ಟ್‌ ಹೇಳಿದ್ದಾಗಿ ದಾಹೋದ್‌ನ ಲಿಮ್ಖೇಡಾದ ಉಪ ಪೊಲೀಸ್ ವರಿಷ್ಠಾಧಿಕಾರಿ ವಿಶಾಖ ಜೈನ್ ಅವರನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ವರದಿ ಮಾಡಿದೆ.

ಗುಜರಾತ್‌ ಸರ್ಕಾರ ಎಲ್ಲಾ 11 ಅತ್ಯಾಚಾರಿಗಳನ್ನು ಜೈಲಿನಿಂದ ಬಿಡುಗಡೆ ಮಾಡುವ ಮುನ್ನ, 2008ರಿಂದ ಪೇರೋಲ್‌ನಲ್ಲಿ 1041 ಮತ್ತು ಫರ್ಲೋದಲ್ಲಿ 223 ದಿನಗಳ ಕಾಲ ಮೋಧಿಯಾ ಜೈಲಿನಿಂದ ಹೊರಗಿದ್ದ.

ಜನವರಿಯಲ್ಲಿ, 11 ಅಪರಾಧಿಗಳಿಗೆ ಅವಧಿ ಪೂರ್ವ ಬಿಡುಗಡೆಯನ್ನು ನೀಡಿದ್ದಕ್ಕಾಗಿ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಗುಜರಾತ್ ರಾಜ್ಯವು “ಅಪರಾಧಿಗಳೊಂದಿಗೆ ಸಹಕರಿಸಿದೆ” ಎಂದು ಪೀಠ ಹೇಳಿತ್ತು. ಈ ಭಯದಿಂದಲೇ ನ್ಯಾಯಾಲಯವು ಬಿಲ್ಕಿಸ್ ಬಾನು ಪ್ರಕರಣದ ವಿಚಾರಣೆಯನ್ನು ಗುಜರಾತ್‌ನಿಂದ ಮಹಾರಾಷ್ಟ್ರಕ್ಕೆ ವರ್ಗಾಯಿಸಿದ್ದು ಎಂದು ಹೇಳಿತ್ತು.

ಬಿಲ್ಕಿಸ್‌ ಬಾನು ಅತ್ಯಾಚಾರ ನಡೆಯುವಾಗ 2002ರಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಸರ್ಕಾರವಿತ್ತು. ಎಲ್ಲಾ 11 ಅತ್ಯಾಚಾರಿಗಳನ್ನು ಸನ್ನಡೆತೆಯ ಕಾರಣ ನೀಡಿ 2022ರ ಆಗಸ್ಟ್ 15 ರಂದು ಬಿಜೆಪಿ ಸರ್ಕಾರವೇ ಬಿಡುಗಡೆ ಮಾಡಿತ್ತು. ಅತ್ಯಾಚಾರ ಅಪರಾಧಿಗಳು ಎಲ್ಲರೂ ಬಿಜೆಪಿ ಸದಸ್ಯರು ಅಥವಾ ಅದರೊಂದಿಗೆ ಸಂಪರ್ಕ ಇರುವವರು ಎಂದು ಹೇಳಲಾಗ್ತಿದೆ. ಈ ಹಿಂದೆ ತಾತ್ಕಾಲಿಕ ಪೆರೋಲ್ ಮೇಲೆ ಇದ್ದಾಗ ಅಪರಾಧಿಗಳು ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದರು ಎಂಬ ಆರೋಪವೂ ಇದೆ. ಅಪರಾಧಿಗಳ ಬಿಡುಗಡೆ ಕುರಿತು ನಿರ್ಧಿರಿಸಲು ಸರ್ಕಾರ ರಚಿಸಿದ್ದ ಸಮಿತಿ ಸದಸ್ಯರಲ್ಲಿ ಒಬ್ಬರಾದ ಬಿಜೆಪಿ ಶಾಸಕ “ಅತ್ಯಾಚಾರಿಗಳು ಬಿಡುಗಡೆಗೆ ಅರ್ಹರು, ಏಕೆಂದರೆ ಅವರೆಲ್ಲ ಉತ್ತಮ ಸಂಸ್ಕಾರ ಅಥವಾ ಮೌಲ್ಯಗಳನ್ನು ಹೊಂದಿರುವ ಬ್ರಾಹ್ಮಣರು” ಎಂದಿದ್ದರು.

ಇದನ್ನೂ ಓದಿ : ಉದ್ಧವ್ ಠಾಕ್ರೆ ಬಣದ ನಾಯಕನ ಹತ್ಯೆ ಆರೋಪಿ ನಾಲ್ಕು ದಿನಗಳ ಹಿಂದೆ ಸಿಎಂ ಏಕನಾಥ್ ಶಿಂದೆಯನ್ನು ಭೇಟಿಯಾಗಿದ್ದ: ಸಂಜಯ್ ರಾವುತ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...