Homeಕರ್ನಾಟಕಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಸೈಬರ್ ಅಪರಾಧ ದ್ವಿಗುಣ

ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಸೈಬರ್ ಅಪರಾಧ ದ್ವಿಗುಣ

- Advertisement -
- Advertisement -

ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಸುಮಾರು ಎರಡು ಪಟ್ಟು ಹೆಚ್ಚಾಗಿ ದ್ವಿಗುಣಗೊಂಡಿದೆ ಎಂದು ವರದಿಯಾಗಿದೆ. 2022 ರಲ್ಲಿ, ಗ್ರಾಮೀಣ ಪ್ರದೇಶಗಳಿಂದ ಒಟ್ಟು 880 ಪ್ರಕರಣಗಳು ವರದಿಯಾಗಿದ್ದು, 2024 ರ ವೇಳೆಗೆ ಇಂತಹ ಪ್ರಕರಣಗಳ ಸಂಖ್ಯೆ 1,600 ಕ್ಕೆ ಏರಿಕೆಯಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಬುಡಕಟ್ಟು ಪ್ರದೇಶಗಳಲ್ಲಿ 2024 ರಲ್ಲಿ 12 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿವೆ, 2023 ರಲ್ಲಿ ಒಂದೇ ಪ್ರಕರಣ ದಾಖಲಾಗಿತ್ತು ಮತ್ತು 2022 ರಲ್ಲಿ ಯಾವುದೇ ಪ್ರಕರಣವಿರಲಿಲ್ಲ ಎಂದು ವರದಿಯಾಗಿದೆ.

ಸೈಬರ್ ಅಪರಾಧಗಳ ಹೆಚ್ಚಳಕ್ಕೆ ಡಿಜಿಟಲ್ ಮಾಧ್ಯಮ ಬಳಕೆಯ ಹೆಚ್ಚಳ ಕಾರಣವೆಂದು ತಜ್ಞರು ಹೇಳಿದ್ದಾರೆ. “ಇಂಟರ್ನೆಟ್ ಸಂಪರ್ಕ ಇರುವಲ್ಲೆಲ್ಲಾ, ಸೈಬರ್ ಅಪರಾಧಗಳಿಗೆ ಸಂಭಾವ್ಯತೆ ಇರುತ್ತದೆ” ಎಂದು ಅಪರಾಧ ತನಿಖಾ ಇಲಾಖೆ (ಸಿಐಡಿ) ಡಿಜಿಪಿ ಎಂ ಎ ಸಲೀಮ್ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಡಿಜಿಟಲ್ ಸೊಸೈಟಿ ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷ ಎನ್.ಎ. ವಿಜಯ್ ಶಂಕರ್ ಮಾತನಾಡಿ, ಸೈಬರ್ ಅಪರಾಧಿಗಳು ಹೆಚ್ಚಾಗಿ ತಮ್ಮ ಬಲಿಪಶುಗಳನ್ನು ಯಾದೃಚ್ಛಿಕವಾಗಿ ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

“ಅವರು ಯಾದೃಚ್ಛಿಕವಾಗಿ ಸಂಖ್ಯೆಗಳಿಗೆ ಕರೆ ಮಾಡುತ್ತಾರೆ ಮತ್ತು ಯಾರು ಪ್ರತಿಕ್ರಿಯಿಸುತ್ತಾರೋ ಅವರು ಬಲಿಯಾಗುತ್ತಾರೆ. ಆದ್ದರಿಂದ, ಡಿಜಿಟಲ್ ಮಾಧ್ಯಮದ ಬಳಕೆಯು ಹೆಚ್ಚಿದ ಕಾರಣಕ್ಕೆ ಪ್ರಕರಣಗಳ ಹೆಚ್ಚಳವಾಗಿದೆ” ಎಂದು ಅವರು ಹೇಳಿದ್ದಾರೆ.

ಜೊತೆಗೆ ಜಾಗೃತಿ ಹೆಚ್ಚಳ ಮತ್ತು ದೂರುಗಳನ್ನು ದಾಖಲಿಸುವುದು ಸರಳವಾದ್ದರಿಂದ ವರದಿಯಾಗುವ ಪ್ರಕರಣಗಳ ಸಂಖ್ಯೆ ಕೂಡಾ ಇದರ ಹೆಚ್ಚಳಕ್ಕೆ ಕಾರಣವಾಗಿರಬಹುದು ಎಂದು ಅವರು ಹೇಳಿದ್ದಾರೆ.

“ಈಗ, ಬಲಿಪಶುಗಳು ನೇರವಾಗಿ 1930 ಗೆ ಕರೆ ಮಾಡಬಹುದು ಅಥವಾ ಆನ್‌ಲೈನ್‌ನಲ್ಲಿ ದೂರು ನೀಡಬಹುದು. ಈಗ ಇದು ಮೊದಲಿನಂತೆ ಕಷ್ಟಕರವಲ್ಲ. ಆದ್ದರಿಂದ, ಇವುಗಳ ಕಾರಣಕ್ಕೆ ಕೂಡಾ ದೂರುಗಳ ಸಂಖ್ಯೆ ಹೆಚ್ಚಾಗಿರಬಹುದು” ಎಂದು ಶಂಕರ್ ಹೇಳಿದ್ದಾರೆ.

ಅರೆಕಾಲಿಕ ಉದ್ಯೋಗ ವಂಚನೆಗಳು, ಮಾರ್ಫ್ ಮಾಡಿದ ಚಿತ್ರಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡುವುದು ಮತ್ತು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುವ ನೆಪದಲ್ಲಿ ಮೋಸ ಮಾಡುವಂತಹ ಸೈಬರ್ ಅಪರಾಧಗಳು ಗ್ರಾಮೀಣ ಪ್ರದೇಶಗಳಲ್ಲಿ ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ವಾಸ್ತವವಾಗಿ, ದೂರುಗಳ ಸ್ವರೂಪವು ನಗರ ಪ್ರದೇಶಗಳಲ್ಲಿರುವ ದೂರುಗಳಂತೆಯೇ ಇರುತ್ತದೆ. ಹೂಡಿಕೆ ಹಗರಣಗಳು, ಅರೆಕಾಲಿಕ ಉದ್ಯೋಗ ಹಗರಣಗಳು ಮತ್ತು ನಗರ ಪ್ರದೇಶಗಳಲ್ಲಿರುವ ದೂರುಗಳಿಗೆ ಹೋಲುವ ವಿಷಯಗಳು ಇವುಗಳಲ್ಲಿ ಇರುತ್ತವೆ” ಎಂದು ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಶಂಕರ್ ಗುಲೇದ್ ಹೇಳಿದ್ದಾರೆ.

ಇತ್ತೀಚೆಗಷ್ಟೆ, ಬೆಳಗಾವಿಯ ಖಾನಾಪುರದಲ್ಲಿ ವೃದ್ಧ ದಂಪತಿಗಳು ಡಿಜಿಟಲ್ ಬಂಧನಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಾರ್ಚ್ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಈ ದತ್ತಾಂಶವನ್ನು ಮಂಡಿಸಲಾಗಿದೆ. ಜೊತೆಗೆ ಗೃಹ ಇಲಾಖೆಯು ತನ್ನ ಲಿಖಿತ ಉತ್ತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲು ಹಲವಾರು ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದೆ.

ಶಾಲಾ ಮತ್ತು ಕಾಲೇಜುಗಳಲ್ಲಿ ಜಾಗೃತಿ ಶಿಬಿರಗಳಿಂದ ಹಿಡಿದು ಅಂತಹ ಅಪರಾಧಗಳ ಬಗ್ಗೆ ಮಾಹಿತಿಯೊಂದಿಗೆ ಕರಪತ್ರಗಳ ಹಂಚುವಿಕೆ ಸೇರಿದಂತೆ ಹಲವು ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಇಲಾಖೆ ತನ್ನ ಉತ್ತರದಲ್ಲಿ ಉಲ್ಲೇಖಿಸಿದೆ. ಕಳೆದ ಎರಡು ವರ್ಷಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...