Homeಕರ್ನಾಟಕಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಸೈಬರ್ ಅಪರಾಧ ದ್ವಿಗುಣ

ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಭಾಗದಲ್ಲಿ ಸೈಬರ್ ಅಪರಾಧ ದ್ವಿಗುಣ

- Advertisement -
- Advertisement -

ಕಳೆದ ಎರಡು ವರ್ಷಗಳಲ್ಲಿ ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಸುಮಾರು ಎರಡು ಪಟ್ಟು ಹೆಚ್ಚಾಗಿ ದ್ವಿಗುಣಗೊಂಡಿದೆ ಎಂದು ವರದಿಯಾಗಿದೆ. 2022 ರಲ್ಲಿ, ಗ್ರಾಮೀಣ ಪ್ರದೇಶಗಳಿಂದ ಒಟ್ಟು 880 ಪ್ರಕರಣಗಳು ವರದಿಯಾಗಿದ್ದು, 2024 ರ ವೇಳೆಗೆ ಇಂತಹ ಪ್ರಕರಣಗಳ ಸಂಖ್ಯೆ 1,600 ಕ್ಕೆ ಏರಿಕೆಯಾಗಿದೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಬುಡಕಟ್ಟು ಪ್ರದೇಶಗಳಲ್ಲಿ 2024 ರಲ್ಲಿ 12 ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿವೆ, 2023 ರಲ್ಲಿ ಒಂದೇ ಪ್ರಕರಣ ದಾಖಲಾಗಿತ್ತು ಮತ್ತು 2022 ರಲ್ಲಿ ಯಾವುದೇ ಪ್ರಕರಣವಿರಲಿಲ್ಲ ಎಂದು ವರದಿಯಾಗಿದೆ.

ಸೈಬರ್ ಅಪರಾಧಗಳ ಹೆಚ್ಚಳಕ್ಕೆ ಡಿಜಿಟಲ್ ಮಾಧ್ಯಮ ಬಳಕೆಯ ಹೆಚ್ಚಳ ಕಾರಣವೆಂದು ತಜ್ಞರು ಹೇಳಿದ್ದಾರೆ. “ಇಂಟರ್ನೆಟ್ ಸಂಪರ್ಕ ಇರುವಲ್ಲೆಲ್ಲಾ, ಸೈಬರ್ ಅಪರಾಧಗಳಿಗೆ ಸಂಭಾವ್ಯತೆ ಇರುತ್ತದೆ” ಎಂದು ಅಪರಾಧ ತನಿಖಾ ಇಲಾಖೆ (ಸಿಐಡಿ) ಡಿಜಿಪಿ ಎಂ ಎ ಸಲೀಮ್ ಹೇಳಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ.

ಡಿಜಿಟಲ್ ಸೊಸೈಟಿ ಫೌಂಡೇಶನ್‌ನ ಸಂಸ್ಥಾಪಕ ಅಧ್ಯಕ್ಷ ಎನ್.ಎ. ವಿಜಯ್ ಶಂಕರ್ ಮಾತನಾಡಿ, ಸೈಬರ್ ಅಪರಾಧಿಗಳು ಹೆಚ್ಚಾಗಿ ತಮ್ಮ ಬಲಿಪಶುಗಳನ್ನು ಯಾದೃಚ್ಛಿಕವಾಗಿ ಆಯ್ಕೆ ಮಾಡುತ್ತಾರೆ ಎಂದು ಹೇಳಿದ್ದಾರೆ.

“ಅವರು ಯಾದೃಚ್ಛಿಕವಾಗಿ ಸಂಖ್ಯೆಗಳಿಗೆ ಕರೆ ಮಾಡುತ್ತಾರೆ ಮತ್ತು ಯಾರು ಪ್ರತಿಕ್ರಿಯಿಸುತ್ತಾರೋ ಅವರು ಬಲಿಯಾಗುತ್ತಾರೆ. ಆದ್ದರಿಂದ, ಡಿಜಿಟಲ್ ಮಾಧ್ಯಮದ ಬಳಕೆಯು ಹೆಚ್ಚಿದ ಕಾರಣಕ್ಕೆ ಪ್ರಕರಣಗಳ ಹೆಚ್ಚಳವಾಗಿದೆ” ಎಂದು ಅವರು ಹೇಳಿದ್ದಾರೆ.

ಜೊತೆಗೆ ಜಾಗೃತಿ ಹೆಚ್ಚಳ ಮತ್ತು ದೂರುಗಳನ್ನು ದಾಖಲಿಸುವುದು ಸರಳವಾದ್ದರಿಂದ ವರದಿಯಾಗುವ ಪ್ರಕರಣಗಳ ಸಂಖ್ಯೆ ಕೂಡಾ ಇದರ ಹೆಚ್ಚಳಕ್ಕೆ ಕಾರಣವಾಗಿರಬಹುದು ಎಂದು ಅವರು ಹೇಳಿದ್ದಾರೆ.

“ಈಗ, ಬಲಿಪಶುಗಳು ನೇರವಾಗಿ 1930 ಗೆ ಕರೆ ಮಾಡಬಹುದು ಅಥವಾ ಆನ್‌ಲೈನ್‌ನಲ್ಲಿ ದೂರು ನೀಡಬಹುದು. ಈಗ ಇದು ಮೊದಲಿನಂತೆ ಕಷ್ಟಕರವಲ್ಲ. ಆದ್ದರಿಂದ, ಇವುಗಳ ಕಾರಣಕ್ಕೆ ಕೂಡಾ ದೂರುಗಳ ಸಂಖ್ಯೆ ಹೆಚ್ಚಾಗಿರಬಹುದು” ಎಂದು ಶಂಕರ್ ಹೇಳಿದ್ದಾರೆ.

ಅರೆಕಾಲಿಕ ಉದ್ಯೋಗ ವಂಚನೆಗಳು, ಮಾರ್ಫ್ ಮಾಡಿದ ಚಿತ್ರಗಳನ್ನು ಬಳಸಿ ಬ್ಲ್ಯಾಕ್‌ಮೇಲ್ ಮಾಡುವುದು ಮತ್ತು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಸಹಾಯ ಮಾಡುವ ನೆಪದಲ್ಲಿ ಮೋಸ ಮಾಡುವಂತಹ ಸೈಬರ್ ಅಪರಾಧಗಳು ಗ್ರಾಮೀಣ ಪ್ರದೇಶಗಳಲ್ಲಿ ದಾಖಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ವಾಸ್ತವವಾಗಿ, ದೂರುಗಳ ಸ್ವರೂಪವು ನಗರ ಪ್ರದೇಶಗಳಲ್ಲಿರುವ ದೂರುಗಳಂತೆಯೇ ಇರುತ್ತದೆ. ಹೂಡಿಕೆ ಹಗರಣಗಳು, ಅರೆಕಾಲಿಕ ಉದ್ಯೋಗ ಹಗರಣಗಳು ಮತ್ತು ನಗರ ಪ್ರದೇಶಗಳಲ್ಲಿರುವ ದೂರುಗಳಿಗೆ ಹೋಲುವ ವಿಷಯಗಳು ಇವುಗಳಲ್ಲಿ ಇರುತ್ತವೆ” ಎಂದು ಬೆಳಗಾವಿಯ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಶಂಕರ್ ಗುಲೇದ್ ಹೇಳಿದ್ದಾರೆ.

ಇತ್ತೀಚೆಗಷ್ಟೆ, ಬೆಳಗಾವಿಯ ಖಾನಾಪುರದಲ್ಲಿ ವೃದ್ಧ ದಂಪತಿಗಳು ಡಿಜಿಟಲ್ ಬಂಧನಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಮಾರ್ಚ್ ಅಧಿವೇಶನದಲ್ಲಿ ವಿಧಾನ ಪರಿಷತ್ತಿನಲ್ಲಿ ಈ ದತ್ತಾಂಶವನ್ನು ಮಂಡಿಸಲಾಗಿದೆ. ಜೊತೆಗೆ ಗೃಹ ಇಲಾಖೆಯು ತನ್ನ ಲಿಖಿತ ಉತ್ತರದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲು ಹಲವಾರು ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಹೇಳಿದೆ.

ಶಾಲಾ ಮತ್ತು ಕಾಲೇಜುಗಳಲ್ಲಿ ಜಾಗೃತಿ ಶಿಬಿರಗಳಿಂದ ಹಿಡಿದು ಅಂತಹ ಅಪರಾಧಗಳ ಬಗ್ಗೆ ಮಾಹಿತಿಯೊಂದಿಗೆ ಕರಪತ್ರಗಳ ಹಂಚುವಿಕೆ ಸೇರಿದಂತೆ ಹಲವು ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಇಲಾಖೆ ತನ್ನ ಉತ್ತರದಲ್ಲಿ ಉಲ್ಲೇಖಿಸಿದೆ. ಕಳೆದ ಎರಡು ವರ್ಷಗಳಲ್ಲಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ಪೆಗಾಸಸ್ ಪ್ರಕರಣ | ದೇಶದ ಭದ್ರತೆ, ಸಾರ್ವಭೌಮತೆಗೆ ಸಂಬಂಧಿಸಿದ ಯಾವುದೇ ವರದಿಯನ್ನು ಬಹಿರಂಗಪಡಿಸುವುದಿಲ್ಲ ಎಂದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....