Homeಮುಖಪುಟಅಧಿಕಾರಕ್ಕೆ ಸವಾಲೆಸೆದ ತಮಿಳುನಾಡಿನ ಇಬ್ಬರು ಯುವಪ್ರತಿಭೆಗಳು

ಅಧಿಕಾರಕ್ಕೆ ಸವಾಲೆಸೆದ ತಮಿಳುನಾಡಿನ ಇಬ್ಬರು ಯುವಪ್ರತಿಭೆಗಳು

- Advertisement -
- Advertisement -

ಇತ್ತೀಚೆಗಿನ ದಿನಗಳಲ್ಲಿ ತಮ್ಮ ವೃತ್ತಿ ಕುರಿತಾದ ಅಸಾಧಾರಣ ಬದ್ಧತೆಯ ಮೂಲಕ ಇಡೀ ದೇಶದ ಗಮನ ಸೆಳೆದ ಚಿತ್ರನಟಿ ಸಾಯಿಪಲ್ಲವಿ ಹಾಗೂ ಕರೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಸಂಸದೆಯಾಗಿ ಆಯ್ಕೆಯಾಗಿರುವ ಜ್ಯೋತಿ ಮಣಿ ಎಂಬ ಯುವ ಪ್ರತಿಭೆಗಳು ಇಂದಿನ ಯುವತಲೆಮಾರಿಗೆ ಮಾದರಿಯಾಗುವ ತಮ್ಮ ನಡೆನುಡಿಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಚಿತ್ರ ನಟಿಯಾಗಿರುವ ಸಾಯಿಪಲ್ಲವಿ ತಮಿಳುನಾಡಿನ ಊಟಿ ಬಳಿ ಇರುವ ಕೋಟಗಿರಿ ಎಂಬ ಸ್ಥಳದ ಬಡಗ ಜನಾಂಗ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದ ಹೆಣ್ಣು ಮಗಳು. ಜೊತೆಗೆ ವೈದ್ಯಕೀಯ ಪದವಿಯನ್ನು ಪಡೆದಿರುವ ಪ್ರತಿಭಾವಂತೆ. ಆಕೆಯ ತಂದೆ ಮತ್ತು ತಾಯಿ ಇಬ್ಬರೂ (ಸೆಂತಮಾರೈ ಕಣ್ಣನ್ ಮತ್ತು ರಾಧಾ) ಉದ್ಯೋಗದ ನಿಮಿತ್ತ ಕೊಯಮತ್ತೂರಿನಲ್ಲಿದ್ದವರು. 1992ರಲ್ಲಿ ಜನಸಿದ ಸಾಯಿ ಬಾಲ್ಯದ ಶಿಕ್ಷಣವನ್ನೆಲ್ಲಾ ಕೊಯಮತ್ತೂರು ಕಾನ್ವೆಂಟ್ ಶಾಲೆಯಲ್ಲಿ ಪಡೆದವಳು. ನೃತ್ಯದಲ್ಲಿ ಆಸಕ್ತಿ ಇದ್ದ ಕಾರಣದಿಂದಾಗಿ ಉತ್ತಮ ನೃತ್ಯಗಾತಿಯಾಗಿ ರೂಪುಗೊಂಡಿದ್ದ ಸಾಯಿ ಪಲ್ಲವಿ ಅನಿರೀಕ್ಷಿತವಾಗಿ ಕಲಾವಿದೆಯಾಗಿ ಗುರುತಿಸಿಕೊಂಡವಳು. ಜೊತೆಗೆ ತಮಿಳು, ಮಲೆಯಾಳಂ ಮತ್ತು ತೆಲುಗು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿ ಎಲ್ಲಾ ಪ್ರೇಕ್ಷಕರ ಮನಗೆದ್ದವಳು. ಈಗಾಗಲೇ ದಕ್ಷಿಣ ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿಗಳಲ್ಲಿ ಒಂದಾದ ಫಿಲಂಫೇರ್ ಪ್ರಶಸ್ತಿಗೆ ಸಾಯಿಪಲ್ಲವಿ ಪಾತ್ರರಾಗಿದ್ದಾರೆ. ಅಪಾರ ಓದು ಮತ್ತು ವಿದ್ಯಾರ್ಹತೆ ಹಾಗೂ ಈ ಜಗತ್ತನ್ನು ಸೂಕ್ಷ್ಮವಾಗಿ ಗ್ರಹಿಸುವ ಗುಣ ಇವೆಲ್ಲವೂ ಆಕೆಯನ್ನು ಪ್ರಬುದ್ಧ ನಟಿಯನ್ನಾಗಿ ರೂಪಿಸಿವೆ. ಈಗ ಬಿಡುಗಡೆಯಾಗಿರುವ ನಕ್ಸಲ್ ಚಳುವಳಿಯ ಕಥೆಯಾಧಾರಿತ (ವಾರಂಗಲ್‌ನ ಸರಳ ಎಂಬ ತೊಂಬತ್ತರ ದಶಕದ ನಕ್ಸಲ್ ಕಾರ್ಯಕರ್ತೆಯ ಜೀವನಾಧಾರಿತ ಕಥೆ) ’ವಿರಾಟ ಪರ್ವಂ’ ತೆಲುಗು ಸಿನಿಮಾದಲ್ಲಿನ ಸಾಯಿ ಪಲ್ಲವಿಯ ಅಭಿನಯ ಕುರಿತಾಗಿ ಎಲ್ಲರಿಂದ ಒಳ್ಳೆಯ ಮಾತುಗಳು ಕೇಳಿಬರುತ್ತಿವೆ.

2015ರಲ್ಲಿ ’ಪ್ರೇಮಂ’ ಎಂಬ ಮಲೆಯಾಳಂ ಸಿನಿಮಾದ ಮಲರ್ ಎಂಬ ಪಾತ್ರದ ಮೂಲಕ ಗಮನ ಸೆಳೆದ ಈಕೆ ಮತ್ತೆ ಹಿಂತಿರುಗಿ ನೋಡಿಲ್ಲ. ಮತ್ತೋರ್ವ ಪ್ರತಿಭಾವಂತೆ ಕೀರ್ತಿ ಸುರೇಶ್ ಎಂಬ ಕಲಾವಿದೆಯ ಜೊತೆಗೆ ಸಾಯಿಪಲ್ಲವಿ ಕುರಿತಾಗಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಇತ್ತೀಚೆಗೆ ’ವಿರಾಟ ಪರ್ವಂ’ ಸಿನಿಮಾ ಪ್ರಚಾರ ಕುರಿತ ಪತ್ರಿಕಾಗೋಷ್ಠಿಯಲ್ಲಿ ತಾನು ನಂಬಿದ ಸಿದ್ಧಾಂತಗಳ ಕುರಿತು ಮಾತನಾಡುತ್ತಾ, ಧರ್ಮಕ್ಕಿಂತ ಮನುಷ್ಯ ಜೀವ ದೊಡ್ಡದು; ಕಾಶ್ಮೀರದಲ್ಲಿ ಹಿಂದೂ ಪಂಡಿತರ ಹತ್ಯೆಯಾಗುವುದು ಅಮಾನುಷ ಕೃತ್ಯ ನಿಜ; ಅದೇ ರೀತಿ ಗೋವುಗಳನ್ನು ಹಿಡಿದುಕೊಂಡು ಹೋಗುತ್ತಿರುವ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿ ಜೈ ಶ್ರೀರಾಂ ಎಂದು ಘೋಷಣೆ ಕೂಗುವುದು ಕೂಡ ಅಮಾನುಷ ಕ್ರಿಯೆ ಎಂದು ಸಾಯಿ ಪ್ರತಿಕ್ರಿಯಿಸಿದ್ದಳು.

ಸಾಯಿಪಲ್ಲವಿಯ ಈ ಪ್ರಬುದ್ಧತೆಯ ಮಾತುಗಳು ಮಾರಿಕೊಂಡ ಮಾಧ್ಯಮಗಳ ಬೃಹಸ್ಪತಿಗಳನ್ನು ಕೆರಳಿಸಿತು. ಈಕೆಯ ಕುರಿತಾಗಿ ಇಲ್ಲಸಲ್ಲದ ಅಪಪ್ರಚಾರ ಮಾಡಿದರು. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಎದುರಿಗೆ
ಮೈಕ್ ಮತ್ತು ಕ್ಯಾಮರಾ ಇದ್ದರೆ ಸಾಕು ಹನುಮಂತನ ಪಾತ್ರಧಾರಿಗಳಂತೆ ಕುಣಿಯುವ ಪತ್ರಕರ್ತರೆಂಬ ಮಂಡೂಕಗಳಿಗೆ ನಾವು ಬದುಕುತ್ತಿರುವ ಗ್ರಾಮೀಣ ಜಗತ್ತಿನ ಪರಿಸ್ಥಿತಿಯ ಅರಿವಿಲ್ಲ. ಇಂದಿಗೂ ಕೂಡ ನಮ್ಮ ಕರ್ನಾಟಕ ಸೇರಿದಂತೆ ಭಾರತದ ಹಲವಾರು ರಾಜ್ಯಗಳಲ್ಲಿ ಕೃಷಿಯನ್ನು ಮೂಲ ವೃತ್ತಿಯಾಗಿಸಿಕೊಂಡ ಮುಸ್ಲಿಮರಿದ್ದಾರೆ, ಜೊತೆಗೆ ಪಶು ಸಾಕಾಣಿಕೆಯ ಮೂಲಕ ಹೈನುಗಾರಿಕೆಯಲ್ಲಿ ಬದುಕು ಕಟ್ಟಿಕೊಂಡ ಅನೇಕ ಬಡ ಮುಸ್ಲಿಂ ಕುಟುಂಬಗಳು ಇವೆ. ಆದರೆ, ಈಗಿನ ’ನವ ದೇಶ ಭಕ್ತ’ರು ಮತ್ತು ’ಹಿಂದೂಭಕ್ತ’ರು ಎಂಬ ಅಸಭ್ಯರ ಕಾರಣದಿಂದಾಗಿ ಯಾವೊಬ್ಬ ಮುಸ್ಲಿಂ ವ್ಯಕ್ತಿ ಸಾರ್ವಜನಿಕವಾಗಿ ಹಸುಗಳನ್ನು ಹಿಡಿದುಕೊಂಡು ಪಶು ವೈದ್ಯಕೀಯ ಕೇಂದ್ರಗಳಿಗೆ ಹೋಗುವುದು ಅಥವಾ ಮಾರಾಟಕ್ಕೆ ಇಲ್ಲವೆ ಕೊಳ್ಳುವುದಕ್ಕೆ ಜಾನುವಾರುಗಳ ಸಂತೆಗೆ ಹೋಗಲು ಅಸಾಧ್ಯವಾಗುತ್ತಿದೆ. ತಮ್ಮ ಪರಿಚಯದ ಹಿಂದೂಧರ್ಮದ ಗೆಳೆಯರನ್ನು ಆಶ್ರಯಿಸಿ ಬದುಕಬೇಕಾದ ಸ್ಥಿತಿ ಅವರದು.

ಹಿಂದುಳಿದ ಸಮುದಾಯದಲ್ಲಿ ಜನಿಸಿ ಗ್ರಾಮೀಣ ಭಾರತದ ಅನುಭವಗಳನ್ನು ದಕ್ಕಿಸಿಕೊಂಡಿರುವ ನಟಿ ಸಾಯಿಪಲ್ಲವಿಗೆ ಇರುವ ಇಂತಹ ಸೂಕ್ಷ್ಮತೆಯನ್ನು ನಮ್ಮ ಮಾಧ್ಯಮಗಳ ಅವಿವೇಕಿಗಳು ದಕ್ಕಿಸಿಕೊಂಡಿದ್ದರೆ ಅವರ ಮಾತು ಮತ್ತು ಬರವಣಿಗೆಗೆ ಅರ್ಥ ಬರುತ್ತಿತ್ತು.

ಇನ್ನು ಎರಡನೆಯದಾಗಿ ಜ್ಯೋತಿ ಮಣಿ ಎಂಬ ತಮಿಳು ಭಾಷೆಯ ಯುವ ಕಥೆಗಾರ್ತಿಯೊಬ್ಬಳು ತನ್ನ ಬದ್ಧತೆಯ ಹೋರಾಟದ ಬದುಕಿನ ಮೂಲಕ ಸತತ ಹದಿನೈದು ವರ್ಷಗಳ ಕಾಲ ತಮಿಳುನಾಡು ಯುವ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡ ಸೂಕ್ಷ್ಮ ಮನಸ್ಸಿನ ಹೆಣ್ಣು ಮಗಳು. 2009 ಮತ್ತು 2014ರ ಎರಡು ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರೂ ಎದೆಗುಂದದೆ ಹಾಗೂ ಪಕ್ಷ ನಿಷ್ಟೆಯನ್ನು ಬದಲಾಯಿಸದೆ 2019ರಲ್ಲಿ ಕರೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾಳೆ. ಬೆಂಗಳೂರು-ಮಧುರೈ ಮತ್ತು ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇಲಂ ನಂತರ ಸಿಗುವ ಕರೂರು ಮುಂದುವರಿದ ವಾಣಿಜ್ಯ ಹಾಗೂ ಕೈಗಾರಿಕಾ ಜಿಲ್ಲಾ ಕೇಂದ್ರವಾಗಿದೆ. ಜ್ಯೋತಿ ಮಣಿ ಸಂಸದೆಯಾದ ನಂತರವೂ ತನ್ನ ಹಳ್ಳಿಯ ವಾಸಸ್ಥಳವನ್ನು ಬದಲಾಯಿಸಿಲ್ಲ. ಪೆರಿಯತಿರು ಮಂಗಲಂ ಎಂಬ ಹಳ್ಳಿಯಲ್ಲಿ ಜನಸಾಮಾನ್ಯರ ನಡುವೆ ಸಾಮಾನ್ಯಳಂತೆ ಬದುಕುವ ಜ್ಯೋತಿ ಮಣಿಗೆ ಸಾಹಿತ್ಯದ ಓದು ಮತ್ತು ಬರವಣಿಗೆ ಒಬ್ಬ ಜನಪ್ರತಿನಿಧಿ ಹೇಗಿರಬೇಕು ಎಂಬುದನ್ನು ಕಲಿಸಿಕೊಟ್ಟಿದೆ. ಅಣ್ಣಾ ಮಲೈ ವಿ.ವಿ.ಯ ಪದವೀಧರೆಯಾದ ಈಕೆಯ ’ಒಟ್ಟು ವಾಸನೈ’ ಎಂಬ ಕಥಾ ಸಂಕಲನ, ’ಸಿಥಿರಕ್ ಕೂಡು’ ಎಂಬ ಕಾದಂಬರಿಯ ಜೊತೆಗೆ ’ನಾಯಕತ್ವಕ್ಕೆ ಅಡ್ಡದಾರಿಗಳಿಲ್ಲ’ (ನೀರ್ ಪಿರಕ್ಕು ಮನ್) ಎಂಬ ಅನುಭವ ಕಥನ ಪುಸ್ತಕಗಳು ಜ್ಯೋತಿ ಮಣಿಯನ್ನು ತಮಿಳು ಜನತೆ ಪಕ್ಷ ಭೇದವಿಲ್ಲದೆ ಪ್ರೀತಿಸುವಂತೆ ಮಾಡಿದೆ.

ಕಳೆದ ವಾರ ದೆಹಲಿಯ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಜಾರಿ ನಿರ್ದೆಶನಾಲಯದ ವಿರುದ್ಧ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ದೆಹಲಿ ಪೊಲೀಸರ ವಿರುದ್ಧ ಜ್ಯೋತಿ ಮಣಿ ಗುಡುಗಿದ ವೈಖರಿಯು ದೇಶಾದ್ಯಂತ ಮಾಧ್ಯಮಗಳ ಗಮನ ಸೆಳೆಯಿತು. ತಾನೋರ್ವ ಸಂಸದೆ ಎಂಬುದನ್ನು ಕಡೆಗಣಿಸಿ ತೊಟ್ಟಿದ ಬಟ್ಟೆಗಳು ಹರಿದು ಹೋಗುವಂತೆ ಎಳೆದಾಡಿದ ಪೊಲೀಸರ ಅಮಾನವೀಯ ವರ್ತನೆಯ ಬಗ್ಗೆ ಮಾತನಾಡುತ್ತ ಯಾವುದೇ ಸಂಕೋಚವಿಲ್ಲದೆ ಧರಿಸಿದ್ದ ಪೈಜಾಮಿನ ಹರಿದ ಭಾಗವನ್ನು ತೋರಿಸಿ, ಅದಕ್ಕೆ ಕಾರಣಕಾದವರನ್ನು ತರಾಟೆಗೆ ತೆಗೆದುಕೊಂಡ ಬಗೆ ನಿಜಕ್ಕೂ ಮೆಚ್ಚುವಂತಹದ್ದು. ಕುಡಿಯಲು ನೀರು ಕೇಳಿದರೂ ಸಹ ನೀಡದೆ ಸತತ ಮೂರು ಗಂಟೆಗಳ ಕಾಲ ಪೊಲೀಸ್ ವಾಹನದಲ್ಲಿ ಕೂಡಿ ಹಾಕಿದ್ದ ಬಗೆಯನ್ನು ಈ ಹೆಣ್ಣುಮಗಳು ಇಂಗ್ಲಿಷ್ ಭಾಷೆಯಲ್ಲಿ ವಿವರಿಸುವುದರ ಮೂಲಕ ದೆಹಲಿ ಪೊಲೀಸರ ಗೂಂಡಾಗಿರಿಯನ್ನು ಜಗತ್ತಿಗೆ ಪರಿಚಯಿಸಿದಳು.

ಅಧಿಕಾರ, ಸ್ಥಾನಮಾನ ಹಾಗೂ ಹಣಕ್ಕಾಗಿ ನಿಷ್ಠೆ ಬದಲಿಸಿ ಪಕ್ಷದಿಂದ ಪಕ್ಷಕ್ಕೆ ಹಾರುವ ಇಂದಿನ ಎಡಬಿಡಂಗಿ ಜಾಯಮಾನದ ಅವಿವೇಕಿಗಳಿಗೆ ಈ ಹೆಣ್ಣುಮಗಳ ರಾಜಕೀಯ ಜೀವನಗಾಥೆ ಪಾಠವಾಗಬೇಕು. ಜೊತೆಗೆ ಯುವಕ/ ಯುವತಿಯರಿಗೆ ಜ್ಯೋತಿ ಮಣಿಯ ಬದ್ಧತೆ ಆದರ್ಶವಾಗಬೇಕು.

ಡಾ.ಎನ್.ಜಗದೀಶ್ ಕೊಪ್ಪ

ಡಾ.ಎನ್.ಜಗದೀಶ್ ಕೊಪ್ಪ
ಹಿರಿಯ ಪತ್ರಕರ್ತರು, ಬರಹಗಾರರು ಮತ್ತು ಸಾಮಾಜಿಕ ಹೋರಾಟಗಾರರು. ಬಿಳಿ ಸಾಹೇಬನ ಭಾರತ, ಮರುಭೂಮಿಯ ಹೂವು, ಪುತ್ರಶೋಕ ಅವರು ರಚಿಸಿದ ಪುಸ್ತಕಗಳಲ್ಲಿ ಕೆಲವು.


ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...