Homeಮುಖಪುಟಅಧಿಕಾರಕ್ಕೆ ಸವಾಲೆಸೆದ ತಮಿಳುನಾಡಿನ ಇಬ್ಬರು ಯುವಪ್ರತಿಭೆಗಳು

ಅಧಿಕಾರಕ್ಕೆ ಸವಾಲೆಸೆದ ತಮಿಳುನಾಡಿನ ಇಬ್ಬರು ಯುವಪ್ರತಿಭೆಗಳು

- Advertisement -
- Advertisement -

ಇತ್ತೀಚೆಗಿನ ದಿನಗಳಲ್ಲಿ ತಮ್ಮ ವೃತ್ತಿ ಕುರಿತಾದ ಅಸಾಧಾರಣ ಬದ್ಧತೆಯ ಮೂಲಕ ಇಡೀ ದೇಶದ ಗಮನ ಸೆಳೆದ ಚಿತ್ರನಟಿ ಸಾಯಿಪಲ್ಲವಿ ಹಾಗೂ ಕರೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಸಂಸದೆಯಾಗಿ ಆಯ್ಕೆಯಾಗಿರುವ ಜ್ಯೋತಿ ಮಣಿ ಎಂಬ ಯುವ ಪ್ರತಿಭೆಗಳು ಇಂದಿನ ಯುವತಲೆಮಾರಿಗೆ ಮಾದರಿಯಾಗುವ ತಮ್ಮ ನಡೆನುಡಿಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಚಿತ್ರ ನಟಿಯಾಗಿರುವ ಸಾಯಿಪಲ್ಲವಿ ತಮಿಳುನಾಡಿನ ಊಟಿ ಬಳಿ ಇರುವ ಕೋಟಗಿರಿ ಎಂಬ ಸ್ಥಳದ ಬಡಗ ಜನಾಂಗ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದ ಹೆಣ್ಣು ಮಗಳು. ಜೊತೆಗೆ ವೈದ್ಯಕೀಯ ಪದವಿಯನ್ನು ಪಡೆದಿರುವ ಪ್ರತಿಭಾವಂತೆ. ಆಕೆಯ ತಂದೆ ಮತ್ತು ತಾಯಿ ಇಬ್ಬರೂ (ಸೆಂತಮಾರೈ ಕಣ್ಣನ್ ಮತ್ತು ರಾಧಾ) ಉದ್ಯೋಗದ ನಿಮಿತ್ತ ಕೊಯಮತ್ತೂರಿನಲ್ಲಿದ್ದವರು. 1992ರಲ್ಲಿ ಜನಸಿದ ಸಾಯಿ ಬಾಲ್ಯದ ಶಿಕ್ಷಣವನ್ನೆಲ್ಲಾ ಕೊಯಮತ್ತೂರು ಕಾನ್ವೆಂಟ್ ಶಾಲೆಯಲ್ಲಿ ಪಡೆದವಳು. ನೃತ್ಯದಲ್ಲಿ ಆಸಕ್ತಿ ಇದ್ದ ಕಾರಣದಿಂದಾಗಿ ಉತ್ತಮ ನೃತ್ಯಗಾತಿಯಾಗಿ ರೂಪುಗೊಂಡಿದ್ದ ಸಾಯಿ ಪಲ್ಲವಿ ಅನಿರೀಕ್ಷಿತವಾಗಿ ಕಲಾವಿದೆಯಾಗಿ ಗುರುತಿಸಿಕೊಂಡವಳು. ಜೊತೆಗೆ ತಮಿಳು, ಮಲೆಯಾಳಂ ಮತ್ತು ತೆಲುಗು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿ ಎಲ್ಲಾ ಪ್ರೇಕ್ಷಕರ ಮನಗೆದ್ದವಳು. ಈಗಾಗಲೇ ದಕ್ಷಿಣ ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿಗಳಲ್ಲಿ ಒಂದಾದ ಫಿಲಂಫೇರ್ ಪ್ರಶಸ್ತಿಗೆ ಸಾಯಿಪಲ್ಲವಿ ಪಾತ್ರರಾಗಿದ್ದಾರೆ. ಅಪಾರ ಓದು ಮತ್ತು ವಿದ್ಯಾರ್ಹತೆ ಹಾಗೂ ಈ ಜಗತ್ತನ್ನು ಸೂಕ್ಷ್ಮವಾಗಿ ಗ್ರಹಿಸುವ ಗುಣ ಇವೆಲ್ಲವೂ ಆಕೆಯನ್ನು ಪ್ರಬುದ್ಧ ನಟಿಯನ್ನಾಗಿ ರೂಪಿಸಿವೆ. ಈಗ ಬಿಡುಗಡೆಯಾಗಿರುವ ನಕ್ಸಲ್ ಚಳುವಳಿಯ ಕಥೆಯಾಧಾರಿತ (ವಾರಂಗಲ್‌ನ ಸರಳ ಎಂಬ ತೊಂಬತ್ತರ ದಶಕದ ನಕ್ಸಲ್ ಕಾರ್ಯಕರ್ತೆಯ ಜೀವನಾಧಾರಿತ ಕಥೆ) ’ವಿರಾಟ ಪರ್ವಂ’ ತೆಲುಗು ಸಿನಿಮಾದಲ್ಲಿನ ಸಾಯಿ ಪಲ್ಲವಿಯ ಅಭಿನಯ ಕುರಿತಾಗಿ ಎಲ್ಲರಿಂದ ಒಳ್ಳೆಯ ಮಾತುಗಳು ಕೇಳಿಬರುತ್ತಿವೆ.

2015ರಲ್ಲಿ ’ಪ್ರೇಮಂ’ ಎಂಬ ಮಲೆಯಾಳಂ ಸಿನಿಮಾದ ಮಲರ್ ಎಂಬ ಪಾತ್ರದ ಮೂಲಕ ಗಮನ ಸೆಳೆದ ಈಕೆ ಮತ್ತೆ ಹಿಂತಿರುಗಿ ನೋಡಿಲ್ಲ. ಮತ್ತೋರ್ವ ಪ್ರತಿಭಾವಂತೆ ಕೀರ್ತಿ ಸುರೇಶ್ ಎಂಬ ಕಲಾವಿದೆಯ ಜೊತೆಗೆ ಸಾಯಿಪಲ್ಲವಿ ಕುರಿತಾಗಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಇತ್ತೀಚೆಗೆ ’ವಿರಾಟ ಪರ್ವಂ’ ಸಿನಿಮಾ ಪ್ರಚಾರ ಕುರಿತ ಪತ್ರಿಕಾಗೋಷ್ಠಿಯಲ್ಲಿ ತಾನು ನಂಬಿದ ಸಿದ್ಧಾಂತಗಳ ಕುರಿತು ಮಾತನಾಡುತ್ತಾ, ಧರ್ಮಕ್ಕಿಂತ ಮನುಷ್ಯ ಜೀವ ದೊಡ್ಡದು; ಕಾಶ್ಮೀರದಲ್ಲಿ ಹಿಂದೂ ಪಂಡಿತರ ಹತ್ಯೆಯಾಗುವುದು ಅಮಾನುಷ ಕೃತ್ಯ ನಿಜ; ಅದೇ ರೀತಿ ಗೋವುಗಳನ್ನು ಹಿಡಿದುಕೊಂಡು ಹೋಗುತ್ತಿರುವ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿ ಜೈ ಶ್ರೀರಾಂ ಎಂದು ಘೋಷಣೆ ಕೂಗುವುದು ಕೂಡ ಅಮಾನುಷ ಕ್ರಿಯೆ ಎಂದು ಸಾಯಿ ಪ್ರತಿಕ್ರಿಯಿಸಿದ್ದಳು.

ಸಾಯಿಪಲ್ಲವಿಯ ಈ ಪ್ರಬುದ್ಧತೆಯ ಮಾತುಗಳು ಮಾರಿಕೊಂಡ ಮಾಧ್ಯಮಗಳ ಬೃಹಸ್ಪತಿಗಳನ್ನು ಕೆರಳಿಸಿತು. ಈಕೆಯ ಕುರಿತಾಗಿ ಇಲ್ಲಸಲ್ಲದ ಅಪಪ್ರಚಾರ ಮಾಡಿದರು. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಎದುರಿಗೆ
ಮೈಕ್ ಮತ್ತು ಕ್ಯಾಮರಾ ಇದ್ದರೆ ಸಾಕು ಹನುಮಂತನ ಪಾತ್ರಧಾರಿಗಳಂತೆ ಕುಣಿಯುವ ಪತ್ರಕರ್ತರೆಂಬ ಮಂಡೂಕಗಳಿಗೆ ನಾವು ಬದುಕುತ್ತಿರುವ ಗ್ರಾಮೀಣ ಜಗತ್ತಿನ ಪರಿಸ್ಥಿತಿಯ ಅರಿವಿಲ್ಲ. ಇಂದಿಗೂ ಕೂಡ ನಮ್ಮ ಕರ್ನಾಟಕ ಸೇರಿದಂತೆ ಭಾರತದ ಹಲವಾರು ರಾಜ್ಯಗಳಲ್ಲಿ ಕೃಷಿಯನ್ನು ಮೂಲ ವೃತ್ತಿಯಾಗಿಸಿಕೊಂಡ ಮುಸ್ಲಿಮರಿದ್ದಾರೆ, ಜೊತೆಗೆ ಪಶು ಸಾಕಾಣಿಕೆಯ ಮೂಲಕ ಹೈನುಗಾರಿಕೆಯಲ್ಲಿ ಬದುಕು ಕಟ್ಟಿಕೊಂಡ ಅನೇಕ ಬಡ ಮುಸ್ಲಿಂ ಕುಟುಂಬಗಳು ಇವೆ. ಆದರೆ, ಈಗಿನ ’ನವ ದೇಶ ಭಕ್ತ’ರು ಮತ್ತು ’ಹಿಂದೂಭಕ್ತ’ರು ಎಂಬ ಅಸಭ್ಯರ ಕಾರಣದಿಂದಾಗಿ ಯಾವೊಬ್ಬ ಮುಸ್ಲಿಂ ವ್ಯಕ್ತಿ ಸಾರ್ವಜನಿಕವಾಗಿ ಹಸುಗಳನ್ನು ಹಿಡಿದುಕೊಂಡು ಪಶು ವೈದ್ಯಕೀಯ ಕೇಂದ್ರಗಳಿಗೆ ಹೋಗುವುದು ಅಥವಾ ಮಾರಾಟಕ್ಕೆ ಇಲ್ಲವೆ ಕೊಳ್ಳುವುದಕ್ಕೆ ಜಾನುವಾರುಗಳ ಸಂತೆಗೆ ಹೋಗಲು ಅಸಾಧ್ಯವಾಗುತ್ತಿದೆ. ತಮ್ಮ ಪರಿಚಯದ ಹಿಂದೂಧರ್ಮದ ಗೆಳೆಯರನ್ನು ಆಶ್ರಯಿಸಿ ಬದುಕಬೇಕಾದ ಸ್ಥಿತಿ ಅವರದು.

ಹಿಂದುಳಿದ ಸಮುದಾಯದಲ್ಲಿ ಜನಿಸಿ ಗ್ರಾಮೀಣ ಭಾರತದ ಅನುಭವಗಳನ್ನು ದಕ್ಕಿಸಿಕೊಂಡಿರುವ ನಟಿ ಸಾಯಿಪಲ್ಲವಿಗೆ ಇರುವ ಇಂತಹ ಸೂಕ್ಷ್ಮತೆಯನ್ನು ನಮ್ಮ ಮಾಧ್ಯಮಗಳ ಅವಿವೇಕಿಗಳು ದಕ್ಕಿಸಿಕೊಂಡಿದ್ದರೆ ಅವರ ಮಾತು ಮತ್ತು ಬರವಣಿಗೆಗೆ ಅರ್ಥ ಬರುತ್ತಿತ್ತು.

ಇನ್ನು ಎರಡನೆಯದಾಗಿ ಜ್ಯೋತಿ ಮಣಿ ಎಂಬ ತಮಿಳು ಭಾಷೆಯ ಯುವ ಕಥೆಗಾರ್ತಿಯೊಬ್ಬಳು ತನ್ನ ಬದ್ಧತೆಯ ಹೋರಾಟದ ಬದುಕಿನ ಮೂಲಕ ಸತತ ಹದಿನೈದು ವರ್ಷಗಳ ಕಾಲ ತಮಿಳುನಾಡು ಯುವ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡ ಸೂಕ್ಷ್ಮ ಮನಸ್ಸಿನ ಹೆಣ್ಣು ಮಗಳು. 2009 ಮತ್ತು 2014ರ ಎರಡು ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರೂ ಎದೆಗುಂದದೆ ಹಾಗೂ ಪಕ್ಷ ನಿಷ್ಟೆಯನ್ನು ಬದಲಾಯಿಸದೆ 2019ರಲ್ಲಿ ಕರೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾಳೆ. ಬೆಂಗಳೂರು-ಮಧುರೈ ಮತ್ತು ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇಲಂ ನಂತರ ಸಿಗುವ ಕರೂರು ಮುಂದುವರಿದ ವಾಣಿಜ್ಯ ಹಾಗೂ ಕೈಗಾರಿಕಾ ಜಿಲ್ಲಾ ಕೇಂದ್ರವಾಗಿದೆ. ಜ್ಯೋತಿ ಮಣಿ ಸಂಸದೆಯಾದ ನಂತರವೂ ತನ್ನ ಹಳ್ಳಿಯ ವಾಸಸ್ಥಳವನ್ನು ಬದಲಾಯಿಸಿಲ್ಲ. ಪೆರಿಯತಿರು ಮಂಗಲಂ ಎಂಬ ಹಳ್ಳಿಯಲ್ಲಿ ಜನಸಾಮಾನ್ಯರ ನಡುವೆ ಸಾಮಾನ್ಯಳಂತೆ ಬದುಕುವ ಜ್ಯೋತಿ ಮಣಿಗೆ ಸಾಹಿತ್ಯದ ಓದು ಮತ್ತು ಬರವಣಿಗೆ ಒಬ್ಬ ಜನಪ್ರತಿನಿಧಿ ಹೇಗಿರಬೇಕು ಎಂಬುದನ್ನು ಕಲಿಸಿಕೊಟ್ಟಿದೆ. ಅಣ್ಣಾ ಮಲೈ ವಿ.ವಿ.ಯ ಪದವೀಧರೆಯಾದ ಈಕೆಯ ’ಒಟ್ಟು ವಾಸನೈ’ ಎಂಬ ಕಥಾ ಸಂಕಲನ, ’ಸಿಥಿರಕ್ ಕೂಡು’ ಎಂಬ ಕಾದಂಬರಿಯ ಜೊತೆಗೆ ’ನಾಯಕತ್ವಕ್ಕೆ ಅಡ್ಡದಾರಿಗಳಿಲ್ಲ’ (ನೀರ್ ಪಿರಕ್ಕು ಮನ್) ಎಂಬ ಅನುಭವ ಕಥನ ಪುಸ್ತಕಗಳು ಜ್ಯೋತಿ ಮಣಿಯನ್ನು ತಮಿಳು ಜನತೆ ಪಕ್ಷ ಭೇದವಿಲ್ಲದೆ ಪ್ರೀತಿಸುವಂತೆ ಮಾಡಿದೆ.

ಕಳೆದ ವಾರ ದೆಹಲಿಯ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಜಾರಿ ನಿರ್ದೆಶನಾಲಯದ ವಿರುದ್ಧ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ದೆಹಲಿ ಪೊಲೀಸರ ವಿರುದ್ಧ ಜ್ಯೋತಿ ಮಣಿ ಗುಡುಗಿದ ವೈಖರಿಯು ದೇಶಾದ್ಯಂತ ಮಾಧ್ಯಮಗಳ ಗಮನ ಸೆಳೆಯಿತು. ತಾನೋರ್ವ ಸಂಸದೆ ಎಂಬುದನ್ನು ಕಡೆಗಣಿಸಿ ತೊಟ್ಟಿದ ಬಟ್ಟೆಗಳು ಹರಿದು ಹೋಗುವಂತೆ ಎಳೆದಾಡಿದ ಪೊಲೀಸರ ಅಮಾನವೀಯ ವರ್ತನೆಯ ಬಗ್ಗೆ ಮಾತನಾಡುತ್ತ ಯಾವುದೇ ಸಂಕೋಚವಿಲ್ಲದೆ ಧರಿಸಿದ್ದ ಪೈಜಾಮಿನ ಹರಿದ ಭಾಗವನ್ನು ತೋರಿಸಿ, ಅದಕ್ಕೆ ಕಾರಣಕಾದವರನ್ನು ತರಾಟೆಗೆ ತೆಗೆದುಕೊಂಡ ಬಗೆ ನಿಜಕ್ಕೂ ಮೆಚ್ಚುವಂತಹದ್ದು. ಕುಡಿಯಲು ನೀರು ಕೇಳಿದರೂ ಸಹ ನೀಡದೆ ಸತತ ಮೂರು ಗಂಟೆಗಳ ಕಾಲ ಪೊಲೀಸ್ ವಾಹನದಲ್ಲಿ ಕೂಡಿ ಹಾಕಿದ್ದ ಬಗೆಯನ್ನು ಈ ಹೆಣ್ಣುಮಗಳು ಇಂಗ್ಲಿಷ್ ಭಾಷೆಯಲ್ಲಿ ವಿವರಿಸುವುದರ ಮೂಲಕ ದೆಹಲಿ ಪೊಲೀಸರ ಗೂಂಡಾಗಿರಿಯನ್ನು ಜಗತ್ತಿಗೆ ಪರಿಚಯಿಸಿದಳು.

ಅಧಿಕಾರ, ಸ್ಥಾನಮಾನ ಹಾಗೂ ಹಣಕ್ಕಾಗಿ ನಿಷ್ಠೆ ಬದಲಿಸಿ ಪಕ್ಷದಿಂದ ಪಕ್ಷಕ್ಕೆ ಹಾರುವ ಇಂದಿನ ಎಡಬಿಡಂಗಿ ಜಾಯಮಾನದ ಅವಿವೇಕಿಗಳಿಗೆ ಈ ಹೆಣ್ಣುಮಗಳ ರಾಜಕೀಯ ಜೀವನಗಾಥೆ ಪಾಠವಾಗಬೇಕು. ಜೊತೆಗೆ ಯುವಕ/ ಯುವತಿಯರಿಗೆ ಜ್ಯೋತಿ ಮಣಿಯ ಬದ್ಧತೆ ಆದರ್ಶವಾಗಬೇಕು.

ಡಾ.ಎನ್.ಜಗದೀಶ್ ಕೊಪ್ಪ

ಡಾ.ಎನ್.ಜಗದೀಶ್ ಕೊಪ್ಪ
ಹಿರಿಯ ಪತ್ರಕರ್ತರು, ಬರಹಗಾರರು ಮತ್ತು ಸಾಮಾಜಿಕ ಹೋರಾಟಗಾರರು. ಬಿಳಿ ಸಾಹೇಬನ ಭಾರತ, ಮರುಭೂಮಿಯ ಹೂವು, ಪುತ್ರಶೋಕ ಅವರು ರಚಿಸಿದ ಪುಸ್ತಕಗಳಲ್ಲಿ ಕೆಲವು.


ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...