Homeಮುಖಪುಟಅಧಿಕಾರಕ್ಕೆ ಸವಾಲೆಸೆದ ತಮಿಳುನಾಡಿನ ಇಬ್ಬರು ಯುವಪ್ರತಿಭೆಗಳು

ಅಧಿಕಾರಕ್ಕೆ ಸವಾಲೆಸೆದ ತಮಿಳುನಾಡಿನ ಇಬ್ಬರು ಯುವಪ್ರತಿಭೆಗಳು

- Advertisement -
- Advertisement -

ಇತ್ತೀಚೆಗಿನ ದಿನಗಳಲ್ಲಿ ತಮ್ಮ ವೃತ್ತಿ ಕುರಿತಾದ ಅಸಾಧಾರಣ ಬದ್ಧತೆಯ ಮೂಲಕ ಇಡೀ ದೇಶದ ಗಮನ ಸೆಳೆದ ಚಿತ್ರನಟಿ ಸಾಯಿಪಲ್ಲವಿ ಹಾಗೂ ಕರೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಸಂಸದೆಯಾಗಿ ಆಯ್ಕೆಯಾಗಿರುವ ಜ್ಯೋತಿ ಮಣಿ ಎಂಬ ಯುವ ಪ್ರತಿಭೆಗಳು ಇಂದಿನ ಯುವತಲೆಮಾರಿಗೆ ಮಾದರಿಯಾಗುವ ತಮ್ಮ ನಡೆನುಡಿಗಳ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಚಿತ್ರ ನಟಿಯಾಗಿರುವ ಸಾಯಿಪಲ್ಲವಿ ತಮಿಳುನಾಡಿನ ಊಟಿ ಬಳಿ ಇರುವ ಕೋಟಗಿರಿ ಎಂಬ ಸ್ಥಳದ ಬಡಗ ಜನಾಂಗ ಎಂಬ ಬುಡಕಟ್ಟು ಸಮುದಾಯಕ್ಕೆ ಸೇರಿದ ಹೆಣ್ಣು ಮಗಳು. ಜೊತೆಗೆ ವೈದ್ಯಕೀಯ ಪದವಿಯನ್ನು ಪಡೆದಿರುವ ಪ್ರತಿಭಾವಂತೆ. ಆಕೆಯ ತಂದೆ ಮತ್ತು ತಾಯಿ ಇಬ್ಬರೂ (ಸೆಂತಮಾರೈ ಕಣ್ಣನ್ ಮತ್ತು ರಾಧಾ) ಉದ್ಯೋಗದ ನಿಮಿತ್ತ ಕೊಯಮತ್ತೂರಿನಲ್ಲಿದ್ದವರು. 1992ರಲ್ಲಿ ಜನಸಿದ ಸಾಯಿ ಬಾಲ್ಯದ ಶಿಕ್ಷಣವನ್ನೆಲ್ಲಾ ಕೊಯಮತ್ತೂರು ಕಾನ್ವೆಂಟ್ ಶಾಲೆಯಲ್ಲಿ ಪಡೆದವಳು. ನೃತ್ಯದಲ್ಲಿ ಆಸಕ್ತಿ ಇದ್ದ ಕಾರಣದಿಂದಾಗಿ ಉತ್ತಮ ನೃತ್ಯಗಾತಿಯಾಗಿ ರೂಪುಗೊಂಡಿದ್ದ ಸಾಯಿ ಪಲ್ಲವಿ ಅನಿರೀಕ್ಷಿತವಾಗಿ ಕಲಾವಿದೆಯಾಗಿ ಗುರುತಿಸಿಕೊಂಡವಳು. ಜೊತೆಗೆ ತಮಿಳು, ಮಲೆಯಾಳಂ ಮತ್ತು ತೆಲುಗು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿ ಎಲ್ಲಾ ಪ್ರೇಕ್ಷಕರ ಮನಗೆದ್ದವಳು. ಈಗಾಗಲೇ ದಕ್ಷಿಣ ಭಾರತದ ಪ್ರತಿಷ್ಠಿತ ಸಿನಿಮಾ ಪ್ರಶಸ್ತಿಗಳಲ್ಲಿ ಒಂದಾದ ಫಿಲಂಫೇರ್ ಪ್ರಶಸ್ತಿಗೆ ಸಾಯಿಪಲ್ಲವಿ ಪಾತ್ರರಾಗಿದ್ದಾರೆ. ಅಪಾರ ಓದು ಮತ್ತು ವಿದ್ಯಾರ್ಹತೆ ಹಾಗೂ ಈ ಜಗತ್ತನ್ನು ಸೂಕ್ಷ್ಮವಾಗಿ ಗ್ರಹಿಸುವ ಗುಣ ಇವೆಲ್ಲವೂ ಆಕೆಯನ್ನು ಪ್ರಬುದ್ಧ ನಟಿಯನ್ನಾಗಿ ರೂಪಿಸಿವೆ. ಈಗ ಬಿಡುಗಡೆಯಾಗಿರುವ ನಕ್ಸಲ್ ಚಳುವಳಿಯ ಕಥೆಯಾಧಾರಿತ (ವಾರಂಗಲ್‌ನ ಸರಳ ಎಂಬ ತೊಂಬತ್ತರ ದಶಕದ ನಕ್ಸಲ್ ಕಾರ್ಯಕರ್ತೆಯ ಜೀವನಾಧಾರಿತ ಕಥೆ) ’ವಿರಾಟ ಪರ್ವಂ’ ತೆಲುಗು ಸಿನಿಮಾದಲ್ಲಿನ ಸಾಯಿ ಪಲ್ಲವಿಯ ಅಭಿನಯ ಕುರಿತಾಗಿ ಎಲ್ಲರಿಂದ ಒಳ್ಳೆಯ ಮಾತುಗಳು ಕೇಳಿಬರುತ್ತಿವೆ.

2015ರಲ್ಲಿ ’ಪ್ರೇಮಂ’ ಎಂಬ ಮಲೆಯಾಳಂ ಸಿನಿಮಾದ ಮಲರ್ ಎಂಬ ಪಾತ್ರದ ಮೂಲಕ ಗಮನ ಸೆಳೆದ ಈಕೆ ಮತ್ತೆ ಹಿಂತಿರುಗಿ ನೋಡಿಲ್ಲ. ಮತ್ತೋರ್ವ ಪ್ರತಿಭಾವಂತೆ ಕೀರ್ತಿ ಸುರೇಶ್ ಎಂಬ ಕಲಾವಿದೆಯ ಜೊತೆಗೆ ಸಾಯಿಪಲ್ಲವಿ ಕುರಿತಾಗಿ ದಕ್ಷಿಣ ಭಾರತದ ಚಿತ್ರರಂಗದಲ್ಲಿ ಒಳ್ಳೆಯ ಅಭಿಪ್ರಾಯವಿದೆ. ಇತ್ತೀಚೆಗೆ ’ವಿರಾಟ ಪರ್ವಂ’ ಸಿನಿಮಾ ಪ್ರಚಾರ ಕುರಿತ ಪತ್ರಿಕಾಗೋಷ್ಠಿಯಲ್ಲಿ ತಾನು ನಂಬಿದ ಸಿದ್ಧಾಂತಗಳ ಕುರಿತು ಮಾತನಾಡುತ್ತಾ, ಧರ್ಮಕ್ಕಿಂತ ಮನುಷ್ಯ ಜೀವ ದೊಡ್ಡದು; ಕಾಶ್ಮೀರದಲ್ಲಿ ಹಿಂದೂ ಪಂಡಿತರ ಹತ್ಯೆಯಾಗುವುದು ಅಮಾನುಷ ಕೃತ್ಯ ನಿಜ; ಅದೇ ರೀತಿ ಗೋವುಗಳನ್ನು ಹಿಡಿದುಕೊಂಡು ಹೋಗುತ್ತಿರುವ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ ಮಾಡಿ ಜೈ ಶ್ರೀರಾಂ ಎಂದು ಘೋಷಣೆ ಕೂಗುವುದು ಕೂಡ ಅಮಾನುಷ ಕ್ರಿಯೆ ಎಂದು ಸಾಯಿ ಪ್ರತಿಕ್ರಿಯಿಸಿದ್ದಳು.

ಸಾಯಿಪಲ್ಲವಿಯ ಈ ಪ್ರಬುದ್ಧತೆಯ ಮಾತುಗಳು ಮಾರಿಕೊಂಡ ಮಾಧ್ಯಮಗಳ ಬೃಹಸ್ಪತಿಗಳನ್ನು ಕೆರಳಿಸಿತು. ಈಕೆಯ ಕುರಿತಾಗಿ ಇಲ್ಲಸಲ್ಲದ ಅಪಪ್ರಚಾರ ಮಾಡಿದರು. ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಎದುರಿಗೆ
ಮೈಕ್ ಮತ್ತು ಕ್ಯಾಮರಾ ಇದ್ದರೆ ಸಾಕು ಹನುಮಂತನ ಪಾತ್ರಧಾರಿಗಳಂತೆ ಕುಣಿಯುವ ಪತ್ರಕರ್ತರೆಂಬ ಮಂಡೂಕಗಳಿಗೆ ನಾವು ಬದುಕುತ್ತಿರುವ ಗ್ರಾಮೀಣ ಜಗತ್ತಿನ ಪರಿಸ್ಥಿತಿಯ ಅರಿವಿಲ್ಲ. ಇಂದಿಗೂ ಕೂಡ ನಮ್ಮ ಕರ್ನಾಟಕ ಸೇರಿದಂತೆ ಭಾರತದ ಹಲವಾರು ರಾಜ್ಯಗಳಲ್ಲಿ ಕೃಷಿಯನ್ನು ಮೂಲ ವೃತ್ತಿಯಾಗಿಸಿಕೊಂಡ ಮುಸ್ಲಿಮರಿದ್ದಾರೆ, ಜೊತೆಗೆ ಪಶು ಸಾಕಾಣಿಕೆಯ ಮೂಲಕ ಹೈನುಗಾರಿಕೆಯಲ್ಲಿ ಬದುಕು ಕಟ್ಟಿಕೊಂಡ ಅನೇಕ ಬಡ ಮುಸ್ಲಿಂ ಕುಟುಂಬಗಳು ಇವೆ. ಆದರೆ, ಈಗಿನ ’ನವ ದೇಶ ಭಕ್ತ’ರು ಮತ್ತು ’ಹಿಂದೂಭಕ್ತ’ರು ಎಂಬ ಅಸಭ್ಯರ ಕಾರಣದಿಂದಾಗಿ ಯಾವೊಬ್ಬ ಮುಸ್ಲಿಂ ವ್ಯಕ್ತಿ ಸಾರ್ವಜನಿಕವಾಗಿ ಹಸುಗಳನ್ನು ಹಿಡಿದುಕೊಂಡು ಪಶು ವೈದ್ಯಕೀಯ ಕೇಂದ್ರಗಳಿಗೆ ಹೋಗುವುದು ಅಥವಾ ಮಾರಾಟಕ್ಕೆ ಇಲ್ಲವೆ ಕೊಳ್ಳುವುದಕ್ಕೆ ಜಾನುವಾರುಗಳ ಸಂತೆಗೆ ಹೋಗಲು ಅಸಾಧ್ಯವಾಗುತ್ತಿದೆ. ತಮ್ಮ ಪರಿಚಯದ ಹಿಂದೂಧರ್ಮದ ಗೆಳೆಯರನ್ನು ಆಶ್ರಯಿಸಿ ಬದುಕಬೇಕಾದ ಸ್ಥಿತಿ ಅವರದು.

ಹಿಂದುಳಿದ ಸಮುದಾಯದಲ್ಲಿ ಜನಿಸಿ ಗ್ರಾಮೀಣ ಭಾರತದ ಅನುಭವಗಳನ್ನು ದಕ್ಕಿಸಿಕೊಂಡಿರುವ ನಟಿ ಸಾಯಿಪಲ್ಲವಿಗೆ ಇರುವ ಇಂತಹ ಸೂಕ್ಷ್ಮತೆಯನ್ನು ನಮ್ಮ ಮಾಧ್ಯಮಗಳ ಅವಿವೇಕಿಗಳು ದಕ್ಕಿಸಿಕೊಂಡಿದ್ದರೆ ಅವರ ಮಾತು ಮತ್ತು ಬರವಣಿಗೆಗೆ ಅರ್ಥ ಬರುತ್ತಿತ್ತು.

ಇನ್ನು ಎರಡನೆಯದಾಗಿ ಜ್ಯೋತಿ ಮಣಿ ಎಂಬ ತಮಿಳು ಭಾಷೆಯ ಯುವ ಕಥೆಗಾರ್ತಿಯೊಬ್ಬಳು ತನ್ನ ಬದ್ಧತೆಯ ಹೋರಾಟದ ಬದುಕಿನ ಮೂಲಕ ಸತತ ಹದಿನೈದು ವರ್ಷಗಳ ಕಾಲ ತಮಿಳುನಾಡು ಯುವ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡ ಸೂಕ್ಷ್ಮ ಮನಸ್ಸಿನ ಹೆಣ್ಣು ಮಗಳು. 2009 ಮತ್ತು 2014ರ ಎರಡು ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದರೂ ಎದೆಗುಂದದೆ ಹಾಗೂ ಪಕ್ಷ ನಿಷ್ಟೆಯನ್ನು ಬದಲಾಯಿಸದೆ 2019ರಲ್ಲಿ ಕರೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾಳೆ. ಬೆಂಗಳೂರು-ಮಧುರೈ ಮತ್ತು ಕನ್ಯಾಕುಮಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೇಲಂ ನಂತರ ಸಿಗುವ ಕರೂರು ಮುಂದುವರಿದ ವಾಣಿಜ್ಯ ಹಾಗೂ ಕೈಗಾರಿಕಾ ಜಿಲ್ಲಾ ಕೇಂದ್ರವಾಗಿದೆ. ಜ್ಯೋತಿ ಮಣಿ ಸಂಸದೆಯಾದ ನಂತರವೂ ತನ್ನ ಹಳ್ಳಿಯ ವಾಸಸ್ಥಳವನ್ನು ಬದಲಾಯಿಸಿಲ್ಲ. ಪೆರಿಯತಿರು ಮಂಗಲಂ ಎಂಬ ಹಳ್ಳಿಯಲ್ಲಿ ಜನಸಾಮಾನ್ಯರ ನಡುವೆ ಸಾಮಾನ್ಯಳಂತೆ ಬದುಕುವ ಜ್ಯೋತಿ ಮಣಿಗೆ ಸಾಹಿತ್ಯದ ಓದು ಮತ್ತು ಬರವಣಿಗೆ ಒಬ್ಬ ಜನಪ್ರತಿನಿಧಿ ಹೇಗಿರಬೇಕು ಎಂಬುದನ್ನು ಕಲಿಸಿಕೊಟ್ಟಿದೆ. ಅಣ್ಣಾ ಮಲೈ ವಿ.ವಿ.ಯ ಪದವೀಧರೆಯಾದ ಈಕೆಯ ’ಒಟ್ಟು ವಾಸನೈ’ ಎಂಬ ಕಥಾ ಸಂಕಲನ, ’ಸಿಥಿರಕ್ ಕೂಡು’ ಎಂಬ ಕಾದಂಬರಿಯ ಜೊತೆಗೆ ’ನಾಯಕತ್ವಕ್ಕೆ ಅಡ್ಡದಾರಿಗಳಿಲ್ಲ’ (ನೀರ್ ಪಿರಕ್ಕು ಮನ್) ಎಂಬ ಅನುಭವ ಕಥನ ಪುಸ್ತಕಗಳು ಜ್ಯೋತಿ ಮಣಿಯನ್ನು ತಮಿಳು ಜನತೆ ಪಕ್ಷ ಭೇದವಿಲ್ಲದೆ ಪ್ರೀತಿಸುವಂತೆ ಮಾಡಿದೆ.

ಕಳೆದ ವಾರ ದೆಹಲಿಯ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಜಾರಿ ನಿರ್ದೆಶನಾಲಯದ ವಿರುದ್ಧ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ದೆಹಲಿ ಪೊಲೀಸರ ವಿರುದ್ಧ ಜ್ಯೋತಿ ಮಣಿ ಗುಡುಗಿದ ವೈಖರಿಯು ದೇಶಾದ್ಯಂತ ಮಾಧ್ಯಮಗಳ ಗಮನ ಸೆಳೆಯಿತು. ತಾನೋರ್ವ ಸಂಸದೆ ಎಂಬುದನ್ನು ಕಡೆಗಣಿಸಿ ತೊಟ್ಟಿದ ಬಟ್ಟೆಗಳು ಹರಿದು ಹೋಗುವಂತೆ ಎಳೆದಾಡಿದ ಪೊಲೀಸರ ಅಮಾನವೀಯ ವರ್ತನೆಯ ಬಗ್ಗೆ ಮಾತನಾಡುತ್ತ ಯಾವುದೇ ಸಂಕೋಚವಿಲ್ಲದೆ ಧರಿಸಿದ್ದ ಪೈಜಾಮಿನ ಹರಿದ ಭಾಗವನ್ನು ತೋರಿಸಿ, ಅದಕ್ಕೆ ಕಾರಣಕಾದವರನ್ನು ತರಾಟೆಗೆ ತೆಗೆದುಕೊಂಡ ಬಗೆ ನಿಜಕ್ಕೂ ಮೆಚ್ಚುವಂತಹದ್ದು. ಕುಡಿಯಲು ನೀರು ಕೇಳಿದರೂ ಸಹ ನೀಡದೆ ಸತತ ಮೂರು ಗಂಟೆಗಳ ಕಾಲ ಪೊಲೀಸ್ ವಾಹನದಲ್ಲಿ ಕೂಡಿ ಹಾಕಿದ್ದ ಬಗೆಯನ್ನು ಈ ಹೆಣ್ಣುಮಗಳು ಇಂಗ್ಲಿಷ್ ಭಾಷೆಯಲ್ಲಿ ವಿವರಿಸುವುದರ ಮೂಲಕ ದೆಹಲಿ ಪೊಲೀಸರ ಗೂಂಡಾಗಿರಿಯನ್ನು ಜಗತ್ತಿಗೆ ಪರಿಚಯಿಸಿದಳು.

ಅಧಿಕಾರ, ಸ್ಥಾನಮಾನ ಹಾಗೂ ಹಣಕ್ಕಾಗಿ ನಿಷ್ಠೆ ಬದಲಿಸಿ ಪಕ್ಷದಿಂದ ಪಕ್ಷಕ್ಕೆ ಹಾರುವ ಇಂದಿನ ಎಡಬಿಡಂಗಿ ಜಾಯಮಾನದ ಅವಿವೇಕಿಗಳಿಗೆ ಈ ಹೆಣ್ಣುಮಗಳ ರಾಜಕೀಯ ಜೀವನಗಾಥೆ ಪಾಠವಾಗಬೇಕು. ಜೊತೆಗೆ ಯುವಕ/ ಯುವತಿಯರಿಗೆ ಜ್ಯೋತಿ ಮಣಿಯ ಬದ್ಧತೆ ಆದರ್ಶವಾಗಬೇಕು.

ಡಾ.ಎನ್.ಜಗದೀಶ್ ಕೊಪ್ಪ

ಡಾ.ಎನ್.ಜಗದೀಶ್ ಕೊಪ್ಪ
ಹಿರಿಯ ಪತ್ರಕರ್ತರು, ಬರಹಗಾರರು ಮತ್ತು ಸಾಮಾಜಿಕ ಹೋರಾಟಗಾರರು. ಬಿಳಿ ಸಾಹೇಬನ ಭಾರತ, ಮರುಭೂಮಿಯ ಹೂವು, ಪುತ್ರಶೋಕ ಅವರು ರಚಿಸಿದ ಪುಸ್ತಕಗಳಲ್ಲಿ ಕೆಲವು.


ಇದನ್ನೂ ಓದಿ: ಸಾಯಿ ಪಲ್ಲವಿಯವರಿಂದ ಮಾಧ್ಯಮಗಳು ಕಲಿಯುವುದು ಬಹಳಷ್ಟಿದೆ: ಬೆಂಬಲಕ್ಕೆ ನಿಂತ ನಟ ಕಿಶೋರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...