Homeಮುಖಪುಟದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

ದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

- Advertisement -
- Advertisement -

ದಮನಿತರ ಕತೆಯುಳ್ಳ ಕನ್ನಡದ ‘ಪಾಲಾರ್‌’ ಸಿನಿಮಾ ಟ್ರೇಲರ್‌‌ ಬಿಡುಗಡೆಯ ವೇಳೆ ವಿವಾದಗಳಿಗೆ ಗುರಿಯಾಗಿತ್ತು. ಜಾತಿಯ ವಿಷಯವನ್ನು ಢಾಳಾಗಿ ತೋರಿಸಿರುವ ಕಾರಣ ಹಲವು ಆಡಿಯೊ ಕಂಪನಿಗಳು ಟ್ರೇಲರ್‌ ಬಿಡುಗಡೆಗೆ ಒಪ್ಪಿಕೊಂಡಿಲ್ಲ ಎಂದು ಆರೋಪಿಸಿದ್ದ ಚಿತ್ರತಂಡ ತಮ್ಮದೇ ಯೂಟ್ಯೂಬ್‌ ಚಾನೆಲ್‌ ಮೂಲಕ ಬಿಡುಗಡೆ ಮಾಡಿತ್ತು. ತಮಿಳಿನ ಖ್ಯಾತ ನಿರ್ದೇಶಕ, ನಿರ್ಮಾಪಕ ಪ.ರಂಜಿತ್‌ ‘ಪಾಲಾರ್‌’ ಸಿನಿಮಾದ ಟ್ರೇಲರ್‌‌ ಹಂಚಿಕೊಂಡಿದ್ದರು. ಈಗ ಅಂತಿಮವಾಗಿ ಸಿನಿಮಾ ಸೆನ್ಸಾರ್‌ ಆಗಿದ್ದು ‘ಯು/ಎ’ ಸರ್ಟಿಫಿಕೇಟ್ ಪಡೆದು ಬಿಡುಗಡೆಗೆ ಸಿದ್ಧವಾಗಿದೆ.

“ಜೀವಾ ನವೀನ್ ನಿರ್ದೇಶನದ, ನಟಿ ವೈ.ಜಿ.ಉಮಾ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದ್ದು ಮುಂದಿನ ತಿಂಗಳು ತೆರೆಕಾಣಲಿದೆ” ಎಂದು ಚಿತ್ರತಂಡ ತಿಳಿಸಿದೆ.

“ಶೋಷಿತ ವರ್ಗಗಳ, ದಲಿತರ ನೈಜ ಘಟನೆಗಳನ್ನು ಆಧರಿಸಿ ತೆಗೆದ ಸಿನೆಮಾ ಇದಾಗಿದೆ. ತಮಿಳು, ತೆಲುಗು ಭಾಷೆಗಳಿಗೆ ಸೀಮಿತವಾಗಿದ್ದ ನೆಲದ ಕಥೆಯನ್ನು ಕನ್ನಡದಲ್ಲೂ ಹೇಳಲು ಹೊರಟಿರುವ ಸಿನೆಮಾ ಪಾಲಾರ್” ಎಂದು ‘ಪಾಲಾರ್‌’ ತಂಡ ಮಾಹಿತಿ ನೀಡಿದೆ.

“ಕೋಲಾರ, ಚಿಕ್ಕಬಳ್ಳಾಪುರ, ದೇವನಹಳ್ಳಿ ಸೊಗಡಿನ ಕನ್ನಡ ಭಾಷೆಯನ್ನು ಬಳಸಿದ ಕನ್ನಡದ ಮೊದಲ ಸಿನಿಮಾ ಇದಾಗಿದೆ. ಆಂಧ್ರಪ್ರದೇಶ, ಕರ್ನಾಟಕ ಗಡಿಭಾಗಗಳಲ್ಲಿ ಸಾಮಾನ್ಯವಾಗಿ ಹೆಚ್ಚಿನ ಅನ್ಯಾಯ ಅನುಭವಿಸುತ್ತಿರುವ ದಲಿತರ ಕಥೆಯನ್ನು ತೆರೆಗೆ ತರಲಾಗಿದೆ” ಎಂದಿದೆ.

“ಮಹಿಳೆ ತನ್ನ ಜೀವನದಲ್ಲಿ ಹೋರಾಟದ ಮೂಲಕ ಜಯವನ್ನು ಸಾಧಿಸಬಹುದು ಎಂದು ಇಲ್ಲಿ ತೋರಿಸಲಾಗಿದೆ. ಮರ್ಯಾದೆ ಹತ್ಯೆ, ಬಡವರ ಭೂಮಿ ಶ್ರೀಮಂತರ ಪಾಲಾಗುವುದು, ಜಮೀನ್ದಾರಿಗಳ ದೌರ್ಜನ್ಯ ಇತ್ಯಾದಿ ಪ್ರಮುಖ ಸಂಗತಿಗಳನ್ನು ಕತೆಯಲ್ಲಿ ತರಲಾಗಿದೆ” ಎಂದು ಹೇಳಿದೆ.

“ಸೆನ್ಸಾರ್ ಮುಗಿಸಿದ ಪಾಲಾರ್ ಸಿನೆಮಾಗೆ CBFC ಬೋರ್ಡ್ U/A (ಯು/ಎ) ಸರ್ಟಿಫಿಕೇಟ್ ನೀಡಿದೆ. ದಕ್ಷಿಣ ಭಾರತದ ಖ್ಯಾತ ನಟ ನಟಿಯರ, ಸಮಾಜದ ಮುಖಂಡರ, ಜನಸಾಮಾನ್ಯರ ಬೆಂಬಲ ಸಿಕ್ಕಿದೆ. ಈಗಾಗಲೇ ಪಾಲಾರ್ ಸಿನೆಮಾದ ಟ್ರೇಲರ್‌ ನೋಡಿ ಭರವಸೆ ವ್ಯಕ್ತಪಡಿಸಿದ್ದಾರೆ. ಪಾಲಾರ್ ಸಿನೆಮಾ ಗೆದ್ದರೆ ನಮ್ಮ ದೀನ ದಲಿತರ, ಬಡವರ, ನೆಲದ ಕಥೆಗಳು ಇನ್ನೂ ಹೆಚ್ಚಾಗಿ ಮೂಡಿ ಬರುತ್ತವೆ. ಇಲ್ಲವಾದಲ್ಲಿ ಇಂತಹ ಪ್ರಯತ್ನ ಯಾರೂ ಮಾಡುವುದಿಲ್ಲ. ಹೀಗಾಗಿ ನಮ್ಮ ಸಿನಿಮಾವನ್ನು ಕನ್ನಡಿಗರು ಗೆಲ್ಲಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ‘ಪಾಲಾರ್’ ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

‘ಪಾಲಾರ್‌’ ಟೈಟಲ್‌ ವಿಶೇಷತೆ ಏನು?

“ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎನ್ನುತ್ತಾರೆ ನಿರ್ದೇಶಕ ಜೀವಾ ನವೀನ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...