Homeಮುಖಪುಟದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

ದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

- Advertisement -
- Advertisement -

ದಮನಿತರ ಕತೆಯುಳ್ಳ ಕನ್ನಡದ ‘ಪಾಲಾರ್‌’ ಸಿನಿಮಾ ಟ್ರೇಲರ್‌‌ ಬಿಡುಗಡೆಯ ವೇಳೆ ವಿವಾದಗಳಿಗೆ ಗುರಿಯಾಗಿತ್ತು. ಜಾತಿಯ ವಿಷಯವನ್ನು ಢಾಳಾಗಿ ತೋರಿಸಿರುವ ಕಾರಣ ಹಲವು ಆಡಿಯೊ ಕಂಪನಿಗಳು ಟ್ರೇಲರ್‌ ಬಿಡುಗಡೆಗೆ ಒಪ್ಪಿಕೊಂಡಿಲ್ಲ ಎಂದು ಆರೋಪಿಸಿದ್ದ ಚಿತ್ರತಂಡ ತಮ್ಮದೇ ಯೂಟ್ಯೂಬ್‌ ಚಾನೆಲ್‌ ಮೂಲಕ ಬಿಡುಗಡೆ ಮಾಡಿತ್ತು. ತಮಿಳಿನ ಖ್ಯಾತ ನಿರ್ದೇಶಕ, ನಿರ್ಮಾಪಕ ಪ.ರಂಜಿತ್‌ ‘ಪಾಲಾರ್‌’ ಸಿನಿಮಾದ ಟ್ರೇಲರ್‌‌ ಹಂಚಿಕೊಂಡಿದ್ದರು. ಈಗ ಅಂತಿಮವಾಗಿ ಸಿನಿಮಾ ಸೆನ್ಸಾರ್‌ ಆಗಿದ್ದು ‘ಯು/ಎ’ ಸರ್ಟಿಫಿಕೇಟ್ ಪಡೆದು ಬಿಡುಗಡೆಗೆ ಸಿದ್ಧವಾಗಿದೆ.

“ಜೀವಾ ನವೀನ್ ನಿರ್ದೇಶನದ, ನಟಿ ವೈ.ಜಿ.ಉಮಾ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದ್ದು ಮುಂದಿನ ತಿಂಗಳು ತೆರೆಕಾಣಲಿದೆ” ಎಂದು ಚಿತ್ರತಂಡ ತಿಳಿಸಿದೆ.

“ಶೋಷಿತ ವರ್ಗಗಳ, ದಲಿತರ ನೈಜ ಘಟನೆಗಳನ್ನು ಆಧರಿಸಿ ತೆಗೆದ ಸಿನೆಮಾ ಇದಾಗಿದೆ. ತಮಿಳು, ತೆಲುಗು ಭಾಷೆಗಳಿಗೆ ಸೀಮಿತವಾಗಿದ್ದ ನೆಲದ ಕಥೆಯನ್ನು ಕನ್ನಡದಲ್ಲೂ ಹೇಳಲು ಹೊರಟಿರುವ ಸಿನೆಮಾ ಪಾಲಾರ್” ಎಂದು ‘ಪಾಲಾರ್‌’ ತಂಡ ಮಾಹಿತಿ ನೀಡಿದೆ.

“ಕೋಲಾರ, ಚಿಕ್ಕಬಳ್ಳಾಪುರ, ದೇವನಹಳ್ಳಿ ಸೊಗಡಿನ ಕನ್ನಡ ಭಾಷೆಯನ್ನು ಬಳಸಿದ ಕನ್ನಡದ ಮೊದಲ ಸಿನಿಮಾ ಇದಾಗಿದೆ. ಆಂಧ್ರಪ್ರದೇಶ, ಕರ್ನಾಟಕ ಗಡಿಭಾಗಗಳಲ್ಲಿ ಸಾಮಾನ್ಯವಾಗಿ ಹೆಚ್ಚಿನ ಅನ್ಯಾಯ ಅನುಭವಿಸುತ್ತಿರುವ ದಲಿತರ ಕಥೆಯನ್ನು ತೆರೆಗೆ ತರಲಾಗಿದೆ” ಎಂದಿದೆ.

“ಮಹಿಳೆ ತನ್ನ ಜೀವನದಲ್ಲಿ ಹೋರಾಟದ ಮೂಲಕ ಜಯವನ್ನು ಸಾಧಿಸಬಹುದು ಎಂದು ಇಲ್ಲಿ ತೋರಿಸಲಾಗಿದೆ. ಮರ್ಯಾದೆ ಹತ್ಯೆ, ಬಡವರ ಭೂಮಿ ಶ್ರೀಮಂತರ ಪಾಲಾಗುವುದು, ಜಮೀನ್ದಾರಿಗಳ ದೌರ್ಜನ್ಯ ಇತ್ಯಾದಿ ಪ್ರಮುಖ ಸಂಗತಿಗಳನ್ನು ಕತೆಯಲ್ಲಿ ತರಲಾಗಿದೆ” ಎಂದು ಹೇಳಿದೆ.

“ಸೆನ್ಸಾರ್ ಮುಗಿಸಿದ ಪಾಲಾರ್ ಸಿನೆಮಾಗೆ CBFC ಬೋರ್ಡ್ U/A (ಯು/ಎ) ಸರ್ಟಿಫಿಕೇಟ್ ನೀಡಿದೆ. ದಕ್ಷಿಣ ಭಾರತದ ಖ್ಯಾತ ನಟ ನಟಿಯರ, ಸಮಾಜದ ಮುಖಂಡರ, ಜನಸಾಮಾನ್ಯರ ಬೆಂಬಲ ಸಿಕ್ಕಿದೆ. ಈಗಾಗಲೇ ಪಾಲಾರ್ ಸಿನೆಮಾದ ಟ್ರೇಲರ್‌ ನೋಡಿ ಭರವಸೆ ವ್ಯಕ್ತಪಡಿಸಿದ್ದಾರೆ. ಪಾಲಾರ್ ಸಿನೆಮಾ ಗೆದ್ದರೆ ನಮ್ಮ ದೀನ ದಲಿತರ, ಬಡವರ, ನೆಲದ ಕಥೆಗಳು ಇನ್ನೂ ಹೆಚ್ಚಾಗಿ ಮೂಡಿ ಬರುತ್ತವೆ. ಇಲ್ಲವಾದಲ್ಲಿ ಇಂತಹ ಪ್ರಯತ್ನ ಯಾರೂ ಮಾಡುವುದಿಲ್ಲ. ಹೀಗಾಗಿ ನಮ್ಮ ಸಿನಿಮಾವನ್ನು ಕನ್ನಡಿಗರು ಗೆಲ್ಲಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ‘ಪಾಲಾರ್’ ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

‘ಪಾಲಾರ್‌’ ಟೈಟಲ್‌ ವಿಶೇಷತೆ ಏನು?

“ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎನ್ನುತ್ತಾರೆ ನಿರ್ದೇಶಕ ಜೀವಾ ನವೀನ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...