Homeಮುಖಪುಟದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

ದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

- Advertisement -
- Advertisement -

ದಮನಿತರ ಕತೆಯುಳ್ಳ ಕನ್ನಡದ ‘ಪಾಲಾರ್‌’ ಸಿನಿಮಾ ಟ್ರೇಲರ್‌‌ ಬಿಡುಗಡೆಯ ವೇಳೆ ವಿವಾದಗಳಿಗೆ ಗುರಿಯಾಗಿತ್ತು. ಜಾತಿಯ ವಿಷಯವನ್ನು ಢಾಳಾಗಿ ತೋರಿಸಿರುವ ಕಾರಣ ಹಲವು ಆಡಿಯೊ ಕಂಪನಿಗಳು ಟ್ರೇಲರ್‌ ಬಿಡುಗಡೆಗೆ ಒಪ್ಪಿಕೊಂಡಿಲ್ಲ ಎಂದು ಆರೋಪಿಸಿದ್ದ ಚಿತ್ರತಂಡ ತಮ್ಮದೇ ಯೂಟ್ಯೂಬ್‌ ಚಾನೆಲ್‌ ಮೂಲಕ ಬಿಡುಗಡೆ ಮಾಡಿತ್ತು. ತಮಿಳಿನ ಖ್ಯಾತ ನಿರ್ದೇಶಕ, ನಿರ್ಮಾಪಕ ಪ.ರಂಜಿತ್‌ ‘ಪಾಲಾರ್‌’ ಸಿನಿಮಾದ ಟ್ರೇಲರ್‌‌ ಹಂಚಿಕೊಂಡಿದ್ದರು. ಈಗ ಅಂತಿಮವಾಗಿ ಸಿನಿಮಾ ಸೆನ್ಸಾರ್‌ ಆಗಿದ್ದು ‘ಯು/ಎ’ ಸರ್ಟಿಫಿಕೇಟ್ ಪಡೆದು ಬಿಡುಗಡೆಗೆ ಸಿದ್ಧವಾಗಿದೆ.

“ಜೀವಾ ನವೀನ್ ನಿರ್ದೇಶನದ, ನಟಿ ವೈ.ಜಿ.ಉಮಾ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದ್ದು ಮುಂದಿನ ತಿಂಗಳು ತೆರೆಕಾಣಲಿದೆ” ಎಂದು ಚಿತ್ರತಂಡ ತಿಳಿಸಿದೆ.

“ಶೋಷಿತ ವರ್ಗಗಳ, ದಲಿತರ ನೈಜ ಘಟನೆಗಳನ್ನು ಆಧರಿಸಿ ತೆಗೆದ ಸಿನೆಮಾ ಇದಾಗಿದೆ. ತಮಿಳು, ತೆಲುಗು ಭಾಷೆಗಳಿಗೆ ಸೀಮಿತವಾಗಿದ್ದ ನೆಲದ ಕಥೆಯನ್ನು ಕನ್ನಡದಲ್ಲೂ ಹೇಳಲು ಹೊರಟಿರುವ ಸಿನೆಮಾ ಪಾಲಾರ್” ಎಂದು ‘ಪಾಲಾರ್‌’ ತಂಡ ಮಾಹಿತಿ ನೀಡಿದೆ.

“ಕೋಲಾರ, ಚಿಕ್ಕಬಳ್ಳಾಪುರ, ದೇವನಹಳ್ಳಿ ಸೊಗಡಿನ ಕನ್ನಡ ಭಾಷೆಯನ್ನು ಬಳಸಿದ ಕನ್ನಡದ ಮೊದಲ ಸಿನಿಮಾ ಇದಾಗಿದೆ. ಆಂಧ್ರಪ್ರದೇಶ, ಕರ್ನಾಟಕ ಗಡಿಭಾಗಗಳಲ್ಲಿ ಸಾಮಾನ್ಯವಾಗಿ ಹೆಚ್ಚಿನ ಅನ್ಯಾಯ ಅನುಭವಿಸುತ್ತಿರುವ ದಲಿತರ ಕಥೆಯನ್ನು ತೆರೆಗೆ ತರಲಾಗಿದೆ” ಎಂದಿದೆ.

“ಮಹಿಳೆ ತನ್ನ ಜೀವನದಲ್ಲಿ ಹೋರಾಟದ ಮೂಲಕ ಜಯವನ್ನು ಸಾಧಿಸಬಹುದು ಎಂದು ಇಲ್ಲಿ ತೋರಿಸಲಾಗಿದೆ. ಮರ್ಯಾದೆ ಹತ್ಯೆ, ಬಡವರ ಭೂಮಿ ಶ್ರೀಮಂತರ ಪಾಲಾಗುವುದು, ಜಮೀನ್ದಾರಿಗಳ ದೌರ್ಜನ್ಯ ಇತ್ಯಾದಿ ಪ್ರಮುಖ ಸಂಗತಿಗಳನ್ನು ಕತೆಯಲ್ಲಿ ತರಲಾಗಿದೆ” ಎಂದು ಹೇಳಿದೆ.

“ಸೆನ್ಸಾರ್ ಮುಗಿಸಿದ ಪಾಲಾರ್ ಸಿನೆಮಾಗೆ CBFC ಬೋರ್ಡ್ U/A (ಯು/ಎ) ಸರ್ಟಿಫಿಕೇಟ್ ನೀಡಿದೆ. ದಕ್ಷಿಣ ಭಾರತದ ಖ್ಯಾತ ನಟ ನಟಿಯರ, ಸಮಾಜದ ಮುಖಂಡರ, ಜನಸಾಮಾನ್ಯರ ಬೆಂಬಲ ಸಿಕ್ಕಿದೆ. ಈಗಾಗಲೇ ಪಾಲಾರ್ ಸಿನೆಮಾದ ಟ್ರೇಲರ್‌ ನೋಡಿ ಭರವಸೆ ವ್ಯಕ್ತಪಡಿಸಿದ್ದಾರೆ. ಪಾಲಾರ್ ಸಿನೆಮಾ ಗೆದ್ದರೆ ನಮ್ಮ ದೀನ ದಲಿತರ, ಬಡವರ, ನೆಲದ ಕಥೆಗಳು ಇನ್ನೂ ಹೆಚ್ಚಾಗಿ ಮೂಡಿ ಬರುತ್ತವೆ. ಇಲ್ಲವಾದಲ್ಲಿ ಇಂತಹ ಪ್ರಯತ್ನ ಯಾರೂ ಮಾಡುವುದಿಲ್ಲ. ಹೀಗಾಗಿ ನಮ್ಮ ಸಿನಿಮಾವನ್ನು ಕನ್ನಡಿಗರು ಗೆಲ್ಲಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ‘ಪಾಲಾರ್’ ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

‘ಪಾಲಾರ್‌’ ಟೈಟಲ್‌ ವಿಶೇಷತೆ ಏನು?

“ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎನ್ನುತ್ತಾರೆ ನಿರ್ದೇಶಕ ಜೀವಾ ನವೀನ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...