Homeಮುಖಪುಟದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

ದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

- Advertisement -
- Advertisement -

ದಮನಿತರ ಕತೆಯುಳ್ಳ ಕನ್ನಡದ ‘ಪಾಲಾರ್‌’ ಸಿನಿಮಾ ಟ್ರೇಲರ್‌‌ ಬಿಡುಗಡೆಯ ವೇಳೆ ವಿವಾದಗಳಿಗೆ ಗುರಿಯಾಗಿತ್ತು. ಜಾತಿಯ ವಿಷಯವನ್ನು ಢಾಳಾಗಿ ತೋರಿಸಿರುವ ಕಾರಣ ಹಲವು ಆಡಿಯೊ ಕಂಪನಿಗಳು ಟ್ರೇಲರ್‌ ಬಿಡುಗಡೆಗೆ ಒಪ್ಪಿಕೊಂಡಿಲ್ಲ ಎಂದು ಆರೋಪಿಸಿದ್ದ ಚಿತ್ರತಂಡ ತಮ್ಮದೇ ಯೂಟ್ಯೂಬ್‌ ಚಾನೆಲ್‌ ಮೂಲಕ ಬಿಡುಗಡೆ ಮಾಡಿತ್ತು. ತಮಿಳಿನ ಖ್ಯಾತ ನಿರ್ದೇಶಕ, ನಿರ್ಮಾಪಕ ಪ.ರಂಜಿತ್‌ ‘ಪಾಲಾರ್‌’ ಸಿನಿಮಾದ ಟ್ರೇಲರ್‌‌ ಹಂಚಿಕೊಂಡಿದ್ದರು. ಈಗ ಅಂತಿಮವಾಗಿ ಸಿನಿಮಾ ಸೆನ್ಸಾರ್‌ ಆಗಿದ್ದು ‘ಯು/ಎ’ ಸರ್ಟಿಫಿಕೇಟ್ ಪಡೆದು ಬಿಡುಗಡೆಗೆ ಸಿದ್ಧವಾಗಿದೆ.

“ಜೀವಾ ನವೀನ್ ನಿರ್ದೇಶನದ, ನಟಿ ವೈ.ಜಿ.ಉಮಾ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದ್ದು ಮುಂದಿನ ತಿಂಗಳು ತೆರೆಕಾಣಲಿದೆ” ಎಂದು ಚಿತ್ರತಂಡ ತಿಳಿಸಿದೆ.

“ಶೋಷಿತ ವರ್ಗಗಳ, ದಲಿತರ ನೈಜ ಘಟನೆಗಳನ್ನು ಆಧರಿಸಿ ತೆಗೆದ ಸಿನೆಮಾ ಇದಾಗಿದೆ. ತಮಿಳು, ತೆಲುಗು ಭಾಷೆಗಳಿಗೆ ಸೀಮಿತವಾಗಿದ್ದ ನೆಲದ ಕಥೆಯನ್ನು ಕನ್ನಡದಲ್ಲೂ ಹೇಳಲು ಹೊರಟಿರುವ ಸಿನೆಮಾ ಪಾಲಾರ್” ಎಂದು ‘ಪಾಲಾರ್‌’ ತಂಡ ಮಾಹಿತಿ ನೀಡಿದೆ.

“ಕೋಲಾರ, ಚಿಕ್ಕಬಳ್ಳಾಪುರ, ದೇವನಹಳ್ಳಿ ಸೊಗಡಿನ ಕನ್ನಡ ಭಾಷೆಯನ್ನು ಬಳಸಿದ ಕನ್ನಡದ ಮೊದಲ ಸಿನಿಮಾ ಇದಾಗಿದೆ. ಆಂಧ್ರಪ್ರದೇಶ, ಕರ್ನಾಟಕ ಗಡಿಭಾಗಗಳಲ್ಲಿ ಸಾಮಾನ್ಯವಾಗಿ ಹೆಚ್ಚಿನ ಅನ್ಯಾಯ ಅನುಭವಿಸುತ್ತಿರುವ ದಲಿತರ ಕಥೆಯನ್ನು ತೆರೆಗೆ ತರಲಾಗಿದೆ” ಎಂದಿದೆ.

“ಮಹಿಳೆ ತನ್ನ ಜೀವನದಲ್ಲಿ ಹೋರಾಟದ ಮೂಲಕ ಜಯವನ್ನು ಸಾಧಿಸಬಹುದು ಎಂದು ಇಲ್ಲಿ ತೋರಿಸಲಾಗಿದೆ. ಮರ್ಯಾದೆ ಹತ್ಯೆ, ಬಡವರ ಭೂಮಿ ಶ್ರೀಮಂತರ ಪಾಲಾಗುವುದು, ಜಮೀನ್ದಾರಿಗಳ ದೌರ್ಜನ್ಯ ಇತ್ಯಾದಿ ಪ್ರಮುಖ ಸಂಗತಿಗಳನ್ನು ಕತೆಯಲ್ಲಿ ತರಲಾಗಿದೆ” ಎಂದು ಹೇಳಿದೆ.

“ಸೆನ್ಸಾರ್ ಮುಗಿಸಿದ ಪಾಲಾರ್ ಸಿನೆಮಾಗೆ CBFC ಬೋರ್ಡ್ U/A (ಯು/ಎ) ಸರ್ಟಿಫಿಕೇಟ್ ನೀಡಿದೆ. ದಕ್ಷಿಣ ಭಾರತದ ಖ್ಯಾತ ನಟ ನಟಿಯರ, ಸಮಾಜದ ಮುಖಂಡರ, ಜನಸಾಮಾನ್ಯರ ಬೆಂಬಲ ಸಿಕ್ಕಿದೆ. ಈಗಾಗಲೇ ಪಾಲಾರ್ ಸಿನೆಮಾದ ಟ್ರೇಲರ್‌ ನೋಡಿ ಭರವಸೆ ವ್ಯಕ್ತಪಡಿಸಿದ್ದಾರೆ. ಪಾಲಾರ್ ಸಿನೆಮಾ ಗೆದ್ದರೆ ನಮ್ಮ ದೀನ ದಲಿತರ, ಬಡವರ, ನೆಲದ ಕಥೆಗಳು ಇನ್ನೂ ಹೆಚ್ಚಾಗಿ ಮೂಡಿ ಬರುತ್ತವೆ. ಇಲ್ಲವಾದಲ್ಲಿ ಇಂತಹ ಪ್ರಯತ್ನ ಯಾರೂ ಮಾಡುವುದಿಲ್ಲ. ಹೀಗಾಗಿ ನಮ್ಮ ಸಿನಿಮಾವನ್ನು ಕನ್ನಡಿಗರು ಗೆಲ್ಲಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ‘ಪಾಲಾರ್’ ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

‘ಪಾಲಾರ್‌’ ಟೈಟಲ್‌ ವಿಶೇಷತೆ ಏನು?

“ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎನ್ನುತ್ತಾರೆ ನಿರ್ದೇಶಕ ಜೀವಾ ನವೀನ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...