Homeಮುಖಪುಟದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

ದಮನಿತರ ಕತೆಯುಳ್ಳ ‘ಪಾಲಾರ್‌’ ಸಿನಿಮಾಕ್ಕೆ U/A ಸರ್ಟಿಫಿಕೇಟ್‌

- Advertisement -
- Advertisement -

ದಮನಿತರ ಕತೆಯುಳ್ಳ ಕನ್ನಡದ ‘ಪಾಲಾರ್‌’ ಸಿನಿಮಾ ಟ್ರೇಲರ್‌‌ ಬಿಡುಗಡೆಯ ವೇಳೆ ವಿವಾದಗಳಿಗೆ ಗುರಿಯಾಗಿತ್ತು. ಜಾತಿಯ ವಿಷಯವನ್ನು ಢಾಳಾಗಿ ತೋರಿಸಿರುವ ಕಾರಣ ಹಲವು ಆಡಿಯೊ ಕಂಪನಿಗಳು ಟ್ರೇಲರ್‌ ಬಿಡುಗಡೆಗೆ ಒಪ್ಪಿಕೊಂಡಿಲ್ಲ ಎಂದು ಆರೋಪಿಸಿದ್ದ ಚಿತ್ರತಂಡ ತಮ್ಮದೇ ಯೂಟ್ಯೂಬ್‌ ಚಾನೆಲ್‌ ಮೂಲಕ ಬಿಡುಗಡೆ ಮಾಡಿತ್ತು. ತಮಿಳಿನ ಖ್ಯಾತ ನಿರ್ದೇಶಕ, ನಿರ್ಮಾಪಕ ಪ.ರಂಜಿತ್‌ ‘ಪಾಲಾರ್‌’ ಸಿನಿಮಾದ ಟ್ರೇಲರ್‌‌ ಹಂಚಿಕೊಂಡಿದ್ದರು. ಈಗ ಅಂತಿಮವಾಗಿ ಸಿನಿಮಾ ಸೆನ್ಸಾರ್‌ ಆಗಿದ್ದು ‘ಯು/ಎ’ ಸರ್ಟಿಫಿಕೇಟ್ ಪಡೆದು ಬಿಡುಗಡೆಗೆ ಸಿದ್ಧವಾಗಿದೆ.

“ಜೀವಾ ನವೀನ್ ನಿರ್ದೇಶನದ, ನಟಿ ವೈ.ಜಿ.ಉಮಾ ಪ್ರಧಾನ ಪಾತ್ರದಲ್ಲಿ ಅಭಿನಯಿಸಿರುವ ಸಿನಿಮಾ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲು ಸಿದ್ಧವಾಗಿದೆ. ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದ್ದು ಮುಂದಿನ ತಿಂಗಳು ತೆರೆಕಾಣಲಿದೆ” ಎಂದು ಚಿತ್ರತಂಡ ತಿಳಿಸಿದೆ.

“ಶೋಷಿತ ವರ್ಗಗಳ, ದಲಿತರ ನೈಜ ಘಟನೆಗಳನ್ನು ಆಧರಿಸಿ ತೆಗೆದ ಸಿನೆಮಾ ಇದಾಗಿದೆ. ತಮಿಳು, ತೆಲುಗು ಭಾಷೆಗಳಿಗೆ ಸೀಮಿತವಾಗಿದ್ದ ನೆಲದ ಕಥೆಯನ್ನು ಕನ್ನಡದಲ್ಲೂ ಹೇಳಲು ಹೊರಟಿರುವ ಸಿನೆಮಾ ಪಾಲಾರ್” ಎಂದು ‘ಪಾಲಾರ್‌’ ತಂಡ ಮಾಹಿತಿ ನೀಡಿದೆ.

“ಕೋಲಾರ, ಚಿಕ್ಕಬಳ್ಳಾಪುರ, ದೇವನಹಳ್ಳಿ ಸೊಗಡಿನ ಕನ್ನಡ ಭಾಷೆಯನ್ನು ಬಳಸಿದ ಕನ್ನಡದ ಮೊದಲ ಸಿನಿಮಾ ಇದಾಗಿದೆ. ಆಂಧ್ರಪ್ರದೇಶ, ಕರ್ನಾಟಕ ಗಡಿಭಾಗಗಳಲ್ಲಿ ಸಾಮಾನ್ಯವಾಗಿ ಹೆಚ್ಚಿನ ಅನ್ಯಾಯ ಅನುಭವಿಸುತ್ತಿರುವ ದಲಿತರ ಕಥೆಯನ್ನು ತೆರೆಗೆ ತರಲಾಗಿದೆ” ಎಂದಿದೆ.

“ಮಹಿಳೆ ತನ್ನ ಜೀವನದಲ್ಲಿ ಹೋರಾಟದ ಮೂಲಕ ಜಯವನ್ನು ಸಾಧಿಸಬಹುದು ಎಂದು ಇಲ್ಲಿ ತೋರಿಸಲಾಗಿದೆ. ಮರ್ಯಾದೆ ಹತ್ಯೆ, ಬಡವರ ಭೂಮಿ ಶ್ರೀಮಂತರ ಪಾಲಾಗುವುದು, ಜಮೀನ್ದಾರಿಗಳ ದೌರ್ಜನ್ಯ ಇತ್ಯಾದಿ ಪ್ರಮುಖ ಸಂಗತಿಗಳನ್ನು ಕತೆಯಲ್ಲಿ ತರಲಾಗಿದೆ” ಎಂದು ಹೇಳಿದೆ.

“ಸೆನ್ಸಾರ್ ಮುಗಿಸಿದ ಪಾಲಾರ್ ಸಿನೆಮಾಗೆ CBFC ಬೋರ್ಡ್ U/A (ಯು/ಎ) ಸರ್ಟಿಫಿಕೇಟ್ ನೀಡಿದೆ. ದಕ್ಷಿಣ ಭಾರತದ ಖ್ಯಾತ ನಟ ನಟಿಯರ, ಸಮಾಜದ ಮುಖಂಡರ, ಜನಸಾಮಾನ್ಯರ ಬೆಂಬಲ ಸಿಕ್ಕಿದೆ. ಈಗಾಗಲೇ ಪಾಲಾರ್ ಸಿನೆಮಾದ ಟ್ರೇಲರ್‌ ನೋಡಿ ಭರವಸೆ ವ್ಯಕ್ತಪಡಿಸಿದ್ದಾರೆ. ಪಾಲಾರ್ ಸಿನೆಮಾ ಗೆದ್ದರೆ ನಮ್ಮ ದೀನ ದಲಿತರ, ಬಡವರ, ನೆಲದ ಕಥೆಗಳು ಇನ್ನೂ ಹೆಚ್ಚಾಗಿ ಮೂಡಿ ಬರುತ್ತವೆ. ಇಲ್ಲವಾದಲ್ಲಿ ಇಂತಹ ಪ್ರಯತ್ನ ಯಾರೂ ಮಾಡುವುದಿಲ್ಲ. ಹೀಗಾಗಿ ನಮ್ಮ ಸಿನಿಮಾವನ್ನು ಕನ್ನಡಿಗರು ಗೆಲ್ಲಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

ಇದನ್ನೂ ಓದಿರಿ: ‘ಪಾಲಾರ್’ ಸಿನಿಮಾ ಟ್ರೇಲರ್‌ ಬಿಡುಗಡೆ ಮಾಡಿದ ಖ್ಯಾತ ನಿರ್ದೇಶಕ ಪ.ರಂಜಿತ್

‘ಪಾಲಾರ್‌’ ಟೈಟಲ್‌ ವಿಶೇಷತೆ ಏನು?

“ನಂದಿ ಬೆಟ್ಟದಲ್ಲಿ ಹುಟ್ಟಿದ ಪಾಲಾರ್‌ ನದಿ ಕೋಲಾರದ ಬೇತಮಂಗಲವರೆಗೂ ಭೂಮಿಯ ಒಳಗಡೆಯೇ ಹರಿದು ಹೋಗುತ್ತದೆ. ಆ ನಂತರ ತಮಿಳುನಾಡು ನಾಡಿನಾದ್ಯಂತ ಹರಿದು ಸಮುದ್ರ ಸೇರುತ್ತದೆ. ನದಿ ಒಳಗಡೆಯೇ ಇದ್ದಾಗ ಬಿಸಿಯಾಗಿರುತ್ತದೆ. ಆ ಬಿಸಿ ಒಂದು ರೀತಿಯಲ್ಲಿ ರಕ್ತಕ್ಕೆ ಸಮಾನ. ದಲಿತರಲ್ಲೂ ಇದೇ ರೀತಿಯ ಕುದಿತ ಆಂತರ್ಯದಲ್ಲಿ ಅಡಗಿದೆ. ಸಂದರ್ಭ ಸಿಕ್ಕಾಗ ಅದು ಹೊರಬರುತ್ತದೆ. ಒಮ್ಮೆ ಆ ಆಕ್ರೋಶ ಸ್ಫೋಟಿಸಿದಾಗ ಏನಾಗುತ್ತದೆ ಎಂಬುದೇ ಈ ಪಾಲಾರ್‌ ಕಥೆ. ನದಿಗೂ ಮತ್ತು ನಮ್ಮ ಕಥೆಗೂ ಸಂಬಂಧವಿಲ್ಲ. ಒಂದು ರೂಪಕವಾಗಿ ಈ ಹೆಸರನ್ನು ಬಳಸಿದ್ದೇವೆ. ಪಾಲಾರ್‌ ಎಂಬ ಕಾಲ್ಪನಿಕ ಹಳ್ಳಿಯಲ್ಲಿ ನಮ್ಮ ಕಥೆ ನಡೆಯುತ್ತದೆ” ಎನ್ನುತ್ತಾರೆ ನಿರ್ದೇಶಕ ಜೀವಾ ನವೀನ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...