Homeಮುಖಪುಟಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

"ಮೈತ್ರಿಗೆ ನನ್ನನ್ನು ಆಹ್ವಾನಿಸುವ ಬದಲು ನಿಮ್ಮಿಂದ ಛಿದ್ರಗೊಂಡ ಹುತಾತ್ಮ 700 ರೈತರ ಕುಟುಂಬಗಳನ್ನು ಆಹ್ವಾನಿಸಿ" - ಜಯಂತ್ ಚೌಧರಿ

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಜೊತೆಗಿನ ಮೈತ್ರಿ ಆಹ್ವಾನವನ್ನು ರಾಷ್ಟ್ರೀಯ ಲೊಕ ದಳದ (RLD) ಮುಖ್ಯಸ್ಥ ಜಯಂತ್ ಚೌಧರಿ ತಿರಸ್ಕರಿಸಿದ್ದಾರೆ. ಮೈತ್ರಿಗೆ ನನ್ನನ್ನು ಆಹ್ವಾನಿಸುವ ಬದಲು ನಿಮ್ಮಿಂದ ಛಿದ್ರಗೊಂಡ ಹುತಾತ್ಮ 700 ರೈತರ ಕುಟುಂಬಗಳನ್ನು ಆಹ್ವಾನಿಸಿಯೆಂದು ಅವರ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ನವೆಂಬರ್‌ನಲ್ಲೆ ಸಮಾಜವಾದಿ ಪಕ್ಷದ ಜೊತೆ RLD ಮೈತ್ರಿ ಮಾಡಿಕೊಂಡಿದೆ. ಫೆಬ್ರವರಿ 10 ರಿಂದ ನಡೆಯಲ್ಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಎಸ್‌ಪಿ ಜೊತೆಗೂಡಿ ಸ್ಪರ್ಧಿಸುವುದ್ದಾಗಿ RLD ಮುಖ್ಯಸ್ಥ ಜಯಂತ್ ಚೌಧರಿ ಘೊಷಿಸಿದ್ದರು. RLD ಮತ್ತು ಸಮಾಜವಾದಿ ಪಕ್ಷದ ನಡುವೆ ಟಿಕೆಟ್ ಹಂಚಿಕೆ ಕಾರಣ ಭಿನಾಭಿಪ್ರಾಯಗಳು ಕಂಡಬಂದ ಕಾರಣ ಬಿಜೆಪಿಯು ಜಯಂತ್ ಚೌಧರಿಯವರಿಗೆ ಮೈತ್ರಿಗೆ ಆಹ್ವಾನಿಸಿತ್ತು.

 

ಬಿಜೆಪಿ ಸಂಸದ ಪರ್ವೇಶ್ ವರ್ಮಾ ‘ನಮ್ಮ ಪಕ್ಷದ ಬಾಗಿಲು ಚೌಧರಿಯವರಿಗಾಗಿ ಯಾವಗಲೂ ತೆರೆದಿದ್ದೆ’ ಎಂದು ಹೇಳಿದ್ದರು. ನಂತರ “ನಾವು ಜಯಂತ್ ಚೌಧರಿಯವರನ್ನು ಬಿಜೆಪಿಗೆ ಸ್ವಾಗತಿಸಲು ತಯಾರಿದ್ದೆವು ಆದರೆ ಅವರು ತಪ್ಪು ದಾರಿಯನ್ನು ಆಯ್ಕೆ ಮಾಡಿದ್ದಾರೆ” ಹಾಗೆ “ಜಾಟ್ ಸಮುದಾಯದ ಜನರು ಅವರೊಂದಿಗೆ ಮಾತನಾಡಬೇಕು” ಎಂದು ಪರ್ವೇಶ್ ವರ್ಮಾ ಹೇಳಿಕೆ ನೀಡಿರುವದ್ದಾಗಿ ANI ವರದಿ ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ RLD ಮುಖ್ಯಸ್ಥ ಜಯಂತ್ ಚೌಧರಿ ತಪ್ಪು ದಾರಿ ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಜಯಂತ್ ಚೌಧರಿ “ಮೈತ್ರಿಗೆ ನನ್ನನ್ನು ಆಹ್ವಾನಿಸುವ ಬದಲು ನಿಮ್ಮಿಂದ ಛಿದ್ರಗೊಂಡ ಹುತಾತ್ಮ 700 ರೈತರ ಕುಟುಂಬಗಳನ್ನು ಆಹ್ವಾನಿಸಿ” ಎಂದು ಕಿಡಿಕಾರಿದ್ದಾರೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಕೃಷಿ ಕಾಯ್ದೆಗಳ ವಿರುದ್ಧ ಮತ್ತು ಎಂಎಸ್‌ಪಿ ಜಾರಿಗಾಗಿ ದಿಟ್ಟ ಹೋರಾಟ ನಡೆಸಿದ ರೈತ ಹೋರಾಟವನ್ನು ಉಲ್ಲೇಖಿಸಿರುವ ಅವರು ಈ ವೇಳೆ ಸಾವನಪ್ಪಿದ ರೈತ ಕುಟುಂಬಗಳ ಆಕ್ರೋಶವನ್ನು ನೆನಪಿಸಿದ್ದಾರೆ.

ರೈತ ಹೋರಾಟದ ಪರಿಣಾಮವಾಗಿ ಜಾಟ್ ಸಮುದಾಯದ ಮತಗಳನ್ನು ಕಳೆದುಕೊಳ್ಳುವ ಭಯದಲ್ಲಿರುವ ಬಿಜೆಪಿ RLDಯೊಡನೆ ಮೈತ್ರಿ ಮಾಡಿ ಜಾಟ್ ಸಮುದಾಯದ ಮತಗಳನ್ನು ಭದ್ರಪಡಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಆದರೆ ಆರ್‌ಎಲ್‌ಡಿ ಅದಕ್ಕೆ ಅವಕಾಶ ನೀಡುತ್ತಿಲ್ಲ. ಅವರು ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿ ಮುಂದುವರೆಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್‌ರವರು ಹಲವಾರು ಪ್ರಾದೇಶಕ ಪಕ್ಷಗಳೊಡನೆ ಮೈತ್ರಿ ಮಾಡಿಕೊಳ್ಳುವುದಾಗಿ ಕೆಲವು ತಿಂಗಳ ಹಿಂದೆಯೇ ಹೇಳಿದ್ದರು. ಇದರಲ್ಲಿ ಓಂ ಪ್ರಕಾಶ್ ರಾಜಬಾರ್ ನಾಯಕತ್ವದ ಭಾರತೀಯ ಸಮಾಜ ಪಾರ್ಟಿ, ಜಯಂತ್ ಚೌಧರಿಯವರ RLD, ಮೋಹನ್ ದಳ ಮತ್ತು ಜನವಾದಿ ಪಾರ್ಟಿಗಳು ಸೇರಿವೆ.


ಇದನ್ನೂ ಓದಿ:ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...