Homeಮುಖಪುಟಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

"ಮೈತ್ರಿಗೆ ನನ್ನನ್ನು ಆಹ್ವಾನಿಸುವ ಬದಲು ನಿಮ್ಮಿಂದ ಛಿದ್ರಗೊಂಡ ಹುತಾತ್ಮ 700 ರೈತರ ಕುಟುಂಬಗಳನ್ನು ಆಹ್ವಾನಿಸಿ" - ಜಯಂತ್ ಚೌಧರಿ

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಜೊತೆಗಿನ ಮೈತ್ರಿ ಆಹ್ವಾನವನ್ನು ರಾಷ್ಟ್ರೀಯ ಲೊಕ ದಳದ (RLD) ಮುಖ್ಯಸ್ಥ ಜಯಂತ್ ಚೌಧರಿ ತಿರಸ್ಕರಿಸಿದ್ದಾರೆ. ಮೈತ್ರಿಗೆ ನನ್ನನ್ನು ಆಹ್ವಾನಿಸುವ ಬದಲು ನಿಮ್ಮಿಂದ ಛಿದ್ರಗೊಂಡ ಹುತಾತ್ಮ 700 ರೈತರ ಕುಟುಂಬಗಳನ್ನು ಆಹ್ವಾನಿಸಿಯೆಂದು ಅವರ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ನವೆಂಬರ್‌ನಲ್ಲೆ ಸಮಾಜವಾದಿ ಪಕ್ಷದ ಜೊತೆ RLD ಮೈತ್ರಿ ಮಾಡಿಕೊಂಡಿದೆ. ಫೆಬ್ರವರಿ 10 ರಿಂದ ನಡೆಯಲ್ಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಎಸ್‌ಪಿ ಜೊತೆಗೂಡಿ ಸ್ಪರ್ಧಿಸುವುದ್ದಾಗಿ RLD ಮುಖ್ಯಸ್ಥ ಜಯಂತ್ ಚೌಧರಿ ಘೊಷಿಸಿದ್ದರು. RLD ಮತ್ತು ಸಮಾಜವಾದಿ ಪಕ್ಷದ ನಡುವೆ ಟಿಕೆಟ್ ಹಂಚಿಕೆ ಕಾರಣ ಭಿನಾಭಿಪ್ರಾಯಗಳು ಕಂಡಬಂದ ಕಾರಣ ಬಿಜೆಪಿಯು ಜಯಂತ್ ಚೌಧರಿಯವರಿಗೆ ಮೈತ್ರಿಗೆ ಆಹ್ವಾನಿಸಿತ್ತು.

 

ಬಿಜೆಪಿ ಸಂಸದ ಪರ್ವೇಶ್ ವರ್ಮಾ ‘ನಮ್ಮ ಪಕ್ಷದ ಬಾಗಿಲು ಚೌಧರಿಯವರಿಗಾಗಿ ಯಾವಗಲೂ ತೆರೆದಿದ್ದೆ’ ಎಂದು ಹೇಳಿದ್ದರು. ನಂತರ “ನಾವು ಜಯಂತ್ ಚೌಧರಿಯವರನ್ನು ಬಿಜೆಪಿಗೆ ಸ್ವಾಗತಿಸಲು ತಯಾರಿದ್ದೆವು ಆದರೆ ಅವರು ತಪ್ಪು ದಾರಿಯನ್ನು ಆಯ್ಕೆ ಮಾಡಿದ್ದಾರೆ” ಹಾಗೆ “ಜಾಟ್ ಸಮುದಾಯದ ಜನರು ಅವರೊಂದಿಗೆ ಮಾತನಾಡಬೇಕು” ಎಂದು ಪರ್ವೇಶ್ ವರ್ಮಾ ಹೇಳಿಕೆ ನೀಡಿರುವದ್ದಾಗಿ ANI ವರದಿ ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ RLD ಮುಖ್ಯಸ್ಥ ಜಯಂತ್ ಚೌಧರಿ ತಪ್ಪು ದಾರಿ ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಜಯಂತ್ ಚೌಧರಿ “ಮೈತ್ರಿಗೆ ನನ್ನನ್ನು ಆಹ್ವಾನಿಸುವ ಬದಲು ನಿಮ್ಮಿಂದ ಛಿದ್ರಗೊಂಡ ಹುತಾತ್ಮ 700 ರೈತರ ಕುಟುಂಬಗಳನ್ನು ಆಹ್ವಾನಿಸಿ” ಎಂದು ಕಿಡಿಕಾರಿದ್ದಾರೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಕೃಷಿ ಕಾಯ್ದೆಗಳ ವಿರುದ್ಧ ಮತ್ತು ಎಂಎಸ್‌ಪಿ ಜಾರಿಗಾಗಿ ದಿಟ್ಟ ಹೋರಾಟ ನಡೆಸಿದ ರೈತ ಹೋರಾಟವನ್ನು ಉಲ್ಲೇಖಿಸಿರುವ ಅವರು ಈ ವೇಳೆ ಸಾವನಪ್ಪಿದ ರೈತ ಕುಟುಂಬಗಳ ಆಕ್ರೋಶವನ್ನು ನೆನಪಿಸಿದ್ದಾರೆ.

ರೈತ ಹೋರಾಟದ ಪರಿಣಾಮವಾಗಿ ಜಾಟ್ ಸಮುದಾಯದ ಮತಗಳನ್ನು ಕಳೆದುಕೊಳ್ಳುವ ಭಯದಲ್ಲಿರುವ ಬಿಜೆಪಿ RLDಯೊಡನೆ ಮೈತ್ರಿ ಮಾಡಿ ಜಾಟ್ ಸಮುದಾಯದ ಮತಗಳನ್ನು ಭದ್ರಪಡಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಆದರೆ ಆರ್‌ಎಲ್‌ಡಿ ಅದಕ್ಕೆ ಅವಕಾಶ ನೀಡುತ್ತಿಲ್ಲ. ಅವರು ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿ ಮುಂದುವರೆಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್‌ರವರು ಹಲವಾರು ಪ್ರಾದೇಶಕ ಪಕ್ಷಗಳೊಡನೆ ಮೈತ್ರಿ ಮಾಡಿಕೊಳ್ಳುವುದಾಗಿ ಕೆಲವು ತಿಂಗಳ ಹಿಂದೆಯೇ ಹೇಳಿದ್ದರು. ಇದರಲ್ಲಿ ಓಂ ಪ್ರಕಾಶ್ ರಾಜಬಾರ್ ನಾಯಕತ್ವದ ಭಾರತೀಯ ಸಮಾಜ ಪಾರ್ಟಿ, ಜಯಂತ್ ಚೌಧರಿಯವರ RLD, ಮೋಹನ್ ದಳ ಮತ್ತು ಜನವಾದಿ ಪಾರ್ಟಿಗಳು ಸೇರಿವೆ.


ಇದನ್ನೂ ಓದಿ:ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...