Homeಮುಖಪುಟಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

ಯುಪಿ ಚುನಾವಣೆ: ಬಿಜೆಪಿ ಮೈತ್ರಿ ಆಹ್ವಾನ ತಿರಸ್ಕರಿಸಿದ RLD ಮುಖ್ಯಸ್ಥ ಜಯಂತ್ ಚೌಧರಿ

"ಮೈತ್ರಿಗೆ ನನ್ನನ್ನು ಆಹ್ವಾನಿಸುವ ಬದಲು ನಿಮ್ಮಿಂದ ಛಿದ್ರಗೊಂಡ ಹುತಾತ್ಮ 700 ರೈತರ ಕುಟುಂಬಗಳನ್ನು ಆಹ್ವಾನಿಸಿ" - ಜಯಂತ್ ಚೌಧರಿ

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಗೆ ಬಿಜೆಪಿ ಜೊತೆಗಿನ ಮೈತ್ರಿ ಆಹ್ವಾನವನ್ನು ರಾಷ್ಟ್ರೀಯ ಲೊಕ ದಳದ (RLD) ಮುಖ್ಯಸ್ಥ ಜಯಂತ್ ಚೌಧರಿ ತಿರಸ್ಕರಿಸಿದ್ದಾರೆ. ಮೈತ್ರಿಗೆ ನನ್ನನ್ನು ಆಹ್ವಾನಿಸುವ ಬದಲು ನಿಮ್ಮಿಂದ ಛಿದ್ರಗೊಂಡ ಹುತಾತ್ಮ 700 ರೈತರ ಕುಟುಂಬಗಳನ್ನು ಆಹ್ವಾನಿಸಿಯೆಂದು ಅವರ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಕಳೆದ ನವೆಂಬರ್‌ನಲ್ಲೆ ಸಮಾಜವಾದಿ ಪಕ್ಷದ ಜೊತೆ RLD ಮೈತ್ರಿ ಮಾಡಿಕೊಂಡಿದೆ. ಫೆಬ್ರವರಿ 10 ರಿಂದ ನಡೆಯಲ್ಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಎಸ್‌ಪಿ ಜೊತೆಗೂಡಿ ಸ್ಪರ್ಧಿಸುವುದ್ದಾಗಿ RLD ಮುಖ್ಯಸ್ಥ ಜಯಂತ್ ಚೌಧರಿ ಘೊಷಿಸಿದ್ದರು. RLD ಮತ್ತು ಸಮಾಜವಾದಿ ಪಕ್ಷದ ನಡುವೆ ಟಿಕೆಟ್ ಹಂಚಿಕೆ ಕಾರಣ ಭಿನಾಭಿಪ್ರಾಯಗಳು ಕಂಡಬಂದ ಕಾರಣ ಬಿಜೆಪಿಯು ಜಯಂತ್ ಚೌಧರಿಯವರಿಗೆ ಮೈತ್ರಿಗೆ ಆಹ್ವಾನಿಸಿತ್ತು.

 

ಬಿಜೆಪಿ ಸಂಸದ ಪರ್ವೇಶ್ ವರ್ಮಾ ‘ನಮ್ಮ ಪಕ್ಷದ ಬಾಗಿಲು ಚೌಧರಿಯವರಿಗಾಗಿ ಯಾವಗಲೂ ತೆರೆದಿದ್ದೆ’ ಎಂದು ಹೇಳಿದ್ದರು. ನಂತರ “ನಾವು ಜಯಂತ್ ಚೌಧರಿಯವರನ್ನು ಬಿಜೆಪಿಗೆ ಸ್ವಾಗತಿಸಲು ತಯಾರಿದ್ದೆವು ಆದರೆ ಅವರು ತಪ್ಪು ದಾರಿಯನ್ನು ಆಯ್ಕೆ ಮಾಡಿದ್ದಾರೆ” ಹಾಗೆ “ಜಾಟ್ ಸಮುದಾಯದ ಜನರು ಅವರೊಂದಿಗೆ ಮಾತನಾಡಬೇಕು” ಎಂದು ಪರ್ವೇಶ್ ವರ್ಮಾ ಹೇಳಿಕೆ ನೀಡಿರುವದ್ದಾಗಿ ANI ವರದಿ ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ RLD ಮುಖ್ಯಸ್ಥ ಜಯಂತ್ ಚೌಧರಿ ತಪ್ಪು ದಾರಿ ಆಯ್ಕೆ ಮಾಡಿದ್ದಾರೆ ಎಂದು ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಇದಕ್ಕೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಜಯಂತ್ ಚೌಧರಿ “ಮೈತ್ರಿಗೆ ನನ್ನನ್ನು ಆಹ್ವಾನಿಸುವ ಬದಲು ನಿಮ್ಮಿಂದ ಛಿದ್ರಗೊಂಡ ಹುತಾತ್ಮ 700 ರೈತರ ಕುಟುಂಬಗಳನ್ನು ಆಹ್ವಾನಿಸಿ” ಎಂದು ಕಿಡಿಕಾರಿದ್ದಾರೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಕೃಷಿ ಕಾಯ್ದೆಗಳ ವಿರುದ್ಧ ಮತ್ತು ಎಂಎಸ್‌ಪಿ ಜಾರಿಗಾಗಿ ದಿಟ್ಟ ಹೋರಾಟ ನಡೆಸಿದ ರೈತ ಹೋರಾಟವನ್ನು ಉಲ್ಲೇಖಿಸಿರುವ ಅವರು ಈ ವೇಳೆ ಸಾವನಪ್ಪಿದ ರೈತ ಕುಟುಂಬಗಳ ಆಕ್ರೋಶವನ್ನು ನೆನಪಿಸಿದ್ದಾರೆ.

ರೈತ ಹೋರಾಟದ ಪರಿಣಾಮವಾಗಿ ಜಾಟ್ ಸಮುದಾಯದ ಮತಗಳನ್ನು ಕಳೆದುಕೊಳ್ಳುವ ಭಯದಲ್ಲಿರುವ ಬಿಜೆಪಿ RLDಯೊಡನೆ ಮೈತ್ರಿ ಮಾಡಿ ಜಾಟ್ ಸಮುದಾಯದ ಮತಗಳನ್ನು ಭದ್ರಪಡಿಸಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಆದರೆ ಆರ್‌ಎಲ್‌ಡಿ ಅದಕ್ಕೆ ಅವಕಾಶ ನೀಡುತ್ತಿಲ್ಲ. ಅವರು ಸಮಾಜವಾದಿ ಪಕ್ಷದ ಜೊತೆಗೆ ಮೈತ್ರಿ ಮುಂದುವರೆಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್‌ರವರು ಹಲವಾರು ಪ್ರಾದೇಶಕ ಪಕ್ಷಗಳೊಡನೆ ಮೈತ್ರಿ ಮಾಡಿಕೊಳ್ಳುವುದಾಗಿ ಕೆಲವು ತಿಂಗಳ ಹಿಂದೆಯೇ ಹೇಳಿದ್ದರು. ಇದರಲ್ಲಿ ಓಂ ಪ್ರಕಾಶ್ ರಾಜಬಾರ್ ನಾಯಕತ್ವದ ಭಾರತೀಯ ಸಮಾಜ ಪಾರ್ಟಿ, ಜಯಂತ್ ಚೌಧರಿಯವರ RLD, ಮೋಹನ್ ದಳ ಮತ್ತು ಜನವಾದಿ ಪಾರ್ಟಿಗಳು ಸೇರಿವೆ.


ಇದನ್ನೂ ಓದಿ:ಲವ್‌ ಜಿಹಾದ್‌, ಗೋ ಹತ್ಯೆ ನಿಷೇಧದಂತಹ ನಾಟಕಗಳು ಬಿಜೆಪಿಯನ್ನು ಗೆಲ್ಲಿಸುವುದಿಲ್ಲ- ‌ RLD ಮುಖ್ಯಸ್ಥ ಜಯಂತ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...