Homeಮುಖಪುಟಹಿಂದೂ ಸಂತ್ರಸ್ತರ ಮನೆಗೆ ಭೇಟಿಕೊಟ್ಟು ಮುಸ್ಲಿಂ ಸಂತ್ರಸ್ತರ ಮನೆಗೆ ಹೋಗದ ಯಪಿ ಸಚಿವ. ಭಾರೀ ಟೀಕೆ...

ಹಿಂದೂ ಸಂತ್ರಸ್ತರ ಮನೆಗೆ ಭೇಟಿಕೊಟ್ಟು ಮುಸ್ಲಿಂ ಸಂತ್ರಸ್ತರ ಮನೆಗೆ ಹೋಗದ ಯಪಿ ಸಚಿವ. ಭಾರೀ ಟೀಕೆ…

- Advertisement -
- Advertisement -

ಕಳೆದ ಶುಕ್ರವಾರ ನಡೆದ ಹಿಂಸಾಚಾರದಲ್ಲಿ ಗಾಯಾಳುಗಳಾದ ಪೀಡಿತರನ್ನು ಭೇಟಿಯಾಗಲು ಬಿಜ್ನೋರ್ ಜಿಲ್ಲೆಗೆ ಭೇಟಿ ನೀಡಿದ್ದ ಉತ್ತರ ಪ್ರದೇಶದ ಮಂತ್ರಿಯೊಬ್ಬರು ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರದಲ್ಲಿ ಮೃತಪಟ್ಟ ಇಬ್ಬರು ಮುಸ್ಲಿಂ ಪುರುಷರ ಕುಟುಂಬಗಳೊಂದಿಗೆ ಭೇಟಿಯಾಗಲು ನಿರಾಕರಿಸಿದ್ದರಿಂದ ವಿವಾದಕ್ಕೆ ಕಾರಣವಾಗಿದೆ.

ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಜಿಲ್ಲೆಯ ನೆಹತೌರ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ಓಂ ರಾಜ್ ಸೈನಿ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಲು ಹೋಗಿದ್ದರು. ಇದೇ ಪ್ರದೇಶದಲ್ಲಿ ಈ ಎರಡು ಸಾವುಗಳು ಸಂಭವಿಸಿವೆ.

ಸೈನಿ ಮತ್ತು ಅವರ ಕುಟುಂಬದೊಂದಿಗೆ ಭೇಟಿಯಾದ ನಂತರ ಬಿಜ್ನೋರ್‌ರ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ, ಅಗರ್ವಾಲ್ ಅವರನ್ನು ಇಬ್ಬರು ಮುಸ್ಲಿಂ ಪುರುಷರ ಕುಟುಂಬಗಳಿಗೆ ಏಕೆ ಭೇಟಿಕೊಡಲಿಲ್ಲ ಎಂದು ಕೇಳಲಾಯಿತು.

“ಸರ್ಕಾರ ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಒಟ್ಟಾಗಿ, ಎಲ್ಲರಿಗೂ ಅಭಿವೃದ್ಧಿ)’ ಎಂದು ಹೇಳುತ್ತದೆ. ನೆಹತೌರ್‌ನಲ್ಲಿ ನೀವು ಓಂ ರಾಜ್ ಸೈನಿ ಅವರ ಮನೆಗೆ ಹೋಗಿದ್ದೀರಿ. ಪ್ರಿಯಾಂಕಾ ಗಾಂಧಿ ಸಹ ಅವರ ಕುಟುಂಬವನ್ನೂ ಭೇಟಿ ಮಾಡಿದರು, ಆದರೆ ನಂತರ ಅವರು ಸಾವನಪ್ಪಿದ ಇತರ ಎರಡು ಕುಟುಂಬಗಳಿಗೂ ಹೋದರು. ಆದರೆ ನೀವು ಆ ಕುಟುಂಬಗಳಿಗ ಹೋಗಲಿಲ್ಲ. ಇದು ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಈ ರೀತಿ ಹೇಗೆ ಆಗುತ್ತದೆ?” ಎಂದು ವರದಿಗಾರರೊಬ್ಬರು ಸಚಿವರನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಮುಖಂಡ ಪ್ರಿಯಾಂಕಾ ಗಾಂಧಿ ಬಿಜ್ನೋರ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿಯಾದರು.

ಇದರಲ್ಲಿನ ಧರ್ಮದ ತಾರತಮ್ಯದ ಆರೋಪಗಳನ್ನು ಸ್ವೀಕರಿಸಲು ಸಚಿವರು ನಿರಾಕರಿಸಿದರು, “ನಾನು ಯಾಕೆ ಗಲಭೆಕೋರರ ಮನೆಗಳಿಗೆ ಹೋಗಬೇಕು. ನನ್ನ ಮಾತುಗಳನ್ನು ಕೇಳಿ. ಗಲಭೆ ಮತ್ತು ಭಾವೋದ್ರೇಕಗಳನ್ನು ಉಂಟುಮಾಡುವವರು ಹೇಗೆ ಸಮಾಜದ ಭಾಗವಾಗುತ್ತಾರೆ. ನಾನು ಯಾಕೆ ಅಲ್ಲಿಗೆ ಹೋಗಬೇಕು “ಇದು ಹಿಂದೂ-ಮುಸ್ಲಿಂ ಬಗ್ಗೆ ಅಲ್ಲ. ನಾನು ಯಾಕೆ ದಂಗೆಕೋರರ ಮನೆಗೆ ಏಕೆ ಹೋಗಬೇಕು?” ಎಂದಿದ್ದಾರೆ.

ಓಂ ರಾಜ್ ಅವರ ಕುಟುಂಬವು ಅವರು ಯಾವುದೇ ಗಲಾಟೆಗಳಲ್ಲಿ ಭಾಗಿಯಾಗಿರಲಿಲ್ಲ ಮತ್ತು ಅವರು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಗುಂಡು ಹಾರಿಸಿದಾಗ ಅವರು ಹೊಲಗಳಿಂದ ಹಿಂದಿರುಗುತ್ತಿದ್ದರು ಎಂದು ಸಚಿವರು ಹೇಳಿದ್ದಾರೆ.

ಧರ್ಮವನ್ನು ಪೌರತ್ವಕ್ಕೆ ಮಾನದಂಡವನ್ನಾಗಿ ಮಾಡುವ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಪ್ರತಿಭಟನೆಯ ಸಮಯದಲ್ಲಾದ ಹಿಂಸಾಚಾರದಲ್ಲಿ ಉತ್ತರಪ್ರದೇಶದಾದ್ಯಂತ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. ಸಚಿವರ ಈ ವರ್ತನೆಗೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರದ ಹಿಂಸಾಚಾರದ ಸಂದರ್ಭದಲ್ಲಿ ಬಿಜ್ನೋರ್‌ನಲ್ಲಿ ಐಎಎಸ್ ಆಕಾಂಕ್ಷಿಯಾದ 20 ವರ್ಷದ ಸುಲೇಮಾನ್ ಮತ್ತು 25 ವರ್ಷದ ಅನಸ್ ಮೃತಪಟ್ಟಿದ್ದಾರೆ. ಆರಂಭಿಕ ನಿರಾಕರಣೆಯ ನಂತರ, ಸ್ಥಳೀಯ ಪೊಲೀಸರ ಗುಂಡಿನಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ಆತ್ಮರಕ್ಷಣೆಗಾಗಿ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸುಲೇಮಾನ್ ಅವರ ಕುಟುಂಬ ಇದನ್ನು ನಿರಾಕರಿಸಿದೆ ಮತ್ತು ಪ್ರತಿಭಟನೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...