Homeಮುಖಪುಟಹಿಂದೂ ಸಂತ್ರಸ್ತರ ಮನೆಗೆ ಭೇಟಿಕೊಟ್ಟು ಮುಸ್ಲಿಂ ಸಂತ್ರಸ್ತರ ಮನೆಗೆ ಹೋಗದ ಯಪಿ ಸಚಿವ. ಭಾರೀ ಟೀಕೆ...

ಹಿಂದೂ ಸಂತ್ರಸ್ತರ ಮನೆಗೆ ಭೇಟಿಕೊಟ್ಟು ಮುಸ್ಲಿಂ ಸಂತ್ರಸ್ತರ ಮನೆಗೆ ಹೋಗದ ಯಪಿ ಸಚಿವ. ಭಾರೀ ಟೀಕೆ…

- Advertisement -
- Advertisement -

ಕಳೆದ ಶುಕ್ರವಾರ ನಡೆದ ಹಿಂಸಾಚಾರದಲ್ಲಿ ಗಾಯಾಳುಗಳಾದ ಪೀಡಿತರನ್ನು ಭೇಟಿಯಾಗಲು ಬಿಜ್ನೋರ್ ಜಿಲ್ಲೆಗೆ ಭೇಟಿ ನೀಡಿದ್ದ ಉತ್ತರ ಪ್ರದೇಶದ ಮಂತ್ರಿಯೊಬ್ಬರು ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರದಲ್ಲಿ ಮೃತಪಟ್ಟ ಇಬ್ಬರು ಮುಸ್ಲಿಂ ಪುರುಷರ ಕುಟುಂಬಗಳೊಂದಿಗೆ ಭೇಟಿಯಾಗಲು ನಿರಾಕರಿಸಿದ್ದರಿಂದ ವಿವಾದಕ್ಕೆ ಕಾರಣವಾಗಿದೆ.

ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಜಿಲ್ಲೆಯ ನೆಹತೌರ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ಓಂ ರಾಜ್ ಸೈನಿ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಲು ಹೋಗಿದ್ದರು. ಇದೇ ಪ್ರದೇಶದಲ್ಲಿ ಈ ಎರಡು ಸಾವುಗಳು ಸಂಭವಿಸಿವೆ.

ಸೈನಿ ಮತ್ತು ಅವರ ಕುಟುಂಬದೊಂದಿಗೆ ಭೇಟಿಯಾದ ನಂತರ ಬಿಜ್ನೋರ್‌ರ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ, ಅಗರ್ವಾಲ್ ಅವರನ್ನು ಇಬ್ಬರು ಮುಸ್ಲಿಂ ಪುರುಷರ ಕುಟುಂಬಗಳಿಗೆ ಏಕೆ ಭೇಟಿಕೊಡಲಿಲ್ಲ ಎಂದು ಕೇಳಲಾಯಿತು.

“ಸರ್ಕಾರ ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಒಟ್ಟಾಗಿ, ಎಲ್ಲರಿಗೂ ಅಭಿವೃದ್ಧಿ)’ ಎಂದು ಹೇಳುತ್ತದೆ. ನೆಹತೌರ್‌ನಲ್ಲಿ ನೀವು ಓಂ ರಾಜ್ ಸೈನಿ ಅವರ ಮನೆಗೆ ಹೋಗಿದ್ದೀರಿ. ಪ್ರಿಯಾಂಕಾ ಗಾಂಧಿ ಸಹ ಅವರ ಕುಟುಂಬವನ್ನೂ ಭೇಟಿ ಮಾಡಿದರು, ಆದರೆ ನಂತರ ಅವರು ಸಾವನಪ್ಪಿದ ಇತರ ಎರಡು ಕುಟುಂಬಗಳಿಗೂ ಹೋದರು. ಆದರೆ ನೀವು ಆ ಕುಟುಂಬಗಳಿಗ ಹೋಗಲಿಲ್ಲ. ಇದು ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಈ ರೀತಿ ಹೇಗೆ ಆಗುತ್ತದೆ?” ಎಂದು ವರದಿಗಾರರೊಬ್ಬರು ಸಚಿವರನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಮುಖಂಡ ಪ್ರಿಯಾಂಕಾ ಗಾಂಧಿ ಬಿಜ್ನೋರ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿಯಾದರು.

ಇದರಲ್ಲಿನ ಧರ್ಮದ ತಾರತಮ್ಯದ ಆರೋಪಗಳನ್ನು ಸ್ವೀಕರಿಸಲು ಸಚಿವರು ನಿರಾಕರಿಸಿದರು, “ನಾನು ಯಾಕೆ ಗಲಭೆಕೋರರ ಮನೆಗಳಿಗೆ ಹೋಗಬೇಕು. ನನ್ನ ಮಾತುಗಳನ್ನು ಕೇಳಿ. ಗಲಭೆ ಮತ್ತು ಭಾವೋದ್ರೇಕಗಳನ್ನು ಉಂಟುಮಾಡುವವರು ಹೇಗೆ ಸಮಾಜದ ಭಾಗವಾಗುತ್ತಾರೆ. ನಾನು ಯಾಕೆ ಅಲ್ಲಿಗೆ ಹೋಗಬೇಕು “ಇದು ಹಿಂದೂ-ಮುಸ್ಲಿಂ ಬಗ್ಗೆ ಅಲ್ಲ. ನಾನು ಯಾಕೆ ದಂಗೆಕೋರರ ಮನೆಗೆ ಏಕೆ ಹೋಗಬೇಕು?” ಎಂದಿದ್ದಾರೆ.

ಓಂ ರಾಜ್ ಅವರ ಕುಟುಂಬವು ಅವರು ಯಾವುದೇ ಗಲಾಟೆಗಳಲ್ಲಿ ಭಾಗಿಯಾಗಿರಲಿಲ್ಲ ಮತ್ತು ಅವರು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಗುಂಡು ಹಾರಿಸಿದಾಗ ಅವರು ಹೊಲಗಳಿಂದ ಹಿಂದಿರುಗುತ್ತಿದ್ದರು ಎಂದು ಸಚಿವರು ಹೇಳಿದ್ದಾರೆ.

ಧರ್ಮವನ್ನು ಪೌರತ್ವಕ್ಕೆ ಮಾನದಂಡವನ್ನಾಗಿ ಮಾಡುವ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಪ್ರತಿಭಟನೆಯ ಸಮಯದಲ್ಲಾದ ಹಿಂಸಾಚಾರದಲ್ಲಿ ಉತ್ತರಪ್ರದೇಶದಾದ್ಯಂತ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. ಸಚಿವರ ಈ ವರ್ತನೆಗೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರದ ಹಿಂಸಾಚಾರದ ಸಂದರ್ಭದಲ್ಲಿ ಬಿಜ್ನೋರ್‌ನಲ್ಲಿ ಐಎಎಸ್ ಆಕಾಂಕ್ಷಿಯಾದ 20 ವರ್ಷದ ಸುಲೇಮಾನ್ ಮತ್ತು 25 ವರ್ಷದ ಅನಸ್ ಮೃತಪಟ್ಟಿದ್ದಾರೆ. ಆರಂಭಿಕ ನಿರಾಕರಣೆಯ ನಂತರ, ಸ್ಥಳೀಯ ಪೊಲೀಸರ ಗುಂಡಿನಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ಆತ್ಮರಕ್ಷಣೆಗಾಗಿ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸುಲೇಮಾನ್ ಅವರ ಕುಟುಂಬ ಇದನ್ನು ನಿರಾಕರಿಸಿದೆ ಮತ್ತು ಪ್ರತಿಭಟನೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...