Homeಮುಖಪುಟಹಿಂದೂ ಸಂತ್ರಸ್ತರ ಮನೆಗೆ ಭೇಟಿಕೊಟ್ಟು ಮುಸ್ಲಿಂ ಸಂತ್ರಸ್ತರ ಮನೆಗೆ ಹೋಗದ ಯಪಿ ಸಚಿವ. ಭಾರೀ ಟೀಕೆ...

ಹಿಂದೂ ಸಂತ್ರಸ್ತರ ಮನೆಗೆ ಭೇಟಿಕೊಟ್ಟು ಮುಸ್ಲಿಂ ಸಂತ್ರಸ್ತರ ಮನೆಗೆ ಹೋಗದ ಯಪಿ ಸಚಿವ. ಭಾರೀ ಟೀಕೆ…

- Advertisement -
- Advertisement -

ಕಳೆದ ಶುಕ್ರವಾರ ನಡೆದ ಹಿಂಸಾಚಾರದಲ್ಲಿ ಗಾಯಾಳುಗಳಾದ ಪೀಡಿತರನ್ನು ಭೇಟಿಯಾಗಲು ಬಿಜ್ನೋರ್ ಜಿಲ್ಲೆಗೆ ಭೇಟಿ ನೀಡಿದ್ದ ಉತ್ತರ ಪ್ರದೇಶದ ಮಂತ್ರಿಯೊಬ್ಬರು ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರದಲ್ಲಿ ಮೃತಪಟ್ಟ ಇಬ್ಬರು ಮುಸ್ಲಿಂ ಪುರುಷರ ಕುಟುಂಬಗಳೊಂದಿಗೆ ಭೇಟಿಯಾಗಲು ನಿರಾಕರಿಸಿದ್ದರಿಂದ ವಿವಾದಕ್ಕೆ ಕಾರಣವಾಗಿದೆ.

ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಜಿಲ್ಲೆಯ ನೆಹತೌರ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ಓಂ ರಾಜ್ ಸೈನಿ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಲು ಹೋಗಿದ್ದರು. ಇದೇ ಪ್ರದೇಶದಲ್ಲಿ ಈ ಎರಡು ಸಾವುಗಳು ಸಂಭವಿಸಿವೆ.

ಸೈನಿ ಮತ್ತು ಅವರ ಕುಟುಂಬದೊಂದಿಗೆ ಭೇಟಿಯಾದ ನಂತರ ಬಿಜ್ನೋರ್‌ರ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ, ಅಗರ್ವಾಲ್ ಅವರನ್ನು ಇಬ್ಬರು ಮುಸ್ಲಿಂ ಪುರುಷರ ಕುಟುಂಬಗಳಿಗೆ ಏಕೆ ಭೇಟಿಕೊಡಲಿಲ್ಲ ಎಂದು ಕೇಳಲಾಯಿತು.

“ಸರ್ಕಾರ ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಒಟ್ಟಾಗಿ, ಎಲ್ಲರಿಗೂ ಅಭಿವೃದ್ಧಿ)’ ಎಂದು ಹೇಳುತ್ತದೆ. ನೆಹತೌರ್‌ನಲ್ಲಿ ನೀವು ಓಂ ರಾಜ್ ಸೈನಿ ಅವರ ಮನೆಗೆ ಹೋಗಿದ್ದೀರಿ. ಪ್ರಿಯಾಂಕಾ ಗಾಂಧಿ ಸಹ ಅವರ ಕುಟುಂಬವನ್ನೂ ಭೇಟಿ ಮಾಡಿದರು, ಆದರೆ ನಂತರ ಅವರು ಸಾವನಪ್ಪಿದ ಇತರ ಎರಡು ಕುಟುಂಬಗಳಿಗೂ ಹೋದರು. ಆದರೆ ನೀವು ಆ ಕುಟುಂಬಗಳಿಗ ಹೋಗಲಿಲ್ಲ. ಇದು ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಈ ರೀತಿ ಹೇಗೆ ಆಗುತ್ತದೆ?” ಎಂದು ವರದಿಗಾರರೊಬ್ಬರು ಸಚಿವರನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಮುಖಂಡ ಪ್ರಿಯಾಂಕಾ ಗಾಂಧಿ ಬಿಜ್ನೋರ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿಯಾದರು.

ಇದರಲ್ಲಿನ ಧರ್ಮದ ತಾರತಮ್ಯದ ಆರೋಪಗಳನ್ನು ಸ್ವೀಕರಿಸಲು ಸಚಿವರು ನಿರಾಕರಿಸಿದರು, “ನಾನು ಯಾಕೆ ಗಲಭೆಕೋರರ ಮನೆಗಳಿಗೆ ಹೋಗಬೇಕು. ನನ್ನ ಮಾತುಗಳನ್ನು ಕೇಳಿ. ಗಲಭೆ ಮತ್ತು ಭಾವೋದ್ರೇಕಗಳನ್ನು ಉಂಟುಮಾಡುವವರು ಹೇಗೆ ಸಮಾಜದ ಭಾಗವಾಗುತ್ತಾರೆ. ನಾನು ಯಾಕೆ ಅಲ್ಲಿಗೆ ಹೋಗಬೇಕು “ಇದು ಹಿಂದೂ-ಮುಸ್ಲಿಂ ಬಗ್ಗೆ ಅಲ್ಲ. ನಾನು ಯಾಕೆ ದಂಗೆಕೋರರ ಮನೆಗೆ ಏಕೆ ಹೋಗಬೇಕು?” ಎಂದಿದ್ದಾರೆ.

ಓಂ ರಾಜ್ ಅವರ ಕುಟುಂಬವು ಅವರು ಯಾವುದೇ ಗಲಾಟೆಗಳಲ್ಲಿ ಭಾಗಿಯಾಗಿರಲಿಲ್ಲ ಮತ್ತು ಅವರು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಗುಂಡು ಹಾರಿಸಿದಾಗ ಅವರು ಹೊಲಗಳಿಂದ ಹಿಂದಿರುಗುತ್ತಿದ್ದರು ಎಂದು ಸಚಿವರು ಹೇಳಿದ್ದಾರೆ.

ಧರ್ಮವನ್ನು ಪೌರತ್ವಕ್ಕೆ ಮಾನದಂಡವನ್ನಾಗಿ ಮಾಡುವ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಪ್ರತಿಭಟನೆಯ ಸಮಯದಲ್ಲಾದ ಹಿಂಸಾಚಾರದಲ್ಲಿ ಉತ್ತರಪ್ರದೇಶದಾದ್ಯಂತ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. ಸಚಿವರ ಈ ವರ್ತನೆಗೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರದ ಹಿಂಸಾಚಾರದ ಸಂದರ್ಭದಲ್ಲಿ ಬಿಜ್ನೋರ್‌ನಲ್ಲಿ ಐಎಎಸ್ ಆಕಾಂಕ್ಷಿಯಾದ 20 ವರ್ಷದ ಸುಲೇಮಾನ್ ಮತ್ತು 25 ವರ್ಷದ ಅನಸ್ ಮೃತಪಟ್ಟಿದ್ದಾರೆ. ಆರಂಭಿಕ ನಿರಾಕರಣೆಯ ನಂತರ, ಸ್ಥಳೀಯ ಪೊಲೀಸರ ಗುಂಡಿನಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ಆತ್ಮರಕ್ಷಣೆಗಾಗಿ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸುಲೇಮಾನ್ ಅವರ ಕುಟುಂಬ ಇದನ್ನು ನಿರಾಕರಿಸಿದೆ ಮತ್ತು ಪ್ರತಿಭಟನೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...