Homeಮುಖಪುಟಹಿಂದೂ ಸಂತ್ರಸ್ತರ ಮನೆಗೆ ಭೇಟಿಕೊಟ್ಟು ಮುಸ್ಲಿಂ ಸಂತ್ರಸ್ತರ ಮನೆಗೆ ಹೋಗದ ಯಪಿ ಸಚಿವ. ಭಾರೀ ಟೀಕೆ...

ಹಿಂದೂ ಸಂತ್ರಸ್ತರ ಮನೆಗೆ ಭೇಟಿಕೊಟ್ಟು ಮುಸ್ಲಿಂ ಸಂತ್ರಸ್ತರ ಮನೆಗೆ ಹೋಗದ ಯಪಿ ಸಚಿವ. ಭಾರೀ ಟೀಕೆ…

- Advertisement -
- Advertisement -

ಕಳೆದ ಶುಕ್ರವಾರ ನಡೆದ ಹಿಂಸಾಚಾರದಲ್ಲಿ ಗಾಯಾಳುಗಳಾದ ಪೀಡಿತರನ್ನು ಭೇಟಿಯಾಗಲು ಬಿಜ್ನೋರ್ ಜಿಲ್ಲೆಗೆ ಭೇಟಿ ನೀಡಿದ್ದ ಉತ್ತರ ಪ್ರದೇಶದ ಮಂತ್ರಿಯೊಬ್ಬರು ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರದಲ್ಲಿ ಮೃತಪಟ್ಟ ಇಬ್ಬರು ಮುಸ್ಲಿಂ ಪುರುಷರ ಕುಟುಂಬಗಳೊಂದಿಗೆ ಭೇಟಿಯಾಗಲು ನಿರಾಕರಿಸಿದ್ದರಿಂದ ವಿವಾದಕ್ಕೆ ಕಾರಣವಾಗಿದೆ.

ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಜಿಲ್ಲೆಯ ನೆಹತೌರ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ಓಂ ರಾಜ್ ಸೈನಿ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಲು ಹೋಗಿದ್ದರು. ಇದೇ ಪ್ರದೇಶದಲ್ಲಿ ಈ ಎರಡು ಸಾವುಗಳು ಸಂಭವಿಸಿವೆ.

ಸೈನಿ ಮತ್ತು ಅವರ ಕುಟುಂಬದೊಂದಿಗೆ ಭೇಟಿಯಾದ ನಂತರ ಬಿಜ್ನೋರ್‌ರ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ, ಅಗರ್ವಾಲ್ ಅವರನ್ನು ಇಬ್ಬರು ಮುಸ್ಲಿಂ ಪುರುಷರ ಕುಟುಂಬಗಳಿಗೆ ಏಕೆ ಭೇಟಿಕೊಡಲಿಲ್ಲ ಎಂದು ಕೇಳಲಾಯಿತು.

“ಸರ್ಕಾರ ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಒಟ್ಟಾಗಿ, ಎಲ್ಲರಿಗೂ ಅಭಿವೃದ್ಧಿ)’ ಎಂದು ಹೇಳುತ್ತದೆ. ನೆಹತೌರ್‌ನಲ್ಲಿ ನೀವು ಓಂ ರಾಜ್ ಸೈನಿ ಅವರ ಮನೆಗೆ ಹೋಗಿದ್ದೀರಿ. ಪ್ರಿಯಾಂಕಾ ಗಾಂಧಿ ಸಹ ಅವರ ಕುಟುಂಬವನ್ನೂ ಭೇಟಿ ಮಾಡಿದರು, ಆದರೆ ನಂತರ ಅವರು ಸಾವನಪ್ಪಿದ ಇತರ ಎರಡು ಕುಟುಂಬಗಳಿಗೂ ಹೋದರು. ಆದರೆ ನೀವು ಆ ಕುಟುಂಬಗಳಿಗ ಹೋಗಲಿಲ್ಲ. ಇದು ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಈ ರೀತಿ ಹೇಗೆ ಆಗುತ್ತದೆ?” ಎಂದು ವರದಿಗಾರರೊಬ್ಬರು ಸಚಿವರನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಮುಖಂಡ ಪ್ರಿಯಾಂಕಾ ಗಾಂಧಿ ಬಿಜ್ನೋರ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿಯಾದರು.

ಇದರಲ್ಲಿನ ಧರ್ಮದ ತಾರತಮ್ಯದ ಆರೋಪಗಳನ್ನು ಸ್ವೀಕರಿಸಲು ಸಚಿವರು ನಿರಾಕರಿಸಿದರು, “ನಾನು ಯಾಕೆ ಗಲಭೆಕೋರರ ಮನೆಗಳಿಗೆ ಹೋಗಬೇಕು. ನನ್ನ ಮಾತುಗಳನ್ನು ಕೇಳಿ. ಗಲಭೆ ಮತ್ತು ಭಾವೋದ್ರೇಕಗಳನ್ನು ಉಂಟುಮಾಡುವವರು ಹೇಗೆ ಸಮಾಜದ ಭಾಗವಾಗುತ್ತಾರೆ. ನಾನು ಯಾಕೆ ಅಲ್ಲಿಗೆ ಹೋಗಬೇಕು “ಇದು ಹಿಂದೂ-ಮುಸ್ಲಿಂ ಬಗ್ಗೆ ಅಲ್ಲ. ನಾನು ಯಾಕೆ ದಂಗೆಕೋರರ ಮನೆಗೆ ಏಕೆ ಹೋಗಬೇಕು?” ಎಂದಿದ್ದಾರೆ.

ಓಂ ರಾಜ್ ಅವರ ಕುಟುಂಬವು ಅವರು ಯಾವುದೇ ಗಲಾಟೆಗಳಲ್ಲಿ ಭಾಗಿಯಾಗಿರಲಿಲ್ಲ ಮತ್ತು ಅವರು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಗುಂಡು ಹಾರಿಸಿದಾಗ ಅವರು ಹೊಲಗಳಿಂದ ಹಿಂದಿರುಗುತ್ತಿದ್ದರು ಎಂದು ಸಚಿವರು ಹೇಳಿದ್ದಾರೆ.

ಧರ್ಮವನ್ನು ಪೌರತ್ವಕ್ಕೆ ಮಾನದಂಡವನ್ನಾಗಿ ಮಾಡುವ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಪ್ರತಿಭಟನೆಯ ಸಮಯದಲ್ಲಾದ ಹಿಂಸಾಚಾರದಲ್ಲಿ ಉತ್ತರಪ್ರದೇಶದಾದ್ಯಂತ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. ಸಚಿವರ ಈ ವರ್ತನೆಗೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರದ ಹಿಂಸಾಚಾರದ ಸಂದರ್ಭದಲ್ಲಿ ಬಿಜ್ನೋರ್‌ನಲ್ಲಿ ಐಎಎಸ್ ಆಕಾಂಕ್ಷಿಯಾದ 20 ವರ್ಷದ ಸುಲೇಮಾನ್ ಮತ್ತು 25 ವರ್ಷದ ಅನಸ್ ಮೃತಪಟ್ಟಿದ್ದಾರೆ. ಆರಂಭಿಕ ನಿರಾಕರಣೆಯ ನಂತರ, ಸ್ಥಳೀಯ ಪೊಲೀಸರ ಗುಂಡಿನಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ಆತ್ಮರಕ್ಷಣೆಗಾಗಿ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸುಲೇಮಾನ್ ಅವರ ಕುಟುಂಬ ಇದನ್ನು ನಿರಾಕರಿಸಿದೆ ಮತ್ತು ಪ್ರತಿಭಟನೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...