Homeಮುಖಪುಟಹಿಂದೂ ಸಂತ್ರಸ್ತರ ಮನೆಗೆ ಭೇಟಿಕೊಟ್ಟು ಮುಸ್ಲಿಂ ಸಂತ್ರಸ್ತರ ಮನೆಗೆ ಹೋಗದ ಯಪಿ ಸಚಿವ. ಭಾರೀ ಟೀಕೆ...

ಹಿಂದೂ ಸಂತ್ರಸ್ತರ ಮನೆಗೆ ಭೇಟಿಕೊಟ್ಟು ಮುಸ್ಲಿಂ ಸಂತ್ರಸ್ತರ ಮನೆಗೆ ಹೋಗದ ಯಪಿ ಸಚಿವ. ಭಾರೀ ಟೀಕೆ…

- Advertisement -
- Advertisement -

ಕಳೆದ ಶುಕ್ರವಾರ ನಡೆದ ಹಿಂಸಾಚಾರದಲ್ಲಿ ಗಾಯಾಳುಗಳಾದ ಪೀಡಿತರನ್ನು ಭೇಟಿಯಾಗಲು ಬಿಜ್ನೋರ್ ಜಿಲ್ಲೆಗೆ ಭೇಟಿ ನೀಡಿದ್ದ ಉತ್ತರ ಪ್ರದೇಶದ ಮಂತ್ರಿಯೊಬ್ಬರು ಪೌರತ್ವ ಕಾನೂನಿನ ವಿರುದ್ಧದ ಪ್ರತಿಭಟನೆ ವೇಳೆ ಹಿಂಸಾಚಾರದಲ್ಲಿ ಮೃತಪಟ್ಟ ಇಬ್ಬರು ಮುಸ್ಲಿಂ ಪುರುಷರ ಕುಟುಂಬಗಳೊಂದಿಗೆ ಭೇಟಿಯಾಗಲು ನಿರಾಕರಿಸಿದ್ದರಿಂದ ವಿವಾದಕ್ಕೆ ಕಾರಣವಾಗಿದೆ.

ಸಚಿವ ಕಪಿಲ್ ದೇವ್ ಅಗರ್ವಾಲ್ ಅವರು ಜಿಲ್ಲೆಯ ನೆಹತೌರ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಗಾಯಗೊಂಡ ಓಂ ರಾಜ್ ಸೈನಿ ಮತ್ತು ಅವರ ಕುಟುಂಬವನ್ನು ಭೇಟಿ ಮಾಡಲು ಹೋಗಿದ್ದರು. ಇದೇ ಪ್ರದೇಶದಲ್ಲಿ ಈ ಎರಡು ಸಾವುಗಳು ಸಂಭವಿಸಿವೆ.

ಸೈನಿ ಮತ್ತು ಅವರ ಕುಟುಂಬದೊಂದಿಗೆ ಭೇಟಿಯಾದ ನಂತರ ಬಿಜ್ನೋರ್‌ರ್ನಲ್ಲಿ ಪತ್ರಿಕಾಗೋಷ್ಠಿಯಲ್ಲಿ, ಅಗರ್ವಾಲ್ ಅವರನ್ನು ಇಬ್ಬರು ಮುಸ್ಲಿಂ ಪುರುಷರ ಕುಟುಂಬಗಳಿಗೆ ಏಕೆ ಭೇಟಿಕೊಡಲಿಲ್ಲ ಎಂದು ಕೇಳಲಾಯಿತು.

“ಸರ್ಕಾರ ಸಬ್ಕಾ ಸಾಥ್, ಸಬ್ಕಾ ವಿಕಾಸ್ (ಒಟ್ಟಾಗಿ, ಎಲ್ಲರಿಗೂ ಅಭಿವೃದ್ಧಿ)’ ಎಂದು ಹೇಳುತ್ತದೆ. ನೆಹತೌರ್‌ನಲ್ಲಿ ನೀವು ಓಂ ರಾಜ್ ಸೈನಿ ಅವರ ಮನೆಗೆ ಹೋಗಿದ್ದೀರಿ. ಪ್ರಿಯಾಂಕಾ ಗಾಂಧಿ ಸಹ ಅವರ ಕುಟುಂಬವನ್ನೂ ಭೇಟಿ ಮಾಡಿದರು, ಆದರೆ ನಂತರ ಅವರು ಸಾವನಪ್ಪಿದ ಇತರ ಎರಡು ಕುಟುಂಬಗಳಿಗೂ ಹೋದರು. ಆದರೆ ನೀವು ಆ ಕುಟುಂಬಗಳಿಗ ಹೋಗಲಿಲ್ಲ. ಇದು ‘ಸಬ್ಕಾ ಸಾಥ್ ಸಬ್ಕಾ ವಿಕಾಸ್’ ಈ ರೀತಿ ಹೇಗೆ ಆಗುತ್ತದೆ?” ಎಂದು ವರದಿಗಾರರೊಬ್ಬರು ಸಚಿವರನ್ನು ಪ್ರಶ್ನಿಸಿದರು.

ಕಾಂಗ್ರೆಸ್ ಮುಖಂಡ ಪ್ರಿಯಾಂಕಾ ಗಾಂಧಿ ಬಿಜ್ನೋರ್‌ನಲ್ಲಿ ನಡೆದ ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳನ್ನು ಭೇಟಿಯಾದರು.

ಇದರಲ್ಲಿನ ಧರ್ಮದ ತಾರತಮ್ಯದ ಆರೋಪಗಳನ್ನು ಸ್ವೀಕರಿಸಲು ಸಚಿವರು ನಿರಾಕರಿಸಿದರು, “ನಾನು ಯಾಕೆ ಗಲಭೆಕೋರರ ಮನೆಗಳಿಗೆ ಹೋಗಬೇಕು. ನನ್ನ ಮಾತುಗಳನ್ನು ಕೇಳಿ. ಗಲಭೆ ಮತ್ತು ಭಾವೋದ್ರೇಕಗಳನ್ನು ಉಂಟುಮಾಡುವವರು ಹೇಗೆ ಸಮಾಜದ ಭಾಗವಾಗುತ್ತಾರೆ. ನಾನು ಯಾಕೆ ಅಲ್ಲಿಗೆ ಹೋಗಬೇಕು “ಇದು ಹಿಂದೂ-ಮುಸ್ಲಿಂ ಬಗ್ಗೆ ಅಲ್ಲ. ನಾನು ಯಾಕೆ ದಂಗೆಕೋರರ ಮನೆಗೆ ಏಕೆ ಹೋಗಬೇಕು?” ಎಂದಿದ್ದಾರೆ.

ಓಂ ರಾಜ್ ಅವರ ಕುಟುಂಬವು ಅವರು ಯಾವುದೇ ಗಲಾಟೆಗಳಲ್ಲಿ ಭಾಗಿಯಾಗಿರಲಿಲ್ಲ ಮತ್ತು ಅವರು ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಗುಂಡು ಹಾರಿಸಿದಾಗ ಅವರು ಹೊಲಗಳಿಂದ ಹಿಂದಿರುಗುತ್ತಿದ್ದರು ಎಂದು ಸಚಿವರು ಹೇಳಿದ್ದಾರೆ.

ಧರ್ಮವನ್ನು ಪೌರತ್ವಕ್ಕೆ ಮಾನದಂಡವನ್ನಾಗಿ ಮಾಡುವ ಪೌರತ್ವ ಕಾಯ್ದೆಯ ವಿರುದ್ಧ ದೇಶದ ಹಲವಾರು ಭಾಗಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಪ್ರತಿಭಟನೆಯ ಸಮಯದಲ್ಲಾದ ಹಿಂಸಾಚಾರದಲ್ಲಿ ಉತ್ತರಪ್ರದೇಶದಾದ್ಯಂತ ಇಪ್ಪತ್ತೊಂದು ಜನರು ಸಾವನ್ನಪ್ಪಿದ್ದಾರೆ. ಸಚಿವರ ಈ ವರ್ತನೆಗೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶುಕ್ರವಾರದ ಹಿಂಸಾಚಾರದ ಸಂದರ್ಭದಲ್ಲಿ ಬಿಜ್ನೋರ್‌ನಲ್ಲಿ ಐಎಎಸ್ ಆಕಾಂಕ್ಷಿಯಾದ 20 ವರ್ಷದ ಸುಲೇಮಾನ್ ಮತ್ತು 25 ವರ್ಷದ ಅನಸ್ ಮೃತಪಟ್ಟಿದ್ದಾರೆ. ಆರಂಭಿಕ ನಿರಾಕರಣೆಯ ನಂತರ, ಸ್ಥಳೀಯ ಪೊಲೀಸರ ಗುಂಡಿನಿಂದ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಒಪ್ಪಿಕೊಂಡಿದ್ದಾರೆ. ಆತ್ಮರಕ್ಷಣೆಗಾಗಿ ಅವರ ಮೇಲೆ ಗುಂಡು ಹಾರಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಸುಲೇಮಾನ್ ಅವರ ಕುಟುಂಬ ಇದನ್ನು ನಿರಾಕರಿಸಿದೆ ಮತ್ತು ಪ್ರತಿಭಟನೆಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳುತ್ತಾರೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...