Homeಮುಖಪುಟ81 ಶಾಲಾ ಮಕ್ಕಳಿಗೆ ಕೇವಲ 1 ಲೀ. ಹಾಲು: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ವಿಡಿಯೋ...

81 ಶಾಲಾ ಮಕ್ಕಳಿಗೆ ಕೇವಲ 1 ಲೀ. ಹಾಲು: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ವಿಡಿಯೋ ಬಯಲಿಗೆ..

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರದ ಸ್ಥಳೀಯ ಶಾಲೆಯೊಂದರಲ್ಲಿ ಸುಮಾರು 81 ವಿದ್ಯಾರ್ಥಿಗಳಿಗೆ ಕೇವಲ 1 ಲೀಟರ್‌ ಹಾಲನ್ನು ನೀರಿಗೆ ಬೆರೆಸಿ ಮಕ್ಕಳಿಗೆ ಕೊಡುತ್ತಿರುವ ವಿಡಿಯೋವೊಂದು ವೈರಲ್‌ ಆಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

ವಿಡಿಯೋ ನೋಡಿ:

ಕೆಲವು ತಿಂಗಳ ಹಿಂದೆಯಷ್ಟೆ ರೊಟ್ಟಿ ಜೊತೆ ತಿನ್ನಲು ಉಪ್ಪು ಕೊಟ್ಟಿದ್ದ ವಿಡಿಯೋ ಜನರ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿತ್ತು. ದುರಂತವೆಂದರೆ ಆ ವಿಡಿಯೋ ಮಾಡಿದ ವ್ಯಕ್ತಿಯ ಮೇಲೆ ದೂರು ದಾಖಲಾಗಿ ವಿಚಾರಣೆ ಎದುರಿಸಬೇಕಾದ ದುರ್ಗತಿ ಬಂದಿದೆ.

ಈಗ ವೈರಲ್‌ ಆಗಿರುವ ವಿಡಿಯೋದಲ್ಲಿ ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ಅಡುಗೆಯವರು ಒಂದು ಲೀಟರ್ ಹಾಲಿನ ಒಂದು ಪ್ಯಾಕೆಟ್ ಅನ್ನು ಒಂದು ಬಕೆಟ್ ನೀರಿನೊಂದಿಗೆ ಬೆರೆಸುವದನ್ನು ತೋರಿಸುತ್ತದೆ. ಜೊತೆಗೆ ಇದನ್ನು ಸುಮಾರು 81 ಮಕ್ಕಳಿಗೆ ನೀಡಲಾಗುತ್ತಿದೆ.

ಸೋನ್‌ಭದ್ರ ಜಿಲ್ಲೆಯು ಉತ್ತರ ಪ್ರದೇಶದ ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿ ಒಂದಾಗಿದೆ. ಜಿಲ್ಲೆಯ ಬಡ ಕುಟುಂಬಗಳ ಮಕ್ಕಳು ದಿನಕ್ಕೆ ಕನಿಷ್ಠ ಒಂದು ಹೊತ್ತಿನ ಪೌಷ್ಟಿಕ ಊಟಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ನಡೆಸುವ ಈ ಯೋಜನೆಯನ್ನು ಅವಲಂಬಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಸೋನ್‌ಭದ್ರ ಜಿಲ್ಲೆಯ ಚೋಪನ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 171 ವಿದ್ಯಾರ್ಥಿಗಳಿದ್ದಾರೆ. 81 ಮಕ್ಕಳಿಗೆ ಕೇವಲ ಒಂದು ಲೀಟರ್‌ ಹಾಲನ್ನು ಶಾಲೆಯಲ್ಲಿ ಬುಧವಾರ ಬಡಿಸಲಾಗಿದೆ.

ಅಪೌಷ್ಠಿಕತೆಯಿಂದ ಬಳಲುತ್ತಿರುವ ಭಾರತ ದೇಶದಲ್ಲಿ ಬಿಸಿಯೂಟದಂತಹ ಸರ್ಕಾರಿ ಯೋಜನೆಗಳು ಅರ್ಹರಿಗೆ ತಲುಪುವ ಬದಲು ಮಧ್ಯವರ್ತಿಗಳ ಪಾಲಾಗುತ್ತಿವೆ ಎಂಬ ಆರೋಪಕ್ಕೆ ಇವೆಲ್ಲವೂ ತಕ್ಕ ಉದಾಹರಣೆಗಳಾಗಿವೆ.

“ನಾನು ವಿಚಾರಣೆ ನಡೆಸಿದ್ದೇನೆ. ನಾವು ಹಸುಗಳು ಅಥವಾ ಎಮ್ಮೆಗಳಿಂದ ಹಾಲನ್ನು ಪಡೆಯಲಾಗದ ಕಾರಣ ನಾವು ಇಲ್ಲಿ ಪ್ಯಾಕೆಟ್ ಹಾಲನ್ನು ಬಳಸುತ್ತೇವೆ. ಆದರೆ ಶಾಲೆಯಲ್ಲಿ ಸಾಕಷ್ಟು ಹಾಲು ಇತ್ತು ಮತ್ತು ನಂತರ ನಾವು ಮಕ್ಕಳಿಗೆ ಹೆಚ್ಚಿನ ಹಾಲನ್ನು ಮರುಹಂಚಿಕೆ ಮಾಡಿದ್ದೇವೆ. ಮೊದಲ ಬಾರಿಗೆ ದೋಷ ಕಂಡುಬಂದಿದೆ, ಆದರೆ ಅದು ತಕ್ಷಣವೇ ಅದನ್ನು ಸರಿಪಡಿಸಲಾಗಿದೆ” ಎಂದು ಬ್ಲಾಕ್ ಶಿಕ್ಷಣ ಅಧಿಕಾರಿ ಮುಖೇಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆದರೆ ಶಾಲಾ ಮಕ್ಕಳಿಗೆ ಹಾಲು ವಿತರಿಸಿದ ಅಡುಗೆಯವರು ತಮಗೆ ಕೇವಲ ಒಂದು ಪ್ಯಾಕೆಟ್ ಹಾಲು ಮಾತ್ರ ನೀಡಲಾಗಿತ್ತು ಎಂದು ಹೇಳಿದ್ದಾರೆ. “ನಾನು ಒಂದು ಲೀಟರ್ ಹಾಲನ್ನು ಬಕೆಟ್ ನೀರಿಗೆ ಹಾಕಿ ಮಿಶ್ರ ಮಾಡಿದ್ದೇನೆ. ನಿನ್ನೆ ನಮಗೆ ಒಂದು ಪ್ಯಾಕೆಟ್ ಹಾಲು ಮಾತ್ರ ನೀಡಲಾಯಿತು, ಹಾಗಾಗಿ ಅದನ್ನೇ ನಾನು ಮಾಡಬೇಕಾಗಿತ್ತು” ಎಂದು ಅಡುಗೆ ಸಿಬ್ಬಂದಿ ಫೂಲ್ವಂತಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶಿಕ್ಷಕ ಜಿತೇಂದ್ರ ಕುಮಾರ್, “ಹೆಚ್ಚು ಹಾಲು ಲಭ್ಯವಿದೆ ಎಂದು ಅಡುಗೆಯವರಿಗೆ ಬಹುಶಃ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

ಮಧ್ಯಾಹ್ನದ ಬಿಸಿಯೂಟಕ್ಕೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಉತ್ತರ ಪ್ರದೇಶದಿಂದ ಬಂದಿವೆ. ದೇಶಾದ್ಯಂತ ವರದಿಯಾದ 52 ಪ್ರಕರಣಗಳಲ್ಲಿ ಹದಿನಾಲ್ಕು ಉತ್ತರ ಪ್ರದೇಶದವು ಎಂದು ಕಳೆದ ವಾರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಲೋಕಸಭೆಗೆ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದಕ್ಕಿಂತ ಲೂ ಬೇಷರದ ಸಂಗತಿ ಈ ವಿಡಿಯೋ ದಲ್ಲಿ ಮಕ್ಕಳನ್ನು ಬಿಸಿಲಿನಲ್ಲಿ ಕೂರಿಸಿ ಪಾಠ ಮಾಡುತ್ತಿರುವುದು.

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...