Homeಮುಖಪುಟ81 ಶಾಲಾ ಮಕ್ಕಳಿಗೆ ಕೇವಲ 1 ಲೀ. ಹಾಲು: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ವಿಡಿಯೋ...

81 ಶಾಲಾ ಮಕ್ಕಳಿಗೆ ಕೇವಲ 1 ಲೀ. ಹಾಲು: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ವಿಡಿಯೋ ಬಯಲಿಗೆ..

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರದ ಸ್ಥಳೀಯ ಶಾಲೆಯೊಂದರಲ್ಲಿ ಸುಮಾರು 81 ವಿದ್ಯಾರ್ಥಿಗಳಿಗೆ ಕೇವಲ 1 ಲೀಟರ್‌ ಹಾಲನ್ನು ನೀರಿಗೆ ಬೆರೆಸಿ ಮಕ್ಕಳಿಗೆ ಕೊಡುತ್ತಿರುವ ವಿಡಿಯೋವೊಂದು ವೈರಲ್‌ ಆಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

ವಿಡಿಯೋ ನೋಡಿ:

ಕೆಲವು ತಿಂಗಳ ಹಿಂದೆಯಷ್ಟೆ ರೊಟ್ಟಿ ಜೊತೆ ತಿನ್ನಲು ಉಪ್ಪು ಕೊಟ್ಟಿದ್ದ ವಿಡಿಯೋ ಜನರ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿತ್ತು. ದುರಂತವೆಂದರೆ ಆ ವಿಡಿಯೋ ಮಾಡಿದ ವ್ಯಕ್ತಿಯ ಮೇಲೆ ದೂರು ದಾಖಲಾಗಿ ವಿಚಾರಣೆ ಎದುರಿಸಬೇಕಾದ ದುರ್ಗತಿ ಬಂದಿದೆ.

ಈಗ ವೈರಲ್‌ ಆಗಿರುವ ವಿಡಿಯೋದಲ್ಲಿ ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ಅಡುಗೆಯವರು ಒಂದು ಲೀಟರ್ ಹಾಲಿನ ಒಂದು ಪ್ಯಾಕೆಟ್ ಅನ್ನು ಒಂದು ಬಕೆಟ್ ನೀರಿನೊಂದಿಗೆ ಬೆರೆಸುವದನ್ನು ತೋರಿಸುತ್ತದೆ. ಜೊತೆಗೆ ಇದನ್ನು ಸುಮಾರು 81 ಮಕ್ಕಳಿಗೆ ನೀಡಲಾಗುತ್ತಿದೆ.

ಸೋನ್‌ಭದ್ರ ಜಿಲ್ಲೆಯು ಉತ್ತರ ಪ್ರದೇಶದ ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿ ಒಂದಾಗಿದೆ. ಜಿಲ್ಲೆಯ ಬಡ ಕುಟುಂಬಗಳ ಮಕ್ಕಳು ದಿನಕ್ಕೆ ಕನಿಷ್ಠ ಒಂದು ಹೊತ್ತಿನ ಪೌಷ್ಟಿಕ ಊಟಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ನಡೆಸುವ ಈ ಯೋಜನೆಯನ್ನು ಅವಲಂಬಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಸೋನ್‌ಭದ್ರ ಜಿಲ್ಲೆಯ ಚೋಪನ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 171 ವಿದ್ಯಾರ್ಥಿಗಳಿದ್ದಾರೆ. 81 ಮಕ್ಕಳಿಗೆ ಕೇವಲ ಒಂದು ಲೀಟರ್‌ ಹಾಲನ್ನು ಶಾಲೆಯಲ್ಲಿ ಬುಧವಾರ ಬಡಿಸಲಾಗಿದೆ.

ಅಪೌಷ್ಠಿಕತೆಯಿಂದ ಬಳಲುತ್ತಿರುವ ಭಾರತ ದೇಶದಲ್ಲಿ ಬಿಸಿಯೂಟದಂತಹ ಸರ್ಕಾರಿ ಯೋಜನೆಗಳು ಅರ್ಹರಿಗೆ ತಲುಪುವ ಬದಲು ಮಧ್ಯವರ್ತಿಗಳ ಪಾಲಾಗುತ್ತಿವೆ ಎಂಬ ಆರೋಪಕ್ಕೆ ಇವೆಲ್ಲವೂ ತಕ್ಕ ಉದಾಹರಣೆಗಳಾಗಿವೆ.

“ನಾನು ವಿಚಾರಣೆ ನಡೆಸಿದ್ದೇನೆ. ನಾವು ಹಸುಗಳು ಅಥವಾ ಎಮ್ಮೆಗಳಿಂದ ಹಾಲನ್ನು ಪಡೆಯಲಾಗದ ಕಾರಣ ನಾವು ಇಲ್ಲಿ ಪ್ಯಾಕೆಟ್ ಹಾಲನ್ನು ಬಳಸುತ್ತೇವೆ. ಆದರೆ ಶಾಲೆಯಲ್ಲಿ ಸಾಕಷ್ಟು ಹಾಲು ಇತ್ತು ಮತ್ತು ನಂತರ ನಾವು ಮಕ್ಕಳಿಗೆ ಹೆಚ್ಚಿನ ಹಾಲನ್ನು ಮರುಹಂಚಿಕೆ ಮಾಡಿದ್ದೇವೆ. ಮೊದಲ ಬಾರಿಗೆ ದೋಷ ಕಂಡುಬಂದಿದೆ, ಆದರೆ ಅದು ತಕ್ಷಣವೇ ಅದನ್ನು ಸರಿಪಡಿಸಲಾಗಿದೆ” ಎಂದು ಬ್ಲಾಕ್ ಶಿಕ್ಷಣ ಅಧಿಕಾರಿ ಮುಖೇಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆದರೆ ಶಾಲಾ ಮಕ್ಕಳಿಗೆ ಹಾಲು ವಿತರಿಸಿದ ಅಡುಗೆಯವರು ತಮಗೆ ಕೇವಲ ಒಂದು ಪ್ಯಾಕೆಟ್ ಹಾಲು ಮಾತ್ರ ನೀಡಲಾಗಿತ್ತು ಎಂದು ಹೇಳಿದ್ದಾರೆ. “ನಾನು ಒಂದು ಲೀಟರ್ ಹಾಲನ್ನು ಬಕೆಟ್ ನೀರಿಗೆ ಹಾಕಿ ಮಿಶ್ರ ಮಾಡಿದ್ದೇನೆ. ನಿನ್ನೆ ನಮಗೆ ಒಂದು ಪ್ಯಾಕೆಟ್ ಹಾಲು ಮಾತ್ರ ನೀಡಲಾಯಿತು, ಹಾಗಾಗಿ ಅದನ್ನೇ ನಾನು ಮಾಡಬೇಕಾಗಿತ್ತು” ಎಂದು ಅಡುಗೆ ಸಿಬ್ಬಂದಿ ಫೂಲ್ವಂತಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶಿಕ್ಷಕ ಜಿತೇಂದ್ರ ಕುಮಾರ್, “ಹೆಚ್ಚು ಹಾಲು ಲಭ್ಯವಿದೆ ಎಂದು ಅಡುಗೆಯವರಿಗೆ ಬಹುಶಃ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

ಮಧ್ಯಾಹ್ನದ ಬಿಸಿಯೂಟಕ್ಕೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಉತ್ತರ ಪ್ರದೇಶದಿಂದ ಬಂದಿವೆ. ದೇಶಾದ್ಯಂತ ವರದಿಯಾದ 52 ಪ್ರಕರಣಗಳಲ್ಲಿ ಹದಿನಾಲ್ಕು ಉತ್ತರ ಪ್ರದೇಶದವು ಎಂದು ಕಳೆದ ವಾರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಲೋಕಸಭೆಗೆ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದಕ್ಕಿಂತ ಲೂ ಬೇಷರದ ಸಂಗತಿ ಈ ವಿಡಿಯೋ ದಲ್ಲಿ ಮಕ್ಕಳನ್ನು ಬಿಸಿಲಿನಲ್ಲಿ ಕೂರಿಸಿ ಪಾಠ ಮಾಡುತ್ತಿರುವುದು.

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...