Homeಮುಖಪುಟ81 ಶಾಲಾ ಮಕ್ಕಳಿಗೆ ಕೇವಲ 1 ಲೀ. ಹಾಲು: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ವಿಡಿಯೋ...

81 ಶಾಲಾ ಮಕ್ಕಳಿಗೆ ಕೇವಲ 1 ಲೀ. ಹಾಲು: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ವಿಡಿಯೋ ಬಯಲಿಗೆ..

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರದ ಸ್ಥಳೀಯ ಶಾಲೆಯೊಂದರಲ್ಲಿ ಸುಮಾರು 81 ವಿದ್ಯಾರ್ಥಿಗಳಿಗೆ ಕೇವಲ 1 ಲೀಟರ್‌ ಹಾಲನ್ನು ನೀರಿಗೆ ಬೆರೆಸಿ ಮಕ್ಕಳಿಗೆ ಕೊಡುತ್ತಿರುವ ವಿಡಿಯೋವೊಂದು ವೈರಲ್‌ ಆಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

ವಿಡಿಯೋ ನೋಡಿ:

ಕೆಲವು ತಿಂಗಳ ಹಿಂದೆಯಷ್ಟೆ ರೊಟ್ಟಿ ಜೊತೆ ತಿನ್ನಲು ಉಪ್ಪು ಕೊಟ್ಟಿದ್ದ ವಿಡಿಯೋ ಜನರ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿತ್ತು. ದುರಂತವೆಂದರೆ ಆ ವಿಡಿಯೋ ಮಾಡಿದ ವ್ಯಕ್ತಿಯ ಮೇಲೆ ದೂರು ದಾಖಲಾಗಿ ವಿಚಾರಣೆ ಎದುರಿಸಬೇಕಾದ ದುರ್ಗತಿ ಬಂದಿದೆ.

ಈಗ ವೈರಲ್‌ ಆಗಿರುವ ವಿಡಿಯೋದಲ್ಲಿ ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ಅಡುಗೆಯವರು ಒಂದು ಲೀಟರ್ ಹಾಲಿನ ಒಂದು ಪ್ಯಾಕೆಟ್ ಅನ್ನು ಒಂದು ಬಕೆಟ್ ನೀರಿನೊಂದಿಗೆ ಬೆರೆಸುವದನ್ನು ತೋರಿಸುತ್ತದೆ. ಜೊತೆಗೆ ಇದನ್ನು ಸುಮಾರು 81 ಮಕ್ಕಳಿಗೆ ನೀಡಲಾಗುತ್ತಿದೆ.

ಸೋನ್‌ಭದ್ರ ಜಿಲ್ಲೆಯು ಉತ್ತರ ಪ್ರದೇಶದ ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿ ಒಂದಾಗಿದೆ. ಜಿಲ್ಲೆಯ ಬಡ ಕುಟುಂಬಗಳ ಮಕ್ಕಳು ದಿನಕ್ಕೆ ಕನಿಷ್ಠ ಒಂದು ಹೊತ್ತಿನ ಪೌಷ್ಟಿಕ ಊಟಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ನಡೆಸುವ ಈ ಯೋಜನೆಯನ್ನು ಅವಲಂಬಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಸೋನ್‌ಭದ್ರ ಜಿಲ್ಲೆಯ ಚೋಪನ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 171 ವಿದ್ಯಾರ್ಥಿಗಳಿದ್ದಾರೆ. 81 ಮಕ್ಕಳಿಗೆ ಕೇವಲ ಒಂದು ಲೀಟರ್‌ ಹಾಲನ್ನು ಶಾಲೆಯಲ್ಲಿ ಬುಧವಾರ ಬಡಿಸಲಾಗಿದೆ.

ಅಪೌಷ್ಠಿಕತೆಯಿಂದ ಬಳಲುತ್ತಿರುವ ಭಾರತ ದೇಶದಲ್ಲಿ ಬಿಸಿಯೂಟದಂತಹ ಸರ್ಕಾರಿ ಯೋಜನೆಗಳು ಅರ್ಹರಿಗೆ ತಲುಪುವ ಬದಲು ಮಧ್ಯವರ್ತಿಗಳ ಪಾಲಾಗುತ್ತಿವೆ ಎಂಬ ಆರೋಪಕ್ಕೆ ಇವೆಲ್ಲವೂ ತಕ್ಕ ಉದಾಹರಣೆಗಳಾಗಿವೆ.

“ನಾನು ವಿಚಾರಣೆ ನಡೆಸಿದ್ದೇನೆ. ನಾವು ಹಸುಗಳು ಅಥವಾ ಎಮ್ಮೆಗಳಿಂದ ಹಾಲನ್ನು ಪಡೆಯಲಾಗದ ಕಾರಣ ನಾವು ಇಲ್ಲಿ ಪ್ಯಾಕೆಟ್ ಹಾಲನ್ನು ಬಳಸುತ್ತೇವೆ. ಆದರೆ ಶಾಲೆಯಲ್ಲಿ ಸಾಕಷ್ಟು ಹಾಲು ಇತ್ತು ಮತ್ತು ನಂತರ ನಾವು ಮಕ್ಕಳಿಗೆ ಹೆಚ್ಚಿನ ಹಾಲನ್ನು ಮರುಹಂಚಿಕೆ ಮಾಡಿದ್ದೇವೆ. ಮೊದಲ ಬಾರಿಗೆ ದೋಷ ಕಂಡುಬಂದಿದೆ, ಆದರೆ ಅದು ತಕ್ಷಣವೇ ಅದನ್ನು ಸರಿಪಡಿಸಲಾಗಿದೆ” ಎಂದು ಬ್ಲಾಕ್ ಶಿಕ್ಷಣ ಅಧಿಕಾರಿ ಮುಖೇಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆದರೆ ಶಾಲಾ ಮಕ್ಕಳಿಗೆ ಹಾಲು ವಿತರಿಸಿದ ಅಡುಗೆಯವರು ತಮಗೆ ಕೇವಲ ಒಂದು ಪ್ಯಾಕೆಟ್ ಹಾಲು ಮಾತ್ರ ನೀಡಲಾಗಿತ್ತು ಎಂದು ಹೇಳಿದ್ದಾರೆ. “ನಾನು ಒಂದು ಲೀಟರ್ ಹಾಲನ್ನು ಬಕೆಟ್ ನೀರಿಗೆ ಹಾಕಿ ಮಿಶ್ರ ಮಾಡಿದ್ದೇನೆ. ನಿನ್ನೆ ನಮಗೆ ಒಂದು ಪ್ಯಾಕೆಟ್ ಹಾಲು ಮಾತ್ರ ನೀಡಲಾಯಿತು, ಹಾಗಾಗಿ ಅದನ್ನೇ ನಾನು ಮಾಡಬೇಕಾಗಿತ್ತು” ಎಂದು ಅಡುಗೆ ಸಿಬ್ಬಂದಿ ಫೂಲ್ವಂತಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶಿಕ್ಷಕ ಜಿತೇಂದ್ರ ಕುಮಾರ್, “ಹೆಚ್ಚು ಹಾಲು ಲಭ್ಯವಿದೆ ಎಂದು ಅಡುಗೆಯವರಿಗೆ ಬಹುಶಃ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

ಮಧ್ಯಾಹ್ನದ ಬಿಸಿಯೂಟಕ್ಕೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಉತ್ತರ ಪ್ರದೇಶದಿಂದ ಬಂದಿವೆ. ದೇಶಾದ್ಯಂತ ವರದಿಯಾದ 52 ಪ್ರಕರಣಗಳಲ್ಲಿ ಹದಿನಾಲ್ಕು ಉತ್ತರ ಪ್ರದೇಶದವು ಎಂದು ಕಳೆದ ವಾರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಲೋಕಸಭೆಗೆ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದಕ್ಕಿಂತ ಲೂ ಬೇಷರದ ಸಂಗತಿ ಈ ವಿಡಿಯೋ ದಲ್ಲಿ ಮಕ್ಕಳನ್ನು ಬಿಸಿಲಿನಲ್ಲಿ ಕೂರಿಸಿ ಪಾಠ ಮಾಡುತ್ತಿರುವುದು.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...