Homeಮುಖಪುಟ81 ಶಾಲಾ ಮಕ್ಕಳಿಗೆ ಕೇವಲ 1 ಲೀ. ಹಾಲು: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ವಿಡಿಯೋ...

81 ಶಾಲಾ ಮಕ್ಕಳಿಗೆ ಕೇವಲ 1 ಲೀ. ಹಾಲು: ಉತ್ತರ ಪ್ರದೇಶದಲ್ಲಿ ಮತ್ತೊಂದು ಅಮಾನವೀಯ ವಿಡಿಯೋ ಬಯಲಿಗೆ..

- Advertisement -
- Advertisement -

ಉತ್ತರ ಪ್ರದೇಶದ ಸೋನ್‌ಭದ್ರದ ಸ್ಥಳೀಯ ಶಾಲೆಯೊಂದರಲ್ಲಿ ಸುಮಾರು 81 ವಿದ್ಯಾರ್ಥಿಗಳಿಗೆ ಕೇವಲ 1 ಲೀಟರ್‌ ಹಾಲನ್ನು ನೀರಿಗೆ ಬೆರೆಸಿ ಮಕ್ಕಳಿಗೆ ಕೊಡುತ್ತಿರುವ ವಿಡಿಯೋವೊಂದು ವೈರಲ್‌ ಆಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

ವಿಡಿಯೋ ನೋಡಿ:

ಕೆಲವು ತಿಂಗಳ ಹಿಂದೆಯಷ್ಟೆ ರೊಟ್ಟಿ ಜೊತೆ ತಿನ್ನಲು ಉಪ್ಪು ಕೊಟ್ಟಿದ್ದ ವಿಡಿಯೋ ಜನರ ಆತ್ಮಸಾಕ್ಷಿಯನ್ನು ಬಡಿದೆಬ್ಬಿಸಿತ್ತು. ದುರಂತವೆಂದರೆ ಆ ವಿಡಿಯೋ ಮಾಡಿದ ವ್ಯಕ್ತಿಯ ಮೇಲೆ ದೂರು ದಾಖಲಾಗಿ ವಿಚಾರಣೆ ಎದುರಿಸಬೇಕಾದ ದುರ್ಗತಿ ಬಂದಿದೆ.

ಈಗ ವೈರಲ್‌ ಆಗಿರುವ ವಿಡಿಯೋದಲ್ಲಿ ಸರ್ಕಾರದ ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮದಡಿಯಲ್ಲಿ ಅಡುಗೆಯವರು ಒಂದು ಲೀಟರ್ ಹಾಲಿನ ಒಂದು ಪ್ಯಾಕೆಟ್ ಅನ್ನು ಒಂದು ಬಕೆಟ್ ನೀರಿನೊಂದಿಗೆ ಬೆರೆಸುವದನ್ನು ತೋರಿಸುತ್ತದೆ. ಜೊತೆಗೆ ಇದನ್ನು ಸುಮಾರು 81 ಮಕ್ಕಳಿಗೆ ನೀಡಲಾಗುತ್ತಿದೆ.

ಸೋನ್‌ಭದ್ರ ಜಿಲ್ಲೆಯು ಉತ್ತರ ಪ್ರದೇಶದ ಅತ್ಯಂತ ಹಿಂದುಳಿದ ಪ್ರದೇಶಗಳಲ್ಲಿ ಒಂದಾಗಿದೆ. ಜಿಲ್ಲೆಯ ಬಡ ಕುಟುಂಬಗಳ ಮಕ್ಕಳು ದಿನಕ್ಕೆ ಕನಿಷ್ಠ ಒಂದು ಹೊತ್ತಿನ ಪೌಷ್ಟಿಕ ಊಟಕ್ಕಾಗಿ ಸರ್ಕಾರಿ ಶಾಲೆಗಳಲ್ಲಿ ನಡೆಸುವ ಈ ಯೋಜನೆಯನ್ನು ಅವಲಂಬಿಸಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ಸೋನ್‌ಭದ್ರ ಜಿಲ್ಲೆಯ ಚೋಪನ್‌ನಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ 171 ವಿದ್ಯಾರ್ಥಿಗಳಿದ್ದಾರೆ. 81 ಮಕ್ಕಳಿಗೆ ಕೇವಲ ಒಂದು ಲೀಟರ್‌ ಹಾಲನ್ನು ಶಾಲೆಯಲ್ಲಿ ಬುಧವಾರ ಬಡಿಸಲಾಗಿದೆ.

ಅಪೌಷ್ಠಿಕತೆಯಿಂದ ಬಳಲುತ್ತಿರುವ ಭಾರತ ದೇಶದಲ್ಲಿ ಬಿಸಿಯೂಟದಂತಹ ಸರ್ಕಾರಿ ಯೋಜನೆಗಳು ಅರ್ಹರಿಗೆ ತಲುಪುವ ಬದಲು ಮಧ್ಯವರ್ತಿಗಳ ಪಾಲಾಗುತ್ತಿವೆ ಎಂಬ ಆರೋಪಕ್ಕೆ ಇವೆಲ್ಲವೂ ತಕ್ಕ ಉದಾಹರಣೆಗಳಾಗಿವೆ.

“ನಾನು ವಿಚಾರಣೆ ನಡೆಸಿದ್ದೇನೆ. ನಾವು ಹಸುಗಳು ಅಥವಾ ಎಮ್ಮೆಗಳಿಂದ ಹಾಲನ್ನು ಪಡೆಯಲಾಗದ ಕಾರಣ ನಾವು ಇಲ್ಲಿ ಪ್ಯಾಕೆಟ್ ಹಾಲನ್ನು ಬಳಸುತ್ತೇವೆ. ಆದರೆ ಶಾಲೆಯಲ್ಲಿ ಸಾಕಷ್ಟು ಹಾಲು ಇತ್ತು ಮತ್ತು ನಂತರ ನಾವು ಮಕ್ಕಳಿಗೆ ಹೆಚ್ಚಿನ ಹಾಲನ್ನು ಮರುಹಂಚಿಕೆ ಮಾಡಿದ್ದೇವೆ. ಮೊದಲ ಬಾರಿಗೆ ದೋಷ ಕಂಡುಬಂದಿದೆ, ಆದರೆ ಅದು ತಕ್ಷಣವೇ ಅದನ್ನು ಸರಿಪಡಿಸಲಾಗಿದೆ” ಎಂದು ಬ್ಲಾಕ್ ಶಿಕ್ಷಣ ಅಧಿಕಾರಿ ಮುಖೇಶ್ ಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಆದರೆ ಶಾಲಾ ಮಕ್ಕಳಿಗೆ ಹಾಲು ವಿತರಿಸಿದ ಅಡುಗೆಯವರು ತಮಗೆ ಕೇವಲ ಒಂದು ಪ್ಯಾಕೆಟ್ ಹಾಲು ಮಾತ್ರ ನೀಡಲಾಗಿತ್ತು ಎಂದು ಹೇಳಿದ್ದಾರೆ. “ನಾನು ಒಂದು ಲೀಟರ್ ಹಾಲನ್ನು ಬಕೆಟ್ ನೀರಿಗೆ ಹಾಕಿ ಮಿಶ್ರ ಮಾಡಿದ್ದೇನೆ. ನಿನ್ನೆ ನಮಗೆ ಒಂದು ಪ್ಯಾಕೆಟ್ ಹಾಲು ಮಾತ್ರ ನೀಡಲಾಯಿತು, ಹಾಗಾಗಿ ಅದನ್ನೇ ನಾನು ಮಾಡಬೇಕಾಗಿತ್ತು” ಎಂದು ಅಡುಗೆ ಸಿಬ್ಬಂದಿ ಫೂಲ್ವಂತಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಶಿಕ್ಷಕ ಜಿತೇಂದ್ರ ಕುಮಾರ್, “ಹೆಚ್ಚು ಹಾಲು ಲಭ್ಯವಿದೆ ಎಂದು ಅಡುಗೆಯವರಿಗೆ ಬಹುಶಃ ತಿಳಿದಿರಲಿಲ್ಲ” ಎಂದು ಹೇಳಿದ್ದಾರೆ.

ಮಧ್ಯಾಹ್ನದ ಬಿಸಿಯೂಟಕ್ಕೆ ಸಂಬಂಧಿಸಿದಂತೆ ಹೆಚ್ಚಿನ ದೂರುಗಳು ಉತ್ತರ ಪ್ರದೇಶದಿಂದ ಬಂದಿವೆ. ದೇಶಾದ್ಯಂತ ವರದಿಯಾದ 52 ಪ್ರಕರಣಗಳಲ್ಲಿ ಹದಿನಾಲ್ಕು ಉತ್ತರ ಪ್ರದೇಶದವು ಎಂದು ಕಳೆದ ವಾರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಲೋಕಸಭೆಗೆ ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಅದಕ್ಕಿಂತ ಲೂ ಬೇಷರದ ಸಂಗತಿ ಈ ವಿಡಿಯೋ ದಲ್ಲಿ ಮಕ್ಕಳನ್ನು ಬಿಸಿಲಿನಲ್ಲಿ ಕೂರಿಸಿ ಪಾಠ ಮಾಡುತ್ತಿರುವುದು.

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....