Homeಕರೋನಾ ತಲ್ಲಣಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

ಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

- Advertisement -
- Advertisement -

ಇಷ್ಟು ದೊಡ್ಡ ಜನಸಂಖ್ಯೆಯನ್ನು ನಾವು ಹೇಗೆ ಉಳಿಸಲಿದ್ದೇವೆ ಎಂಬುದರ ಬಗ್ಗೆ ಇಡೀ ದೇಶ ಮಾತನಾಡುತ್ತಿತ್ತು. ಒಂದು ವರ್ಷದಲ್ಲಿ, ನಾವು ಎರಡು ಲಸಿಕೆಗಳನ್ನು ಪ್ರಾರಂಭಿಸಿದ್ದೇವೆ. ಈವರೆಗೆ 23 ಕೋಟಿ ಜನರಿಗೆ ಚುಚ್ಚುಮದ್ದು ನೀಡಲಾಗಿದೆ. ಇನ್ನು ಮುಂದೆ ಕೇಂದ್ರ ಸರ್ಕಾರವೇ ಲಸಿಕೆಗಳನ್ನು ಖರೀದಿಸಿ, ರಾಜ್ಯಗಳಿಗೆ ಶೇ.75 ರಷ್ಟು ಲಸಿಕೆಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ’ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸೋಮವಾರ ಸಂಜೆ 5ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಕ್ರಾಮಿಕದ ಎರಡನೆ ಅಲೆ ಮತ್ತು ಲಸಿಕಾ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಇದೇ ವೇಳೆ ಲಸಿಕೆ ಕುರಿತಂತೆ ವಿವಿಧ ರಾಜ್ಯಗಳು ಎತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ರೂಪಿಸುವ ಭರವಸೆ ನೀಡಿದರು.

‘ಲಸಿಕಾ ಅಭಿಯಾನದಲ್ಲಿ ರಾಜ್ಯಗಳು ವಿಕೇಂದ್ರಿಕರಣ ಬಯಸಿದವು. ಆರೋಗ್ಯ ರಾಜ್ಯದ ವಿಷಯವಾಗಿದ್ದರಿಂದ ಅದು ಸೂಕ್ತವಾಗಿತ್ತು. ಆದರೆ ರಾಜ್ಯ ಸರ್ಕಾರಗಳು ತಮಗೆ ಎದುರಾದ ಅಡೆತಡೆಗಳನ್ನು ನಿವಾರಿಸಿಕೊಳ್ಳಲು ವಿಫಲವಾದವು’ ಎಂದು ಮೋದಿ ರಾಜ್ಯ ಸರ್ಕಾರಗಳನ್ನು ದೂರಿದರು.

‘ಇನ್ನು ಮುಂದೆ 18-44 ವಯೋಮಾನದವರಿಗೂ ಉಚಿತ ಲಸಿಕೆ ಸಿಗಲಿದೆ. ಜೂನ್‍ 21ರಿಂದ ಉತ್ಪಾದಕರಿಂದ ಕೇಂದ್ರವು ಶೇ. 75 ಲಸಿಕೆಗಳನ್ನು ಖರೀದಿಸಲಿದ್ದು ರಾಜ್ಯಗಳಿಗೆ ಉಚಿತವಾಗಿ ನೀಡಲಿದೆ. ಉಳಿದ ಶೇ. 25ರಷ್ಟನ್ನು ಖಾಸಗಿ ವಲಯ ನೇರ ಉತ್ಪಾದಕರಿಂದ ಖರೀದಿಸಲಿದೆ’ ಎಂದು ಮೋದಿ ಮೊದಲಿನ ಲಸಿಕಾ ನೀತಿಗೆ ವಿಭಿನ್ನವಾದ ಹೊಸ ಲಸಿಕಾ ನೀತಿಯನ್ನು ಘೋಷಿಸಿದರು.

ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯು ದೇಶದ ಕೆಲವು ಭಾಗಗಳಲ್ಲಿ ಕಡಿಮೆಯಾಗುವ ಲಕ್ಷಣಗಳನ್ನು ತೋರಿಸುತ್ತಿರುವ ಸಮಯದಲ್ಲಿ ಮತ್ತು ಅನೇಕ ರಾಜ್ಯಗಳು ಲಾಕ್‌ಡೌನ್‌ಗಳನ್ನು ಸರಾಗಗೊಳಿಸಲು ಆರಂಭಿಸಿದ ಸಂದರ್ಭದಲ್ಲಿ ಮೋದಿಯವರು ಇಂದು ಭಾಷಣ ಮಾಡಿದ್ದಾರೆ. ಪ್ರಕರಣಗಳು ಹೆಚ್ಚಾಗುತ್ತಿದ್ದಾಗ ಪ್ರಧಾನಿ ಮೋದಿ ಕೊನೆಯ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಏಪ್ರಿಲ್‍ 20ರಂದು ಮಾತನಾಡಿದ್ದರು.

‘ಎರಡನೇ ಅಲೆಯು ಚಂಡಮಾರುತದಂತೆ ಭಾರತವನ್ನು ಅಪ್ಪಳಿಸಿದೆ. ಆದರೆ ಲಾಕ್‍ಡೌನ್‍ಗಳನ್ನು ಕೊನೆಯ ಉಪಾಯವಾಗಿ ಮಾತ್ರ ಬಳಸಬೇಕೆಂದು ರಾಜ್ಯಗಳಿಗೆ ಹಿಂದೆಯೇ ಮನವಿ ಮಾಡಿದ್ದೆ’ ಎಂದು ಅವರು ನೆನಪಿಸಿದ್ದಾರೆ.

‘ನಮ್ಮ ವಿಜ್ಞಾನಿಗಳಲ್ಲಿ ನಮಗೆ ನಂಬಿಕೆ ಇತ್ತು, ಅದಕ್ಕಾಗಿಯೇ ಅವರು ತಮ್ಮ ಸಂಶೋಧನೆ ನಡೆಸುತ್ತಿರುವಾಗ, ನಾವು ಲಸಿಕಾ ಅಭಿಯಾನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಸಿದ್ಧಪಡಿಸಿದ್ದೆವು…’ ಎಂದು ಪ್ರಧಾನಿ ತಮ್ಮ ಸರ್ಕಾರದ ಪೂರ್ವಸಿದ್ಧತೆಯ ಬಗ್ಗೆ ವಿವರಿಸಿದರು.

ಈ ಅದೃಶ್ಯ ವೈರಸ್ ವಿರುದ್ಧದ ಹೋರಾಟದಲ್ಲಿ ಆಂಟಿ-ಕೋವಿಡ್ ಪ್ರೋಟೋಕಾಲ್ ಪ್ರಮುಖ ಅಂಶವಾಗಿದೆ. ಲಸಿಕೆ ಇದರ ವಿರುದ್ಧ ರಕ್ಷಣೆಯ ಹೊದಿಕೆಯಂತಿದೆ … ನಮ್ಮಲ್ಲಿ ಭಾರತ ನಿರ್ಮಿತ ಲಸಿಕೆ ಇಲ್ಲದಿದ್ದರೆ ಸನ್ನಿವೇಶ ಹೇಗಿರುತ್ತಿತ್ತು ಎಂದು ಊಹಿಸಿ’ ಎಂದು ಪ್ರಧಾನಿ ಹೇಳಿದರು.

‘ಪೋಲಿಯೊ ಅಥವಾ ಹೆಪಟೈಟಿಸ್ ಬಿ ಆಗಿರಲಿ, ದೇಶವು ದಶಕಗಳವರೆಗೆ ಕಾಯಬೇಕಾಗಿತ್ತು. 2014ರಲ್ಲಿ ದೇಶವು ನಮಗೆ ಅವಕಾಶ ನೀಡಿದಾಗ, ವ್ಯಾಕ್ಸಿನೇಷನ್ ವ್ಯಾಪ್ತಿ ಆಗ ಕೇವಲ ಶೇ.60 ಆಗಿತ್ತು. ಅದು ಆತಂಕಕಾರಿ ಪರಿಸ್ಥಿತಿ. ಅದಕ್ಕೆ ಪರಿಹಾರವಾಗಿ ನಾವು ಮಿಷನ್ ಇಂದ್ರಧನುಷ್ ಅನ್ನು ಪ್ರಾರಂಭಿಸಿದ್ದೇವೆ. ನಾವು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದೇವೆ. ಕೇವಲ 5-6 ವರ್ಷಗಳಲ್ಲಿ, ಲಸಿಕೆ ವ್ಯಾಪ್ತಿಯನ್ನು ಶೇ 60 ರಿಂದ 90ಕ್ಕೆ ಹೆಚ್ಚಿಸಲಾಗಿದೆ’ ಎಂದು ಇತರ ಲಸಿಕಾ ಅಭಿಯಾನಗಳ ಕುರಿತು ತಿಳಿಸಿದರು.

‘ಈಗ ಐಸಿಯು ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಇತರ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲಾಯಿತು. ಏಪ್ರಿಲ್-ಮೇನಲ್ಲಿ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಊಹಿಸಲೂ  ಆಗದಷ್ಟು ಬೇಡಿಕೆ ಇತ್ತು. ನಾವು ಆಕ್ಸಿಜನ್‍ ಎಕ್ಸ್‌ಪ್ರೆಸ್‌ಗಳನ್ನು ಓಡಿಸುತ್ತಿದ್ದೇವೆ. ಸೈನ್ಯ ಮತ್ತು ನೌಕಾಪಡೆಯು ಕೂಡ ಭಾಗಿಯಾಗಿದ್ದವು. ಈಗ ಆಮ್ಲಜನಕ ಉತ್ಪಾದನೆಯನ್ನು ಹತ್ತು ಪಟ್ಟು ಹೆಚ್ಚಿಸಲಾಗಿದೆ’ ಎಂದು ಎರಡನೆ ಅಲೆ ಎದುರಿಸಲು ಮಾಡಲಾದ ಸಿದ್ಧತೆಗಳ ಬಗ್ಗೆ ತಿಳಿಸಿದರು.

‘ನಾವು ಕೊರನಾ ಎರಡನೇ ಅಲೆಯೊಂದಿಗೆ ಹೋರಾಡುತ್ತಿದ್ದೇವೆ. ಇತರ ದೇಶಗಳಂತೆ, ಈ ಅಲೆಯ ಸಮಯದಲ್ಲಿ ಭಾರತವು ಪ್ರಕ್ಷುಬ್ಧ ಸಮಯವನ್ನು ಅನುಭವಿಸಿತು. ಬಹಳಷ್ಟು ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ, ನನ್ನ ಸಂತಾಪ ಅವರೊಂದಿಗೆ ಇದೆ’ ಎಂದರು.

ಇದು ಕಳೆದ 100 ವರ್ಷಗಳಲ್ಲಿ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದೆ. ಈ ಪ್ರಮಾಣದ ಸಾಂಕ್ರಾಮಿಕ ರೋಗಕ್ಕೆ ಆಧುನಿಕ ಪ್ರಪಂಚ ಸಾಕ್ಷಿಯಾಗಿಲ್ಲ. ಹೀಗಾಗಿ ಸವಾಲಿನಿಂದ ಇದರ ನಿರ್ಮೂಲನೆಗೆ ಎಲ್ಲರೂ ಯತ್ನಿಸಬೇಕಿದೆ’ ಎಂದರು.

ರಾಜಕೀಯ ಪಂಡಿತರು, ತಜ್ಞರ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಲಸಿಕಾ ನೀತಿ ಬದಲಿಸುವ ಅಗತ್ಯವಿತ್ತು. 18-44 ವಯೋಮಾನದವರಿಗೂ ಉಚಿತ ನೀಡಲೇಬೇಕಿತ್ತು. ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಸಂಶೋಧನಾ ಸಂಸ್ಥೆಗಳು ಇದನ್ನೇ ಹೇಳಿದ್ದವು. ಜನರಲ್ಲೂ ಸರ್ಕಾರದ ಬಗ್ಗೆ ಅಸಮಾಧಾನ ಶುರುವಾಗಿತ್ತು. ಈಗ ಎಚ್ಚೆತ್ತುಕೊಂಡ ಮೋದಿ ಸರ್ಕಾರ ಲಸಿಕಾ ನೀತಿಯಲ್ಲಿ ಯು-ಟರ್ನ್ ತೆಗೆದುಕೊಂಡಿದೆ, ಇದು ಜನಾಗ್ರಹಕ್ಕೆ ಸಿಕ್ಕ ಗೆಲುವು’ ಎಂದಿದ್ದಾರೆ.


ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 1947 ರಿಂದ 2013 ರವರೆಗೆ ದೇಶದಲ್ಲಿ ಯಾವುದೆ ರೋಗಗಳು ಬಂದರೆ ಅದರ ಲಸಿಕೆ ಗಳನ್ನು ಕಂಡು ಹಿಡಿಯಲು ಹಿಂದಿನ ಸರ್ಕಾರ ಗಳು ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತಿದ್ದರು.
    ಈಗಿನ ಬಿಜೆಪಿ ಸರ್ಕಾರ ತಮ್ಮ ಪಕ್ಷದ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳಲು ಜನರ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ.
    ಹಾಗೂ ಕರೋನಾ ಬಗ್ಗೆ ಜನರಿಗೆ ಧೈರ್ಯ ತೋರಲಿಲ್ಲ. ಸರ್ಕಾರ ಜನರಿಗೆ ಹೆದರಿಸಿ ಜೀವ ಹೋಗೋ ಹಾಗೆ ಮಾಡ್ತಾಯಿದ್ದಾರೆ.ಇವರು ಲಸಿಕೆ ಕಂಡುಹಿಡದಿದ್ದೆವೆ ಅಂತಾರೆ ಜನ ಸಾಯ್ತಾಯಿದ್ದಾರೆ. ಈ ಸರ್ಕಾರ ಉಂಡು ಹೋದಾ,ಕೊಂಡು ಹೋದಾ ಅಂತ ನೇಡ್ಸತಾಯಿದ್ದರೆ. ಈ ಸರ್ಕಾರ ಕ್ಕೆ ಮಾನ,ಮರ್ಯಾದೆ, ನಾಚಿಕೆ ಇಲ್ಲಾ.ಇವರಿಗೆ ದುಡ್ಡೆ ಬೇಕು.

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...