Homeಕರೋನಾ ತಲ್ಲಣಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

ಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

- Advertisement -
- Advertisement -

ಇಷ್ಟು ದೊಡ್ಡ ಜನಸಂಖ್ಯೆಯನ್ನು ನಾವು ಹೇಗೆ ಉಳಿಸಲಿದ್ದೇವೆ ಎಂಬುದರ ಬಗ್ಗೆ ಇಡೀ ದೇಶ ಮಾತನಾಡುತ್ತಿತ್ತು. ಒಂದು ವರ್ಷದಲ್ಲಿ, ನಾವು ಎರಡು ಲಸಿಕೆಗಳನ್ನು ಪ್ರಾರಂಭಿಸಿದ್ದೇವೆ. ಈವರೆಗೆ 23 ಕೋಟಿ ಜನರಿಗೆ ಚುಚ್ಚುಮದ್ದು ನೀಡಲಾಗಿದೆ. ಇನ್ನು ಮುಂದೆ ಕೇಂದ್ರ ಸರ್ಕಾರವೇ ಲಸಿಕೆಗಳನ್ನು ಖರೀದಿಸಿ, ರಾಜ್ಯಗಳಿಗೆ ಶೇ.75 ರಷ್ಟು ಲಸಿಕೆಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ’ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸೋಮವಾರ ಸಂಜೆ 5ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಕ್ರಾಮಿಕದ ಎರಡನೆ ಅಲೆ ಮತ್ತು ಲಸಿಕಾ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಇದೇ ವೇಳೆ ಲಸಿಕೆ ಕುರಿತಂತೆ ವಿವಿಧ ರಾಜ್ಯಗಳು ಎತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ರೂಪಿಸುವ ಭರವಸೆ ನೀಡಿದರು.

‘ಲಸಿಕಾ ಅಭಿಯಾನದಲ್ಲಿ ರಾಜ್ಯಗಳು ವಿಕೇಂದ್ರಿಕರಣ ಬಯಸಿದವು. ಆರೋಗ್ಯ ರಾಜ್ಯದ ವಿಷಯವಾಗಿದ್ದರಿಂದ ಅದು ಸೂಕ್ತವಾಗಿತ್ತು. ಆದರೆ ರಾಜ್ಯ ಸರ್ಕಾರಗಳು ತಮಗೆ ಎದುರಾದ ಅಡೆತಡೆಗಳನ್ನು ನಿವಾರಿಸಿಕೊಳ್ಳಲು ವಿಫಲವಾದವು’ ಎಂದು ಮೋದಿ ರಾಜ್ಯ ಸರ್ಕಾರಗಳನ್ನು ದೂರಿದರು.

‘ಇನ್ನು ಮುಂದೆ 18-44 ವಯೋಮಾನದವರಿಗೂ ಉಚಿತ ಲಸಿಕೆ ಸಿಗಲಿದೆ. ಜೂನ್‍ 21ರಿಂದ ಉತ್ಪಾದಕರಿಂದ ಕೇಂದ್ರವು ಶೇ. 75 ಲಸಿಕೆಗಳನ್ನು ಖರೀದಿಸಲಿದ್ದು ರಾಜ್ಯಗಳಿಗೆ ಉಚಿತವಾಗಿ ನೀಡಲಿದೆ. ಉಳಿದ ಶೇ. 25ರಷ್ಟನ್ನು ಖಾಸಗಿ ವಲಯ ನೇರ ಉತ್ಪಾದಕರಿಂದ ಖರೀದಿಸಲಿದೆ’ ಎಂದು ಮೋದಿ ಮೊದಲಿನ ಲಸಿಕಾ ನೀತಿಗೆ ವಿಭಿನ್ನವಾದ ಹೊಸ ಲಸಿಕಾ ನೀತಿಯನ್ನು ಘೋಷಿಸಿದರು.

ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯು ದೇಶದ ಕೆಲವು ಭಾಗಗಳಲ್ಲಿ ಕಡಿಮೆಯಾಗುವ ಲಕ್ಷಣಗಳನ್ನು ತೋರಿಸುತ್ತಿರುವ ಸಮಯದಲ್ಲಿ ಮತ್ತು ಅನೇಕ ರಾಜ್ಯಗಳು ಲಾಕ್‌ಡೌನ್‌ಗಳನ್ನು ಸರಾಗಗೊಳಿಸಲು ಆರಂಭಿಸಿದ ಸಂದರ್ಭದಲ್ಲಿ ಮೋದಿಯವರು ಇಂದು ಭಾಷಣ ಮಾಡಿದ್ದಾರೆ. ಪ್ರಕರಣಗಳು ಹೆಚ್ಚಾಗುತ್ತಿದ್ದಾಗ ಪ್ರಧಾನಿ ಮೋದಿ ಕೊನೆಯ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಏಪ್ರಿಲ್‍ 20ರಂದು ಮಾತನಾಡಿದ್ದರು.

‘ಎರಡನೇ ಅಲೆಯು ಚಂಡಮಾರುತದಂತೆ ಭಾರತವನ್ನು ಅಪ್ಪಳಿಸಿದೆ. ಆದರೆ ಲಾಕ್‍ಡೌನ್‍ಗಳನ್ನು ಕೊನೆಯ ಉಪಾಯವಾಗಿ ಮಾತ್ರ ಬಳಸಬೇಕೆಂದು ರಾಜ್ಯಗಳಿಗೆ ಹಿಂದೆಯೇ ಮನವಿ ಮಾಡಿದ್ದೆ’ ಎಂದು ಅವರು ನೆನಪಿಸಿದ್ದಾರೆ.

‘ನಮ್ಮ ವಿಜ್ಞಾನಿಗಳಲ್ಲಿ ನಮಗೆ ನಂಬಿಕೆ ಇತ್ತು, ಅದಕ್ಕಾಗಿಯೇ ಅವರು ತಮ್ಮ ಸಂಶೋಧನೆ ನಡೆಸುತ್ತಿರುವಾಗ, ನಾವು ಲಸಿಕಾ ಅಭಿಯಾನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಸಿದ್ಧಪಡಿಸಿದ್ದೆವು…’ ಎಂದು ಪ್ರಧಾನಿ ತಮ್ಮ ಸರ್ಕಾರದ ಪೂರ್ವಸಿದ್ಧತೆಯ ಬಗ್ಗೆ ವಿವರಿಸಿದರು.

ಈ ಅದೃಶ್ಯ ವೈರಸ್ ವಿರುದ್ಧದ ಹೋರಾಟದಲ್ಲಿ ಆಂಟಿ-ಕೋವಿಡ್ ಪ್ರೋಟೋಕಾಲ್ ಪ್ರಮುಖ ಅಂಶವಾಗಿದೆ. ಲಸಿಕೆ ಇದರ ವಿರುದ್ಧ ರಕ್ಷಣೆಯ ಹೊದಿಕೆಯಂತಿದೆ … ನಮ್ಮಲ್ಲಿ ಭಾರತ ನಿರ್ಮಿತ ಲಸಿಕೆ ಇಲ್ಲದಿದ್ದರೆ ಸನ್ನಿವೇಶ ಹೇಗಿರುತ್ತಿತ್ತು ಎಂದು ಊಹಿಸಿ’ ಎಂದು ಪ್ರಧಾನಿ ಹೇಳಿದರು.

‘ಪೋಲಿಯೊ ಅಥವಾ ಹೆಪಟೈಟಿಸ್ ಬಿ ಆಗಿರಲಿ, ದೇಶವು ದಶಕಗಳವರೆಗೆ ಕಾಯಬೇಕಾಗಿತ್ತು. 2014ರಲ್ಲಿ ದೇಶವು ನಮಗೆ ಅವಕಾಶ ನೀಡಿದಾಗ, ವ್ಯಾಕ್ಸಿನೇಷನ್ ವ್ಯಾಪ್ತಿ ಆಗ ಕೇವಲ ಶೇ.60 ಆಗಿತ್ತು. ಅದು ಆತಂಕಕಾರಿ ಪರಿಸ್ಥಿತಿ. ಅದಕ್ಕೆ ಪರಿಹಾರವಾಗಿ ನಾವು ಮಿಷನ್ ಇಂದ್ರಧನುಷ್ ಅನ್ನು ಪ್ರಾರಂಭಿಸಿದ್ದೇವೆ. ನಾವು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದೇವೆ. ಕೇವಲ 5-6 ವರ್ಷಗಳಲ್ಲಿ, ಲಸಿಕೆ ವ್ಯಾಪ್ತಿಯನ್ನು ಶೇ 60 ರಿಂದ 90ಕ್ಕೆ ಹೆಚ್ಚಿಸಲಾಗಿದೆ’ ಎಂದು ಇತರ ಲಸಿಕಾ ಅಭಿಯಾನಗಳ ಕುರಿತು ತಿಳಿಸಿದರು.

‘ಈಗ ಐಸಿಯು ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಇತರ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲಾಯಿತು. ಏಪ್ರಿಲ್-ಮೇನಲ್ಲಿ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಊಹಿಸಲೂ  ಆಗದಷ್ಟು ಬೇಡಿಕೆ ಇತ್ತು. ನಾವು ಆಕ್ಸಿಜನ್‍ ಎಕ್ಸ್‌ಪ್ರೆಸ್‌ಗಳನ್ನು ಓಡಿಸುತ್ತಿದ್ದೇವೆ. ಸೈನ್ಯ ಮತ್ತು ನೌಕಾಪಡೆಯು ಕೂಡ ಭಾಗಿಯಾಗಿದ್ದವು. ಈಗ ಆಮ್ಲಜನಕ ಉತ್ಪಾದನೆಯನ್ನು ಹತ್ತು ಪಟ್ಟು ಹೆಚ್ಚಿಸಲಾಗಿದೆ’ ಎಂದು ಎರಡನೆ ಅಲೆ ಎದುರಿಸಲು ಮಾಡಲಾದ ಸಿದ್ಧತೆಗಳ ಬಗ್ಗೆ ತಿಳಿಸಿದರು.

‘ನಾವು ಕೊರನಾ ಎರಡನೇ ಅಲೆಯೊಂದಿಗೆ ಹೋರಾಡುತ್ತಿದ್ದೇವೆ. ಇತರ ದೇಶಗಳಂತೆ, ಈ ಅಲೆಯ ಸಮಯದಲ್ಲಿ ಭಾರತವು ಪ್ರಕ್ಷುಬ್ಧ ಸಮಯವನ್ನು ಅನುಭವಿಸಿತು. ಬಹಳಷ್ಟು ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ, ನನ್ನ ಸಂತಾಪ ಅವರೊಂದಿಗೆ ಇದೆ’ ಎಂದರು.

ಇದು ಕಳೆದ 100 ವರ್ಷಗಳಲ್ಲಿ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದೆ. ಈ ಪ್ರಮಾಣದ ಸಾಂಕ್ರಾಮಿಕ ರೋಗಕ್ಕೆ ಆಧುನಿಕ ಪ್ರಪಂಚ ಸಾಕ್ಷಿಯಾಗಿಲ್ಲ. ಹೀಗಾಗಿ ಸವಾಲಿನಿಂದ ಇದರ ನಿರ್ಮೂಲನೆಗೆ ಎಲ್ಲರೂ ಯತ್ನಿಸಬೇಕಿದೆ’ ಎಂದರು.

ರಾಜಕೀಯ ಪಂಡಿತರು, ತಜ್ಞರ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಲಸಿಕಾ ನೀತಿ ಬದಲಿಸುವ ಅಗತ್ಯವಿತ್ತು. 18-44 ವಯೋಮಾನದವರಿಗೂ ಉಚಿತ ನೀಡಲೇಬೇಕಿತ್ತು. ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಸಂಶೋಧನಾ ಸಂಸ್ಥೆಗಳು ಇದನ್ನೇ ಹೇಳಿದ್ದವು. ಜನರಲ್ಲೂ ಸರ್ಕಾರದ ಬಗ್ಗೆ ಅಸಮಾಧಾನ ಶುರುವಾಗಿತ್ತು. ಈಗ ಎಚ್ಚೆತ್ತುಕೊಂಡ ಮೋದಿ ಸರ್ಕಾರ ಲಸಿಕಾ ನೀತಿಯಲ್ಲಿ ಯು-ಟರ್ನ್ ತೆಗೆದುಕೊಂಡಿದೆ, ಇದು ಜನಾಗ್ರಹಕ್ಕೆ ಸಿಕ್ಕ ಗೆಲುವು’ ಎಂದಿದ್ದಾರೆ.


ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 1947 ರಿಂದ 2013 ರವರೆಗೆ ದೇಶದಲ್ಲಿ ಯಾವುದೆ ರೋಗಗಳು ಬಂದರೆ ಅದರ ಲಸಿಕೆ ಗಳನ್ನು ಕಂಡು ಹಿಡಿಯಲು ಹಿಂದಿನ ಸರ್ಕಾರ ಗಳು ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತಿದ್ದರು.
    ಈಗಿನ ಬಿಜೆಪಿ ಸರ್ಕಾರ ತಮ್ಮ ಪಕ್ಷದ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳಲು ಜನರ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ.
    ಹಾಗೂ ಕರೋನಾ ಬಗ್ಗೆ ಜನರಿಗೆ ಧೈರ್ಯ ತೋರಲಿಲ್ಲ. ಸರ್ಕಾರ ಜನರಿಗೆ ಹೆದರಿಸಿ ಜೀವ ಹೋಗೋ ಹಾಗೆ ಮಾಡ್ತಾಯಿದ್ದಾರೆ.ಇವರು ಲಸಿಕೆ ಕಂಡುಹಿಡದಿದ್ದೆವೆ ಅಂತಾರೆ ಜನ ಸಾಯ್ತಾಯಿದ್ದಾರೆ. ಈ ಸರ್ಕಾರ ಉಂಡು ಹೋದಾ,ಕೊಂಡು ಹೋದಾ ಅಂತ ನೇಡ್ಸತಾಯಿದ್ದರೆ. ಈ ಸರ್ಕಾರ ಕ್ಕೆ ಮಾನ,ಮರ್ಯಾದೆ, ನಾಚಿಕೆ ಇಲ್ಲಾ.ಇವರಿಗೆ ದುಡ್ಡೆ ಬೇಕು.

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...