Homeಕರೋನಾ ತಲ್ಲಣಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

ಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

- Advertisement -
- Advertisement -

ಇಷ್ಟು ದೊಡ್ಡ ಜನಸಂಖ್ಯೆಯನ್ನು ನಾವು ಹೇಗೆ ಉಳಿಸಲಿದ್ದೇವೆ ಎಂಬುದರ ಬಗ್ಗೆ ಇಡೀ ದೇಶ ಮಾತನಾಡುತ್ತಿತ್ತು. ಒಂದು ವರ್ಷದಲ್ಲಿ, ನಾವು ಎರಡು ಲಸಿಕೆಗಳನ್ನು ಪ್ರಾರಂಭಿಸಿದ್ದೇವೆ. ಈವರೆಗೆ 23 ಕೋಟಿ ಜನರಿಗೆ ಚುಚ್ಚುಮದ್ದು ನೀಡಲಾಗಿದೆ. ಇನ್ನು ಮುಂದೆ ಕೇಂದ್ರ ಸರ್ಕಾರವೇ ಲಸಿಕೆಗಳನ್ನು ಖರೀದಿಸಿ, ರಾಜ್ಯಗಳಿಗೆ ಶೇ.75 ರಷ್ಟು ಲಸಿಕೆಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ’ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸೋಮವಾರ ಸಂಜೆ 5ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಕ್ರಾಮಿಕದ ಎರಡನೆ ಅಲೆ ಮತ್ತು ಲಸಿಕಾ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಇದೇ ವೇಳೆ ಲಸಿಕೆ ಕುರಿತಂತೆ ವಿವಿಧ ರಾಜ್ಯಗಳು ಎತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ರೂಪಿಸುವ ಭರವಸೆ ನೀಡಿದರು.

‘ಲಸಿಕಾ ಅಭಿಯಾನದಲ್ಲಿ ರಾಜ್ಯಗಳು ವಿಕೇಂದ್ರಿಕರಣ ಬಯಸಿದವು. ಆರೋಗ್ಯ ರಾಜ್ಯದ ವಿಷಯವಾಗಿದ್ದರಿಂದ ಅದು ಸೂಕ್ತವಾಗಿತ್ತು. ಆದರೆ ರಾಜ್ಯ ಸರ್ಕಾರಗಳು ತಮಗೆ ಎದುರಾದ ಅಡೆತಡೆಗಳನ್ನು ನಿವಾರಿಸಿಕೊಳ್ಳಲು ವಿಫಲವಾದವು’ ಎಂದು ಮೋದಿ ರಾಜ್ಯ ಸರ್ಕಾರಗಳನ್ನು ದೂರಿದರು.

‘ಇನ್ನು ಮುಂದೆ 18-44 ವಯೋಮಾನದವರಿಗೂ ಉಚಿತ ಲಸಿಕೆ ಸಿಗಲಿದೆ. ಜೂನ್‍ 21ರಿಂದ ಉತ್ಪಾದಕರಿಂದ ಕೇಂದ್ರವು ಶೇ. 75 ಲಸಿಕೆಗಳನ್ನು ಖರೀದಿಸಲಿದ್ದು ರಾಜ್ಯಗಳಿಗೆ ಉಚಿತವಾಗಿ ನೀಡಲಿದೆ. ಉಳಿದ ಶೇ. 25ರಷ್ಟನ್ನು ಖಾಸಗಿ ವಲಯ ನೇರ ಉತ್ಪಾದಕರಿಂದ ಖರೀದಿಸಲಿದೆ’ ಎಂದು ಮೋದಿ ಮೊದಲಿನ ಲಸಿಕಾ ನೀತಿಗೆ ವಿಭಿನ್ನವಾದ ಹೊಸ ಲಸಿಕಾ ನೀತಿಯನ್ನು ಘೋಷಿಸಿದರು.

ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯು ದೇಶದ ಕೆಲವು ಭಾಗಗಳಲ್ಲಿ ಕಡಿಮೆಯಾಗುವ ಲಕ್ಷಣಗಳನ್ನು ತೋರಿಸುತ್ತಿರುವ ಸಮಯದಲ್ಲಿ ಮತ್ತು ಅನೇಕ ರಾಜ್ಯಗಳು ಲಾಕ್‌ಡೌನ್‌ಗಳನ್ನು ಸರಾಗಗೊಳಿಸಲು ಆರಂಭಿಸಿದ ಸಂದರ್ಭದಲ್ಲಿ ಮೋದಿಯವರು ಇಂದು ಭಾಷಣ ಮಾಡಿದ್ದಾರೆ. ಪ್ರಕರಣಗಳು ಹೆಚ್ಚಾಗುತ್ತಿದ್ದಾಗ ಪ್ರಧಾನಿ ಮೋದಿ ಕೊನೆಯ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಏಪ್ರಿಲ್‍ 20ರಂದು ಮಾತನಾಡಿದ್ದರು.

‘ಎರಡನೇ ಅಲೆಯು ಚಂಡಮಾರುತದಂತೆ ಭಾರತವನ್ನು ಅಪ್ಪಳಿಸಿದೆ. ಆದರೆ ಲಾಕ್‍ಡೌನ್‍ಗಳನ್ನು ಕೊನೆಯ ಉಪಾಯವಾಗಿ ಮಾತ್ರ ಬಳಸಬೇಕೆಂದು ರಾಜ್ಯಗಳಿಗೆ ಹಿಂದೆಯೇ ಮನವಿ ಮಾಡಿದ್ದೆ’ ಎಂದು ಅವರು ನೆನಪಿಸಿದ್ದಾರೆ.

‘ನಮ್ಮ ವಿಜ್ಞಾನಿಗಳಲ್ಲಿ ನಮಗೆ ನಂಬಿಕೆ ಇತ್ತು, ಅದಕ್ಕಾಗಿಯೇ ಅವರು ತಮ್ಮ ಸಂಶೋಧನೆ ನಡೆಸುತ್ತಿರುವಾಗ, ನಾವು ಲಸಿಕಾ ಅಭಿಯಾನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಸಿದ್ಧಪಡಿಸಿದ್ದೆವು…’ ಎಂದು ಪ್ರಧಾನಿ ತಮ್ಮ ಸರ್ಕಾರದ ಪೂರ್ವಸಿದ್ಧತೆಯ ಬಗ್ಗೆ ವಿವರಿಸಿದರು.

ಈ ಅದೃಶ್ಯ ವೈರಸ್ ವಿರುದ್ಧದ ಹೋರಾಟದಲ್ಲಿ ಆಂಟಿ-ಕೋವಿಡ್ ಪ್ರೋಟೋಕಾಲ್ ಪ್ರಮುಖ ಅಂಶವಾಗಿದೆ. ಲಸಿಕೆ ಇದರ ವಿರುದ್ಧ ರಕ್ಷಣೆಯ ಹೊದಿಕೆಯಂತಿದೆ … ನಮ್ಮಲ್ಲಿ ಭಾರತ ನಿರ್ಮಿತ ಲಸಿಕೆ ಇಲ್ಲದಿದ್ದರೆ ಸನ್ನಿವೇಶ ಹೇಗಿರುತ್ತಿತ್ತು ಎಂದು ಊಹಿಸಿ’ ಎಂದು ಪ್ರಧಾನಿ ಹೇಳಿದರು.

‘ಪೋಲಿಯೊ ಅಥವಾ ಹೆಪಟೈಟಿಸ್ ಬಿ ಆಗಿರಲಿ, ದೇಶವು ದಶಕಗಳವರೆಗೆ ಕಾಯಬೇಕಾಗಿತ್ತು. 2014ರಲ್ಲಿ ದೇಶವು ನಮಗೆ ಅವಕಾಶ ನೀಡಿದಾಗ, ವ್ಯಾಕ್ಸಿನೇಷನ್ ವ್ಯಾಪ್ತಿ ಆಗ ಕೇವಲ ಶೇ.60 ಆಗಿತ್ತು. ಅದು ಆತಂಕಕಾರಿ ಪರಿಸ್ಥಿತಿ. ಅದಕ್ಕೆ ಪರಿಹಾರವಾಗಿ ನಾವು ಮಿಷನ್ ಇಂದ್ರಧನುಷ್ ಅನ್ನು ಪ್ರಾರಂಭಿಸಿದ್ದೇವೆ. ನಾವು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದೇವೆ. ಕೇವಲ 5-6 ವರ್ಷಗಳಲ್ಲಿ, ಲಸಿಕೆ ವ್ಯಾಪ್ತಿಯನ್ನು ಶೇ 60 ರಿಂದ 90ಕ್ಕೆ ಹೆಚ್ಚಿಸಲಾಗಿದೆ’ ಎಂದು ಇತರ ಲಸಿಕಾ ಅಭಿಯಾನಗಳ ಕುರಿತು ತಿಳಿಸಿದರು.

‘ಈಗ ಐಸಿಯು ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಇತರ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲಾಯಿತು. ಏಪ್ರಿಲ್-ಮೇನಲ್ಲಿ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಊಹಿಸಲೂ  ಆಗದಷ್ಟು ಬೇಡಿಕೆ ಇತ್ತು. ನಾವು ಆಕ್ಸಿಜನ್‍ ಎಕ್ಸ್‌ಪ್ರೆಸ್‌ಗಳನ್ನು ಓಡಿಸುತ್ತಿದ್ದೇವೆ. ಸೈನ್ಯ ಮತ್ತು ನೌಕಾಪಡೆಯು ಕೂಡ ಭಾಗಿಯಾಗಿದ್ದವು. ಈಗ ಆಮ್ಲಜನಕ ಉತ್ಪಾದನೆಯನ್ನು ಹತ್ತು ಪಟ್ಟು ಹೆಚ್ಚಿಸಲಾಗಿದೆ’ ಎಂದು ಎರಡನೆ ಅಲೆ ಎದುರಿಸಲು ಮಾಡಲಾದ ಸಿದ್ಧತೆಗಳ ಬಗ್ಗೆ ತಿಳಿಸಿದರು.

‘ನಾವು ಕೊರನಾ ಎರಡನೇ ಅಲೆಯೊಂದಿಗೆ ಹೋರಾಡುತ್ತಿದ್ದೇವೆ. ಇತರ ದೇಶಗಳಂತೆ, ಈ ಅಲೆಯ ಸಮಯದಲ್ಲಿ ಭಾರತವು ಪ್ರಕ್ಷುಬ್ಧ ಸಮಯವನ್ನು ಅನುಭವಿಸಿತು. ಬಹಳಷ್ಟು ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ, ನನ್ನ ಸಂತಾಪ ಅವರೊಂದಿಗೆ ಇದೆ’ ಎಂದರು.

ಇದು ಕಳೆದ 100 ವರ್ಷಗಳಲ್ಲಿ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದೆ. ಈ ಪ್ರಮಾಣದ ಸಾಂಕ್ರಾಮಿಕ ರೋಗಕ್ಕೆ ಆಧುನಿಕ ಪ್ರಪಂಚ ಸಾಕ್ಷಿಯಾಗಿಲ್ಲ. ಹೀಗಾಗಿ ಸವಾಲಿನಿಂದ ಇದರ ನಿರ್ಮೂಲನೆಗೆ ಎಲ್ಲರೂ ಯತ್ನಿಸಬೇಕಿದೆ’ ಎಂದರು.

ರಾಜಕೀಯ ಪಂಡಿತರು, ತಜ್ಞರ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಲಸಿಕಾ ನೀತಿ ಬದಲಿಸುವ ಅಗತ್ಯವಿತ್ತು. 18-44 ವಯೋಮಾನದವರಿಗೂ ಉಚಿತ ನೀಡಲೇಬೇಕಿತ್ತು. ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಸಂಶೋಧನಾ ಸಂಸ್ಥೆಗಳು ಇದನ್ನೇ ಹೇಳಿದ್ದವು. ಜನರಲ್ಲೂ ಸರ್ಕಾರದ ಬಗ್ಗೆ ಅಸಮಾಧಾನ ಶುರುವಾಗಿತ್ತು. ಈಗ ಎಚ್ಚೆತ್ತುಕೊಂಡ ಮೋದಿ ಸರ್ಕಾರ ಲಸಿಕಾ ನೀತಿಯಲ್ಲಿ ಯು-ಟರ್ನ್ ತೆಗೆದುಕೊಂಡಿದೆ, ಇದು ಜನಾಗ್ರಹಕ್ಕೆ ಸಿಕ್ಕ ಗೆಲುವು’ ಎಂದಿದ್ದಾರೆ.


ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 1947 ರಿಂದ 2013 ರವರೆಗೆ ದೇಶದಲ್ಲಿ ಯಾವುದೆ ರೋಗಗಳು ಬಂದರೆ ಅದರ ಲಸಿಕೆ ಗಳನ್ನು ಕಂಡು ಹಿಡಿಯಲು ಹಿಂದಿನ ಸರ್ಕಾರ ಗಳು ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತಿದ್ದರು.
    ಈಗಿನ ಬಿಜೆಪಿ ಸರ್ಕಾರ ತಮ್ಮ ಪಕ್ಷದ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳಲು ಜನರ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ.
    ಹಾಗೂ ಕರೋನಾ ಬಗ್ಗೆ ಜನರಿಗೆ ಧೈರ್ಯ ತೋರಲಿಲ್ಲ. ಸರ್ಕಾರ ಜನರಿಗೆ ಹೆದರಿಸಿ ಜೀವ ಹೋಗೋ ಹಾಗೆ ಮಾಡ್ತಾಯಿದ್ದಾರೆ.ಇವರು ಲಸಿಕೆ ಕಂಡುಹಿಡದಿದ್ದೆವೆ ಅಂತಾರೆ ಜನ ಸಾಯ್ತಾಯಿದ್ದಾರೆ. ಈ ಸರ್ಕಾರ ಉಂಡು ಹೋದಾ,ಕೊಂಡು ಹೋದಾ ಅಂತ ನೇಡ್ಸತಾಯಿದ್ದರೆ. ಈ ಸರ್ಕಾರ ಕ್ಕೆ ಮಾನ,ಮರ್ಯಾದೆ, ನಾಚಿಕೆ ಇಲ್ಲಾ.ಇವರಿಗೆ ದುಡ್ಡೆ ಬೇಕು.

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...