Homeಕರೋನಾ ತಲ್ಲಣಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

ಲಸಿಕಾ ನೀತಿಯಲ್ಲಿ ಯು-ಟರ್ನ್: ಲಸಿಕೆ ಜವಾಬ್ದಾರಿ ಕೇಂದ್ರದ್ದು ಎಂದ ಮೋದಿ

- Advertisement -
- Advertisement -

ಇಷ್ಟು ದೊಡ್ಡ ಜನಸಂಖ್ಯೆಯನ್ನು ನಾವು ಹೇಗೆ ಉಳಿಸಲಿದ್ದೇವೆ ಎಂಬುದರ ಬಗ್ಗೆ ಇಡೀ ದೇಶ ಮಾತನಾಡುತ್ತಿತ್ತು. ಒಂದು ವರ್ಷದಲ್ಲಿ, ನಾವು ಎರಡು ಲಸಿಕೆಗಳನ್ನು ಪ್ರಾರಂಭಿಸಿದ್ದೇವೆ. ಈವರೆಗೆ 23 ಕೋಟಿ ಜನರಿಗೆ ಚುಚ್ಚುಮದ್ದು ನೀಡಲಾಗಿದೆ. ಇನ್ನು ಮುಂದೆ ಕೇಂದ್ರ ಸರ್ಕಾರವೇ ಲಸಿಕೆಗಳನ್ನು ಖರೀದಿಸಿ, ರಾಜ್ಯಗಳಿಗೆ ಶೇ.75 ರಷ್ಟು ಲಸಿಕೆಗಳನ್ನು ಉಚಿತವಾಗಿ ನೀಡಲು ನಿರ್ಧರಿಸಿದ್ದೇವೆ’ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸೋಮವಾರ ಸಂಜೆ 5ಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾಂಕ್ರಾಮಿಕದ ಎರಡನೆ ಅಲೆ ಮತ್ತು ಲಸಿಕಾ ಕಾರ್ಯಕ್ರಮಗಳ ಕುರಿತು ಮಾತನಾಡಿದರು. ಇದೇ ವೇಳೆ ಲಸಿಕೆ ಕುರಿತಂತೆ ವಿವಿಧ ರಾಜ್ಯಗಳು ಎತ್ತಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ರೂಪಿಸುವ ಭರವಸೆ ನೀಡಿದರು.

‘ಲಸಿಕಾ ಅಭಿಯಾನದಲ್ಲಿ ರಾಜ್ಯಗಳು ವಿಕೇಂದ್ರಿಕರಣ ಬಯಸಿದವು. ಆರೋಗ್ಯ ರಾಜ್ಯದ ವಿಷಯವಾಗಿದ್ದರಿಂದ ಅದು ಸೂಕ್ತವಾಗಿತ್ತು. ಆದರೆ ರಾಜ್ಯ ಸರ್ಕಾರಗಳು ತಮಗೆ ಎದುರಾದ ಅಡೆತಡೆಗಳನ್ನು ನಿವಾರಿಸಿಕೊಳ್ಳಲು ವಿಫಲವಾದವು’ ಎಂದು ಮೋದಿ ರಾಜ್ಯ ಸರ್ಕಾರಗಳನ್ನು ದೂರಿದರು.

‘ಇನ್ನು ಮುಂದೆ 18-44 ವಯೋಮಾನದವರಿಗೂ ಉಚಿತ ಲಸಿಕೆ ಸಿಗಲಿದೆ. ಜೂನ್‍ 21ರಿಂದ ಉತ್ಪಾದಕರಿಂದ ಕೇಂದ್ರವು ಶೇ. 75 ಲಸಿಕೆಗಳನ್ನು ಖರೀದಿಸಲಿದ್ದು ರಾಜ್ಯಗಳಿಗೆ ಉಚಿತವಾಗಿ ನೀಡಲಿದೆ. ಉಳಿದ ಶೇ. 25ರಷ್ಟನ್ನು ಖಾಸಗಿ ವಲಯ ನೇರ ಉತ್ಪಾದಕರಿಂದ ಖರೀದಿಸಲಿದೆ’ ಎಂದು ಮೋದಿ ಮೊದಲಿನ ಲಸಿಕಾ ನೀತಿಗೆ ವಿಭಿನ್ನವಾದ ಹೊಸ ಲಸಿಕಾ ನೀತಿಯನ್ನು ಘೋಷಿಸಿದರು.

ಕೋವಿಡ್ ಸಾಂಕ್ರಾಮಿಕದ ಎರಡನೇ ಅಲೆಯು ದೇಶದ ಕೆಲವು ಭಾಗಗಳಲ್ಲಿ ಕಡಿಮೆಯಾಗುವ ಲಕ್ಷಣಗಳನ್ನು ತೋರಿಸುತ್ತಿರುವ ಸಮಯದಲ್ಲಿ ಮತ್ತು ಅನೇಕ ರಾಜ್ಯಗಳು ಲಾಕ್‌ಡೌನ್‌ಗಳನ್ನು ಸರಾಗಗೊಳಿಸಲು ಆರಂಭಿಸಿದ ಸಂದರ್ಭದಲ್ಲಿ ಮೋದಿಯವರು ಇಂದು ಭಾಷಣ ಮಾಡಿದ್ದಾರೆ. ಪ್ರಕರಣಗಳು ಹೆಚ್ಚಾಗುತ್ತಿದ್ದಾಗ ಪ್ರಧಾನಿ ಮೋದಿ ಕೊನೆಯ ಬಾರಿಗೆ ರಾಷ್ಟ್ರವನ್ನು ಉದ್ದೇಶಿಸಿ ಏಪ್ರಿಲ್‍ 20ರಂದು ಮಾತನಾಡಿದ್ದರು.

‘ಎರಡನೇ ಅಲೆಯು ಚಂಡಮಾರುತದಂತೆ ಭಾರತವನ್ನು ಅಪ್ಪಳಿಸಿದೆ. ಆದರೆ ಲಾಕ್‍ಡೌನ್‍ಗಳನ್ನು ಕೊನೆಯ ಉಪಾಯವಾಗಿ ಮಾತ್ರ ಬಳಸಬೇಕೆಂದು ರಾಜ್ಯಗಳಿಗೆ ಹಿಂದೆಯೇ ಮನವಿ ಮಾಡಿದ್ದೆ’ ಎಂದು ಅವರು ನೆನಪಿಸಿದ್ದಾರೆ.

‘ನಮ್ಮ ವಿಜ್ಞಾನಿಗಳಲ್ಲಿ ನಮಗೆ ನಂಬಿಕೆ ಇತ್ತು, ಅದಕ್ಕಾಗಿಯೇ ಅವರು ತಮ್ಮ ಸಂಶೋಧನೆ ನಡೆಸುತ್ತಿರುವಾಗ, ನಾವು ಲಸಿಕಾ ಅಭಿಯಾನಕ್ಕೆ ಅಗತ್ಯವಾದ ಸೌಲಭ್ಯಗಳನ್ನು ಸಿದ್ಧಪಡಿಸಿದ್ದೆವು…’ ಎಂದು ಪ್ರಧಾನಿ ತಮ್ಮ ಸರ್ಕಾರದ ಪೂರ್ವಸಿದ್ಧತೆಯ ಬಗ್ಗೆ ವಿವರಿಸಿದರು.

ಈ ಅದೃಶ್ಯ ವೈರಸ್ ವಿರುದ್ಧದ ಹೋರಾಟದಲ್ಲಿ ಆಂಟಿ-ಕೋವಿಡ್ ಪ್ರೋಟೋಕಾಲ್ ಪ್ರಮುಖ ಅಂಶವಾಗಿದೆ. ಲಸಿಕೆ ಇದರ ವಿರುದ್ಧ ರಕ್ಷಣೆಯ ಹೊದಿಕೆಯಂತಿದೆ … ನಮ್ಮಲ್ಲಿ ಭಾರತ ನಿರ್ಮಿತ ಲಸಿಕೆ ಇಲ್ಲದಿದ್ದರೆ ಸನ್ನಿವೇಶ ಹೇಗಿರುತ್ತಿತ್ತು ಎಂದು ಊಹಿಸಿ’ ಎಂದು ಪ್ರಧಾನಿ ಹೇಳಿದರು.

‘ಪೋಲಿಯೊ ಅಥವಾ ಹೆಪಟೈಟಿಸ್ ಬಿ ಆಗಿರಲಿ, ದೇಶವು ದಶಕಗಳವರೆಗೆ ಕಾಯಬೇಕಾಗಿತ್ತು. 2014ರಲ್ಲಿ ದೇಶವು ನಮಗೆ ಅವಕಾಶ ನೀಡಿದಾಗ, ವ್ಯಾಕ್ಸಿನೇಷನ್ ವ್ಯಾಪ್ತಿ ಆಗ ಕೇವಲ ಶೇ.60 ಆಗಿತ್ತು. ಅದು ಆತಂಕಕಾರಿ ಪರಿಸ್ಥಿತಿ. ಅದಕ್ಕೆ ಪರಿಹಾರವಾಗಿ ನಾವು ಮಿಷನ್ ಇಂದ್ರಧನುಷ್ ಅನ್ನು ಪ್ರಾರಂಭಿಸಿದ್ದೇವೆ. ನಾವು ಸಮರೋಪಾದಿಯಲ್ಲಿ ಕೆಲಸ ಮಾಡಿದ್ದೇವೆ. ಕೇವಲ 5-6 ವರ್ಷಗಳಲ್ಲಿ, ಲಸಿಕೆ ವ್ಯಾಪ್ತಿಯನ್ನು ಶೇ 60 ರಿಂದ 90ಕ್ಕೆ ಹೆಚ್ಚಿಸಲಾಗಿದೆ’ ಎಂದು ಇತರ ಲಸಿಕಾ ಅಭಿಯಾನಗಳ ಕುರಿತು ತಿಳಿಸಿದರು.

‘ಈಗ ಐಸಿಯು ಹಾಸಿಗೆಗಳು, ವೆಂಟಿಲೇಟರ್‌ಗಳು ಮತ್ತು ಇತರ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲಾಯಿತು. ಏಪ್ರಿಲ್-ಮೇನಲ್ಲಿ ಎರಡನೇ ಅಲೆಯಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಊಹಿಸಲೂ  ಆಗದಷ್ಟು ಬೇಡಿಕೆ ಇತ್ತು. ನಾವು ಆಕ್ಸಿಜನ್‍ ಎಕ್ಸ್‌ಪ್ರೆಸ್‌ಗಳನ್ನು ಓಡಿಸುತ್ತಿದ್ದೇವೆ. ಸೈನ್ಯ ಮತ್ತು ನೌಕಾಪಡೆಯು ಕೂಡ ಭಾಗಿಯಾಗಿದ್ದವು. ಈಗ ಆಮ್ಲಜನಕ ಉತ್ಪಾದನೆಯನ್ನು ಹತ್ತು ಪಟ್ಟು ಹೆಚ್ಚಿಸಲಾಗಿದೆ’ ಎಂದು ಎರಡನೆ ಅಲೆ ಎದುರಿಸಲು ಮಾಡಲಾದ ಸಿದ್ಧತೆಗಳ ಬಗ್ಗೆ ತಿಳಿಸಿದರು.

‘ನಾವು ಕೊರನಾ ಎರಡನೇ ಅಲೆಯೊಂದಿಗೆ ಹೋರಾಡುತ್ತಿದ್ದೇವೆ. ಇತರ ದೇಶಗಳಂತೆ, ಈ ಅಲೆಯ ಸಮಯದಲ್ಲಿ ಭಾರತವು ಪ್ರಕ್ಷುಬ್ಧ ಸಮಯವನ್ನು ಅನುಭವಿಸಿತು. ಬಹಳಷ್ಟು ಜನರು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡಿದ್ದಾರೆ, ನನ್ನ ಸಂತಾಪ ಅವರೊಂದಿಗೆ ಇದೆ’ ಎಂದರು.

ಇದು ಕಳೆದ 100 ವರ್ಷಗಳಲ್ಲಿ ಅತಿದೊಡ್ಡ ಸಾಂಕ್ರಾಮಿಕ ರೋಗವಾಗಿದೆ. ಈ ಪ್ರಮಾಣದ ಸಾಂಕ್ರಾಮಿಕ ರೋಗಕ್ಕೆ ಆಧುನಿಕ ಪ್ರಪಂಚ ಸಾಕ್ಷಿಯಾಗಿಲ್ಲ. ಹೀಗಾಗಿ ಸವಾಲಿನಿಂದ ಇದರ ನಿರ್ಮೂಲನೆಗೆ ಎಲ್ಲರೂ ಯತ್ನಿಸಬೇಕಿದೆ’ ಎಂದರು.

ರಾಜಕೀಯ ಪಂಡಿತರು, ತಜ್ಞರ ಪ್ರಕಾರ, ಕೇಂದ್ರ ಸರ್ಕಾರಕ್ಕೆ ಲಸಿಕಾ ನೀತಿ ಬದಲಿಸುವ ಅಗತ್ಯವಿತ್ತು. 18-44 ವಯೋಮಾನದವರಿಗೂ ಉಚಿತ ನೀಡಲೇಬೇಕಿತ್ತು. ಸುಪ್ರೀಂ ಕೋರ್ಟ್ ಸೇರಿದಂತೆ ವಿವಿಧ ಸಂಶೋಧನಾ ಸಂಸ್ಥೆಗಳು ಇದನ್ನೇ ಹೇಳಿದ್ದವು. ಜನರಲ್ಲೂ ಸರ್ಕಾರದ ಬಗ್ಗೆ ಅಸಮಾಧಾನ ಶುರುವಾಗಿತ್ತು. ಈಗ ಎಚ್ಚೆತ್ತುಕೊಂಡ ಮೋದಿ ಸರ್ಕಾರ ಲಸಿಕಾ ನೀತಿಯಲ್ಲಿ ಯು-ಟರ್ನ್ ತೆಗೆದುಕೊಂಡಿದೆ, ಇದು ಜನಾಗ್ರಹಕ್ಕೆ ಸಿಕ್ಕ ಗೆಲುವು’ ಎಂದಿದ್ದಾರೆ.


ಇದನ್ನೂ ಓದಿ: ದೇಶವನ್ನು ಉದ್ದೇಶಿಸಿ ಪ್ರಧಾನಿ ಮಾತು- ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. 1947 ರಿಂದ 2013 ರವರೆಗೆ ದೇಶದಲ್ಲಿ ಯಾವುದೆ ರೋಗಗಳು ಬಂದರೆ ಅದರ ಲಸಿಕೆ ಗಳನ್ನು ಕಂಡು ಹಿಡಿಯಲು ಹಿಂದಿನ ಸರ್ಕಾರ ಗಳು ಜನರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳುತಿದ್ದರು.
    ಈಗಿನ ಬಿಜೆಪಿ ಸರ್ಕಾರ ತಮ್ಮ ಪಕ್ಷದ ವ್ಯಕ್ತಿತ್ವವನ್ನು ಹೆಚ್ಚಿಸಿಕೊಳ್ಳಲು ಜನರ ಬಗ್ಗೆ ನಿರ್ಲಕ್ಷ್ಯ ತೋರಿದ್ದಾರೆ.
    ಹಾಗೂ ಕರೋನಾ ಬಗ್ಗೆ ಜನರಿಗೆ ಧೈರ್ಯ ತೋರಲಿಲ್ಲ. ಸರ್ಕಾರ ಜನರಿಗೆ ಹೆದರಿಸಿ ಜೀವ ಹೋಗೋ ಹಾಗೆ ಮಾಡ್ತಾಯಿದ್ದಾರೆ.ಇವರು ಲಸಿಕೆ ಕಂಡುಹಿಡದಿದ್ದೆವೆ ಅಂತಾರೆ ಜನ ಸಾಯ್ತಾಯಿದ್ದಾರೆ. ಈ ಸರ್ಕಾರ ಉಂಡು ಹೋದಾ,ಕೊಂಡು ಹೋದಾ ಅಂತ ನೇಡ್ಸತಾಯಿದ್ದರೆ. ಈ ಸರ್ಕಾರ ಕ್ಕೆ ಮಾನ,ಮರ್ಯಾದೆ, ನಾಚಿಕೆ ಇಲ್ಲಾ.ಇವರಿಗೆ ದುಡ್ಡೆ ಬೇಕು.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....