Homeಕರ್ನಾಟಕವಕೀಲರ ವಿರುದ್ಧ UAPA ದುರ್ಬಳಕೆ: ನ್ಯಾಯಕ್ಕಾಗಿ ವಕೀಲರ ಸಂಘ ಪ್ರತಿಭಟನೆ

ವಕೀಲರ ವಿರುದ್ಧ UAPA ದುರ್ಬಳಕೆ: ನ್ಯಾಯಕ್ಕಾಗಿ ವಕೀಲರ ಸಂಘ ಪ್ರತಿಭಟನೆ

- Advertisement -
- Advertisement -

ತ್ರಿಪುರಾದಲ್ಲಿ ನಡೆದ ಕೋಮುಗಲಭೆ ಕುರಿತು ಸತ್ಯಶೋಧನೆ ನಡೆಸಿದ ತಂಡದ ಭಾಗವಾಗಿದ್ದ ಇಬ್ಬರು ವಕೀಲರಿಗೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಹಾಗೂ ಐಪಿಸಿ ಅಡಿಯಲ್ಲಿ ನೋಟಿಸ್‌ ನೀಡಿರುವುದನ್ನು ಖಂಡಿಸಿ ‘ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘ’ದ(AILAJ) ಕರ್ನಾಟಕ ರಾಜ್ಯ ಘಟಕವು ಪ್ರತಿಭಟನೆ ನಡೆಸಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಅಡ್ವೊಕೇಟ್‌ ಅನ್ಸರ್‌ ಇಂದೋರಿ ಮತ್ತು ನಾಗರೀಕ ಹಕ್ಕುಗಳ ಸಂಘಟನೆಯಾದ ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟಿಸ್‌ (ಪಿಯುಸಿಎಲ್‌, ದೆಹಲಿ)ನ ವಕೀಲರಾದ ಮುಖೇಶ್‌ ಅವರಿಗೆ ತ್ರಿಪುರಾ ಪೊಲೀಸರು ನೋಟಿಸ್‌ ಕಳುಹಿಸಿದ್ದಾರೆ. ಆ ನೋಟಿಸ್‌ನಲ್ಲಿ ‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಕಲ್ಪಿತ ಮತ್ತು ಸುಳ್ಳು ಹೇಳಿಕೆಗಳು/ ಕಾಮೆಂಟ್‌ಗಳನ್ನು ತಕ್ಷಣವೇ ಅಳಿಸಬೇಕು’ ಎಂದು ಹೇಳಿದ್ದು, ನವೆಂಬರ್‌ 10ರೊಳಗೆ ಪಶ್ಚಿಮ ಅಗರ್ತಲಾ ಪೊಲೀಸ್‌ ಠಾಣೆಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ಗಳು ತಿಳಿಸಿವೆ.

ಯುಎಪಿಎ ಹೊರತಾಗಿ, ಸೆಕ್ಷನ್‌ 153 ಎ ಮತ್ತು ಬಿ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 469 (ಮಾಹಿತಿಗೆ ಹಾನಿ ಮಾಡುವ ಉದ್ದೇಶಕ್ಕಾಗಿ ನಕಲು ಮಾಡುವುದು), 120 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಹಾಗೂ ಐಪಿಸಿಯ 120 ಬಿ (ಕ್ರಿಮಿನಲ್‌ ಪಿತೂರಿಗಾಗಿ ಶಿಕ್ಷೆ) ಇವೆಲ್ಲದರಡಿಯಲ್ಲಿ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಈ ಕುರಿತು ಮಾತನಾಡಿದ ವಕೀಲರಾದ ಮುಖೇಶ್‌, ‘ವಾಸ್ತವತೆಯನ್ನು ತಿಳಿಯಲು ತ್ರಿಪುರಾಕ್ಕೆ ಹೋದ ಸತ್ಯಶೋಧನಾ ತಂಡದ  ಭಾಗವಾಗಿದ್ದೇನೆ. ಸಾಮಾಜಿಕವಾಗಿ ನಾನು ನೋಡಿದ್ದನ್ನು ಹಂಚಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲ ಎಹ್ತೇಶಾಮ್ ಹಶ್ಮಿ, ವಕೀಲ ಅಮಿತ್ ಶ್ರೀವಾಸ್ತವ್ (ಸಮನ್ವಯ ಸಮಿತಿ, ಪ್ರಜಾಪ್ರಭುತ್ವಕ್ಕಾಗಿ ವಕೀಲರು), ವಕೀಲ ಅನ್ಸಾರ್ ಇಂದೋರಿ ಮತ್ತು ವಕೀಲ ಮುಖೇಶ್ ಅವರನ್ನು ಒಳಗೊಂಡ ಸತ್ಯಶೋಧನಾ ತಂಡವು ಮಂಗಳವಾರ ದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ವರದಿಯನ್ನು ಬಿಡುಗಡೆ ಮಾಡಿದೆ.

ಸತ್ಯಶೋಧನಾ ವರದಿ ಏನು ಹೇಳುತ್ತದೆ?

‘ಹ್ಯುಮ್ಯಾನಿಟಿ ಅಂಡರ್‌ ಅಟ್ಯಾಕ್‌ ಇನ್ ತ್ರಿಪುರ; #ಮುಸ್ಲಿಂ ಲೀವ್ಸ್‌ ಮ್ಯಾಟರ್‌’ ಶೀರ್ಷಿಕೆಯಡಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ತ್ರಿಪುರಾದಲ್ಲಿನ ಬಿಜೆಪಿ ಸರ್ಕಾರವು ಹಿಂಸಾಚಾರವನ್ನು ನಿಲ್ಲಿಸಬಹುದಿತ್ತು ಆದರೆ ಅವರು ರಾಜ್ಯದಲ್ಲಿ ಗಲಭೆ ನಡೆಸಲು ಹಿಂದುತ್ವದ ಗುಂಪುಗಳಿಗೆ ಮುಕ್ತ ಅವಕಾಶ ನೀಡುವ ದಾರಿಯನ್ನು ಆರಿಸಿಕೊಂಡರು ಎಂಬುದನ್ನು ತಿಳಿಸಿದೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಬಜರಂಗದಳ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಂತಹ ಹಿಂದೂ ರಾಷ್ಟ್ರೀಯತಾವಾದಿ ಸಂಘಟನೆಗಳು ಜೆಸಿಬಿಗಳೊಂದಿಗೆ ರ್‍ಯಾಲಿಗಳನ್ನು ನಡೆಸಿವೆ ಮತ್ತು ಹಿಂಸೆಗೆ ಪ್ರಚೋದನೆ ನೀಡಿವೆ ಎಂದು ವರದಿಯಲ್ಲಿದೆ.

ವಕೀಲರ ಮೇಲಿನ ಈ ಆರೋಪವನ್ನು ನ್ಯಾಯಕ್ಕಾಗಿ ವಕೀಲರ ಸಂಘ ಖಂಡಿಸಿದ್ದು, ಈ ನೋಟಿಸ್‌ಗಳನ್ನು ವಾಪಸ್‌ ಪಡೆಯಬೇಕು. ಪ್ರಜಾಪ್ರಭುತ್ವದ ಕತ್ತು ಹಿಸುಕುವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಹುಲ್‌ ಗಾಂಧಿ ಟೀಕೆ

ತ್ರಿಪುರಾ ರಾಜ್ಯದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಜನರನ್ನು ಬಂಧಿಸುವ ಮೂಲಕ ಸತ್ಯವನ್ನು ಮೌನಗೊಳಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ತ್ರಿಪುರಾದಲ್ಲಿ ಕೋಮು ಘರ್ಷಣೆಗಳು ಮತ್ತು ಮಸೀದಿಗಳ ಮೇಲಿನ ದಾಳಿಗಳ ಕುರಿತು ಪತ್ರಕರ್ತರು, ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಯುಎಪಿಎಯನ್ನು ಜಾರಿಗೊಳಿಸಿದ ನಂತರ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದಾರೆ.

“ತ್ರಿಪುರಾ ಹೊತ್ತಿ ಉರಿಯುತ್ತಿದೆ” ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅವರು, ತ್ರಿಪುರಾ ಹೊತ್ತಿ ಉರಿಯುತ್ತಿದೆ ಎಂದರೆ, ಅದನ್ನು ಸರಿಪಡಿಸುವ ಕ್ರಮ ಕೈಗೊಳ್ಳಬೇಕು ಎಂಬುದರ ಕರೆ ಅದು. ಆದರೆ, ಬಿಜೆಪಿಯು ತನ್ನ ನೆಚ್ಚಿನ ಕೆಲಸ ಮಾಹಿತಿದಾರರನ್ನು ಹೊಡೆದುರುಳಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿರಿ: ತ್ರಿಪುರ ಕೋಮು ಗಲಭೆ: 68 ಜನರ ಟ್ವಿಟರ್‌ ಖಾತೆ ಅಮಾನತುಗೊಳಿಸುವಂತೆ ಟ್ವಿಟರ್‌ಗೆ ಪತ್ರ ಬರೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...