Homeಕರ್ನಾಟಕವಕೀಲರ ವಿರುದ್ಧ UAPA ದುರ್ಬಳಕೆ: ನ್ಯಾಯಕ್ಕಾಗಿ ವಕೀಲರ ಸಂಘ ಪ್ರತಿಭಟನೆ

ವಕೀಲರ ವಿರುದ್ಧ UAPA ದುರ್ಬಳಕೆ: ನ್ಯಾಯಕ್ಕಾಗಿ ವಕೀಲರ ಸಂಘ ಪ್ರತಿಭಟನೆ

- Advertisement -
- Advertisement -

ತ್ರಿಪುರಾದಲ್ಲಿ ನಡೆದ ಕೋಮುಗಲಭೆ ಕುರಿತು ಸತ್ಯಶೋಧನೆ ನಡೆಸಿದ ತಂಡದ ಭಾಗವಾಗಿದ್ದ ಇಬ್ಬರು ವಕೀಲರಿಗೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಹಾಗೂ ಐಪಿಸಿ ಅಡಿಯಲ್ಲಿ ನೋಟಿಸ್‌ ನೀಡಿರುವುದನ್ನು ಖಂಡಿಸಿ ‘ನ್ಯಾಯಕ್ಕಾಗಿ ಅಖಿಲ ಭಾರತ ವಕೀಲರ ಸಂಘ’ದ(AILAJ) ಕರ್ನಾಟಕ ರಾಜ್ಯ ಘಟಕವು ಪ್ರತಿಭಟನೆ ನಡೆಸಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಅಡ್ವೊಕೇಟ್‌ ಅನ್ಸರ್‌ ಇಂದೋರಿ ಮತ್ತು ನಾಗರೀಕ ಹಕ್ಕುಗಳ ಸಂಘಟನೆಯಾದ ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟಿಸ್‌ (ಪಿಯುಸಿಎಲ್‌, ದೆಹಲಿ)ನ ವಕೀಲರಾದ ಮುಖೇಶ್‌ ಅವರಿಗೆ ತ್ರಿಪುರಾ ಪೊಲೀಸರು ನೋಟಿಸ್‌ ಕಳುಹಿಸಿದ್ದಾರೆ. ಆ ನೋಟಿಸ್‌ನಲ್ಲಿ ‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಕಲ್ಪಿತ ಮತ್ತು ಸುಳ್ಳು ಹೇಳಿಕೆಗಳು/ ಕಾಮೆಂಟ್‌ಗಳನ್ನು ತಕ್ಷಣವೇ ಅಳಿಸಬೇಕು’ ಎಂದು ಹೇಳಿದ್ದು, ನವೆಂಬರ್‌ 10ರೊಳಗೆ ಪಶ್ಚಿಮ ಅಗರ್ತಲಾ ಪೊಲೀಸ್‌ ಠಾಣೆಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ಗಳು ತಿಳಿಸಿವೆ.

ಯುಎಪಿಎ ಹೊರತಾಗಿ, ಸೆಕ್ಷನ್‌ 153 ಎ ಮತ್ತು ಬಿ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 469 (ಮಾಹಿತಿಗೆ ಹಾನಿ ಮಾಡುವ ಉದ್ದೇಶಕ್ಕಾಗಿ ನಕಲು ಮಾಡುವುದು), 120 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಹಾಗೂ ಐಪಿಸಿಯ 120 ಬಿ (ಕ್ರಿಮಿನಲ್‌ ಪಿತೂರಿಗಾಗಿ ಶಿಕ್ಷೆ) ಇವೆಲ್ಲದರಡಿಯಲ್ಲಿ ನೋಟಿಸ್‌ ನೀಡಲಾಗಿದೆ.

ಇದನ್ನೂ ಓದಿರಿ: ಒರಿಸ್ಸಾ: ದಲಿತರ ಗುಡಿಸಲುಗಳಿಗೆ ಬೆಂಕಿ; ಹತ್ತು ಮಂದಿಗೆ ಗಾಯ

ಈ ಕುರಿತು ಮಾತನಾಡಿದ ವಕೀಲರಾದ ಮುಖೇಶ್‌, ‘ವಾಸ್ತವತೆಯನ್ನು ತಿಳಿಯಲು ತ್ರಿಪುರಾಕ್ಕೆ ಹೋದ ಸತ್ಯಶೋಧನಾ ತಂಡದ  ಭಾಗವಾಗಿದ್ದೇನೆ. ಸಾಮಾಜಿಕವಾಗಿ ನಾನು ನೋಡಿದ್ದನ್ನು ಹಂಚಿಕೊಂಡಿದ್ದೇನೆ’ ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ವಕೀಲ ಎಹ್ತೇಶಾಮ್ ಹಶ್ಮಿ, ವಕೀಲ ಅಮಿತ್ ಶ್ರೀವಾಸ್ತವ್ (ಸಮನ್ವಯ ಸಮಿತಿ, ಪ್ರಜಾಪ್ರಭುತ್ವಕ್ಕಾಗಿ ವಕೀಲರು), ವಕೀಲ ಅನ್ಸಾರ್ ಇಂದೋರಿ ಮತ್ತು ವಕೀಲ ಮುಖೇಶ್ ಅವರನ್ನು ಒಳಗೊಂಡ ಸತ್ಯಶೋಧನಾ ತಂಡವು ಮಂಗಳವಾರ ದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ವರದಿಯನ್ನು ಬಿಡುಗಡೆ ಮಾಡಿದೆ.

ಸತ್ಯಶೋಧನಾ ವರದಿ ಏನು ಹೇಳುತ್ತದೆ?

‘ಹ್ಯುಮ್ಯಾನಿಟಿ ಅಂಡರ್‌ ಅಟ್ಯಾಕ್‌ ಇನ್ ತ್ರಿಪುರ; #ಮುಸ್ಲಿಂ ಲೀವ್ಸ್‌ ಮ್ಯಾಟರ್‌’ ಶೀರ್ಷಿಕೆಯಡಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ತ್ರಿಪುರಾದಲ್ಲಿನ ಬಿಜೆಪಿ ಸರ್ಕಾರವು ಹಿಂಸಾಚಾರವನ್ನು ನಿಲ್ಲಿಸಬಹುದಿತ್ತು ಆದರೆ ಅವರು ರಾಜ್ಯದಲ್ಲಿ ಗಲಭೆ ನಡೆಸಲು ಹಿಂದುತ್ವದ ಗುಂಪುಗಳಿಗೆ ಮುಕ್ತ ಅವಕಾಶ ನೀಡುವ ದಾರಿಯನ್ನು ಆರಿಸಿಕೊಂಡರು ಎಂಬುದನ್ನು ತಿಳಿಸಿದೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಬಜರಂಗದಳ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಂತಹ ಹಿಂದೂ ರಾಷ್ಟ್ರೀಯತಾವಾದಿ ಸಂಘಟನೆಗಳು ಜೆಸಿಬಿಗಳೊಂದಿಗೆ ರ್‍ಯಾಲಿಗಳನ್ನು ನಡೆಸಿವೆ ಮತ್ತು ಹಿಂಸೆಗೆ ಪ್ರಚೋದನೆ ನೀಡಿವೆ ಎಂದು ವರದಿಯಲ್ಲಿದೆ.

ವಕೀಲರ ಮೇಲಿನ ಈ ಆರೋಪವನ್ನು ನ್ಯಾಯಕ್ಕಾಗಿ ವಕೀಲರ ಸಂಘ ಖಂಡಿಸಿದ್ದು, ಈ ನೋಟಿಸ್‌ಗಳನ್ನು ವಾಪಸ್‌ ಪಡೆಯಬೇಕು. ಪ್ರಜಾಪ್ರಭುತ್ವದ ಕತ್ತು ಹಿಸುಕುವನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ರಾಹುಲ್‌ ಗಾಂಧಿ ಟೀಕೆ

ತ್ರಿಪುರಾ ರಾಜ್ಯದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಜನರನ್ನು ಬಂಧಿಸುವ ಮೂಲಕ ಸತ್ಯವನ್ನು ಮೌನಗೊಳಿಸಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೋಮವಾರ ಹೇಳಿದ್ದಾರೆ.

ತ್ರಿಪುರಾದಲ್ಲಿ ಕೋಮು ಘರ್ಷಣೆಗಳು ಮತ್ತು ಮಸೀದಿಗಳ ಮೇಲಿನ ದಾಳಿಗಳ ಕುರಿತು ಪತ್ರಕರ್ತರು, ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರ ವಿರುದ್ಧ ಪೊಲೀಸರು ಯುಎಪಿಎಯನ್ನು ಜಾರಿಗೊಳಿಸಿದ ನಂತರ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದಾರೆ.

“ತ್ರಿಪುರಾ ಹೊತ್ತಿ ಉರಿಯುತ್ತಿದೆ” ಎಂಬ ಹ್ಯಾಶ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅವರು, ತ್ರಿಪುರಾ ಹೊತ್ತಿ ಉರಿಯುತ್ತಿದೆ ಎಂದರೆ, ಅದನ್ನು ಸರಿಪಡಿಸುವ ಕ್ರಮ ಕೈಗೊಳ್ಳಬೇಕು ಎಂಬುದರ ಕರೆ ಅದು. ಆದರೆ, ಬಿಜೆಪಿಯು ತನ್ನ ನೆಚ್ಚಿನ ಕೆಲಸ ಮಾಹಿತಿದಾರರನ್ನು ಹೊಡೆದುರುಳಿಸುವ ಕೆಲಸಕ್ಕೆ ಮುಂದಾಗಿದೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿರಿ: ತ್ರಿಪುರ ಕೋಮು ಗಲಭೆ: 68 ಜನರ ಟ್ವಿಟರ್‌ ಖಾತೆ ಅಮಾನತುಗೊಳಿಸುವಂತೆ ಟ್ವಿಟರ್‌ಗೆ ಪತ್ರ ಬರೆದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...