Homeಚಳವಳಿತ್ರಿಪುರಾ ಹಿಂಸಾಚಾರದ ಸತ್ಯಶೋಧನೆ ನಡೆಸಿದ ವಕೀಲರ ಮೇಲೆ ಯುಎಪಿಎ ಪ್ರಕರಣ!

ತ್ರಿಪುರಾ ಹಿಂಸಾಚಾರದ ಸತ್ಯಶೋಧನೆ ನಡೆಸಿದ ವಕೀಲರ ಮೇಲೆ ಯುಎಪಿಎ ಪ್ರಕರಣ!

ಕೂಡಲೇ ಯುಎಪಿಎ ಪ್ರಕರಣ ಕೈಬಿಡುವಂತೆ ಆಗ್ರಹಿಸಿ ನವೆಂಬರ್ 05 ರಂದು ತ್ರಿಪುರ ರಾಜ್ಯದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.

- Advertisement -
- Advertisement -

ತ್ರಿಪುರಾದಲ್ಲಿ ನಡೆದ ಕೋಮುಗಲಭೆ ಕುರಿತು ಸತ್ಯಶೋಧನೆ ನಡೆಸಿದ ತಂಡದ ಭಾಗವಾಗಿದ್ದ ಇಬ್ಬರು ವಕೀಲರ ಮೇಲೆ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ ಎಂದು ಲೀಫ್‌ಲೆಟ್‌ ವರದಿ ಮಾಡಿದೆ.

ರಾಷ್ಟ್ರೀಯ ಮಾನವ ಹಕ್ಕುಗಳ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಅಡ್ವೊಕೇಟ್‌ ಅನ್ಸರ್‌ ಇಂದೋರಿ ಮತ್ತು ನಾಗರೀಕ ಹಕ್ಕುಗಳ ಸಂಘಟನೆಯಾದ ಪೀಪಲ್ಸ್‌ ಯೂನಿಯನ್‌ ಫಾರ್‌ ಸಿವಿಲ್‌ ಲಿಬರ್ಟಿಸ್‌ (ಪಿಯುಸಿಎಲ್‌, ದೆಹಲಿ)ನ ವಕೀಲರಾದ ಮುಖೇಶ್‌ ಅವರಿಗೆ ತ್ರಿಪುರಾ ಪೊಲೀಸರು ನೋಟಿಸ್‌ ಕಳುಹಿಸಿದ್ದಾರೆ. ಆ ನೋಟಿಸ್‌ನಲ್ಲಿ‘ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಕಲ್ಪಿತ ಮತ್ತು ಸುಳ್ಳು ಹೇಳಿಕೆಗಳು/ ಕಾಮೆಂಟ್‌ಗಳನ್ನು ತಕ್ಷಣವೇ ಅಳಿಸುವಂತೆ’ ಹೇಳಿದ್ದು, ನವೆಂಬರ್‌ 10ರೊಳಗೆ ಪಶ್ಚಿಮ ಅಗರ್ತಲಾ ಪೊಲೀಸ್‌ ಠಾಣೆಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ಗಳು ತಿಳಿಸಿವೆ.

ಯುಎಪಿಎ ಹೊರತಾಗಿ, ಸೆಕ್ಷನ್‌ 153 ಎ ಮತ್ತು ಬಿ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 469 (ಮಾಹಿತಿಗೆ ಹಾನಿ ಮಾಡುವ ಉದ್ದೇಶಕ್ಕಾಗಿ ನಕಲು ಮಾಡುವುದು), 120 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಹಾಗೂ ಐಪಿಸಿಯ 120 ಬಿ (ಕ್ರಿಮಿನಲ್‌ ಪಿತೂರಿಗಾಗಿ ಶಿಕ್ಷೆ) ಇವೆಲ್ಲದರಡಿಯಲ್ಲಿ ನೋಟಿಸ್‌ ನೀಡಲಾಗಿದೆ.

ಈ ಕುರಿತು ಮಾತನಾಡಿದ ವಕೀಲರಾದ ಮುಖೇಶ್‌, ‘ವಾಸ್ತವತೆಯನ್ನು ತಿಳಿಯಲು ತ್ರಿಪುರಾಕ್ಕೆ ಹೋದ ಸತ್ಯಶೋಧನಾ ತಂಡದ  ಭಾಗವಾಗಿದ್ದೇನೆ. ಸಾಮಾಜಿಕವಾಗಿ ನಾನು ನೋಡಿದ್ದನ್ನು ಹಂಚಿಕೊಂಡಿದ್ದೇನೆ’ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ವಕೀಲ ಎಹ್ತೇಶಾಮ್ ಹಶ್ಮಿ, ವಕೀಲ ಅಮಿತ್ ಶ್ರೀವಾಸ್ತವ್ (ಸಮನ್ವಯ ಸಮಿತಿ, ಪ್ರಜಾಪ್ರಭುತ್ವಕ್ಕಾಗಿ ವಕೀಲರು), ವಕೀಲ ಅನ್ಸಾರ್ ಇಂದೋರಿ ಮತ್ತು ವಕೀಲ ಮುಖೇಶ್ ಅವರನ್ನು ಒಳಗೊಂಡ ಸತ್ಯಶೋಧನಾ ತಂಡವು ಮಂಗಳವಾರ ದೆಹಲಿಯ ಪ್ರೆಸ್ ಕ್ಲಬ್ ನಲ್ಲಿ ವರದಿಯನ್ನು ಬಿಡುಗಡೆ ಮಾಡಿದೆ.

ಸತ್ಯಶೋಧನಾ ವರದಿ ಏನು ಹೇಳುತ್ತದೆ?

‘ಹ್ಯುಮ್ಯಾನಿಟಿ ಅಂಡರ್‌ ಅಟ್ಯಾಕ್‌ ಇನ್ ತ್ರಿಪುರ; #ಮುಸ್ಲಿಂ ಲೀವ್ಸ್‌ ಮ್ಯಾಟರ್‌’ ಶೀರ್ಷಿಕೆಯಡಿ ಬಿಡುಗಡೆಯಾದ ಸತ್ಯಶೋಧನಾ ವರದಿಯು ತ್ರಿಪುರಾದಲ್ಲಿನ ಬಿಜೆಪಿ ಸರ್ಕಾರವು ಹಿಂಸಾಚಾರವನ್ನು ನಿಲ್ಲಿಸಬಹುದಿತ್ತು ಆದರೆ ಅವರು ರಾಜ್ಯದಲ್ಲಿ ಗಲಭೆ ನಡೆಸಲು ಹಿಂದುತ್ವದ ಗುಂಪುಗಳಿಗೆ ಮುಕ್ತ ಅವಕಾಶ ನೀಡುವ ದಾರಿಯನ್ನು ಆರಿಸಿಕೊಂಡರು ಎಂಬುದನ್ನು ತಿಳಿಸಿದೆ.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ), ಬಜರಂಗದಳ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನಂತಹ ಹಿಂದೂ ರಾಷ್ಟ್ರೀಯತಾವಾದಿ ಸಂಘಟನೆಗಳು ಜೆಸಿಬಿಗಳೊಂದಿಗೆ ರ್‍ಯಾಲಿಗಳನ್ನು ನಡೆಸಿವೆ ಮತ್ತು ಹಿಂಸೆಗೆ ಪ್ರಚೋದನೆ ನೀಡಿವೆ ಎಂದು ವರದಿಯಲ್ಲಿದೆ.

ಪ್ರತಿಭಟನೆಗೆ ಕರೆ

ವಕೀಲರ ಮೇಲೆ ಯುಎಪಿಎ ಅಡಿ ಪ್ರಕರಣ ದಾಖಲಾಗಿರುವುದು ತಿಳಿಯುತ್ತಿದ್ದಂತೆ ಸಾಮಾಜಿಕ ಕಾರ್ಯಕರ್ತರು ತ್ರಿಪುರ ಪೊಲೀಸರ ವಿರುದ್ಧ ಕಿಡಿಕಾರಿದ್ದಾರೆ. ಕೂಡಲೇ ಯುಎಪಿಎ ಪ್ರಕರಣ ಕೈಬಿಡುವಂತೆ ಆಗ್ರಹಿಸಿ ನವೆಂಬರ್ 05 ರಂದು ತ್ರಿಪುರ ರಾಜ್ಯದ್ಯಂತ ಪ್ರತಿಭಟನೆಗೆ ಕರೆ ನೀಡಲಾಗಿದೆ.


ಇದನ್ನು ಓದಿ: ಕಾರ್ಯಕರ್ತನ ಪತ್ನಿಯನ್ನೇ ಅಪಹರಿಸಿದ ಬಜರಂಗದಳ ಸಂಚಾಲಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...