Homeಮುಖಪುಟಯಾವುದೇ ವ್ಯಕ್ತಿಯನ್ನು ಭಯೋತ್ಪಾದಕನೆಂದು ಕರೆಯಬಹುದಾದ ಯುಎಪಿಎ ತಿದ್ದುಪಡಿಗೆ ರಾಜ್ಯಸಭೆಯಲ್ಲಿಯೂ ಒಪ್ಪಿಗೆ

ಯಾವುದೇ ವ್ಯಕ್ತಿಯನ್ನು ಭಯೋತ್ಪಾದಕನೆಂದು ಕರೆಯಬಹುದಾದ ಯುಎಪಿಎ ತಿದ್ದುಪಡಿಗೆ ರಾಜ್ಯಸಭೆಯಲ್ಲಿಯೂ ಒಪ್ಪಿಗೆ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ (ತಿದ್ದುಪಡಿ) ಮಸೂದೆ (ಯುಎಪಿಎ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) (ತಿದ್ದುಪಡಿ) ಮಸೂದೆಗಳು ಇಂದು ರಾಜ್ಯಸಭೆಯಲ್ಲಿಯೂ ಸಹ ಪಾಸ್ ಆಗಿವೆ. ಮಸೂದೆಯ ತಿದ್ದುಪಡಿಯ ಪರವಾಗಿ 147 ಮತಗಳು ಬಿದ್ದರೆ ವಿರುದ್ಧವಾಗಿ ಕೇವಲ 42 ಮತಗಳು ಬಿದ್ದಿವೆ. ಈ ತಿದ್ದುಪಡಿಯಿಂದಾಗಿ ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಪರಿಗಣಿಸುವ ಸ್ವಾತಂತ್ರವನ್ನು ಕೇಂದ್ರ ಸರ್ಕಾರ ಪಡೆದುಕೊಂಡಿದೆ.

ಮುಖ್ಯವಾಗಿ ತೃಣಮೂಲ ಕಾಂಗ್ರೆಸ್ಸಿನ ಮಹುವಾ ಮೋಯಿತ್ರಾ ಈ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವೇ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು, ಈ ಕಾನೂನಿನ ಬಲ ಪಡೆದು ನಡೆಸುವ ತನಿಖೆಯು ಒಕ್ಕೂಟ ವ್ಯವಸ್ಥೆಗೆ ಮಾರಕ ಎಂದಿದ್ದಾರೆ. ಪ್ರತಿ ಪಕ್ಷಗಳು, ಅಲ್ಪಸಂಖ್ಯಾತರು, ಮಾನವ ಹಕ್ಕು ಹೋರಾಟಗಾರರನ್ನು ಈ ಮಸೂದೆ ಗುರಿಯಾಗಿಸಿಕೊಂಡಿದೆ. ಒಂದು ವೇಳೆ ಈ ಜನವಿರೋಧಿ ಮಸೂದೆಯನ್ನು ವಿರೋಧಿಸಿದರೆ ದೇಶದ್ರೋಹಿಗಳು ಎನ್ನುವ ಲೇಬಲ್ ಅಂಟಿಸಿಕೊಳ್ಳಬೇಕಾಗುತ್ತದೆ ಎಂಬ ಭಯದಿಂದ ಈ ಆಕ್ರಮಣವನ್ನು ಯಾರೂ ವಿರೋಧಿಸಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಯುಎಪಿಎ ಕಾಯಿದೆ ಜಾರಿಗೆ ಬಂದಲ್ಲಿ ಕೇಂದ್ರ ಸರಕಾರಕ್ಕೆ ಯಾವುದೇ ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸುವ ಅಧಿಕಾರ ಬರುತ್ತದೆ. ಬೇರೆ ಕೆಲವು ದೇಶಗಳಲ್ಲಿ ಸರಕಾರಗಳಿಗೆ ಇಂತಹ ಅಧಿಕಾರ ಇದೆಯೆಂದು ಹೇಳುವ ಮೂಲಕ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಈ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಪ್ರಕಾರ “ಭಯೋತ್ಪಾದಕ ಸಾಹಿತ್ಯ”ವನ್ನು ಮತ್ತು “ಭಯೋತ್ಪಾದಕ ತತ್ವ”ಗಳನ್ನು ಪ್ರಚಾರ ಮಾಡುವ ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಘೋಷಿಸಬೇಕು. ಈ ಎರಡು ಪದಗಳ ವ್ಯಾಖ್ಯಾನ ಸ್ಪಷ್ಟವಾಗಿಲ್ಲ.

ಈ ತಿದ್ದುಪಡಿಯು ಯಾವುದೇ ಸಾಕ್ಷ್ಯಾಧಾರ, ವಿಚಾರಣೆ ಅಥವಾ ನ್ಯಾಯಾಂಗದ ಕಣ್ಗಾವಲಿಲ್ಲದೆ ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡುತ್ತದೆ. ಈ ತಿದ್ದುಪಡಿ ಎಷ್ಟು ಅಸ್ಪಷ್ಟವಾಗಿದೆ ಎಂದರೆ ಯಾವುದೇ ಸಾಹಿತ್ಯವನ್ನು ಬರೆಯುವುದು, ಹೊಂದಿರುವುದು, ಯಾವುದೇ ಸಂಘಟನೆಗೆ ಸೇರುವುದು, ಒಟ್ಟಿನಲ್ಲಿ ಒಂದು ಚಿಂತನಾ ಪ್ರಕ್ರಿಯೆಯನ್ನೇ ಅಪರಾಧೀಕರಣಗೊಳಿಸಬಹುದು. ಇಂತಹ ಒಂದು ಹಣೆಪಟ್ಟಿ ಕಟ್ಟಲಾದರೆ, ಆ ಕಳಂಕವನ್ನು ಅಳಿಸುವುದು ಸಾಮಾನ್ಯ ವ್ಯಕ್ತಿಗೆ ಸಾಧ್ಯವೇ ಇಲ್ಲ. ಮೇಲ್ಮನವಿ ಪ್ರಕ್ರಿಯೆ ಅಷ್ಟು ಸಂಕೀರ್ಣವಾಗಿದೆ.

ಎನ್‍ಐಎ ತಿದ್ದುಪಡಿ ಮಸೂದೆಯು ಸೈಬರ್ ಅಪರಾಧಗಳೂ ಸೇರಿದಂತೆ ಯಾವುದೇ ಪ್ರಕರಣವು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ನಿರ್ಧರಿಸುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡುತ್ತದೆ. ಅದಲ್ಲದೆ ತಾನು ಭಯೋತ್ಪಾದಕ ಎಂದು ಪರಿಗಣಿಸುವ ಯಾವುದೇ ವ್ಯಕ್ತಿಯ ಬೆನ್ನುಹತ್ತಿಹೋಗುವ ಅಧಿಕಾರವನ್ನೂ ಅದು ನೀಡುತ್ತದೆ.

ಭಾರತೀಯ ಸಂವಿಧಾನವು ವಿಧಿ 19ರ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯ, ಸಭೆ ಸೇರುವ, ಸಂಘಟನೆಯ ಸ್ವಾತಂತ್ರ್ಯವನ್ನು ನೀಡಿದೆ. ವಿಧಿ 14 ಸಮಾನತೆಯ ಹಕ್ಕು ನೀಡುತ್ತದೆ. 19 ಮತ್ತು 21ನೇ ವಿಧಿಗಳು ಜೀವದ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕುಗಳನ್ನು ನೀಡುತ್ತದೆ. ಇದನ್ನೇ ಸಂವಿಧಾನತಜ್ಞರು ‘ಸುವರ್ಣ ತ್ರಿಭುಜ’ ಎಂದು ಕರೆದಿದ್ದಾರೆ. ಈ ಮೂಲಭೂತ ಹಕ್ಕುಗಳನ್ನೇ ಕಸಿಯುವ ದಿಕ್ಕಿನಲ್ಲಿ ಇಟ್ಟ ಹೆಜ್ಜೆಗಳೇ ಈ ತಿದ್ದುಪಡಿಗಳು.

ಇಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಈ ಮಸೂದೆಯು ತಮ್ಮ ವಿರೋಧಿಗಳ ವಿರುದ್ಧ ದುರ್ಬಳಕೆಯಾಗುವ ಆತಂಕವನ್ನು ವ್ಯಕ್ತಪಡಿಸಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅಮಿತ್ ಶಾ ನಾಲ್ಕು ಹಂತದ ಪ್ರಕ್ರಿಯೆಯನ್ನು ಅಳವಡಿಸುತ್ತೇವೆ, ಮಾನವ ಹಕ್ಕು ಕಾರ್ಯಕರ್ತರಿಗೆ ತೊಂದರೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ಪ್ರಬಲಜಾತಿ ಗುಂಪಿನಿಂದ ಹಲ್ಲೆ-ಜಾತಿನಿಂದನೆ; ನ್ಯಾಯ ಸಿಗದಿದ್ದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದ ದಲಿತ ಕುಟುಂಬ

ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ದಲಿತ ಕುಟುಂಬವೊಂದರ ಮೇಲೆ ಗ್ರಾಮದ ಪ್ರಬಲಜಾತಿ ಗುಂಪೊಂದು ಜಾತಿ ಆಧಾರಿತ ನಿಂದನೆ ಮಾಡಿ ಹಲ್ಲೆ ನಡೆಸಿದ್ದಾರೆ. ದೂರ ನೀಡಿದರೂ ಕ್ರಮ ತಗೆದುಕೊಂಡಿದ್ದ ಎಂದು ಆರೋಪಿಸಿರುವ ಕುಟುಂಬ, ಪೊಲೀಸರು ನಿಷ್ಕ್ರಿಯತೆ...

ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಹಬ್ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ

ವಿಶ್ವದ ಅತಿದೊಡ್ಡ ಲಿಕ್ವಿಫೈಡ್ ನ್ಯಾಚುರಲ್ ಗ್ಯಾಸ್ (ಎಲ್‌ಎನ್‌ಜಿ) ರಫ್ತು ಕೇಂದ್ರಗಳಲ್ಲಿ ಒಂದಾದ ಖತಾರ್‌ನ ರಾಸ್ ಲಫನ್ ಇಂಡಸ್ಟ್ರಿಯಲ್ ಸಿಟಿ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಈ ದಾಳಿಯಿಂದಾಗಿ ಅಲ್ಲಿನ ಅನಿಲ ಸೌಲಭ್ಯಗಳಲ್ಲಿ...

ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ : ತನಿಖಾ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಧರ್ಮಸ್ಥಳ ಗ್ರಾಮದಲ್ಲಿ 1990ರಿಂದ 2021ರ ನಡುವೆ ಸಂಭವಿಸಿದೆ ಎನ್ನಲಾದ 74 ಅಸಹಜ ಸಾವಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಬುಧವಾರ (ಮಾ.18) ನಿರ್ದೇಶಿಸಿದೆ ಎಂದು barandbench.com ವರದಿ ಮಾಡಿದೆ....

ಛತ್ತೀಸ್‌ಗಢ| ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿ ಗುಂಪಿನಿಂದ ಹಲ್ಲೆ; ‘ಜೈ ಶ್ರೀ ರಾಮ್’ ಕೂಗುವಂತೆ ಒತ್ತಾಯ

ಛತ್ತೀಸ್‌ಗಢದ ಜಂಜ್‌ಗೀರ್-ಚಂಪಾ ಜಿಲ್ಲೆಯಲ್ಲಿ ಕ್ರಿಶ್ಚಿಯನ್ ಯುವಕನ ಮೇಲೆ ಹಿಂದುತ್ವವಾದಿಗಳ ಗುಂಪೊಂದು ಹಲ್ಲೆ ನಡೆಸಿ, ಜೈಶ್ರೀರಾಮ್ ಎಂದು ಘೋಷಣೆಗಳನ್ನು ಕೂಗುವಂತೆ ಒತ್ತಾಯಿಸಿದೆ ಎಂಬ ಆರೋಪ ಕೇಳಿಬಂದಿದೆ. ಇಂದು (ಮಾ.18) ನಡೆದಿದೆ ಎನ್ನಲಾದ ಈ ಘಟನೆಯ...

ಯುಪಿಎಸ್‌ಸಿ 440 ನೇ ರ‍್ಯಾಂಕ್ ಎಂದು ಸುಳ್ಳು ಹೇಳಿ ಸಂಭ್ರಮಾಚರಣೆ ಮಾಡಿದ್ದ ಬಿಹಾರದ ಯುವಕನ ಬಂಧನ

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ನಾಗರಿಕ ಸೇವಾ ಪರೀಕ್ಷೆ (ಸಿಎಸ್‌ಇ) 2025 ರಲ್ಲಿ ಅಖಿಲ ಭಾರತ ರ‍್ಯಾಂಕ್ (ಎಐಆರ್) 440 ಗಳಿಸಿದ್ದೇನೆ ಎಂದು ಸುಳ್ಳು ಹೇಳಿಕೊಂಡ ಕೆಲವು ದಿನಗಳ ನಂತರ, ಬಿಹಾರದ ಶೇಖ್‌ಪುರ...

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...