Homeಮುಖಪುಟಯಾವುದೇ ವ್ಯಕ್ತಿಯನ್ನು ಭಯೋತ್ಪಾದಕನೆಂದು ಕರೆಯಬಹುದಾದ ಯುಎಪಿಎ ತಿದ್ದುಪಡಿಗೆ ರಾಜ್ಯಸಭೆಯಲ್ಲಿಯೂ ಒಪ್ಪಿಗೆ

ಯಾವುದೇ ವ್ಯಕ್ತಿಯನ್ನು ಭಯೋತ್ಪಾದಕನೆಂದು ಕರೆಯಬಹುದಾದ ಯುಎಪಿಎ ತಿದ್ದುಪಡಿಗೆ ರಾಜ್ಯಸಭೆಯಲ್ಲಿಯೂ ಒಪ್ಪಿಗೆ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ (ತಿದ್ದುಪಡಿ) ಮಸೂದೆ (ಯುಎಪಿಎ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) (ತಿದ್ದುಪಡಿ) ಮಸೂದೆಗಳು ಇಂದು ರಾಜ್ಯಸಭೆಯಲ್ಲಿಯೂ ಸಹ ಪಾಸ್ ಆಗಿವೆ. ಮಸೂದೆಯ ತಿದ್ದುಪಡಿಯ ಪರವಾಗಿ 147 ಮತಗಳು ಬಿದ್ದರೆ ವಿರುದ್ಧವಾಗಿ ಕೇವಲ 42 ಮತಗಳು ಬಿದ್ದಿವೆ. ಈ ತಿದ್ದುಪಡಿಯಿಂದಾಗಿ ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಪರಿಗಣಿಸುವ ಸ್ವಾತಂತ್ರವನ್ನು ಕೇಂದ್ರ ಸರ್ಕಾರ ಪಡೆದುಕೊಂಡಿದೆ.

ಮುಖ್ಯವಾಗಿ ತೃಣಮೂಲ ಕಾಂಗ್ರೆಸ್ಸಿನ ಮಹುವಾ ಮೋಯಿತ್ರಾ ಈ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವೇ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು, ಈ ಕಾನೂನಿನ ಬಲ ಪಡೆದು ನಡೆಸುವ ತನಿಖೆಯು ಒಕ್ಕೂಟ ವ್ಯವಸ್ಥೆಗೆ ಮಾರಕ ಎಂದಿದ್ದಾರೆ. ಪ್ರತಿ ಪಕ್ಷಗಳು, ಅಲ್ಪಸಂಖ್ಯಾತರು, ಮಾನವ ಹಕ್ಕು ಹೋರಾಟಗಾರರನ್ನು ಈ ಮಸೂದೆ ಗುರಿಯಾಗಿಸಿಕೊಂಡಿದೆ. ಒಂದು ವೇಳೆ ಈ ಜನವಿರೋಧಿ ಮಸೂದೆಯನ್ನು ವಿರೋಧಿಸಿದರೆ ದೇಶದ್ರೋಹಿಗಳು ಎನ್ನುವ ಲೇಬಲ್ ಅಂಟಿಸಿಕೊಳ್ಳಬೇಕಾಗುತ್ತದೆ ಎಂಬ ಭಯದಿಂದ ಈ ಆಕ್ರಮಣವನ್ನು ಯಾರೂ ವಿರೋಧಿಸಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಯುಎಪಿಎ ಕಾಯಿದೆ ಜಾರಿಗೆ ಬಂದಲ್ಲಿ ಕೇಂದ್ರ ಸರಕಾರಕ್ಕೆ ಯಾವುದೇ ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸುವ ಅಧಿಕಾರ ಬರುತ್ತದೆ. ಬೇರೆ ಕೆಲವು ದೇಶಗಳಲ್ಲಿ ಸರಕಾರಗಳಿಗೆ ಇಂತಹ ಅಧಿಕಾರ ಇದೆಯೆಂದು ಹೇಳುವ ಮೂಲಕ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಈ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಪ್ರಕಾರ “ಭಯೋತ್ಪಾದಕ ಸಾಹಿತ್ಯ”ವನ್ನು ಮತ್ತು “ಭಯೋತ್ಪಾದಕ ತತ್ವ”ಗಳನ್ನು ಪ್ರಚಾರ ಮಾಡುವ ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಘೋಷಿಸಬೇಕು. ಈ ಎರಡು ಪದಗಳ ವ್ಯಾಖ್ಯಾನ ಸ್ಪಷ್ಟವಾಗಿಲ್ಲ.

ಈ ತಿದ್ದುಪಡಿಯು ಯಾವುದೇ ಸಾಕ್ಷ್ಯಾಧಾರ, ವಿಚಾರಣೆ ಅಥವಾ ನ್ಯಾಯಾಂಗದ ಕಣ್ಗಾವಲಿಲ್ಲದೆ ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡುತ್ತದೆ. ಈ ತಿದ್ದುಪಡಿ ಎಷ್ಟು ಅಸ್ಪಷ್ಟವಾಗಿದೆ ಎಂದರೆ ಯಾವುದೇ ಸಾಹಿತ್ಯವನ್ನು ಬರೆಯುವುದು, ಹೊಂದಿರುವುದು, ಯಾವುದೇ ಸಂಘಟನೆಗೆ ಸೇರುವುದು, ಒಟ್ಟಿನಲ್ಲಿ ಒಂದು ಚಿಂತನಾ ಪ್ರಕ್ರಿಯೆಯನ್ನೇ ಅಪರಾಧೀಕರಣಗೊಳಿಸಬಹುದು. ಇಂತಹ ಒಂದು ಹಣೆಪಟ್ಟಿ ಕಟ್ಟಲಾದರೆ, ಆ ಕಳಂಕವನ್ನು ಅಳಿಸುವುದು ಸಾಮಾನ್ಯ ವ್ಯಕ್ತಿಗೆ ಸಾಧ್ಯವೇ ಇಲ್ಲ. ಮೇಲ್ಮನವಿ ಪ್ರಕ್ರಿಯೆ ಅಷ್ಟು ಸಂಕೀರ್ಣವಾಗಿದೆ.

ಎನ್‍ಐಎ ತಿದ್ದುಪಡಿ ಮಸೂದೆಯು ಸೈಬರ್ ಅಪರಾಧಗಳೂ ಸೇರಿದಂತೆ ಯಾವುದೇ ಪ್ರಕರಣವು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ನಿರ್ಧರಿಸುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡುತ್ತದೆ. ಅದಲ್ಲದೆ ತಾನು ಭಯೋತ್ಪಾದಕ ಎಂದು ಪರಿಗಣಿಸುವ ಯಾವುದೇ ವ್ಯಕ್ತಿಯ ಬೆನ್ನುಹತ್ತಿಹೋಗುವ ಅಧಿಕಾರವನ್ನೂ ಅದು ನೀಡುತ್ತದೆ.

ಭಾರತೀಯ ಸಂವಿಧಾನವು ವಿಧಿ 19ರ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯ, ಸಭೆ ಸೇರುವ, ಸಂಘಟನೆಯ ಸ್ವಾತಂತ್ರ್ಯವನ್ನು ನೀಡಿದೆ. ವಿಧಿ 14 ಸಮಾನತೆಯ ಹಕ್ಕು ನೀಡುತ್ತದೆ. 19 ಮತ್ತು 21ನೇ ವಿಧಿಗಳು ಜೀವದ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕುಗಳನ್ನು ನೀಡುತ್ತದೆ. ಇದನ್ನೇ ಸಂವಿಧಾನತಜ್ಞರು ‘ಸುವರ್ಣ ತ್ರಿಭುಜ’ ಎಂದು ಕರೆದಿದ್ದಾರೆ. ಈ ಮೂಲಭೂತ ಹಕ್ಕುಗಳನ್ನೇ ಕಸಿಯುವ ದಿಕ್ಕಿನಲ್ಲಿ ಇಟ್ಟ ಹೆಜ್ಜೆಗಳೇ ಈ ತಿದ್ದುಪಡಿಗಳು.

ಇಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಈ ಮಸೂದೆಯು ತಮ್ಮ ವಿರೋಧಿಗಳ ವಿರುದ್ಧ ದುರ್ಬಳಕೆಯಾಗುವ ಆತಂಕವನ್ನು ವ್ಯಕ್ತಪಡಿಸಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅಮಿತ್ ಶಾ ನಾಲ್ಕು ಹಂತದ ಪ್ರಕ್ರಿಯೆಯನ್ನು ಅಳವಡಿಸುತ್ತೇವೆ, ಮಾನವ ಹಕ್ಕು ಕಾರ್ಯಕರ್ತರಿಗೆ ತೊಂದರೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...