Homeಮುಖಪುಟಯಾವುದೇ ವ್ಯಕ್ತಿಯನ್ನು ಭಯೋತ್ಪಾದಕನೆಂದು ಕರೆಯಬಹುದಾದ ಯುಎಪಿಎ ತಿದ್ದುಪಡಿಗೆ ರಾಜ್ಯಸಭೆಯಲ್ಲಿಯೂ ಒಪ್ಪಿಗೆ

ಯಾವುದೇ ವ್ಯಕ್ತಿಯನ್ನು ಭಯೋತ್ಪಾದಕನೆಂದು ಕರೆಯಬಹುದಾದ ಯುಎಪಿಎ ತಿದ್ದುಪಡಿಗೆ ರಾಜ್ಯಸಭೆಯಲ್ಲಿಯೂ ಒಪ್ಪಿಗೆ

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ ತಡೆ (ತಿದ್ದುಪಡಿ) ಮಸೂದೆ (ಯುಎಪಿಎ) ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) (ತಿದ್ದುಪಡಿ) ಮಸೂದೆಗಳು ಇಂದು ರಾಜ್ಯಸಭೆಯಲ್ಲಿಯೂ ಸಹ ಪಾಸ್ ಆಗಿವೆ. ಮಸೂದೆಯ ತಿದ್ದುಪಡಿಯ ಪರವಾಗಿ 147 ಮತಗಳು ಬಿದ್ದರೆ ವಿರುದ್ಧವಾಗಿ ಕೇವಲ 42 ಮತಗಳು ಬಿದ್ದಿವೆ. ಈ ತಿದ್ದುಪಡಿಯಿಂದಾಗಿ ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಪರಿಗಣಿಸುವ ಸ್ವಾತಂತ್ರವನ್ನು ಕೇಂದ್ರ ಸರ್ಕಾರ ಪಡೆದುಕೊಂಡಿದೆ.

ಮುಖ್ಯವಾಗಿ ತೃಣಮೂಲ ಕಾಂಗ್ರೆಸ್ಸಿನ ಮಹುವಾ ಮೋಯಿತ್ರಾ ಈ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವೇ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು, ಈ ಕಾನೂನಿನ ಬಲ ಪಡೆದು ನಡೆಸುವ ತನಿಖೆಯು ಒಕ್ಕೂಟ ವ್ಯವಸ್ಥೆಗೆ ಮಾರಕ ಎಂದಿದ್ದಾರೆ. ಪ್ರತಿ ಪಕ್ಷಗಳು, ಅಲ್ಪಸಂಖ್ಯಾತರು, ಮಾನವ ಹಕ್ಕು ಹೋರಾಟಗಾರರನ್ನು ಈ ಮಸೂದೆ ಗುರಿಯಾಗಿಸಿಕೊಂಡಿದೆ. ಒಂದು ವೇಳೆ ಈ ಜನವಿರೋಧಿ ಮಸೂದೆಯನ್ನು ವಿರೋಧಿಸಿದರೆ ದೇಶದ್ರೋಹಿಗಳು ಎನ್ನುವ ಲೇಬಲ್ ಅಂಟಿಸಿಕೊಳ್ಳಬೇಕಾಗುತ್ತದೆ ಎಂಬ ಭಯದಿಂದ ಈ ಆಕ್ರಮಣವನ್ನು ಯಾರೂ ವಿರೋಧಿಸಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಯುಎಪಿಎ ಕಾಯಿದೆ ಜಾರಿಗೆ ಬಂದಲ್ಲಿ ಕೇಂದ್ರ ಸರಕಾರಕ್ಕೆ ಯಾವುದೇ ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸುವ ಅಧಿಕಾರ ಬರುತ್ತದೆ. ಬೇರೆ ಕೆಲವು ದೇಶಗಳಲ್ಲಿ ಸರಕಾರಗಳಿಗೆ ಇಂತಹ ಅಧಿಕಾರ ಇದೆಯೆಂದು ಹೇಳುವ ಮೂಲಕ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಈ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಪ್ರಕಾರ “ಭಯೋತ್ಪಾದಕ ಸಾಹಿತ್ಯ”ವನ್ನು ಮತ್ತು “ಭಯೋತ್ಪಾದಕ ತತ್ವ”ಗಳನ್ನು ಪ್ರಚಾರ ಮಾಡುವ ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಘೋಷಿಸಬೇಕು. ಈ ಎರಡು ಪದಗಳ ವ್ಯಾಖ್ಯಾನ ಸ್ಪಷ್ಟವಾಗಿಲ್ಲ.

ಈ ತಿದ್ದುಪಡಿಯು ಯಾವುದೇ ಸಾಕ್ಷ್ಯಾಧಾರ, ವಿಚಾರಣೆ ಅಥವಾ ನ್ಯಾಯಾಂಗದ ಕಣ್ಗಾವಲಿಲ್ಲದೆ ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡುತ್ತದೆ. ಈ ತಿದ್ದುಪಡಿ ಎಷ್ಟು ಅಸ್ಪಷ್ಟವಾಗಿದೆ ಎಂದರೆ ಯಾವುದೇ ಸಾಹಿತ್ಯವನ್ನು ಬರೆಯುವುದು, ಹೊಂದಿರುವುದು, ಯಾವುದೇ ಸಂಘಟನೆಗೆ ಸೇರುವುದು, ಒಟ್ಟಿನಲ್ಲಿ ಒಂದು ಚಿಂತನಾ ಪ್ರಕ್ರಿಯೆಯನ್ನೇ ಅಪರಾಧೀಕರಣಗೊಳಿಸಬಹುದು. ಇಂತಹ ಒಂದು ಹಣೆಪಟ್ಟಿ ಕಟ್ಟಲಾದರೆ, ಆ ಕಳಂಕವನ್ನು ಅಳಿಸುವುದು ಸಾಮಾನ್ಯ ವ್ಯಕ್ತಿಗೆ ಸಾಧ್ಯವೇ ಇಲ್ಲ. ಮೇಲ್ಮನವಿ ಪ್ರಕ್ರಿಯೆ ಅಷ್ಟು ಸಂಕೀರ್ಣವಾಗಿದೆ.

ಎನ್‍ಐಎ ತಿದ್ದುಪಡಿ ಮಸೂದೆಯು ಸೈಬರ್ ಅಪರಾಧಗಳೂ ಸೇರಿದಂತೆ ಯಾವುದೇ ಪ್ರಕರಣವು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ನಿರ್ಧರಿಸುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡುತ್ತದೆ. ಅದಲ್ಲದೆ ತಾನು ಭಯೋತ್ಪಾದಕ ಎಂದು ಪರಿಗಣಿಸುವ ಯಾವುದೇ ವ್ಯಕ್ತಿಯ ಬೆನ್ನುಹತ್ತಿಹೋಗುವ ಅಧಿಕಾರವನ್ನೂ ಅದು ನೀಡುತ್ತದೆ.

ಭಾರತೀಯ ಸಂವಿಧಾನವು ವಿಧಿ 19ರ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯ, ಸಭೆ ಸೇರುವ, ಸಂಘಟನೆಯ ಸ್ವಾತಂತ್ರ್ಯವನ್ನು ನೀಡಿದೆ. ವಿಧಿ 14 ಸಮಾನತೆಯ ಹಕ್ಕು ನೀಡುತ್ತದೆ. 19 ಮತ್ತು 21ನೇ ವಿಧಿಗಳು ಜೀವದ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕುಗಳನ್ನು ನೀಡುತ್ತದೆ. ಇದನ್ನೇ ಸಂವಿಧಾನತಜ್ಞರು ‘ಸುವರ್ಣ ತ್ರಿಭುಜ’ ಎಂದು ಕರೆದಿದ್ದಾರೆ. ಈ ಮೂಲಭೂತ ಹಕ್ಕುಗಳನ್ನೇ ಕಸಿಯುವ ದಿಕ್ಕಿನಲ್ಲಿ ಇಟ್ಟ ಹೆಜ್ಜೆಗಳೇ ಈ ತಿದ್ದುಪಡಿಗಳು.

ಇಂದು ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳು ಈ ಮಸೂದೆಯು ತಮ್ಮ ವಿರೋಧಿಗಳ ವಿರುದ್ಧ ದುರ್ಬಳಕೆಯಾಗುವ ಆತಂಕವನ್ನು ವ್ಯಕ್ತಪಡಿಸಿವೆ. ಇದಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅಮಿತ್ ಶಾ ನಾಲ್ಕು ಹಂತದ ಪ್ರಕ್ರಿಯೆಯನ್ನು ಅಳವಡಿಸುತ್ತೇವೆ, ಮಾನವ ಹಕ್ಕು ಕಾರ್ಯಕರ್ತರಿಗೆ ತೊಂದರೆಯಾಗುವುದಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...