Homeಮುಖಪುಟ‘ನ್ಯೂಸ್‌ಕ್ಲಿಕ್‌’ ವಿರುದ್ಧ ಯುಎಪಿಎ ಪ್ರಕರಣ: ದೆಹಲಿ ಪೊಲೀಸರಿಂದ ಪತ್ರಕರ್ತರ ಮೇಲೆ ದಿಢೀರ್‌ ದಾಳಿ

‘ನ್ಯೂಸ್‌ಕ್ಲಿಕ್‌’ ವಿರುದ್ಧ ಯುಎಪಿಎ ಪ್ರಕರಣ: ದೆಹಲಿ ಪೊಲೀಸರಿಂದ ಪತ್ರಕರ್ತರ ಮೇಲೆ ದಿಢೀರ್‌ ದಾಳಿ

- Advertisement -
- Advertisement -

ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್‌ ಸುದ್ದಿ ಪೋರ್ಟಲ್‌ಗೆ ಸೇರಿದ ಹಲವಾರು ಪತ್ರಕರ್ತರ ಮನೆಗಳಿಗೆ ದಿಲ್ಲಿ ಪೊಲೀಸರು ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ.

ಚೀನಾದ ಅಜೆಂಡಾವನ್ನು ಪ್ರಚಾರ ಮಾಡುವ ನೆಟ್‌ವರ್ಕ್‌ನಿಂದ ನ್ಯೂಸ್ ಕ್ಲಿಕ್ ಪೋರ್ಟಲ್ ಹಣವನ್ನು ಪಡೆದಿದೆ ಎಂದು ನ್ಯೂಯಾರ್ಕ್‌ ಟೈಮ್ಸ್‌ ವರದಿ ಆಧರಿಸಿ ದಿಲ್ಲಿ ಪೊಲೀಸರು ಆಗಸ್ಟ್ 17 ರಂದು ಪ್ರಕರಣ ದಾಖಲಿಸಿದ್ದರು.

ದೆಹಲಿ-ಎನ್‌ಸಿಆರ್‌ನ ಸುಮಾರು 20 ಕ್ಕೂ ಸ್ಥಳಗಳಲ್ಲಿ ದೆಹಲಿ ಪೊಲೀಸರ ವಿಶೇಷ ಸೆಲ್‌ನ ಅಧಿಕಾರಿಗಳು ಇಂದು ಶೋಧ ನಡೆಸಿದ್ದಾರೆ. ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ, ಆದರೆ ಕೆಲವು ಪತ್ರಕರ್ತರನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗಳಿಗೆ ಕರೆದೊಯ್ಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ದಾಳಿಗೊಳಗಾದವರಲ್ಲಿ ನ್ಯೂಸ್‌ಕ್ಲಿಕ್ ವೆಬ್‌ಸೈಟ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ, ಪತ್ರಕರ್ತರಾದ ಅಭಿಸರ್ ಶರ್ಮಾ, ಔನಿಂದ್ಯೋ ಚಕ್ರವರ್ತಿ ಮತ್ತು ಭಾಷಾ ಸಿಂಗ್ ಮತ್ತು ವಿಡಂಬನಕಾರ ಸಂಜಯ್ ರಾಜೌರಾ ಸೇರಿದ್ದಾರೆ.

ಈ ಬಗ್ಗೆ ಶರ್ಮಾ ಟ್ವೀಟ್ ಮಾಡಿದ್ದು, ”ಪೊಲೀಸರು ಅವರ ಫೋನ್ ಮತ್ತು ಲ್ಯಾಪ್‌ಟಾಪ್‌ನ್ನು ತೆಗೆದುಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು.

ಭಾಷಾ ಸಿಂಗ್ ಫೋನ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿರುವ ನ್ಯೂಸ್‌ಕ್ಲಿಕ್‌ನ ಕಚೇರಿಯಲ್ಲೂ ಹುಡುಕಾಟ ನಡೆಯುತ್ತಿದೆ ಎಂದು ವರದಿಯಾಗಿದೆ. ANI ಪ್ರಕಾರ, ಒಟ್ಟಾರೆಯಾಗಿ, 30 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಯುತ್ತಿದೆ.

ನ್ಯೂಸ್‌ಕ್ಲಿಕ್ ಅಮೆರಿಕದ ಮಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್‌ನ ಅವರ ಸುತ್ತ ಕೇಂದ್ರೀಕೃತವಾದ ನೆಟ್‌ವರ್ಕ್‌ನಿಂದ “ಚೀನೀ ಪ್ರಚಾರವನ್ನು” ಪ್ರಪಂಚದಾದ್ಯಂತ ಹರಡಲು ಹಣವನ್ನು ಪಡೆದಿದೆ ಆಗಸ್ಟ್ 5ರಂದು, ನ್ಯೂಯಾರ್ಕ್ ಟೈಮ್ಸ್ ವರದಿಯೊಂದನ್ನು ಪ್ರಕಟಿಸಿತ್ತು.

ಸಿಂಘಮ್ ಅವರು ”ಚೀನೀ ಸರ್ಕಾರಿ ಮಾಧ್ಯಮ ಸಂಸ್ಥೆ’ದೊಂದಿಗೆ ನಿಕಟವಾಗಿ ಕೆಲಸ ಮಾಡಿದರು ಮತ್ತು ವಿವಿಧ ದೇಶಗಳಲ್ಲಿ ಚೀನೀ ಪರವಾಗಿ ಪ್ರಚಾರ ಮಾಡಿದರು ಎಂದು ವರದಿ ಹೇಳಿದೆ.

ಆ ಸಮಯದಲ್ಲಿ, ನ್ಯೂಸ್‌ಕ್ಲಿಕ್ ವೆಬ್‌ಸೈಟ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಅವರು ಚೀನಾದ ಕಮ್ಯುನಿಸ್ಟ್ ಪಕ್ಷದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿರುವ ಸಂಘಟನೆಯ ಕುರಿತಾದ ಆರೋಪಗಳು ಸುಳ್ಳು ಎಂದು ತಿಳಿಸಿದ್ದರು.

ಇದಕ್ಕೂ ಮುನ್ನ ಜಾರಿ ನಿರ್ದೇಶನಾಲಯವು ನ್ಯೂಸ್ ಪೋರ್ಟಲ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅದಕ್ಕೆ ಹಣ ನೀಡಿರುವ ಬಗ್ಗೆ ತನಿಖೆ ನಡೆಸಿತ್ತು. ನ್ಯೂಸ್ ಪೋರ್ಟಲ್‌ಗೆ ಸಂಬಂಧಿಸಿದ ಕೆಲವು ಆಸ್ತಿಗಳನ್ನು ಕೇಂದ್ರ ಸಂಸ್ಥೆ ಕೂಡ ಪಟ್ಟಿ ಮಾಡಿತ್ತು.

ಚೀನಾದೊಂದಿಗೆ ಸಂಪರ್ಕ ಹೊಂದಿದ ಸಂಸ್ಥೆಗಳಿಂದ ನ್ಯೂಸ್ ಪೋರ್ಟಲ್ ಸುಮಾರು ₹ 38 ಕೋಟಿ ಮೊತ್ತವನ್ನು ಪಡೆದಿದೆ ಎಂದು ಇಡಿ ಈ ಹಿಂದೆ ಆರೋಪಿಸಿತ್ತು. ಈ ಮೊತ್ತವನ್ನು ಹೇಗೆ ಬಳಸಲಾಗಿದೆ ಎಂಬುದು ಪರಿಶೀಲನೆ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

NewsClick ನಿಂದ ಸಂಬಳ ಅಥವಾ ಸಂಭಾವನೆ ಪಡೆದ ಜನರು ಪರಿಶೀಲನೆ ಅಡಿಯಲ್ಲಿದ್ದಾರೆ. ಹೆಚ್ಚಿನ ತನಿಖೆಗಾಗಿ ಇಂದು ಮನೆಗಳನ್ನು ಶೋಧಿಸಿದ ಪತ್ರಕರ್ತರ ಲ್ಯಾಪ್‌ಟಾಪ್ ಮತ್ತು ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹುಡುಕಾಟದ ಕುರಿತು ಹೆಚ್ಚಿನ ಮಾಹಿತಿಯನ್ನು ನಂತರ ಹಂಚಿಕೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಕೋವಿಡ್-19 ಲಸಿಕೆ: ಕ್ಯಾಟಲಿನ್ ಕಾರಿಕೊ, ಡ್ರ್ಯೂ ವೈಸ್‌ಮನ್‌​​ಗೆ ವೈದ್ಯಕೀಯ ನೊಬೆಲ್ ಪುರಸ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಂದೆಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...