Homeಮುಖಪುಟಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

- Advertisement -
- Advertisement -

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ ಬುಧವಾರ (ಜು.06) ಶೋಧ ನಡೆಸಿದ್ದಾರೆ.

ಆಂಧ್ರಪ್ರದೇಶದ ಗನ್ನವರಂ ಪೊಲೀಸ್ ಠಾಣೆಯ ಅಧಿಕಾರಿಗಳು ಬುಧವಾರ ಸಂಜೆ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ತಂಡದ ಪ್ರಕಾರ, ದಾಳಿಯ ಸಮಯದಲ್ಲಿ ರಾವಣ್ ಅವರ ಪತ್ನಿ ಬಿ. ಅನುಷಾ ಹಾಜರಿದ್ದರು. ದಾಳಿ ಬುಧವಾರ ತಡರಾತ್ರಿಯವರೆಗೆ ನಡೆಯಿತು.

ಲ್ಯಾಪ್‌ಟಾಪ್‌ಗಳು ಮತ್ತು ಹಾರ್ಡ್ಡ್ರೈವ್‌ಗಳಂತಹ ಎಲೆಕ್ಟ್ರಾನಿಕ್ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಜುಲೈ 5 ರಂದು, ರಾವಣ್ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಿ ಜೋಸೆಫ್ ಎಂಬ ನಿಜವಾದ ಹೆಸರು ಹೊಂದಿರುವ ರಾವಣ್, ಪ್ರಸ್ತುತ ಚಂದ್ರಬಾಬು ನಾಯ್ಡು-ಪವನ್ ಕಲ್ಯಾಣ್ ನೇತೃತ್ವದ ಸರ್ಕಾರದ ತೀವ್ರ ಟೀಕಾಕಾರರಾಗಿದ್ದಾರೆ. ನಾಲ್ಕು ದಿನಗಳಲ್ಲಿ ಯೂಟ್ಯೂಬರ್‌ನ ಐದನೇ ಬಂಧನ ಇದು. ಹೈದರಾಬಾದ್ ಮೂಲದ ಯೂಟ್ಯೂಬ್ ಹಾಗೂ ರಾಜಕೀಯ ನಿರೂಪಕ ಕೆ. ವೆಂಕಟರಾಮಿ ರೆಡ್ಡಿ ಅವರೊಂದಿಗೆ ರಾವಣ್‌ ಅವರನ್ನು ಬಂಧಿಸಲಾಯಿತು.

ಜೂನ್ 30 ರಿಂದ, ರಾವಣ್ ಮತ್ತು ಆಂಧ್ರ ಪೊಲೀಸರ ನಡುವೆ ಬೆಕ್ಕು-ಇಲಿಯ ಆಟ ನಡೆಯುತ್ತಿದೆ. ಯೂಟ್ಯೂಬರ್ ಅನ್ನು ಪದೇ ಪದೇ ಬಂಧಿಸಲಾಗುತ್ತಿದೆ, ಅವರು ಜಾಮೀನು ಪಡೆಯುತ್ತಿದ್ದಾರೆ. ಜಾಮೀನಿನ ಬಳಿಕ ಅವರನ್ನು ಮತ್ತೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗುತ್ತದೆ. ಹೆಚ್ಚಿನ ಪ್ರಕರಣಗಳು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ವಿರುದ್ಧದ ಅವರ ಹೇಳಿಕೆಗಳಿಗೆ ಸಂಬಂಧಿಸಿವೆ.

ರಾವಣ್‌ ಅವರನ್ನು ಮೊದಲು ಪಿಠಾಪುರಂ ಪೊಲೀಸರು ಬಂಧಿಸಿದರು. ಮ್ಯಾಜಿಸ್ಟ್ರೇಟ್ ಅವರಿಗೆ ಸ್ಟೇಷನ್ ಜಾಮೀನು ನೀಡಿದ ನಂತರ, ಅವರನ್ನು ತಕ್ಷಣವೇ ಸರ್ಪವರಂ ಪೊಲೀಸರು ಬಂಧಿಸಿದರು.

ಆ ಪ್ರಕರಣದಲ್ಲಿ ಅವರು ಜಾಮೀನು ಪಡೆದರು, ಅವರನ್ನು ಇನಗುದೂರು ಪೊಲೀಸರು ಮತ್ತು ನಂತರ ಪಾಯಕಾರೋಪೇಟ ಪೊಲೀಸರು ಮತ್ತೆ ಬಂಧಿಸಿದರು. ಜುಲೈ 4 (ಶನಿವಾರ) ಸಂಜೆ ಪಾಯಕಾರೋಪೇಟ ಪ್ರಕರಣದಲ್ಲಿ ಅವರು ಜಾಮೀನು ಪಡೆದರು. ಮನೆಗೆ ಹಿಂದಿರುಗುತ್ತಿದ್ದಾಗ ಅವರನ್ನು ವೇಂಪಡು ಟೋಲ್ ಗೇಟ್‌ನಲ್ಲಿ ಮತ್ತೊಮ್ಮೆ ಬಂಧಿಸಲಾಯಿತು.

ಅವರ ವಿರುದ್ಧ ಯುಎಪಿಎ ಸೆಕ್ಷನ್ 13 (ಕಾನೂನುಬಾಹಿರ ಚಟುವಟಿಕೆಗಳಿಗೆ ಶಿಕ್ಷೆ) ಮತ್ತು ಸೆಕ್ಷನ್ 39 (ಭಯೋತ್ಪಾದಕ ಸಂಘಟನೆಗೆ ಬೆಂಬಲ ನೀಡಿದ ಅಪರಾಧ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗನ್ನವರಂ ಪ್ರಕರಣದಲ್ಲಿ ಅವರ ಬಂಧನದ ಬಗ್ಗೆ ಅವರ ಪತ್ನಿಗೆ ನೋಟಿಸ್ ನೀಡಲಾಗಿದೆ.

ಎಷ್ಟು ಬಾರಿ ಬಂಧಿಸಲಾಗಿದೆ?

ಜೂನ್ ಮತ್ತು ಜುಲೈ ತಿಂಗಳಲ್ಲಿ ಆಂಧ್ರಪ್ರದೇಶ ಪೊಲೀಸರು ರಾವಣ್ ಅವರನ್ನು ಒಟ್ಟು 5 ಬಾರಿ ಬಂಧಿಸಿದ್ದಾರೆ. ಜೂನ್ 30ರಂದು ಹೈದರಾಬಾದ್‌ನಲ್ಲಿ ಕಾಕಿನಾಡ/ಪಿಠಾಪುರಂ ಪೊಲೀಸರಿಂದ ಅವರ ಮೊದಲನೇ ಬಂಧನವಾಯಿತು.

ಮೊದಲ ಕೇಸ್‌ನಲ್ಲಿ ಜಾಮೀನು ದೊರೆತ ಬೆನ್ನಲ್ಲೇ, ಸರ್ಪಾವರಂ, ಪಾಯಕರಾವ್ ಪೇಟೆ ಮತ್ತು ಮಚಲಿಪಟ್ನಂ ಪೊಲೀಸ್ ಠಾಣೆಗಳಲ್ಲಿ ಸಾಲು ಸಾಲಾಗಿ ದಾಖಲಾದ ಹೊಸ ದೂರುಗಳಿಗೆ ಸಂಬಂಧಿಸಿದಂತೆ ಅವರನ್ನು 2 ಮತ್ತು ಮೂರನೇ ಭಾರಿಗೆ ಮರುಬಂಧಿಸಲಾಯಿತು. ಈ ನಾಲ್ಕೂ ಪ್ರಕರಣಗಳಲ್ಲಿ ನ್ಯಾಯಾಲಯ ಅವರಿಗೆ ಜಾಮೀನು ಮಂಜೂರು ಮಾಡಿತು.

ಅಂತಿಮವಾಗಿ ಅವರನ್ನು ಐದನೇ ಭಾರಿಗೆ ಯುಎಪಿಎ ಪ್ರಕರಣದ ಅಡಿಯಲ್ಲಿ ಜುಲೈ 5ರಂದು ಬಂಧಿಸಲಾಯಿತು. ಗನ್ನವರಂ ಪೊಲೀಸರು ರಾವಣ್ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದರು.

ಬಂಧನಕ್ಕೆ ಕಾರಣವೇನು?

ಆಂಧ್ರಪ್ರದೇಶದ ಏಲೂರು ನಗರದಲ್ಲಿ ನಡೆದ ‘ದಲಿತ ಕ್ರಿಶ್ಚಿಯನ್ ಸಮರ ಶಂಖಾರಾವಂ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ರಾವಣ್, ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಜನಸೇನಾ ಮುಖ್ಯಸ್ಥರಾದ ಪವನ್ ಕಲ್ಯಾಣ್ ಹಾಗೂ ಅವರ ಸರ್ಕಾರದ ವಿರುದ್ಧ ನೀಡಿದರೆನ್ನಲಾದ ಹೇಳಿಕೆಗಳ ಕುರಿತು ಜನಸೇನಾ ಮುಖಂಡರು ಸಾಲು ಸಾಲು ದೂರುಗಳನ್ನು ದಾಖಲಿಸಿದ್ದಾರೆ.

ಗನ್ನವರಂ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ, ರಾವಣ್ ಅವರು ತಮ್ಮ ಯೂಟ್ಯೂಬ್ ಚಾನೆಲ್ ಹಾಗೂ ಭಾಷಣಗಳಲ್ಲಿ ನಿಷೇಧಿತ ಸಿಪಿಐ (ಮಾವೋವಾದಿ) ಸಿದ್ಧಾಂತವನ್ನು ಬೆಂಬಲಿಸಿ, ಪ್ರಚೋದನಕಾರಿ ಭಾಷಣ ಮಾಡಿ, ಸಶಸ್ತ್ರ ದಂಗೆಯನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿ ಅವರ ವಿರುದ್ಧ ಯುಎಪಿಎ (Unlawful Activities Prevention Act) ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಯಿತು.

ರಾವಣ್ ಹಿನ್ನೆಲೆ ಏನು?

ಬಚಲಕೂರಿ ಜೋಸೆಫ್ (ರಾವಣ್) ಅವರು ತೆಲುಗು ರಾಜ್ಯಗಳಲ್ಲಿ ಗುರುತಿಸಿಕೊಂಡಿರುವ ಸಾಮಾಜಿಕ ಹೋರಾಟಗಾರ, ರಾಜಕೀಯ ವಿಶ್ಲೇಷಕ ಮತ್ತು ಯೂಟ್ಯೂಬರ್. ಇವರು ‘ಪ್ರಶ್ನ’ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದು, ಸಾಮಾಜಿಕ ಮತ್ತು ರಾಜಕೀಯ ವಿಷಯಗಳ ಮೇಲೆ ಕಟು ವಿಮರ್ಶೆ ಮಾಡುತ್ತಾರೆ. ದಲಿತರು, ಹಿಂದುಳಿದ ವರ್ಗಗಳು, ಧಾರ್ಮಿಕ ಅಲ್ಪಸಂಖ್ಯಾತರ ಹಕ್ಕುಗಳ ಪರವಾಗಿದ್ದಾರೆ. ತಳಸಮುದಾಯಗಳ ವಿರುದ್ಧದ ಸರ್ಕಾರದ ನೀತಿಗಳನ್ನು ಪ್ರಶ್ನಿಸುವ ವೀಡಿಯೊಗಳು ಮತ್ತು ಭಾಷಣಗಳಿಂದ ಇವರು ಗುರುತಿಸಿಕೊಂಡಿದ್ದಾರೆ.

ಪವನ್ ಕಲ್ಯಾಣ್ ವಿರುದ್ಧ ನೀಡಿದ ಹೇಳಿಕೆ ಏನು?

ಆಂಧ್ರಪ್ರದೇಶದ ಏಲೂರು ನಗರದಲ್ಲಿ ನಡೆದ ‘ದಲಿತ ಕ್ರಿಶ್ಚಿಯನ್ ಸಮರ ಶಂಖಾರಾವಂ’ ಸಭೆಯಲ್ಲಿ ರಾವಣ್ ಅವರ ಭಾಷಣವೇ ಬಂಧನಕ್ಕೆ ಮುಖ್ಯ ಕಾರಣವಾಯಿತು. ದಲಿತರ ಮೇಲಿನ ದೌರ್ಜನ್ಯ ಮತ್ತು ತಾರತಮ್ಯದ ಕುರಿತು ಮಾತನಾಡಿದ್ದ ಅವರು, ರಾಜ್ಯದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ನಡೆದಾಗ ಸರ್ಕಾರ ಮತ್ತು ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ಮೌನ ವಹಿಸುತ್ತಿದ್ದಾರೆ, ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದರು.

ಪವನ್ ಕಲ್ಯಾಣ್ ಅವರ ರಾಜಕೀಯ ನಿಲುವುಗಳನ್ನು ಪ್ರಶ್ನಿಸುತ್ತಾ, ಅವರ ವಿರುದ್ಧ ಕೆಲವು ಕಟು ಶಬ್ದಗಳನ್ನು ಬಳಸಿ ವಾಗ್ದಾಳಿ ನಡೆಸಿದರು. ಸನಾತನ ಧರ್ಮದ ಹೆಸರಿನಲ್ಲಿ ದಲಿತರು ಮತ್ತು ಕ್ರಿಶ್ಚಿಯನ್ನರನ್ನು ಮೂಲೆಗುಂಪು ಮಾಡಲಾಗುತ್ತಿದೆ ಎಂದು ವಾದಿಸಿ, ತೆಲುಗು ದೇಶಂ ಪಾರ್ಟಿ (ಟಿಡಿಪಿ), ಜನಸೇನಾ ಮತ್ತು ಬಿಜೆಪಿ ಮೈತ್ರಿ ಸರ್ಕಾರವು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ ಎಂದು ಟೀಕಿಸಿದರು.

ದಲಿತ ಕ್ರಿಶ್ಚಿಯನ್ನರಿಗೆ ಸಿಗಬೇಕಾದ ಶೈಕ್ಷಣಿಕ, ಸಾಮಾಜಿಕ ಮತ್ತು ಮೀಸಲಾತಿ ಹಕ್ಕುಗಳಿಗಾಗಿ ಒಗ್ಗಟ್ಟಾಗಿ ಹೋರಾಡಬೇಕು ಎಂದು ಅವರು ಕಾರ್ಯಕ್ರಮದಲ್ಲಿ ಕರೆ ನೀಡಿದರು. ದಲಿತ ಮತ್ತು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಡೆಗಣಿಸಿದರೆ ಮುಂಬರುವ ದಿನಗಳಲ್ಲಿ ಸರ್ಕಾರ ತೀವ್ರ ಪ್ರತಿರೋಧ ಎದುರಿಸಬೇಕಾಗುತ್ತದೆ ಎಂದು ಸವಾಲು ಹಾಕಿದರು.

ಈ ಭಾಷಣದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ, ಜನಸೇನಾ ಪಕ್ಷದ ಬೆಂಬಲಿಗರು ಮತ್ತು ನಾಯಕರು ರಾವಣ್ ಅವರ ಮಾತುಗಳು ಹಿಂಸಾಚಾರವನ್ನು ಪ್ರಚೋದಿಸುವಂತಿವೆ ಎಂದು ಸರಣಿ ದೂರುಗಳನ್ನು ದಾಖಲಿಸಿದ್ದಾರೆ. ಉಪಮುಖ್ಯಮಂತ್ರಿಯವರ ತೇಜೋವಧೆ ಮಾಡುತ್ತಿವೆ ಎಂದು ಆರೋಪಿಸಿದ್ದು, ಇದೇ ದೂರುಗಳ ಆಧಾರದ ಮೇಲೆ ಅವರನ್ನು ಸರಣಿ ಬಂಧನಕ್ಕೊಳಪಡಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...