Homeಮುಖಪುಟಕವಿತೆ ಬರೆದಿದ್ದಕ್ಕೆ ಯುಎಪಿಎ ಪ್ರಕರಣ: ಅಸ್ಸಾಂ ಯುವ ಕವಯತ್ರಿ ಪರ ಕೋರ್ಟ್ ತೀರ್ಪು

ಕವಿತೆ ಬರೆದಿದ್ದಕ್ಕೆ ಯುಎಪಿಎ ಪ್ರಕರಣ: ಅಸ್ಸಾಂ ಯುವ ಕವಯತ್ರಿ ಪರ ಕೋರ್ಟ್ ತೀರ್ಪು

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ರಾಜ್ಯ ಪೊಲೀಸರು ಸಲ್ಲಿಸಿದ ಎಲ್ಲಾ ಆರೋಪಗಳಿಂದ ಯುವ ಅಸ್ಸಾಮಿ ಕವಯಿತ್ರಿ ಬಾರ್ಶಶ್ರೀ ಬುರಾಗೊಹೈನ್ ಅವರನ್ನು ಅಸ್ಸಾಂನ ಕೆಳ ನ್ಯಾಯಾಲಯವು ಖುಲಾಸೆಗೊಳಿಸಿದೆ.

ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) (ಸ್ವತಂತ್ರ) ಬಣದೊಂದಿಗೆ ಸೇರಿ ‘ರಾಷ್ಟ್ರದ ವಿರುದ್ಧ ದಂಗೆಯ ಕೃತ್ಯ’ ಎಸಗಿದ್ದಾರೆ ಎಂದು ರಾಜ್ಯ ಪೊಲೀಸರು ಮಾಡಿರುವ ಆರೋಪವನ್ನು ಮಾರ್ಚ್ 18 ರಂದು ಹೊರಡಿಸಲಾದ ನ್ಯಾಯಾಲಯದ ಆದೇಶದಲ್ಲಿ ತಿರಸ್ಕರಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ನಾಗರಿಕರ ಮೇಲೆ ತನ್ನ ಶಿಸ್ತುಕ್ರಮವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2022ರಲ್ಲಿ ಆರಂಭಿಸಿತು. ಫೇಸ್‌ಬುಕ್‌ನಲ್ಲಿ ಕವಿತೆ ಪ್ರಕಟಿಸಿದ್ದಕ್ಕಾಗಿ 19 ವರ್ಷದ ವಿದ್ಯಾರ್ಥಿನಿಯನ್ನು ಬಂಧಿಸಿತ್ತು. ಉಲ್ಫಾಗೆ ಸೇರಲು ಯುವಜನರಿಗೆ ಈ ಕವಿತೆಯ ಮೂಲಕ ಪ್ರಚೋದಿಸಲಾಗಿದೆ ಎಂದು ಸರ್ಕಾರ ವಾ‌ದಿಸಿತ್ತು.

ಜೋರ್ಹತ್ ಜಿಲ್ಲೆಯ ಡಿಸಿಬಿ ಕಾಲೇಜಿನಲ್ಲಿ ಗಣಿತಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ಬಾರ್ಶಶ್ರೀ ಬಂಧನ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಅವರನ್ನು ಬಿಡುಗಡೆ ಮಾಡುವಂತೆ ಸಾರ್ವಜನಿಕರು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರಿಗೆ ಮನವಿ ಸಲ್ಲಿಸಿದ್ದರು.

ಆದರೆ ಶರ್ಮಾ ಅವರು, “ನಿಷೇಧಿತ ಶಸ್ತ್ರಸಜ್ಜಿತ ಸಂಘಟನೆಗೆ ಜನರನ್ನು ಸೇರಿಸಲು ಬಾರ್ಶಶ್ರೀ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಲು ಸಾಧ್ಯವೇ? ಹೇಗೆ ಬಿಡುಗಡೆ ಮಾಡಲು ಸಾಧ್ಯ? ಅವರು ಉಲ್ಫಾಗೆ ಹೋದರೆ ಮಾನವ ಬಾಂಬ್ ಆಗಿ ಹಿಂತಿರುಗುತ್ತಾರೆ, ನಮ್ಮನ್ನು ಕೊಲ್ಲುತ್ತಾರೆ” ಎಂದು ಆರೋಪಿಸಿದ್ದರು.

ಬಾರ್ಶಶ್ರೀ ವಿರುದ್ಧ ಎಫ್‌ಐಆರ್ ದಾಖಲಿಸಿದಾಗ, “ಉಲ್ಫಾ ಸ್ವತಂತ್ರ ಸಂಘಟನೆಯು ಸೂಚ್ಯವಾದ ಅನುಮೋದಿಸುವ ಸಾಲುಗಳನ್ನು ಕವಿತೆಯಲ್ಲಿ. ಹೀಗಾಗಿ ಅವರು ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ” ಎಂದು ದೂರಲಾಗಿತ್ತು.

ಇದನ್ನೂ ಓದಿರಿ: ಸಂಸತ್ತಿನ ಮೊದಲ ಮಹಡಿಯಲ್ಲಿ ‘ಮೋದಾನಿ’ ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

ಬಂಧನಕ್ಕೊಳಗಾದ ಎರಡು ತಿಂಗಳ ನಂತರ, ತನ್ನ ಕಾಲೇಜು ಪರೀಕ್ಷೆಗಳನ್ನು ಬರೆಯುವ ಸಲುವಾಗಿ ಬಾರ್ಶಶ್ರೀ ಅವರು ಗೋಲಾಘಾಟ್ ಜಿಲ್ಲೆಯ ಸೆಷನ್ಸ್ ನ್ಯಾಯಾಲಯಕ್ಕೆ ತೆರಳಿದರು. ನ್ಯಾಯಾಲಯವು ಬಾರ್ಶಶ್ರೀ ಪರವಾಗಿ ನಿಂತಿತ್ತು. ಹೀಗಾಗಿ ಜುಲೈ 16, 2022 ರಂದು ಪ್ರಾರಂಭವಾದ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅನುವು ಮಾಡಿಕೊಟ್ಟಿತು.

ಮಾರ್ಚ್ 18ರಂದು ಗೋಲಾಘಾಟ್ ಸೆಷನ್ಸ್ ನ್ಯಾಯಾಲಯವು ಎಲ್ಲಾ ಆರೋಪಗಳಿಂದ ಬಾರ್ಶಶ್ರೀ ಅವರನ್ನು ಖುಲಾಸೆಗೊಳಿಸಿದ ನಂತರ, ಅವರ ಸಹೋದರ ಅರಿಂದೋಮ್ ಬುರ್ಹಾಗೋಹೈನ್ ಅವರು ‘ಇಂಡಿಯಾ ಟುಡೆನೆ’ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, “ನಮಗೆ ನ್ಯಾಯ ಸಿಕ್ಕಿತು, ಅಂತಿಮವಾಗಿ ಸತ್ಯಕ್ಕೆ ಜಯ ಸಂದಿದೆ” ಎಂದಿದ್ದಾರೆ.

ಜುಲೈ 22, 2022 ರಿಂದ ಬಾರ್ಶಶ್ರೀ ಬುರಾಗೊಹೈನ್ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...