Homeಮುಖಪುಟಕವಿತೆ ಬರೆದಿದ್ದಕ್ಕೆ ಯುಎಪಿಎ ಪ್ರಕರಣ: ಅಸ್ಸಾಂ ಯುವ ಕವಯತ್ರಿ ಪರ ಕೋರ್ಟ್ ತೀರ್ಪು

ಕವಿತೆ ಬರೆದಿದ್ದಕ್ಕೆ ಯುಎಪಿಎ ಪ್ರಕರಣ: ಅಸ್ಸಾಂ ಯುವ ಕವಯತ್ರಿ ಪರ ಕೋರ್ಟ್ ತೀರ್ಪು

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ರಾಜ್ಯ ಪೊಲೀಸರು ಸಲ್ಲಿಸಿದ ಎಲ್ಲಾ ಆರೋಪಗಳಿಂದ ಯುವ ಅಸ್ಸಾಮಿ ಕವಯಿತ್ರಿ ಬಾರ್ಶಶ್ರೀ ಬುರಾಗೊಹೈನ್ ಅವರನ್ನು ಅಸ್ಸಾಂನ ಕೆಳ ನ್ಯಾಯಾಲಯವು ಖುಲಾಸೆಗೊಳಿಸಿದೆ.

ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) (ಸ್ವತಂತ್ರ) ಬಣದೊಂದಿಗೆ ಸೇರಿ ‘ರಾಷ್ಟ್ರದ ವಿರುದ್ಧ ದಂಗೆಯ ಕೃತ್ಯ’ ಎಸಗಿದ್ದಾರೆ ಎಂದು ರಾಜ್ಯ ಪೊಲೀಸರು ಮಾಡಿರುವ ಆರೋಪವನ್ನು ಮಾರ್ಚ್ 18 ರಂದು ಹೊರಡಿಸಲಾದ ನ್ಯಾಯಾಲಯದ ಆದೇಶದಲ್ಲಿ ತಿರಸ್ಕರಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ನಾಗರಿಕರ ಮೇಲೆ ತನ್ನ ಶಿಸ್ತುಕ್ರಮವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2022ರಲ್ಲಿ ಆರಂಭಿಸಿತು. ಫೇಸ್‌ಬುಕ್‌ನಲ್ಲಿ ಕವಿತೆ ಪ್ರಕಟಿಸಿದ್ದಕ್ಕಾಗಿ 19 ವರ್ಷದ ವಿದ್ಯಾರ್ಥಿನಿಯನ್ನು ಬಂಧಿಸಿತ್ತು. ಉಲ್ಫಾಗೆ ಸೇರಲು ಯುವಜನರಿಗೆ ಈ ಕವಿತೆಯ ಮೂಲಕ ಪ್ರಚೋದಿಸಲಾಗಿದೆ ಎಂದು ಸರ್ಕಾರ ವಾ‌ದಿಸಿತ್ತು.

ಜೋರ್ಹತ್ ಜಿಲ್ಲೆಯ ಡಿಸಿಬಿ ಕಾಲೇಜಿನಲ್ಲಿ ಗಣಿತಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ಬಾರ್ಶಶ್ರೀ ಬಂಧನ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಅವರನ್ನು ಬಿಡುಗಡೆ ಮಾಡುವಂತೆ ಸಾರ್ವಜನಿಕರು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರಿಗೆ ಮನವಿ ಸಲ್ಲಿಸಿದ್ದರು.

ಆದರೆ ಶರ್ಮಾ ಅವರು, “ನಿಷೇಧಿತ ಶಸ್ತ್ರಸಜ್ಜಿತ ಸಂಘಟನೆಗೆ ಜನರನ್ನು ಸೇರಿಸಲು ಬಾರ್ಶಶ್ರೀ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಲು ಸಾಧ್ಯವೇ? ಹೇಗೆ ಬಿಡುಗಡೆ ಮಾಡಲು ಸಾಧ್ಯ? ಅವರು ಉಲ್ಫಾಗೆ ಹೋದರೆ ಮಾನವ ಬಾಂಬ್ ಆಗಿ ಹಿಂತಿರುಗುತ್ತಾರೆ, ನಮ್ಮನ್ನು ಕೊಲ್ಲುತ್ತಾರೆ” ಎಂದು ಆರೋಪಿಸಿದ್ದರು.

ಬಾರ್ಶಶ್ರೀ ವಿರುದ್ಧ ಎಫ್‌ಐಆರ್ ದಾಖಲಿಸಿದಾಗ, “ಉಲ್ಫಾ ಸ್ವತಂತ್ರ ಸಂಘಟನೆಯು ಸೂಚ್ಯವಾದ ಅನುಮೋದಿಸುವ ಸಾಲುಗಳನ್ನು ಕವಿತೆಯಲ್ಲಿ. ಹೀಗಾಗಿ ಅವರು ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ” ಎಂದು ದೂರಲಾಗಿತ್ತು.

ಇದನ್ನೂ ಓದಿರಿ: ಸಂಸತ್ತಿನ ಮೊದಲ ಮಹಡಿಯಲ್ಲಿ ‘ಮೋದಾನಿ’ ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

ಬಂಧನಕ್ಕೊಳಗಾದ ಎರಡು ತಿಂಗಳ ನಂತರ, ತನ್ನ ಕಾಲೇಜು ಪರೀಕ್ಷೆಗಳನ್ನು ಬರೆಯುವ ಸಲುವಾಗಿ ಬಾರ್ಶಶ್ರೀ ಅವರು ಗೋಲಾಘಾಟ್ ಜಿಲ್ಲೆಯ ಸೆಷನ್ಸ್ ನ್ಯಾಯಾಲಯಕ್ಕೆ ತೆರಳಿದರು. ನ್ಯಾಯಾಲಯವು ಬಾರ್ಶಶ್ರೀ ಪರವಾಗಿ ನಿಂತಿತ್ತು. ಹೀಗಾಗಿ ಜುಲೈ 16, 2022 ರಂದು ಪ್ರಾರಂಭವಾದ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅನುವು ಮಾಡಿಕೊಟ್ಟಿತು.

ಮಾರ್ಚ್ 18ರಂದು ಗೋಲಾಘಾಟ್ ಸೆಷನ್ಸ್ ನ್ಯಾಯಾಲಯವು ಎಲ್ಲಾ ಆರೋಪಗಳಿಂದ ಬಾರ್ಶಶ್ರೀ ಅವರನ್ನು ಖುಲಾಸೆಗೊಳಿಸಿದ ನಂತರ, ಅವರ ಸಹೋದರ ಅರಿಂದೋಮ್ ಬುರ್ಹಾಗೋಹೈನ್ ಅವರು ‘ಇಂಡಿಯಾ ಟುಡೆನೆ’ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, “ನಮಗೆ ನ್ಯಾಯ ಸಿಕ್ಕಿತು, ಅಂತಿಮವಾಗಿ ಸತ್ಯಕ್ಕೆ ಜಯ ಸಂದಿದೆ” ಎಂದಿದ್ದಾರೆ.

ಜುಲೈ 22, 2022 ರಿಂದ ಬಾರ್ಶಶ್ರೀ ಬುರಾಗೊಹೈನ್ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...