Homeಮುಖಪುಟಕವಿತೆ ಬರೆದಿದ್ದಕ್ಕೆ ಯುಎಪಿಎ ಪ್ರಕರಣ: ಅಸ್ಸಾಂ ಯುವ ಕವಯತ್ರಿ ಪರ ಕೋರ್ಟ್ ತೀರ್ಪು

ಕವಿತೆ ಬರೆದಿದ್ದಕ್ಕೆ ಯುಎಪಿಎ ಪ್ರಕರಣ: ಅಸ್ಸಾಂ ಯುವ ಕವಯತ್ರಿ ಪರ ಕೋರ್ಟ್ ತೀರ್ಪು

- Advertisement -
- Advertisement -

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ರಾಜ್ಯ ಪೊಲೀಸರು ಸಲ್ಲಿಸಿದ ಎಲ್ಲಾ ಆರೋಪಗಳಿಂದ ಯುವ ಅಸ್ಸಾಮಿ ಕವಯಿತ್ರಿ ಬಾರ್ಶಶ್ರೀ ಬುರಾಗೊಹೈನ್ ಅವರನ್ನು ಅಸ್ಸಾಂನ ಕೆಳ ನ್ಯಾಯಾಲಯವು ಖುಲಾಸೆಗೊಳಿಸಿದೆ.

ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್ (ಉಲ್ಫಾ) (ಸ್ವತಂತ್ರ) ಬಣದೊಂದಿಗೆ ಸೇರಿ ‘ರಾಷ್ಟ್ರದ ವಿರುದ್ಧ ದಂಗೆಯ ಕೃತ್ಯ’ ಎಸಗಿದ್ದಾರೆ ಎಂದು ರಾಜ್ಯ ಪೊಲೀಸರು ಮಾಡಿರುವ ಆರೋಪವನ್ನು ಮಾರ್ಚ್ 18 ರಂದು ಹೊರಡಿಸಲಾದ ನ್ಯಾಯಾಲಯದ ಆದೇಶದಲ್ಲಿ ತಿರಸ್ಕರಿಸಲಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ನಾಗರಿಕರ ಮೇಲೆ ತನ್ನ ಶಿಸ್ತುಕ್ರಮವನ್ನು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ 2022ರಲ್ಲಿ ಆರಂಭಿಸಿತು. ಫೇಸ್‌ಬುಕ್‌ನಲ್ಲಿ ಕವಿತೆ ಪ್ರಕಟಿಸಿದ್ದಕ್ಕಾಗಿ 19 ವರ್ಷದ ವಿದ್ಯಾರ್ಥಿನಿಯನ್ನು ಬಂಧಿಸಿತ್ತು. ಉಲ್ಫಾಗೆ ಸೇರಲು ಯುವಜನರಿಗೆ ಈ ಕವಿತೆಯ ಮೂಲಕ ಪ್ರಚೋದಿಸಲಾಗಿದೆ ಎಂದು ಸರ್ಕಾರ ವಾ‌ದಿಸಿತ್ತು.

ಜೋರ್ಹತ್ ಜಿಲ್ಲೆಯ ಡಿಸಿಬಿ ಕಾಲೇಜಿನಲ್ಲಿ ಗಣಿತಶಾಸ್ತ್ರ ವ್ಯಾಸಂಗ ಮಾಡುತ್ತಿದ್ದ ಬಾರ್ಶಶ್ರೀ ಬಂಧನ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಅವರನ್ನು ಬಿಡುಗಡೆ ಮಾಡುವಂತೆ ಸಾರ್ವಜನಿಕರು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರಿಗೆ ಮನವಿ ಸಲ್ಲಿಸಿದ್ದರು.

ಆದರೆ ಶರ್ಮಾ ಅವರು, “ನಿಷೇಧಿತ ಶಸ್ತ್ರಸಜ್ಜಿತ ಸಂಘಟನೆಗೆ ಜನರನ್ನು ಸೇರಿಸಲು ಬಾರ್ಶಶ್ರೀ ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಲು ಸಾಧ್ಯವೇ? ಹೇಗೆ ಬಿಡುಗಡೆ ಮಾಡಲು ಸಾಧ್ಯ? ಅವರು ಉಲ್ಫಾಗೆ ಹೋದರೆ ಮಾನವ ಬಾಂಬ್ ಆಗಿ ಹಿಂತಿರುಗುತ್ತಾರೆ, ನಮ್ಮನ್ನು ಕೊಲ್ಲುತ್ತಾರೆ” ಎಂದು ಆರೋಪಿಸಿದ್ದರು.

ಬಾರ್ಶಶ್ರೀ ವಿರುದ್ಧ ಎಫ್‌ಐಆರ್ ದಾಖಲಿಸಿದಾಗ, “ಉಲ್ಫಾ ಸ್ವತಂತ್ರ ಸಂಘಟನೆಯು ಸೂಚ್ಯವಾದ ಅನುಮೋದಿಸುವ ಸಾಲುಗಳನ್ನು ಕವಿತೆಯಲ್ಲಿ. ಹೀಗಾಗಿ ಅವರು ಭಾರತ ಸರ್ಕಾರದ ವಿರುದ್ಧ ಯುದ್ಧ ಮಾಡುವ ಉದ್ದೇಶವನ್ನು ವ್ಯಕ್ತಪಡಿಸಿದ್ದಾರೆ” ಎಂದು ದೂರಲಾಗಿತ್ತು.

ಇದನ್ನೂ ಓದಿರಿ: ಸಂಸತ್ತಿನ ಮೊದಲ ಮಹಡಿಯಲ್ಲಿ ‘ಮೋದಾನಿ’ ಬ್ಯಾನರ್ ಪ್ರದರ್ಶನ: ಪ್ರತಿಪಕ್ಷಗಳ ವಿನೂತನ ಪ್ರತಿಭಟನೆ

ಬಂಧನಕ್ಕೊಳಗಾದ ಎರಡು ತಿಂಗಳ ನಂತರ, ತನ್ನ ಕಾಲೇಜು ಪರೀಕ್ಷೆಗಳನ್ನು ಬರೆಯುವ ಸಲುವಾಗಿ ಬಾರ್ಶಶ್ರೀ ಅವರು ಗೋಲಾಘಾಟ್ ಜಿಲ್ಲೆಯ ಸೆಷನ್ಸ್ ನ್ಯಾಯಾಲಯಕ್ಕೆ ತೆರಳಿದರು. ನ್ಯಾಯಾಲಯವು ಬಾರ್ಶಶ್ರೀ ಪರವಾಗಿ ನಿಂತಿತ್ತು. ಹೀಗಾಗಿ ಜುಲೈ 16, 2022 ರಂದು ಪ್ರಾರಂಭವಾದ ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಅನುವು ಮಾಡಿಕೊಟ್ಟಿತು.

ಮಾರ್ಚ್ 18ರಂದು ಗೋಲಾಘಾಟ್ ಸೆಷನ್ಸ್ ನ್ಯಾಯಾಲಯವು ಎಲ್ಲಾ ಆರೋಪಗಳಿಂದ ಬಾರ್ಶಶ್ರೀ ಅವರನ್ನು ಖುಲಾಸೆಗೊಳಿಸಿದ ನಂತರ, ಅವರ ಸಹೋದರ ಅರಿಂದೋಮ್ ಬುರ್ಹಾಗೋಹೈನ್ ಅವರು ‘ಇಂಡಿಯಾ ಟುಡೆನೆ’ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, “ನಮಗೆ ನ್ಯಾಯ ಸಿಕ್ಕಿತು, ಅಂತಿಮವಾಗಿ ಸತ್ಯಕ್ಕೆ ಜಯ ಸಂದಿದೆ” ಎಂದಿದ್ದಾರೆ.

ಜುಲೈ 22, 2022 ರಿಂದ ಬಾರ್ಶಶ್ರೀ ಬುರಾಗೊಹೈನ್ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...