HomeಮುಖಪುಟUAPA ಪ್ರಕರಣ: ಬಂಧನ ಪ್ರಶ್ನಿಸಿ ಸುಪ್ರೀಂ​ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

UAPA ಪ್ರಕರಣ: ಬಂಧನ ಪ್ರಶ್ನಿಸಿ ಸುಪ್ರೀಂ​ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

- Advertisement -
- Advertisement -

ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನ ಮತ್ತು ಪೊಲೀಸ್‌ ಕಸ್ಟಡಿಯನ್ನು ರದ್ದುಪಡಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಸೋಮವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ನೇತೃತ್ವದ ಪೀಠವು ಪುರ್ಕಾಯಸ್ಥ ಪರ ವಕೀಲ ಕಪಿಲ್ ಸಿಬಲ್ ಅವರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಿಬಲ್, ”ಇದು ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ವಿಷಯವಾಗಿದೆ. ಪತ್ರಕರ್ತರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇಲ್ಲಿ ಆರೋಪಿಗಳಲ್ಲಿ ಒಬ್ಬರು 75 ವರ್ಷದ ವ್ಯಕ್ತಿ ಎಂದು ಸಿಬಲ್ ಪೀಠಕ್ಕೆ ತಿಳಿಸಿದರು.. ತುರ್ತು ವಿಚಾರಣೆಯ ಮನವಿಯನ್ನು ಪರಿಗಣಿಸಲಾಗುವುದು ಎಂದು ಸಿಬಲ್ ಅವರಿಗೆ ನ್ಯಾಯಪೀಠ ಹೇಳಿತು.

ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡಲು ಹಣ ಸ್ವೀಕರಿಸಿದ ಆರೋಪದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಅಕ್ಟೋಬರ್ 3 ರಂದು ಪುರ್ಕಾಯಸ್ಥ ಮತ್ತು ಚಕ್ರವರ್ತಿಯನ್ನು ಯುಎಪಿಎ ಆರೋಪಗಳ ಅಡಿ ಬಂಧಿಸಿತ್ತು. ಆ ನಂತರದ 7 ದಿನಗಳ ಪೊಲೀಸ್‌ ಕಸ್ಟಡಿಗೆ ಕಳುಹಿಸಲಾಗಿತ್ತು. ಇದರ ವಿರುದ್ಧದ ಮನವಿಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 13 ರಂದು ವಜಾಗೊಳಿಸಿತ್ತು.

ನ್ಯೂಸ್‌ಕ್ನಿಕ್ ಚೀನಾದಿಂದ ದೊಡ್ಡ ಮೊತ್ತದ ಹಣವನ್ನು ಸ್ವೀಕರಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ. ಇದು ಭಾರತದ ಸಾರ್ವಭೌಮತೆಗೆ ಧಕ್ಕೆ ತರಲು ಮತ್ತು ಅದರ ನಾಗರಿಕರ ನಡುವೆ ವೈಷಮ್ಯವನ್ನು ಬಿತ್ತಲು ಉದ್ದೇಶಿಸಿದೆ. 2019ರ ಲೋಕಸಭಾ ಚುನಾವಣೆಯನ್ನು ಹಾಳು ಮಾಡಲು ಪುರ್ಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (PADS) ಜತೆ ಸಂಚು ರೂಪಿಸಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಕಾಶ್ಮೀರ ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶಗಳು ಎಂದು ನ್ಯೂಸ್ ಕ್ಲಿಕ್ ಸಂಸ್ಥಾಪಕರು ಜಾಗತಿಕವಾಗಿ ಮತ್ತು ದೇಶೀಯವಾಗಿ ಪ್ರಚಾರ ಮಾಡುತ್ತಿದ್ದಾರೆ ಹಾಗೂ ಭಾರತದ ನಕ್ಷೆಯನ್ನು ತಿರುಚುವ ಮೂಲಕ ಭಾರತದ ಏಕತೆ ಮತ್ತು ಪ್ರಾದೇಶಿಕ ಸಮಗ್ರತೆಯ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ನ್ಯೂಸ್‌ಕ್ಲಿಕ್ ವೆಬ್ಸೈಟ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಅವರ ಸಹಚರರು ಜೋಸೆಫ್ ರಾಜ್, ಅನೂಪ್ ಚಕ್ರವರ್ತಿ (ಅಮಿತ್ ಚಕ್ರವರ್ತಿ ಅವರ ಸಹೋದರ), ಬಪ್ಪಾದಿತ್ಯ ಸಿನ್ಹಾ (ವರ್ಚುವೇಲ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್​ನ ಪ್ರವರ್ತಕ) ಅವರಿಂದ ಅಕ್ರಮವಾಗಿ ಹಣ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಈ ಹಣವನ್ನು ತೀಸ್ತಾ ಸೆಟಲ್ವಾಡ್ ಅವರ ಸಹಚರರಾದ ಗೌತಮ್ ನವ್ಲಾಖಾ, ಜಾವೇದ್ ಆನಂದ್, ತಮಾರಾ, ಜಿಬ್ರಾನ್, ಊರ್ಮಿಲೇಶ್, ಅರಾತ್ರಿಕಾ ಹಲ್ದರ್, ಪರಂಜಯ್ ಗುಹಾ ಠಾಕುರ್ತಾ, ತ್ರಿನಾ ಶಂಕರ್ ಮತ್ತು ಪತ್ರಕರ್ತ ಅಭಿಸಾರ್ ಶರ್ಮಾ ಅವರಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: UAPA ಪ್ರಕರಣ: ನ್ಯೂಸ್‌ಕ್ಲಿಕ್ ಮುಖ್ಯಸ್ಥ, ಹೆಚ್‌ಆರ್‌ಗೆ 10 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...