HomeಮುಖಪುಟUAPA ಪ್ರಕರಣ: ಬಂಧನ ಪ್ರಶ್ನಿಸಿ ಸುಪ್ರೀಂ​ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

UAPA ಪ್ರಕರಣ: ಬಂಧನ ಪ್ರಶ್ನಿಸಿ ಸುಪ್ರೀಂ​ ಮೆಟ್ಟಿಲೇರಿದ ನ್ಯೂಸ್‌ಕ್ಲಿಕ್ ಸಂಸ್ಥಾಪಕ

- Advertisement -
- Advertisement -

ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಂಧನ ಮತ್ತು ಪೊಲೀಸ್‌ ಕಸ್ಟಡಿಯನ್ನು ರದ್ದುಪಡಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ ಮತ್ತು ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು ಸೋಮವಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ನ್ಯಾಯಮೂರ್ತಿಗಳಾದ ಜೆ.ಬಿ. ಪರ್ಡಿವಾಲಾ ಮತ್ತು ಮನೋಜ್ ಮಿಶ್ರಾ ನೇತೃತ್ವದ ಪೀಠವು ಪುರ್ಕಾಯಸ್ಥ ಪರ ವಕೀಲ ಕಪಿಲ್ ಸಿಬಲ್ ಅವರಿಗೆ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿತು.

ಇದಕ್ಕೆ ಪ್ರತಿಕ್ರಿಯಿಸಿದ ಸಿಬಲ್, ”ಇದು ನ್ಯೂಸ್‌ಕ್ಲಿಕ್‌ಗೆ ಸಂಬಂಧಿಸಿದ ವಿಷಯವಾಗಿದೆ. ಪತ್ರಕರ್ತರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಇಲ್ಲಿ ಆರೋಪಿಗಳಲ್ಲಿ ಒಬ್ಬರು 75 ವರ್ಷದ ವ್ಯಕ್ತಿ ಎಂದು ಸಿಬಲ್ ಪೀಠಕ್ಕೆ ತಿಳಿಸಿದರು.. ತುರ್ತು ವಿಚಾರಣೆಯ ಮನವಿಯನ್ನು ಪರಿಗಣಿಸಲಾಗುವುದು ಎಂದು ಸಿಬಲ್ ಅವರಿಗೆ ನ್ಯಾಯಪೀಠ ಹೇಳಿತು.

ಭಾರತದಲ್ಲಿ ಚೀನಾ ಪರ ಪ್ರಚಾರ ಮಾಡಲು ಹಣ ಸ್ವೀಕರಿಸಿದ ಆರೋಪದ ಮೇಲೆ ದೆಹಲಿ ಪೊಲೀಸರ ವಿಶೇಷ ಸೆಲ್ ಅಕ್ಟೋಬರ್ 3 ರಂದು ಪುರ್ಕಾಯಸ್ಥ ಮತ್ತು ಚಕ್ರವರ್ತಿಯನ್ನು ಯುಎಪಿಎ ಆರೋಪಗಳ ಅಡಿ ಬಂಧಿಸಿತ್ತು. ಆ ನಂತರದ 7 ದಿನಗಳ ಪೊಲೀಸ್‌ ಕಸ್ಟಡಿಗೆ ಕಳುಹಿಸಲಾಗಿತ್ತು. ಇದರ ವಿರುದ್ಧದ ಮನವಿಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 13 ರಂದು ವಜಾಗೊಳಿಸಿತ್ತು.

ನ್ಯೂಸ್‌ಕ್ನಿಕ್ ಚೀನಾದಿಂದ ದೊಡ್ಡ ಮೊತ್ತದ ಹಣವನ್ನು ಸ್ವೀಕರಿಸಿದೆ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ. ಇದು ಭಾರತದ ಸಾರ್ವಭೌಮತೆಗೆ ಧಕ್ಕೆ ತರಲು ಮತ್ತು ಅದರ ನಾಗರಿಕರ ನಡುವೆ ವೈಷಮ್ಯವನ್ನು ಬಿತ್ತಲು ಉದ್ದೇಶಿಸಿದೆ. 2019ರ ಲೋಕಸಭಾ ಚುನಾವಣೆಯನ್ನು ಹಾಳು ಮಾಡಲು ಪುರ್ಕಾಯಸ್ಥ ಅವರು ಪೀಪಲ್ಸ್ ಅಲೈಯನ್ಸ್ ಫಾರ್ ಡೆಮಾಕ್ರಸಿ ಅಂಡ್ ಸೆಕ್ಯುಲರಿಸಂ (PADS) ಜತೆ ಸಂಚು ರೂಪಿಸಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.

ಕಾಶ್ಮೀರ ಮತ್ತು ಅರುಣಾಚಲ ಪ್ರದೇಶವನ್ನು ವಿವಾದಿತ ಪ್ರದೇಶಗಳು ಎಂದು ನ್ಯೂಸ್ ಕ್ಲಿಕ್ ಸಂಸ್ಥಾಪಕರು ಜಾಗತಿಕವಾಗಿ ಮತ್ತು ದೇಶೀಯವಾಗಿ ಪ್ರಚಾರ ಮಾಡುತ್ತಿದ್ದಾರೆ ಹಾಗೂ ಭಾರತದ ನಕ್ಷೆಯನ್ನು ತಿರುಚುವ ಮೂಲಕ ಭಾರತದ ಏಕತೆ ಮತ್ತು ಪ್ರಾದೇಶಿಕ ಸಮಗ್ರತೆಯ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ನ್ಯೂಸ್‌ಕ್ಲಿಕ್ ವೆಬ್ಸೈಟ್‌ನ ಸಂಪಾದಕ ಪ್ರಬೀರ್ ಪುರ್ಕಾಯಸ್ಥ ಮತ್ತು ಅವರ ಸಹಚರರು ಜೋಸೆಫ್ ರಾಜ್, ಅನೂಪ್ ಚಕ್ರವರ್ತಿ (ಅಮಿತ್ ಚಕ್ರವರ್ತಿ ಅವರ ಸಹೋದರ), ಬಪ್ಪಾದಿತ್ಯ ಸಿನ್ಹಾ (ವರ್ಚುವೇಲ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್​ನ ಪ್ರವರ್ತಕ) ಅವರಿಂದ ಅಕ್ರಮವಾಗಿ ಹಣ ಪಡೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೇ ಈ ಹಣವನ್ನು ತೀಸ್ತಾ ಸೆಟಲ್ವಾಡ್ ಅವರ ಸಹಚರರಾದ ಗೌತಮ್ ನವ್ಲಾಖಾ, ಜಾವೇದ್ ಆನಂದ್, ತಮಾರಾ, ಜಿಬ್ರಾನ್, ಊರ್ಮಿಲೇಶ್, ಅರಾತ್ರಿಕಾ ಹಲ್ದರ್, ಪರಂಜಯ್ ಗುಹಾ ಠಾಕುರ್ತಾ, ತ್ರಿನಾ ಶಂಕರ್ ಮತ್ತು ಪತ್ರಕರ್ತ ಅಭಿಸಾರ್ ಶರ್ಮಾ ಅವರಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: UAPA ಪ್ರಕರಣ: ನ್ಯೂಸ್‌ಕ್ಲಿಕ್ ಮುಖ್ಯಸ್ಥ, ಹೆಚ್‌ಆರ್‌ಗೆ 10 ದಿನಗಳ ನ್ಯಾಯಾಂಗ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...