Homeಮುಖಪುಟಉಬರ್‌ ಚಾಲಕನ ನೈತಿಕ ಪೊಲೀಸ್‌ಗಿರಿ : ಸಿಎಎ ಪ್ರತಿಭಟನಾಕಾರ ಮುಂಬೈ ಪೊಲೀಸ್‌ ವಶಕ್ಕೆ

ಉಬರ್‌ ಚಾಲಕನ ನೈತಿಕ ಪೊಲೀಸ್‌ಗಿರಿ : ಸಿಎಎ ಪ್ರತಿಭಟನಾಕಾರ ಮುಂಬೈ ಪೊಲೀಸ್‌ ವಶಕ್ಕೆ

ಕೆಂಪು ಸ್ಕಾರ್ಫ್ ಧರಿಸಬೇಡಿ.  "ವಾತಾವರಣವು ಉತ್ತಮವಾಗಿಲ್ಲ ಮತ್ತು ಏನು ಬೇಕಾದರೂ ಆಗಬಹುದು" ಎಂದು ಪೊಲೀಸರು ಎಂದು ಸಲಹೆ ನೀಡಿದ್ದಾರೆ

- Advertisement -
- Advertisement -

ಮುಂಬೈ ಉಬರ್ ಕ್ಯಾಬ್ ಚಾಲಕನೊಬ್ಬ, ಸಿಎಎ ಪ್ರತಿಭಟನೆಯ ಕುರಿತು ಫೋನ್‌ನಲ್ಲಿ ಮಾತನಾಡುತ್ತಿದ್ದ ತನ್ನ ಪ್ರಯಾಣಿಕ (ಕವಿ ಮತ್ತು ಸಾಮಾಜಿಕ ಕಾರ್ಯಕರ್ತ)ನನ್ನು ದೇಶದ್ರೋಹಿ ಎಂದು ಭಾವಿಸಿ ಅವರನ್ನು ಪೊಲೀಸರಿಗೆ ಒಪ್ಪಿಸಿರುವ ಘಟನೆ ಬುಧವಾರ ರಾತ್ರಿ ಜರುಗಿದೆ.

ಹೋರಾಟಗಾರ್ತಿ ಕವಿತಾ ಕೃಷ್ಣನ್ ಈ ಘಟನೆಯನ್ನು “ಭಯಾನಕ ಪ್ರಸಂಗ” ಎಂದು ಕರೆದು ಟ್ವೀಟ್‌ ಮಾಡಿದ್ದಾರೆ. ಈ ಕುರಿತು ಕ್ಯಾಬ್‌ ಚಾಲಕನ ಮೇಲೆ ತುರ್ತು ಕ್ರಮ ಕೈಗೊಳ್ಳುವಂತೆ ಉಬರ್‌ ಸಂಸ್ಥೆ ಮತ್ತು ಮುಂಬೈ ಪೊಲೀಸರಿಗೆ ಮನವಿ ಮಾಡಿದ್ದಾರೆ.

ನಡೆದಿದ್ದೇನು?

ಸರ್ಕಾರ್‌ರವರ ಹೇಳಿಕೆಯನ್ನು ಕವಿತಾ ಕೃಷ್ಣನ್‌ರವರು ಟ್ವೀಟ್‌ ಮಾಡಿದ್ದಾರೆ. ಅದರಂತೆ ಸರ್ಕಾರ್‌ ಎಂಬ ಕವಿ ಮತ್ತು ಸಾಮಾಜಿಕ ಕಾರ್ಯಕರ್ತ ಬುಧವಾರ ರಾತ್ರಿ 10:30ರ ಸುಮಾರಿಗೆ ಜುಹುನಿಂದ ಕುರ್ಲಾಕ್ಕೆ ಉಬರ್ ಕ್ಯಾಬ್ ತೆಗೆದುಕೊಂಡಿದ್ದಾರೆ. ಪ್ರಯಾಣದ ಸಮಯದಲ್ಲಿ ಅವರು ತಮ್ಮ ಸ್ನೇಹಿತರೊಂದಿಗೆ (ಮೊಬೈಲ್ ಫೋನ್‌ನಲ್ಲಿ) ದೆಹಲಿಯ ಶಾಹೀನ್ ಬಾಗ್ ಪ್ರತಿಭಟನೆಯಲ್ಲಿ “ಲಾಲ್ ಸಲಾಮ್” ಘೋಷಣೆಯು ಜನರಿಗೆ ಹೆಚ್ಚು ಒಪ್ಪಿತವಾಗಿಲ್ಲ ಎಂಬ ವಿಷಯದ ಕುರಿತು ಚರ್ಚಿಸುತ್ತಿದ್ದರು.

ಇದನ್ನು ಕೇಳುತ್ತಿದ್ದ ಚಾಲಕ, ಸರ್ಕಾರ್‌ಗೆ ತಾನು ಎಟಿಎಂನಿಂದ ಹಣವನ್ನು ತೆಗೆದುಕೊಳ್ಳುತ್ತೇನೆ ಎಂದು ಕಾರು ನಿಲ್ಲಿಸಿದ್ದಾರೆ. ಆದರೆ ಚಾಲಕ ಇಬ್ಬರು ಪೊಲೀಸರೊಂದಿಗೆ ಹಿಂತಿರುಗಿದ್ದಾನೆ. ಪೊಲೀಸರು ಸರ್ಕಾರ್ ಅವರನ್ನು “ದಫ್ಲಿ” (ತಾಳವಾದ್ಯ) ಏಕೆ ಸಾಗಿಸುತ್ತಿದ್ದೀರಿ ಎಂದು ಕೇಳಿದರು ಮತ್ತು ಅವರ ವಿಳಾಸವನ್ನೂ ಕೇಳಿದ್ದಾರೆ.

ಸರ್ಕಾರ್ ಅವರು ಜೈಪುರದವರು ಮತ್ತು ಸಿಎಎ ವಿರೋಧಿ “ಮುಂಬೈ ಬಾಗ್” ಪ್ರತಿಭಟನೆಗೆ ಭೇಟಿ ನೀಡಿದ್ದರು ಎಂದು ಹೇಳಿದರು. ಅವರು ಪ್ರತಿಭಟನೆಯಲ್ಲಿ ಹಾಡು ಮತ್ತು ಘೋಷಣೆ ಕೂಗಲು ಅವರ ವಾದ್ಯವನ್ನು ಹೊತ್ತೊಯ್ಯುತ್ತಿದ್ದರು ಎಂದು ಅವರು ಹೇಳಿದ್ದಾರೆ.

ಆದರೆ ಕ್ಯಾಬ್‌ ಚಾಲಕ “ಅವನು ಕಮ್ಯುನಿಸ್ಟ್ ಎಂದು ಹೇಳಿಕೊಂಡಿದ್ದಾನೆ. ದೇಶವನ್ನು ಸುಡುವ ಬಗ್ಗೆ ಮತ್ತು ಮುಂಬೈನಲ್ಲಿ ಶಾಹೀನ್ ಬಾಗ್ ಮಾಡುವ ಬಗ್ಗೆ ಮಾತನಾಡುತ್ತಿದ್ದಾನೆ. ಹಾಗಾಗಿ ಆ ಪ್ರಯಾಣಿಕನನ್ನು ಬಂಧಿಸುವಂತೆ” ಪೊಲೀಸರನ್ನು ಕೇಳಿಕೊಂಡಿದ್ದಾನೆ. ತಾನು ಅವನ ಫೋನ್ ಸಂಭಾಷಣೆಯನ್ನು ರೆಕಾರ್ಡ್ ಮಾಡಿದ್ದೇನೆ ಎಂದು ಚಾಲಕ ಹೇಳಿಕೊಂಡಿದ್ದಾನೆ.

ಸರ್ಕಾರ್ ಅವರನ್ನು ನಂತರ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು ಎಂದು ಹೇಳಿಕೆ ತಿಳಿಸಿದೆ. ಆಗ ಸರ್ಕಾರ್‌ ಸಂಭಾಷಣೆಯನ್ನು ಆಲಿಸುವಂತೆ ಪೊಲೀಸರಿಗೆ ಮನವಿ ಮಾಡಿದರು ಮತ್ತು ಆ ಸಂಭಾಷಣೆಯಲ್ಲಿ ಏನು ಅಪರಾಧವೆಂದು ಅವರು ಚಾಲಕನನ್ನು ಕೇಳಿದರು.

“ನೀವು ದೇಶವನ್ನು ನಾಶಪಡಿಸುತ್ತಿದ್ದಾಗ ನಾವು ಸುಮ್ಮನೆ ಕೈಕಟ್ಟಿ ನೋಡಬೇಕೆಂದು ನೀವು ನಿರೀಕ್ಷಿಸುತ್ತೀರಾ? ನಾನು ನಿಮ್ಮನ್ನು ಬೇರೆಲ್ಲಿಗೋ ಒಯ್ಯುವ ಬದಲು ಪೊಲೀಸ್ ಠಾಣೆಗೆ ಕರೆದೊಯ್ಯಿದ್ದೇನೆ. ಅದಕ್ಕೆ ನೀವು ಕೃತಜ್ಞರಾಗಿರಬೇಕು” ಎಂದು ಚಾಲಕ ಏರುದನಿಯಲ್ಲಿ ಬೆದರಿಸಿದ್ದಾನೆ.

ಕಾರು ಚಾಲಕನ ರೈಡ್-ಹೇಲಿಂಗ್ ಅಪ್ಲಿಕೇಶನ್‌ನಲ್ಲಿನ ಅವರ ಪ್ರೊಫೈಲ್ ವಿವರಣೆಯಲ್ಲಿ ಹೀಗೆ ಬರೆಯಲಾಗಿದೆ: “ನಾನು ಕಾರು ಚಾಲನ ವೃತ್ತಿ ಮಾಡುವುದು ಏಕೆಂದರೆ ಅದು ವಿಭಿನ್ನ ಪಾತ್ರಗಳು ಮತ್ತು ವ್ಯಕ್ತಿತ್ವಗಳನ್ನು ಅಧ್ಯಯನ ಮಾಡಲು ಅನುವು ಮಾಡಿಕೊಡುತ್ತದೆ”.

“ಆ ಸಮಯದಲ್ಲಿ ಸ್ವಲ್ಪ ಭಯದ ಭಾವನೆ ಮೂಡಿತು. ಅದು ತಕ್ಷಣದಲ್ಲಿಯೇ ಬಗೆಹರಿಯಲಿಲ್ಲ, ಮತ್ತು ರಾತ್ರಿಯಿಡೀ ಉಳಿದಿದೆ” ಎಂದು ಕವಿ-ಕಾರ್ಯಕರ್ತ ಸರ್ಕಾರ್‌ ತಿಳಿಸಿದ್ದಾರೆ.

ಪೊಲೀಸರು ಸರ್ಕಾರ್‌ರವರ ಸಿದ್ಧಾಂತ ಮತ್ತು ಅವರು ಓದಿದ ಜನರ ಬಗ್ಗೆ ಕೇಳಿದರು. ಸರ್ಕಾರ್ ಅವರ ಪ್ರಕಾರ, ಕೇವಲ ಅವನ ತಂದೆಯ ಸಂಬಳದಲ್ಲಿ ಮತ್ತು ಕೆಲಸವಿಲ್ಲದೆ ತಾನು ಹೇಗೆ ಬದುಕಲು ಸಾಧ್ಯ ಎಂಬಂತಹ “ಅಸಂಬದ್ಧ” ಪ್ರಶ್ನೆಗಳನ್ನು ಸಹ ಪೊಲೀಸರು ಕೇಳಿದರು. ಮತ್ತು ಅವರು “ದಫ್ಲಿ” ಯನ್ನು ಏಕೆ ಸಾಗಿಸುತ್ತಿದ್ದಾರೆಂದು ಪದೇ ಪದೇ ಕೇಳುತ್ತಲೇ ಇದ್ದರು.

ಪೊಲೀಸರು ಆತನೊಂದಿಗೆ ಸಭ್ಯರಾಗಿದ್ದರು ಮತ್ತು ಅವರ ಮತ್ತು ಚಾಲಕ ಇಬ್ಬರನ್ನೂ ತಮ್ಮ ಹೇಳಿಕೆಗಳನ್ನು ದಾಖಲಿಸುವಂತೆ ಕೇಳಿಕೊಂಡರು.

ಮುಂಜಾನೆ 1 ಗಂಟೆ ಸುಮಾರಿಗೆ ಮತ್ತೊಬ್ಬ ಕಾರ್ಯಕರ್ತ ಎಸ್ ಗೋಹಿಲ್ ಪೊಲೀಸ್ ಠಾಣೆಗೆ ಬಂದ ನಂತರ ಸರ್ಕಾರ್ ಅವರಿಗೆ ಅಲ್ಲಿಂದ ಹೋಗಲು ಅನುಮತಿ ನೀಡಲಾಯಿತು.

ಕವಿತಾ ಕೃಷ್ಣನ್ ಅವರ ಟ್ವೀಟ್ ಹೇಳಿಕೆಯ ಪ್ರಕಾರ, ಸರ್ಫಾರ್‌ಗೆ ಡಫ್ಲಿ ಒಯ್ಯಬೇಡಿ ಮತ್ತು ಕೆಂಪು ಸ್ಕಾರ್ಫ್ ಧರಿಸಬೇಡಿ.  “ವಾತಾವರಣವು ಉತ್ತಮವಾಗಿಲ್ಲ ಮತ್ತು ಏನು ಬೇಕಾದರೂ ಆಗಬಹುದು” ಎಂದು ಪೊಲೀಸರು ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಈ ಘಟನೆಯು “ಎನ್‌ಪಿಆರ್ ಎನ್‌ಆರ್‌ಸಿ ಸಿಎಎ ಅಡಿಯಲ್ಲಿ ಭಯಾನಕ ಭಾರತದ ದರ್ಶನವಾಗಿದೆ, ಅಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಇತರರನ್ನು ಅನುಮಾನಿಸಲು ಮತ್ತು ವಿಚಾರಣೆ ನಡೆಸಲು ಪ್ರೋತ್ಸಾಹಿಸಲಾಗುವುದು ಮತ್ತು ಪೊಲೀಸರು ಎಲ್ಲರಿಗೂ ಕಿರುಕುಳ ನೀಡಬಹುದು” ಎಂದು ಕವಿತಾ ಕೃಷ್ಣನ್ ಟ್ವೀಟ್ ಮಾಡಿದ್ದಾರೆ. ಅವರು ಮುಂಬೈ ಪೊಲೀಸ್ ಮತ್ತು ಉಬರ್ ಅನ್ನು ಟ್ಯಾಗ್ ಮಾಡಿದ್ದಾರೆ.

“ನಾವು ನಿಮ್ಮನ್ನು ಫಾಲೋ ಮಾಡುತ್ತಿದ್ದೇವೆ. ದಯವಿಟ್ಟು ಡಿಎಂನಲ್ಲಿ ಪ್ರಕರಣದ ನಿಖರವಾದ ವಿವರಗಳನ್ನು ಹಂಚಿಕೊಳ್ಳಿ” ಎಂದು ಮುಂಬೈ ಪೊಲೀಸರು ಕೃಷ್ಣನ್‌ರವರ ಟ್ವೀಟ್‌ಗೆ ಉತ್ತರಿಸಿದ್ದಾರೆ.

ಟ್ವಿಟರ್ ಹ್ಯಾಂಡಲ್ ‘ಉಬರ್ ಇಂಡಿಯಾ ಸಪೋರ್ಟ್’ ಈ ಘಟನೆಗೆ ಸಂಬಂಧಿಸಿದೆ “ನಾವು ಇದನ್ನು ಆದ್ಯತೆಯ ಮೇರೆಗೆ ವಿಚಾರನೆ ನಡೆಸಲು ಬಯಸುತ್ತೇವೆ. ಪ್ರಯಾಣವನ್ನು ವಿನಂತಿಸಿದ ನೋಂದಾಯಿತ ವಿವರಗಳನ್ನು ದಯವಿಟ್ಟು ಹಂಚಿಕೊಳ್ಳಿ” ಎಂದು ಅದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ನೈತಿಕ ಪೊಲೀಸ್ ಗಿರಿ ಮೆರೆದಿರುವ ಉಬರ್ ಚಾಲಕನ ವಿರುದ್ಧ ಉಬರ್ ಕಂಪನಿಯು ಸೂಕ್ತ ಕಾನೂನು ಕ್ರಮ ಜರುಗಿಸಬೇಕು.

  2. Questionable act’s are harassment is very dangerous zone this is the encashment if BJP govt
    They doesn’t want to development of so many sectors
    They want to only got power and smashing all constional institutions
    This very condemned one and shame full to NDA givt

LEAVE A REPLY

Please enter your comment!
Please enter your name here

- Advertisment -

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...