Homeಮುಖಪುಟಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅಂತಿಮ ಕರಡು ಮಸೂದೆಯನ್ನು ಉತ್ತರಾಖಂಡ ಕ್ಯಾಬಿನೆಟ್ ಭಾನುವಾರ ಅಂಗೀಕರಿಸಿದ್ದು, ಇಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ. ಈ ಅಧಿವೇಶನದಲ್ಲಿ ಯುಸಿಸಿ ಜಾರಿಯಾದರೆ, ಈ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರಾಖಂಡವಾಗಲಿದೆ.

ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಐವರು ಸದಸ್ಯರ  ಸಮಿತಿಯು ಶುಕ್ರವಾರ ಕರಡನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸಲ್ಲಿಸಿದೆ. ಸಮಿತಿಯು ಸಲ್ಲಿಸಿದ 800 ಪುಟಗಳ ವರದಿಯು ಪ್ರಸ್ತಾವಿತ ಶಾಸನದ ವ್ಯಾಪ್ತಿಯಿಂದ ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ ನೀಡುವುದು, ಮಹಿಳಾ ಸಮಾನತೆಗೆ ಆದ್ಯತೆ ನೀಡುವುದು, ಬಹುಪತ್ನಿತ್ವ ನಿಷೇಧಿಸುವುದು, ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ವಿಧಿಸುವುದನ್ನು ಸೂಚಿಸುತ್ತದೆ.

ಕರಡು ಸಂಪುಟದ ಒಪ್ಪಿಗೆಯನ್ನು ಪಡೆದಿರುವುದರಿಂದ, ಇಂದಿನಿಂದ ಪ್ರಾರಂಭವಾಗುವ ನಾಲ್ಕು ದಿನಗಳ ಅಧಿವೇಶನದಲ್ಲಿ ಸರ್ಕಾರವು ಅದನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲಿ ಮಸೂದೆ ಬಗ್ಗೆ “ರಚನಾತ್ಮಕ ಚರ್ಚೆ” ನಡೆಸಲು ಸರ್ಕಾರವು ಪ್ರತಿಪಕ್ಷಗಳಿಗೆ ಅವಕಾಶ ನೀಡಲಿದೆ ಎಂದು ಧಾಮಿ ಶುಕ್ರವಾರ ಹೇಳಿದ್ದರು.

UCC ಕರಡು ನಾಲ್ಕು ಸಂಪುಟಗಳಲ್ಲಿ ಸುಮಾರು 750 ಪುಟಗಳನ್ನು ಒಳಗೊಂಡಿದೆ. ಇದನ್ನು ‘ಪೂರ್ಣ’ ಹಿಂದಿಯಲ್ಲಿ ಬರೆಯಲಾಗಿದೆ ಮತ್ತು ‘ಉರ್ದು’ ಅಥವಾ ಯಾವುದೇ ಇತರ ಭಾಷೆಯ ಒಂದು ಪದವನ್ನು ಹೊಂದಿಲ್ಲ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯು ವರದಿಯನ್ನು ಸಿದ್ದಪಡಿಸಿದ್ದು, ಬಹುಪತ್ನಿತ್ವ ಸಂಪೂರ್ಣವಾಗಿ ನಿಷೇಧ, ಮುಸ್ಲಿಂ ವೈಯಕ್ತಿಕ ಕಾನೂನುಗಳಿಗೆ ಸಂಬಂಧಿಸಿದ ತ್ರಿವಳಿ ತಲಾಖ್ ಮತ್ತು ನಿಕಾಹಲಾಲಾ ಆಚರಣೆಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಲಿವ್-ಇನ್ ಸಂಬಂಧದಲ್ಲಿರುವ ದಂಪತಿಗಳು ನೋಂದಾವಣೆ ಮಾಡಿಸಬೇಕು. ವಿವಾಹ ನೋಂದಣಿಗಳು ಕಡ್ಡಾಯವಾಗಿದೆ ಮತ್ತು ಬುಡಕಟ್ಟು ಸಮುದಾಯವನ್ನು ಯುಸಿಸಿ ವ್ಯಾಪ್ತಿಯಿಂದ ಹೊರಗಿಡಲು ಸಲಹೆ ನೀಡಿತ್ತು.

ಏಕರೂಪ ನಾಗರಿಕ ಸಂಹಿತೆ:

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಬೆಳ್ತಂಗಡಿ ಸೌಜನ್ಯಾ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೊಟೀಸ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

0
"ಭಾರತದ ಸಂವಿಧಾನದ ಮೂಲ ಪ್ರತಿಯ ಬಣ್ಣ ನೀಲಿಯಾಗಿದೆ. ಚೀನಾದ ಸಂವಿಧಾನದ ಮೂಲ ಪ್ರತಿಯ ಬಣ್ಣ ಕೆಂಪು. ರಾಹುಲ್ ಗಾಂಧಿ ಚೀನಾದ ಸಂವಿಧಾನ ತೋರಿಸಿದ್ದಾರೆಯೇ? ನಾವು ಈ ಬಗ್ಗೆ ಪರಿಶೀಲಿಸಬೇಕಿದೆ" ಎಂದು ಎಕ್ಸ್‌ನಲ್ಲಿ ಬರೆದುಕೊಂಡಿರುವ...