Homeಮುಖಪುಟಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅಂತಿಮ ಕರಡು ಮಸೂದೆಯನ್ನು ಉತ್ತರಾಖಂಡ ಕ್ಯಾಬಿನೆಟ್ ಭಾನುವಾರ ಅಂಗೀಕರಿಸಿದ್ದು, ಇಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ. ಈ ಅಧಿವೇಶನದಲ್ಲಿ ಯುಸಿಸಿ ಜಾರಿಯಾದರೆ, ಈ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರಾಖಂಡವಾಗಲಿದೆ.

ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಐವರು ಸದಸ್ಯರ  ಸಮಿತಿಯು ಶುಕ್ರವಾರ ಕರಡನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸಲ್ಲಿಸಿದೆ. ಸಮಿತಿಯು ಸಲ್ಲಿಸಿದ 800 ಪುಟಗಳ ವರದಿಯು ಪ್ರಸ್ತಾವಿತ ಶಾಸನದ ವ್ಯಾಪ್ತಿಯಿಂದ ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ ನೀಡುವುದು, ಮಹಿಳಾ ಸಮಾನತೆಗೆ ಆದ್ಯತೆ ನೀಡುವುದು, ಬಹುಪತ್ನಿತ್ವ ನಿಷೇಧಿಸುವುದು, ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ವಿಧಿಸುವುದನ್ನು ಸೂಚಿಸುತ್ತದೆ.

ಕರಡು ಸಂಪುಟದ ಒಪ್ಪಿಗೆಯನ್ನು ಪಡೆದಿರುವುದರಿಂದ, ಇಂದಿನಿಂದ ಪ್ರಾರಂಭವಾಗುವ ನಾಲ್ಕು ದಿನಗಳ ಅಧಿವೇಶನದಲ್ಲಿ ಸರ್ಕಾರವು ಅದನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲಿ ಮಸೂದೆ ಬಗ್ಗೆ “ರಚನಾತ್ಮಕ ಚರ್ಚೆ” ನಡೆಸಲು ಸರ್ಕಾರವು ಪ್ರತಿಪಕ್ಷಗಳಿಗೆ ಅವಕಾಶ ನೀಡಲಿದೆ ಎಂದು ಧಾಮಿ ಶುಕ್ರವಾರ ಹೇಳಿದ್ದರು.

UCC ಕರಡು ನಾಲ್ಕು ಸಂಪುಟಗಳಲ್ಲಿ ಸುಮಾರು 750 ಪುಟಗಳನ್ನು ಒಳಗೊಂಡಿದೆ. ಇದನ್ನು ‘ಪೂರ್ಣ’ ಹಿಂದಿಯಲ್ಲಿ ಬರೆಯಲಾಗಿದೆ ಮತ್ತು ‘ಉರ್ದು’ ಅಥವಾ ಯಾವುದೇ ಇತರ ಭಾಷೆಯ ಒಂದು ಪದವನ್ನು ಹೊಂದಿಲ್ಲ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯು ವರದಿಯನ್ನು ಸಿದ್ದಪಡಿಸಿದ್ದು, ಬಹುಪತ್ನಿತ್ವ ಸಂಪೂರ್ಣವಾಗಿ ನಿಷೇಧ, ಮುಸ್ಲಿಂ ವೈಯಕ್ತಿಕ ಕಾನೂನುಗಳಿಗೆ ಸಂಬಂಧಿಸಿದ ತ್ರಿವಳಿ ತಲಾಖ್ ಮತ್ತು ನಿಕಾಹಲಾಲಾ ಆಚರಣೆಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಲಿವ್-ಇನ್ ಸಂಬಂಧದಲ್ಲಿರುವ ದಂಪತಿಗಳು ನೋಂದಾವಣೆ ಮಾಡಿಸಬೇಕು. ವಿವಾಹ ನೋಂದಣಿಗಳು ಕಡ್ಡಾಯವಾಗಿದೆ ಮತ್ತು ಬುಡಕಟ್ಟು ಸಮುದಾಯವನ್ನು ಯುಸಿಸಿ ವ್ಯಾಪ್ತಿಯಿಂದ ಹೊರಗಿಡಲು ಸಲಹೆ ನೀಡಿತ್ತು.

ಏಕರೂಪ ನಾಗರಿಕ ಸಂಹಿತೆ:

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಬೆಳ್ತಂಗಡಿ ಸೌಜನ್ಯಾ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೊಟೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...