Homeಮುಖಪುಟಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

ಉತ್ತರಾಖಂಡ: ಏಕರೂಪ ನಾಗರಿಕ ಸಂಹಿತೆ ಕರಡು ಮಸೂದೆಗೆ ಕ್ಯಾಬಿನೆಟ್‌ ಅನುಮೋದನೆ

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆಯ (ಯುಸಿಸಿ) ಅಂತಿಮ ಕರಡು ಮಸೂದೆಯನ್ನು ಉತ್ತರಾಖಂಡ ಕ್ಯಾಬಿನೆಟ್ ಭಾನುವಾರ ಅಂಗೀಕರಿಸಿದ್ದು, ಇಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗಲಿದೆ. ಈ ಅಧಿವೇಶನದಲ್ಲಿ ಯುಸಿಸಿ ಜಾರಿಯಾದರೆ, ಈ ಕಾಯ್ದೆಯನ್ನು ಜಾರಿಗೆ ತಂದ ಮೊದಲ ರಾಜ್ಯ ಉತ್ತರಾಖಂಡವಾಗಲಿದೆ.

ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಐವರು ಸದಸ್ಯರ  ಸಮಿತಿಯು ಶುಕ್ರವಾರ ಕರಡನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸಲ್ಲಿಸಿದೆ. ಸಮಿತಿಯು ಸಲ್ಲಿಸಿದ 800 ಪುಟಗಳ ವರದಿಯು ಪ್ರಸ್ತಾವಿತ ಶಾಸನದ ವ್ಯಾಪ್ತಿಯಿಂದ ಬುಡಕಟ್ಟು ಸಮುದಾಯಗಳಿಗೆ ವಿನಾಯಿತಿ ನೀಡುವುದು, ಮಹಿಳಾ ಸಮಾನತೆಗೆ ಆದ್ಯತೆ ನೀಡುವುದು, ಬಹುಪತ್ನಿತ್ವ ನಿಷೇಧಿಸುವುದು, ತ್ರಿವಳಿ ತಲಾಖ್‌ಗೆ ಕಠಿಣ ಶಿಕ್ಷೆ ವಿಧಿಸುವುದನ್ನು ಸೂಚಿಸುತ್ತದೆ.

ಕರಡು ಸಂಪುಟದ ಒಪ್ಪಿಗೆಯನ್ನು ಪಡೆದಿರುವುದರಿಂದ, ಇಂದಿನಿಂದ ಪ್ರಾರಂಭವಾಗುವ ನಾಲ್ಕು ದಿನಗಳ ಅಧಿವೇಶನದಲ್ಲಿ ಸರ್ಕಾರವು ಅದನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಿದೆ. ವಿಧಾನಸಭೆ ಅಧಿವೇಶನದಲ್ಲಿ ಮಸೂದೆ ಬಗ್ಗೆ “ರಚನಾತ್ಮಕ ಚರ್ಚೆ” ನಡೆಸಲು ಸರ್ಕಾರವು ಪ್ರತಿಪಕ್ಷಗಳಿಗೆ ಅವಕಾಶ ನೀಡಲಿದೆ ಎಂದು ಧಾಮಿ ಶುಕ್ರವಾರ ಹೇಳಿದ್ದರು.

UCC ಕರಡು ನಾಲ್ಕು ಸಂಪುಟಗಳಲ್ಲಿ ಸುಮಾರು 750 ಪುಟಗಳನ್ನು ಒಳಗೊಂಡಿದೆ. ಇದನ್ನು ‘ಪೂರ್ಣ’ ಹಿಂದಿಯಲ್ಲಿ ಬರೆಯಲಾಗಿದೆ ಮತ್ತು ‘ಉರ್ದು’ ಅಥವಾ ಯಾವುದೇ ಇತರ ಭಾಷೆಯ ಒಂದು ಪದವನ್ನು ಹೊಂದಿಲ್ಲ. ಸುಪ್ರೀಂಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ರಂಜನಾ ಪ್ರಕಾಶ್ ದೇಸಾಯಿ ನೇತೃತ್ವದ ಸಮಿತಿಯು ವರದಿಯನ್ನು ಸಿದ್ದಪಡಿಸಿದ್ದು, ಬಹುಪತ್ನಿತ್ವ ಸಂಪೂರ್ಣವಾಗಿ ನಿಷೇಧ, ಮುಸ್ಲಿಂ ವೈಯಕ್ತಿಕ ಕಾನೂನುಗಳಿಗೆ ಸಂಬಂಧಿಸಿದ ತ್ರಿವಳಿ ತಲಾಖ್ ಮತ್ತು ನಿಕಾಹಲಾಲಾ ಆಚರಣೆಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು, ಲಿವ್-ಇನ್ ಸಂಬಂಧದಲ್ಲಿರುವ ದಂಪತಿಗಳು ನೋಂದಾವಣೆ ಮಾಡಿಸಬೇಕು. ವಿವಾಹ ನೋಂದಣಿಗಳು ಕಡ್ಡಾಯವಾಗಿದೆ ಮತ್ತು ಬುಡಕಟ್ಟು ಸಮುದಾಯವನ್ನು ಯುಸಿಸಿ ವ್ಯಾಪ್ತಿಯಿಂದ ಹೊರಗಿಡಲು ಸಲಹೆ ನೀಡಿತ್ತು.

ಏಕರೂಪ ನಾಗರಿಕ ಸಂಹಿತೆ:

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಬೆಳ್ತಂಗಡಿ ಸೌಜನ್ಯಾ ಪ್ರಕರಣ: ಸಂತೋಷ್‌ ರಾವ್‌ಗೆ ಹೈಕೋರ್ಟ್‌ ನೊಟೀಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...