Homeಮುಖಪುಟಏಕರೂಪ ನಾಗರಿಕ ಸಂಹಿತೆ: ನೂತನ ಎನ್‌ಡಿಎ ಸರಕಾರದ ನಿಲುವೇನು?

ಏಕರೂಪ ನಾಗರಿಕ ಸಂಹಿತೆ: ನೂತನ ಎನ್‌ಡಿಎ ಸರಕಾರದ ನಿಲುವೇನು?

- Advertisement -
- Advertisement -

ಏಕರೂಪ ನಾಗರಿಕ ಸಂಹಿತೆ ಜಾರಿ ಸರ್ಕಾರದ ಕಾರ್ಯಸೂಚಿಯ ಭಾಗವಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಹೇಳಿದ್ದು, ಎನ್‌ಡಿಎ ಮೈತ್ರಿ ಸರಕಾರ ಅಧಿಕಾರಕ್ಕೆ ಬಂದರೂ ಹಿಂದಿನ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಪ್ರಸ್ತಾವಿತ ಕಾಯ್ದೆ ಜಾರಿಗೆ ನೂತನ ಸರಕಾರ ಕೂಡ ಬದ್ಧವಾಗಿದೆ ಎಂದು ಹೇಳಿದ್ದಾರೆ.

ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಧೀಶರ ನೇಮಕಾತಿ, ಪದೋನ್ನತಿ  ಮತ್ತು ವರ್ಗಾವಣೆ ಕುರಿತ ಅನುಸರಿಸಬೇಕಾದ ಪ್ರಕ್ರಿಯೆ ಕುರಿತು ಸೂಕ್ತ ಪರಿಹಾರೋಪಾಯ ಕಂಡುಕೊಳ್ಳಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.

ಸಚಿವಾಲಯದಲ್ಲಿನ ಪ್ರಮುಖ ಹುದ್ದೆಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅರ್ಜುನ್ ರಾಮ್ ಮೇಘವಾಲ್, ಸುಪ್ರೀಂಕೋರ್ಟ್, ಹೈಕೋರ್ಟ್ ಅಥವಾ ನಮ್ಮ ಸಚಿವಾಲಯ ಅಥವಾ ಅಧೀನ ನ್ಯಾಯಾಲಯಗಳಲ್ಲಿ ಎಲ್ಲೆಲ್ಲಿ ಹುದ್ದೆಗಳು ಖಾಲಿಯಿದ್ದರೂ, ನಾವು ಅವುಗಳನ್ನು ಶೀಘ್ರವಾಗಿ ಭರ್ತಿ ಮಾಡಲು ಪ್ರಯತ್ನಿಸುತ್ತೇವೆ. ಏಕಕಾಲಕ್ಕೆ ಚುನಾವಣೆ ವಿಚಾರವಾಗಿ ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ್ದು, ಅದರ ಬಗ್ಗೆ ನಾವು ನಂತರ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ಉನ್ನತ, ಕೆಳ ಮತ್ತು ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿ ಖಾಲಿ ಹುದ್ದೆಗಳ ಸಮಸ್ಯೆಗಳನ್ನು ಪರಿಹರಿಸುವುದು ಮೇಘವಾಲ್ ಅವರ ಮುಂದಿರುವ ಪ್ರಮುಖ ಸವಾಲುಗಳಾಗಿವೆ.

ಸರ್ಕಾರವು ಸಂಸತ್ತಿನೊಂದಿಗೆ ಹಂಚಿಕೊಂಡಿರುವ ಅಂಕಿಅಂಶಗಳ ಪ್ರಕಾರ, ಐದು ಕೋಟಿಗೂ ಹೆಚ್ಚು ಪ್ರಕರಣಗಳು ನ್ಯಾಯಾಲಯಗಳಾದ್ಯಂತ ಬಾಕಿ ಉಳಿದಿವೆ. ಕೆಳ ನ್ಯಾಯಾಲಯಗಳು, 25 ಉಚ್ಚ ನ್ಯಾಯಾಲಯಗಳು ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ಒಟ್ಟು 5 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ.

ಪ್ರಕರಣಗಳು ವಿಲೇವಾರಿ ವಿಳಂಬಕ್ಕೆ ವಿವಿಧ ಕಾರಣಗಳಿವೆ, ಇವುಗಳಲ್ಲಿ ನ್ಯಾಯಾಂಗದಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇರುವುದು ಕೂಡ ಒಂದು ಕಾರಣವಾಗಿದೆ.

ಏಕರೂಪ ನಾಗರಿಕ ಸಂಹಿತೆ:

ಏಕರೂಪ ನಾಗರಿಕ ಸಂಹಿತೆ ಎಂದರೆ ಇಡೀ ದೇಶದಲ್ಲಿ ಪ್ರತಿಯೊಂದು ಧರ್ಮ, ಜಾತಿ, ಪಂಗಡ, ವರ್ಗಕ್ಕೆ ಒಂದೇ ನಿಯಮ ಜಾರಿಗೆ ತರುವುದು. ಪ್ರಸ್ತುತ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಮತ್ತು ಪಾರ್ಸಿ ಸಮುದಾಯಗಳು ವಿಭಿನ್ನ ಧಾರ್ಮಿಕ ಕಾನೂನುಗಳನ್ನು ಹೊಂದಿವೆ. ಏಕರೂಪ ನಾಗರಿಕ ಸಂಹಿತೆ ಅನುಷ್ಠಾನವಾದರೆ ಬೇರೆಲ್ಲಾ ಧರ್ಮಗಳ ವೈಯಕ್ತಿಕ ಕಾನೂನುಗಳು ಅಂತ್ಯಗೊಳ್ಳುತ್ತವೆ.

ಏಕರೂಪ ಎನ್ನುವುದು ಭಾರತದ ಬಹುತ್ವ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು. ಏಕರೂಪ ನಾಗರಿಕ ಸಂಹಿತೆಯು ಪ್ರಜಾಸತ್ತಾತ್ಮಕ ಜಾತ್ಯತೀತ ಮತ್ತು ಸಮಾಜವಾದಿ ತತ್ವಗಳ ಆಧಾರದ ಮೇಲೆ ಭಾರತೀಯ ಗಣರಾಜ್ಯವನ್ನು ಬಲಪಡಿಸುವ ಸಾಂವಿಧಾನಿಕ ಬದ್ಧತೆಯನ್ನು ಸೋಲಿಸುತ್ತದೆ.

2019ರ ಚುನಾವಣೆ ವೇಳೆ ಬಿಜೆಪಿ ಪ್ರಣಾಳಿಕೆಯಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿ ಮಾಡುವ ಆಶ್ವಾಸನೆ ನೀಡಿತ್ತು. ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂದು ಬಿಜೆಪಿ ಹೇಳಿತ್ತು. ಒಂದು ವೇಳೆ ಈ ಕಾಯ್ದೆ ಜಾರಿಗೆ ಬಂದರೆ, ಹಿಂದೂ, ಮುಸ್ಲಿಂ, ಕ್ರೈಸ್ತ ಸೇರಿದಂತೆ ಯಾವುದೇ ಧರ್ಮಾಧಾರಿತ ಕಾನೂನುಗಳಿಗೆ ಬೆಲೆ ಇರುವುದಿಲ್ಲ. ವೈಯಕ್ತಿಕ ಕಾನೂನು, ಸಿವಿಲ್ ಕಾನೂನುಗಳು ರದ್ದುಗೊಳ್ಳುತ್ತದೆ.  ಹಿಂದೂ ವಿವಾಹ ಕಾಯ್ದೆ, ಮುಸ್ಲಿಂ ವಿವಾಹ ಕಾನೂನು ಹೀಗೆ ಆಯಾ ಧರ್ಮಕ್ಕೆ ಅವರದ್ದೇ ಆದ ಕಾನೂನು ಇದೆ. ವಿವಾಹ, ವಿಚ್ಛೇದನ, ಆಸ್ತಿ ಹಂಚಿಕೆ ಸೇರಿದಂತೆ ಹಲವು ಕಾನೂನುಗಳು ಹಿಂದೂಗಳಿಗೆ ಒಂದು ರೀತಿ ಇದ್ದರೆ, ಮುಸ್ಲಿಮರಿಗೆ ಮತ್ತೊಂದು ರೀತಿ ಇದೆ. ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿಗೆ ಬಂದರೆ ಇದು ಬದಲಾಗುತ್ತದೆ.

ಸಂವಿಧಾನದ ಆರ್ಟಿಕಲ್ 25 ಹಾಗೂ 28ರ ಅಡಿ ದೇಶದ ಯಾವುದೇ ಪ್ರಜೆಗೆ ತನ್ನ ಧಾರ್ಮಿಕ ಆಚರಣೆಗಳನ್ನು ಪಾಲಿಸಲು ಸಂವಿಧಾನ ಅವಕಾಶ ನೀಡುತ್ತೆ. ಒಂದು ವೇಳೆ ಎಲ್ಲ ಧರ್ಮದವರಿಗೂ ಒಂದೇ ಕಾನೂನು ಜಾರಿ ಮಾಡಿದರೆ ವೈವಿಧ್ಯತೆಗೆ ಧಕ್ಕೆ ಬರಲಿದೆ.

ಇದನ್ನು ಓದಿ: ಮಹರಾಷ್ಟ್ರ: ಶಿಂಧೆ, ಅಜಿತ್‌ ಬಣದ 40 ಶಾಸಕರು ಘರ್ ವಾಪ್ಸಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...